Wed,Apr15,2026
ಕನ್ನಡ / English

ಕಾಂಗ್ರೆಸ್ ಗೆಲ್ಲುತ್ತೆ ಅಂತ ಬಿಜೆಪಿ ಹತಾಶರಾಗಿ, ಸರ್ಕಾರವೇ ಹಣ ನೀಡಿ ನನ್ನ ವಿರುದ್ಧ ಪ್ರತಿಭಟನೆ ಮಾಡಿಸಿದೆ! | JANATA NEWS

18 Aug 2022

ಮಡಿಕೇರಿ : ಸರ್ಕಾರವೇ ಹಣ ಕೊಟ್ಟು ಜನರನ್ನ ಕರೆಸಿ ನನ್ನ ವಿರುದ್ಧ ಪ್ರತಿಭಟನೆ ಮಾಡಿಸಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಪ್ರತಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊಡಗಿನ ಪ್ರವಾಹ ಪೀಡಿತ ಪ್ರದೇಶಗಳಿಗೆ ಗುರುವಾರ ಭೇಟಿ ನೀಡಿದರು.

ನಾನು ಬಂದು ಮಳೆ ಹಾನಿಯಾದ ಪ್ರದೇಶಗಳನ್ನು ನೋಡ್ತೀನಿ ಅಂತ ಕಾರ್ಯಕರ್ತರನ್ನು ಬಿಟ್ಟು ಪ್ರತಿಭಟನೆ ಮಾಡಿಸಿದ್ದಾರೆ. ಈ ಬಾರಿ ಕೊಡಗಿನಲ್ಲಿ ಎರಡೂ ಕಡೆ ಕಾಂಗ್ರೆಸ್ ಗೆಲ್ಲುತ್ತೆ ಅಂತ ಬಿಜೆಪಿ ಹತಾಶರಾಗಿ ಹೀಗೆ ಪ್ರತಿಭಟನೆ ಮಾಡಿದ್ದಾರೆ ಎಂದರು.

ಈ ಬಾರಿ ಕೊಡಗಿನಲ್ಲಿ ಎರಡೂ ಕಡೆ ಕಾಂಗ್ರೆಸ್ ಗೆಲ್ಲುತ್ತೆ ಅಂತ ಬಿಜೆಪಿ ಹತಾಶರಾಗಿ ಹೀಗೆ ಪ್ರತಿಭಟನೆ ಮಾಡಿದ್ದಾರೆ. ನಮಗೆ ಮೊಟ್ಟೆ ಎಸೆಯೋಕೆ ಬರಲ್ವಾ? ನಾವು ಅಲ್ಲಿಂದಲೇ ಪ್ರತಿಭಟನೆ ಮಾಡಿಕೊಂಡು ಬಂದಿರೋದು. ನಾವು ಹೋರಾಟ ಮಾಡೋಕೆ‌ ಶುರು ಮಾಡಿದ್ರೆ ಸಿಎಂ ಎಲ್ಲೂ ಓಡಾಡೋಕೆ ಆಗಲ್ಲ. ನಮ್ಮ ಕಾರ್ಯಕರ್ತರು ಬೀದಿಗಿಳಿದ್ರೆ ಬಿಜೆಪಿಯವರಿಗೆ ಕೊಡಗಿನಲ್ಲೇ ತಿರುಗಾಡೋಕೆ ಆಗಲ್ಲ ಎಂದು ಸಿದ್ದರಾಮಯ್ಯ ಎಚ್ಚರಿಕೆ ರವಾನಿಸಿದರು.

ತಮ್ಮ ಭೇಟಿಯ ವೇಳೆ ಪ್ರತಿಭಟನೆ ನಡೆಸಲು ಬಿಜೆಪಿ ಕಾರ್ಯಕರ್ತರಿಗೆ ಸರ್ಕಾರವೇ ಹಣ ನೀಡಿದೆ ಎಂದು ಸಿದ್ದರಾಮಯ್ಯ ಆರೋಪಿಸಿದರು. ಈ ಎಲ್ಲಾ ಪ್ರತಿಭಟನೆಗಳು ಭ್ರಷ್ಟ ಮತ್ತು ಕಳಪೆ ಗುಣಮಟ್ಟದ ಪರಿಹಾರ ಕಾಮಗಾರಿಗಳನ್ನು ಮುಚ್ಚಿಹಾಕುವ ಯತ್ನವಾಗಿವೆ. ಟಿಪ್ಪು ಜಯಂತಿಯನ್ನು ಹಲವಾರು ವರ್ಷಗಳಿಂದ ಆಚರಿಸಲಾಗುತ್ತಿದ್ದು, ಸಮಸ್ಯೆಯ ನಂತರ ಹಲವು ಬಾರಿ ಕೊಡಗಿಗೆ ಭೇಟಿ ನೀಡಿದ್ದೇನೆ. ಆಗ ಎಲ್ಲಾ ಬಿಜೆಪಿ ಕಾರ್ಯಕರ್ತರು ಸತ್ತಿದ್ದರಾ? ಎಂದು ಪ್ರಶ್ನಿಸಿದರು.

ಚುನಾಯಿತ ಜನಪ್ರತಿನಿಧಿಗಳು ಗುತ್ತಿಗೆದಾರರೊಂದಿಗೆ ಸೇರಿ ಸಾರ್ವಜನಿಕರ ಹಣವನ್ನು ಲೂಟಿ ಮಾಡುತ್ತಿದ್ದಾರೆ. 'ಡಿಸಿ ಕಚೇರಿ ಪಕ್ಕದಲ್ಲಿರುವ ತಡೆಗೋಡೆಯ ಭ್ರಷ್ಟ ಕಾಮಗಾರಿಯನ್ನು ಪರಿಶೀಲಿಸದಂತೆ ಪ್ರತಿಭಟನೆ ನಡೆಸಲಾಗಿದೆ. ಜಿಲ್ಲೆಯಲ್ಲಿ ನಡೆದಿರುವ ಭ್ರಷ್ಟ ಪರಿಹಾರ ಕಾಮಗಾರಿಗಳ ಕುರಿತು ವಿಧಾನಮಂಡಲ ಅಧಿವೇಶನದಲ್ಲಿ ಚರ್ಚೆ ನಡೆಸುತ್ತೇನೆ, ಮುಂಬರುವ ಚುನಾವಣೆಯಲ್ಲಿ ಭಾಗವಹಿಸುತ್ತೇನೆ ಎಂದು ಹೇಳಿದರು. 2018, 19, 20ರಲ್ಲಿ ಆದ ಮಳೆಯ ಹಾನಿಗೆ ಸರ್ಕಾರ ಇನ್ನೂ ಕೂಡ ಪರಿಹಾರ ನೀಡಿಲ್ಲ. ಸೇತುವೆ ತಡೆಗೋಡೆಗಳನ್ನು ತೀರಾ ಕಳಪೆಯಾಗಿ ಮಾಡಿದ್ದಾರೆ. ಅದಕ್ಕೆ ಅವೆಲ್ಲಾ ಹೀಗಾಗಿವೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

RELATED TOPICS:
English summary :The government has given money and protested against me

ಪ್ರಧಾನಿ ಮೋದಿ ಗೆ ದೂರವಾಣಿ ಕರೆ ಮಾಡಿ 40 ನಿಮಿಷ ಮಾತನಾಡಿದ ಅಧ್ಯಕ್ಷ ಟ್ರಂಪ್
ಪ್ರಧಾನಿ ಮೋದಿ ಗೆ ದೂರವಾಣಿ ಕರೆ ಮಾಡಿ 40 ನಿಮಿಷ ಮಾತನಾಡಿದ ಅಧ್ಯಕ್ಷ ಟ್ರಂಪ್
ಹೆಬ್ಬಾಳದಲ್ಲಿ 55 ಎಕರೆ ಭೂಮಿ ಖಾಸಗಿ ಸಂಸ್ಥೆಗೆ ವರ್ಗಾವಣೆ ರದ್ದುಗೊಳಿಸಿದ ಹೈಕೋರ್ಟ್ : ಸಿಬಿಐ ತನಿಖೆಗೆ ಆದೇಶ
ಹೆಬ್ಬಾಳದಲ್ಲಿ 55 ಎಕರೆ ಭೂಮಿ ಖಾಸಗಿ ಸಂಸ್ಥೆಗೆ ವರ್ಗಾವಣೆ ರದ್ದುಗೊಳಿಸಿದ ಹೈಕೋರ್ಟ್ : ಸಿಬಿಐ ತನಿಖೆಗೆ ಆದೇಶ
ಟಿಸಿಎಸ್ ನಲ್ಲಿ ಪಿಓಎಸ್ಎಚ್(ಪೊಶ್) ಆಡಿಟ್ ಕೋರಿದ ಎನ್ಐಟಿಇಎಸ್ : ಐಟಿ ವಲಯದಾದ್ಯಂತ ವ್ಯಾಪಕ ತನಿಖೆಗೆ ಒತ್ತಾಯ
ಟಿಸಿಎಸ್ ನಲ್ಲಿ ಪಿಓಎಸ್ಎಚ್(ಪೊಶ್) ಆಡಿಟ್ ಕೋರಿದ ಎನ್ಐಟಿಇಎಸ್ : ಐಟಿ ವಲಯದಾದ್ಯಂತ ವ್ಯಾಪಕ ತನಿಖೆಗೆ ಒತ್ತಾಯ
 ಟಿಸಿಎಸ್ ನಾಸಿಕ್ ಪ್ರಕರಣ: ಕಾರ್ಯಾಚರಣೆ ಮುಖ್ಯಸ್ಥ ಕಸ್ಟಡಿಗೆ ; ಟಾಟಾ ಇಂದ ಆಂತರಿಕ ತನಿಖೆ ವಿಸ್ತರಣೆ
ಟಿಸಿಎಸ್ ನಾಸಿಕ್ ಪ್ರಕರಣ: ಕಾರ್ಯಾಚರಣೆ ಮುಖ್ಯಸ್ಥ ಕಸ್ಟಡಿಗೆ ; ಟಾಟಾ ಇಂದ ಆಂತರಿಕ ತನಿಖೆ ವಿಸ್ತರಣೆ
ಜನರ ಹೆಸರುಗಳನ್ನು ಅಂತಿಮ ತೀರ್ಪಿನ ನಂತರ ಸೇರಿಸಿದರೆ... ಮತ ಚಲಾಯಿಸಲು ಅವಕಾಶ - ಸುಪ್ರೀಂ
ಜನರ ಹೆಸರುಗಳನ್ನು ಅಂತಿಮ ತೀರ್ಪಿನ ನಂತರ ಸೇರಿಸಿದರೆ... ಮತ ಚಲಾಯಿಸಲು ಅವಕಾಶ - ಸುಪ್ರೀಂ
ಹಿರಿಯ ಗಾಯಕಿ ಆಶಾ ಬೋಸ್ಲೆ ನಿಧನ : ಪ್ರಧಾನಿ ಮೋದಿ ಸಂತಾಪ
ಹಿರಿಯ ಗಾಯಕಿ ಆಶಾ ಬೋಸ್ಲೆ ನಿಧನ : ಪ್ರಧಾನಿ ಮೋದಿ ಸಂತಾಪ
 ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ವಂದೇ ಭಾರತ್ ಸ್ಲೀಪರ್ ರೈಲು ಸೇವೆಗೆ ಅನುಮೋದನೆ
ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ವಂದೇ ಭಾರತ್ ಸ್ಲೀಪರ್ ರೈಲು ಸೇವೆಗೆ ಅನುಮೋದನೆ
ನಾಸಿಕ್ ಟಿಸಿಎಸ್ ಪ್ರಕರಣ: ಮತಾಂತರ, ಮೂಲಭೂತೀಕರಣ ಆರೋಪಗಳ ಮೇಲೆ ತನಿಖೆ ಆರಂಭ
ನಾಸಿಕ್ ಟಿಸಿಎಸ್ ಪ್ರಕರಣ: ಮತಾಂತರ, ಮೂಲಭೂತೀಕರಣ ಆರೋಪಗಳ ಮೇಲೆ ತನಿಖೆ ಆರಂಭ
ದೋಷಾರೋಪಣೆ ಪ್ರಕ್ರಿಯೆ ಆರಂಭವಾದ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ
ದೋಷಾರೋಪಣೆ ಪ್ರಕ್ರಿಯೆ ಆರಂಭವಾದ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ
2008ರ ಮಾಲೆಗಾಂವ್ ಸ್ಫೋಟ ಪ್ರಕರಣ: ಕರ್ನಲ್ ಪುರೋಹಿತ್‌ಗೆ ಬ್ರಿಗೇಡಿಯರ್ ಬಡ್ತಿಗೆ ಅನುಮತಿ
2008ರ ಮಾಲೆಗಾಂವ್ ಸ್ಫೋಟ ಪ್ರಕರಣ: ಕರ್ನಲ್ ಪುರೋಹಿತ್‌ಗೆ ಬ್ರಿಗೇಡಿಯರ್ ಬಡ್ತಿಗೆ ಅನುಮತಿ
ಪ್ರತಿಯೊಬ್ಬ ಸೈನಿಕ ಡ್ರೋನ್ ಹಾರಿಸಲು ಸಿದ್ದವಾಗಬೇಕು - ಪ್ರತಿ ಸೈನಿಕನಿಗೆ ಡ್ರೋನ್ ಒದಗಿಸಲು ಸೇನಾ ಮುಖ್ಯಸ್ಥರು
ಪ್ರತಿಯೊಬ್ಬ ಸೈನಿಕ ಡ್ರೋನ್ ಹಾರಿಸಲು ಸಿದ್ದವಾಗಬೇಕು - ಪ್ರತಿ ಸೈನಿಕನಿಗೆ ಡ್ರೋನ್ ಒದಗಿಸಲು ಸೇನಾ ಮುಖ್ಯಸ್ಥರು
ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳಿಗೆ ಶಿಕ್ಷೆ ವಿಧಿಸಿದ ಬೆಂಗಳೂರು ನ್ಯಾಯಾಲಯ
ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳಿಗೆ ಶಿಕ್ಷೆ ವಿಧಿಸಿದ ಬೆಂಗಳೂರು ನ್ಯಾಯಾಲಯ

ನ್ಯೂಸ್ MORE NEWS...