Wed,Apr15,2026
ಕನ್ನಡ / English

ಬುದ್ದಿ ಹೇಳಲು ಬಂದ ಪತ್ನಿಯ ಪೋಷಕರಿಗೆ ಬೆಂಕಿ ಹಚ್ಚಿದ ಪತಿ, ಒಬ್ಬ ಸಜೀವ ದಹನ, ಮೂವರು ಗಂಭೀರ | JANATA NEWS

29 Jun 2022

ಯಾದಗಿರಿ : ವ್ಯಕ್ತಿಯೋರ್ವ ಪಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆಯಲ್ಲಿ ಓರ್ವ ಸಾವನ್ನಪ್ಪಿದು ಮೂವರು ಗಂಭೀರ ಗಾಯಗೊಂಡಿರುವ ಅಮಾನುಷ ಘಟನೆ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ನಡೆದಿದೆ.

ಘಟನೆಯಲ್ಲಿ ನಾಗಪ್ಪ ಹಗರಗುಂಡ (35) ಸಾವನ್ನಪ್ಪಿದ ದುರ್ದೈವಿಯಾಗಿದ್ದು, ಕೃತ್ಯ ಎಸಗಿದ ಆರೋಪಿ ಶರಣಪ್ಪ ಹಗರಗುಂಡ ಎಂಬ ವ್ಯಕ್ತಿ ಯಾಗಿದ್ದಾನೆ. ಘಟನೆಯಲ್ಲಿ ಸುಟ್ಟು ಗಾಯಾಳುಗಳಾದ ಶರಣಪ್ಪ ಪತ್ನಿ ಹುಲಿಗೆಮ್ಮಳ ತಂದೆ ಸಿದ್ದರಾಮಪ್ಪ ಮುರಾಳ (62), ಮುತ್ತಪ್ಪ ಮುರಾಳ, ನಾಗಪ್ಪ ಶರಣಪ್ಪ ಸರೂರ ಎಂದು ತಿಳಿದು ಬಂದಿದೆ.

ಕೆಲ ದಿನಗಳಿಂದ ಪತಿ ಶರಣಪ್ಪ ಮತ್ತು ಪತ್ನಿ ಹುಲಿಗಮ್ಮ ನಡುವೆ ಜಗಳವಾಗಿತ್ತು. ಈ ಸಂಬಂಧ ಶರಣಪ್ಪನಿಗೆ ಬುದ್ಧಿ ಹೇಳಲು ಪತ್ನಿ ಹುಲಿಗೆಮ್ಮಳ ತಂದೆ ಹಾಗೂ ಮೂವರು ಸಂಬಂಧಿಕರು ಬಂದಿದ್ದರು. ಈ ವೇಳೆ ಶರಣಪ್ಪ ನಾಲ್ಕು ಜನರನ್ನು ಕೋಣೆಯಲ್ಲಿ ಕೂಡಿ ಹಾಕಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ.

ಗಾಯಾಳುಗಳನ್ನ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಾರಾಯಣಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಹುಲಿಗಮ್ಮ ರಾಯಚೂರು ಜಿಲ್ಲೆಯ ಲಿಂಗಸೂರಿನ ಕೆಎಸ್ಆರ್ಟಿಸಿ ಯಲ್ಲಿ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದಳು. ಹುಲಿಗೆಮ್ಮ ಕಳೆದ 14 ತಿಂಗಳಿನಿಂದ ಬೇರೆ ಕಡೆ ಮನೆ ಮಾಡಿಕೊಂಡಿದ್ದಳು. ಶರಣಪ್ಪ ಹೆಂಡತಿ ಹುಲಿಗೆಮ್ಮಗೆ ವಿಚ್ಚೇದನ ಕೇಳಿದ್ದನು. ಆದರೆ ಹುಲಿಗೆಮ್ಮ ವಿಚ್ಚೇದನ ನೀಡಲು ನಿರಾಕರಿಸಿದ್ದಳು. ಹುಲಿಗೆಮ್ಮ ಪತಿಯೊಂದಿಗೆ ಮಾತನಾಡಲು ಹುಲಿಗಮ್ಮ ತಂದೆ ಹಾಗೂ ಸಂಬಂಧಿಕರು ಇಂದು ಬೆಳಗ್ಗೆ ಶರಣಪ್ಪನ ಮನೆ ನಾರಾಯಣಪುರಕ್ಕೆ ಬಂದಿದ್ದರು. ಆದರೆ ಹುಲಿಗೆಮ್ಮ ನಾರಾಯಣಪುರಕ್ಕೆ ನಾನು ಬರಲ್ಲ ನೀವೆ ಮಾತಾಡಿ ಎಂದು, ಕೆಲಸಕ್ಕೆ ಹೋಗಿದ್ದಳು. ಜೊತೆಗೆ ಪೋಷಕರಿಗೂ ಸಹ ಮಾತಾಡಲು ಹೋಗಬೇಡಿ ಎಂದಿದ್ದಳು.

ಕೌಟುಂಬಿಕ ಸಮಸ್ಯೆ ಬಗ್ಗೆ ನ್ಯಾಯ ಪಂಚಾಯತಿ ನಡೆಸಲು ಪತ್ನಿಯ ತಂದೆ ಸಿದ್ದರಾಮಪ್ಪ ಮುರಾಳ, ಮುತ್ತಪ್ಪ ಮುರಾಳ, ನಾಗಪ್ಪ ಹಗರಗುಂಡ, ಶರಣಪ್ಪ ಸರೂರ ಎಂಬುವವರು ಬುಧವಾರ ಬೆಳಿಗ್ಗೆ ನಾರಾಯಣಪುರಕ್ಕೆ ಆಗಮಿಸಿದ್ದರು, ಇದೇ ವೇಳೆ ಮನೆಯ ಮಹಡಿ ಕೊಠಡಿಯಲ್ಲಿ ನಾಲ್ಕು ಜನರೊಂದಿಗೆ ಮಾತುಕತೆ ನಡೆಸಿದ್ದ ಆರೋಪಿ ಶರಣಪ್ಪ ಮಧ್ಯದಲ್ಲಿ ಹಿರಿಯರನ್ನು ಕರೆದುಕೊಂಡು ಬರುವುದಾಗಿ ಹೇಳಿ ಕೊಠಡಿಯಲ್ಲಿ ನಾಲ್ವರನ್ನು ಕೂಡಿ ಹಾಕಿ ಬೀಗ ಜಡೆದು ಕಿಟಕಿ ಮೂಲಕ ಅವರ ಮೇಲೆ ಪೆಟ್ರೋಲ್ ಎರಚಿ ಬೆಂಕಿ ಹಚ್ಚಿದ್ದಾನೆ ಎನ್ನಲಾಗಿದೆ

RELATED TOPICS:
English summary :The husband who set fire to his wife s parents who came to mind, one of them burnt alive, three serious

ಪ್ರಧಾನಿ ಮೋದಿ ಗೆ ದೂರವಾಣಿ ಕರೆ ಮಾಡಿ 40 ನಿಮಿಷ ಮಾತನಾಡಿದ ಅಧ್ಯಕ್ಷ ಟ್ರಂಪ್
ಪ್ರಧಾನಿ ಮೋದಿ ಗೆ ದೂರವಾಣಿ ಕರೆ ಮಾಡಿ 40 ನಿಮಿಷ ಮಾತನಾಡಿದ ಅಧ್ಯಕ್ಷ ಟ್ರಂಪ್
ಹೆಬ್ಬಾಳದಲ್ಲಿ 55 ಎಕರೆ ಭೂಮಿ ಖಾಸಗಿ ಸಂಸ್ಥೆಗೆ ವರ್ಗಾವಣೆ ರದ್ದುಗೊಳಿಸಿದ ಹೈಕೋರ್ಟ್ : ಸಿಬಿಐ ತನಿಖೆಗೆ ಆದೇಶ
ಹೆಬ್ಬಾಳದಲ್ಲಿ 55 ಎಕರೆ ಭೂಮಿ ಖಾಸಗಿ ಸಂಸ್ಥೆಗೆ ವರ್ಗಾವಣೆ ರದ್ದುಗೊಳಿಸಿದ ಹೈಕೋರ್ಟ್ : ಸಿಬಿಐ ತನಿಖೆಗೆ ಆದೇಶ
ಟಿಸಿಎಸ್ ನಲ್ಲಿ ಪಿಓಎಸ್ಎಚ್(ಪೊಶ್) ಆಡಿಟ್ ಕೋರಿದ ಎನ್ಐಟಿಇಎಸ್ : ಐಟಿ ವಲಯದಾದ್ಯಂತ ವ್ಯಾಪಕ ತನಿಖೆಗೆ ಒತ್ತಾಯ
ಟಿಸಿಎಸ್ ನಲ್ಲಿ ಪಿಓಎಸ್ಎಚ್(ಪೊಶ್) ಆಡಿಟ್ ಕೋರಿದ ಎನ್ಐಟಿಇಎಸ್ : ಐಟಿ ವಲಯದಾದ್ಯಂತ ವ್ಯಾಪಕ ತನಿಖೆಗೆ ಒತ್ತಾಯ
 ಟಿಸಿಎಸ್ ನಾಸಿಕ್ ಪ್ರಕರಣ: ಕಾರ್ಯಾಚರಣೆ ಮುಖ್ಯಸ್ಥ ಕಸ್ಟಡಿಗೆ ; ಟಾಟಾ ಇಂದ ಆಂತರಿಕ ತನಿಖೆ ವಿಸ್ತರಣೆ
ಟಿಸಿಎಸ್ ನಾಸಿಕ್ ಪ್ರಕರಣ: ಕಾರ್ಯಾಚರಣೆ ಮುಖ್ಯಸ್ಥ ಕಸ್ಟಡಿಗೆ ; ಟಾಟಾ ಇಂದ ಆಂತರಿಕ ತನಿಖೆ ವಿಸ್ತರಣೆ
ಜನರ ಹೆಸರುಗಳನ್ನು ಅಂತಿಮ ತೀರ್ಪಿನ ನಂತರ ಸೇರಿಸಿದರೆ... ಮತ ಚಲಾಯಿಸಲು ಅವಕಾಶ - ಸುಪ್ರೀಂ
ಜನರ ಹೆಸರುಗಳನ್ನು ಅಂತಿಮ ತೀರ್ಪಿನ ನಂತರ ಸೇರಿಸಿದರೆ... ಮತ ಚಲಾಯಿಸಲು ಅವಕಾಶ - ಸುಪ್ರೀಂ
ಹಿರಿಯ ಗಾಯಕಿ ಆಶಾ ಬೋಸ್ಲೆ ನಿಧನ : ಪ್ರಧಾನಿ ಮೋದಿ ಸಂತಾಪ
ಹಿರಿಯ ಗಾಯಕಿ ಆಶಾ ಬೋಸ್ಲೆ ನಿಧನ : ಪ್ರಧಾನಿ ಮೋದಿ ಸಂತಾಪ
 ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ವಂದೇ ಭಾರತ್ ಸ್ಲೀಪರ್ ರೈಲು ಸೇವೆಗೆ ಅನುಮೋದನೆ
ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ವಂದೇ ಭಾರತ್ ಸ್ಲೀಪರ್ ರೈಲು ಸೇವೆಗೆ ಅನುಮೋದನೆ
ನಾಸಿಕ್ ಟಿಸಿಎಸ್ ಪ್ರಕರಣ: ಮತಾಂತರ, ಮೂಲಭೂತೀಕರಣ ಆರೋಪಗಳ ಮೇಲೆ ತನಿಖೆ ಆರಂಭ
ನಾಸಿಕ್ ಟಿಸಿಎಸ್ ಪ್ರಕರಣ: ಮತಾಂತರ, ಮೂಲಭೂತೀಕರಣ ಆರೋಪಗಳ ಮೇಲೆ ತನಿಖೆ ಆರಂಭ
ದೋಷಾರೋಪಣೆ ಪ್ರಕ್ರಿಯೆ ಆರಂಭವಾದ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ
ದೋಷಾರೋಪಣೆ ಪ್ರಕ್ರಿಯೆ ಆರಂಭವಾದ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ
2008ರ ಮಾಲೆಗಾಂವ್ ಸ್ಫೋಟ ಪ್ರಕರಣ: ಕರ್ನಲ್ ಪುರೋಹಿತ್‌ಗೆ ಬ್ರಿಗೇಡಿಯರ್ ಬಡ್ತಿಗೆ ಅನುಮತಿ
2008ರ ಮಾಲೆಗಾಂವ್ ಸ್ಫೋಟ ಪ್ರಕರಣ: ಕರ್ನಲ್ ಪುರೋಹಿತ್‌ಗೆ ಬ್ರಿಗೇಡಿಯರ್ ಬಡ್ತಿಗೆ ಅನುಮತಿ
ಪ್ರತಿಯೊಬ್ಬ ಸೈನಿಕ ಡ್ರೋನ್ ಹಾರಿಸಲು ಸಿದ್ದವಾಗಬೇಕು - ಪ್ರತಿ ಸೈನಿಕನಿಗೆ ಡ್ರೋನ್ ಒದಗಿಸಲು ಸೇನಾ ಮುಖ್ಯಸ್ಥರು
ಪ್ರತಿಯೊಬ್ಬ ಸೈನಿಕ ಡ್ರೋನ್ ಹಾರಿಸಲು ಸಿದ್ದವಾಗಬೇಕು - ಪ್ರತಿ ಸೈನಿಕನಿಗೆ ಡ್ರೋನ್ ಒದಗಿಸಲು ಸೇನಾ ಮುಖ್ಯಸ್ಥರು
ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳಿಗೆ ಶಿಕ್ಷೆ ವಿಧಿಸಿದ ಬೆಂಗಳೂರು ನ್ಯಾಯಾಲಯ
ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳಿಗೆ ಶಿಕ್ಷೆ ವಿಧಿಸಿದ ಬೆಂಗಳೂರು ನ್ಯಾಯಾಲಯ

ನ್ಯೂಸ್ MORE NEWS...