Sun,Jul26,2026
ಕನ್ನಡ / English

ಕಾಂಗ್ರೆಸ್ ಗೆಲ್ಲುತ್ತೆ ಅಂತ ಬಿಜೆಪಿ ಹತಾಶರಾಗಿ, ಸರ್ಕಾರವೇ ಹಣ ನೀಡಿ ನನ್ನ ವಿರುದ್ಧ ಪ್ರತಿಭಟನೆ ಮಾಡಿಸಿದೆ! | JANATA NEWS

18 Aug 2022

ಮಡಿಕೇರಿ : ಸರ್ಕಾರವೇ ಹಣ ಕೊಟ್ಟು ಜನರನ್ನ ಕರೆಸಿ ನನ್ನ ವಿರುದ್ಧ ಪ್ರತಿಭಟನೆ ಮಾಡಿಸಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಪ್ರತಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊಡಗಿನ ಪ್ರವಾಹ ಪೀಡಿತ ಪ್ರದೇಶಗಳಿಗೆ ಗುರುವಾರ ಭೇಟಿ ನೀಡಿದರು.

ನಾನು ಬಂದು ಮಳೆ ಹಾನಿಯಾದ ಪ್ರದೇಶಗಳನ್ನು ನೋಡ್ತೀನಿ ಅಂತ ಕಾರ್ಯಕರ್ತರನ್ನು ಬಿಟ್ಟು ಪ್ರತಿಭಟನೆ ಮಾಡಿಸಿದ್ದಾರೆ. ಈ ಬಾರಿ ಕೊಡಗಿನಲ್ಲಿ ಎರಡೂ ಕಡೆ ಕಾಂಗ್ರೆಸ್ ಗೆಲ್ಲುತ್ತೆ ಅಂತ ಬಿಜೆಪಿ ಹತಾಶರಾಗಿ ಹೀಗೆ ಪ್ರತಿಭಟನೆ ಮಾಡಿದ್ದಾರೆ ಎಂದರು.

ಈ ಬಾರಿ ಕೊಡಗಿನಲ್ಲಿ ಎರಡೂ ಕಡೆ ಕಾಂಗ್ರೆಸ್ ಗೆಲ್ಲುತ್ತೆ ಅಂತ ಬಿಜೆಪಿ ಹತಾಶರಾಗಿ ಹೀಗೆ ಪ್ರತಿಭಟನೆ ಮಾಡಿದ್ದಾರೆ. ನಮಗೆ ಮೊಟ್ಟೆ ಎಸೆಯೋಕೆ ಬರಲ್ವಾ? ನಾವು ಅಲ್ಲಿಂದಲೇ ಪ್ರತಿಭಟನೆ ಮಾಡಿಕೊಂಡು ಬಂದಿರೋದು. ನಾವು ಹೋರಾಟ ಮಾಡೋಕೆ‌ ಶುರು ಮಾಡಿದ್ರೆ ಸಿಎಂ ಎಲ್ಲೂ ಓಡಾಡೋಕೆ ಆಗಲ್ಲ. ನಮ್ಮ ಕಾರ್ಯಕರ್ತರು ಬೀದಿಗಿಳಿದ್ರೆ ಬಿಜೆಪಿಯವರಿಗೆ ಕೊಡಗಿನಲ್ಲೇ ತಿರುಗಾಡೋಕೆ ಆಗಲ್ಲ ಎಂದು ಸಿದ್ದರಾಮಯ್ಯ ಎಚ್ಚರಿಕೆ ರವಾನಿಸಿದರು.

ತಮ್ಮ ಭೇಟಿಯ ವೇಳೆ ಪ್ರತಿಭಟನೆ ನಡೆಸಲು ಬಿಜೆಪಿ ಕಾರ್ಯಕರ್ತರಿಗೆ ಸರ್ಕಾರವೇ ಹಣ ನೀಡಿದೆ ಎಂದು ಸಿದ್ದರಾಮಯ್ಯ ಆರೋಪಿಸಿದರು. ಈ ಎಲ್ಲಾ ಪ್ರತಿಭಟನೆಗಳು ಭ್ರಷ್ಟ ಮತ್ತು ಕಳಪೆ ಗುಣಮಟ್ಟದ ಪರಿಹಾರ ಕಾಮಗಾರಿಗಳನ್ನು ಮುಚ್ಚಿಹಾಕುವ ಯತ್ನವಾಗಿವೆ. ಟಿಪ್ಪು ಜಯಂತಿಯನ್ನು ಹಲವಾರು ವರ್ಷಗಳಿಂದ ಆಚರಿಸಲಾಗುತ್ತಿದ್ದು, ಸಮಸ್ಯೆಯ ನಂತರ ಹಲವು ಬಾರಿ ಕೊಡಗಿಗೆ ಭೇಟಿ ನೀಡಿದ್ದೇನೆ. ಆಗ ಎಲ್ಲಾ ಬಿಜೆಪಿ ಕಾರ್ಯಕರ್ತರು ಸತ್ತಿದ್ದರಾ? ಎಂದು ಪ್ರಶ್ನಿಸಿದರು.

ಚುನಾಯಿತ ಜನಪ್ರತಿನಿಧಿಗಳು ಗುತ್ತಿಗೆದಾರರೊಂದಿಗೆ ಸೇರಿ ಸಾರ್ವಜನಿಕರ ಹಣವನ್ನು ಲೂಟಿ ಮಾಡುತ್ತಿದ್ದಾರೆ. 'ಡಿಸಿ ಕಚೇರಿ ಪಕ್ಕದಲ್ಲಿರುವ ತಡೆಗೋಡೆಯ ಭ್ರಷ್ಟ ಕಾಮಗಾರಿಯನ್ನು ಪರಿಶೀಲಿಸದಂತೆ ಪ್ರತಿಭಟನೆ ನಡೆಸಲಾಗಿದೆ. ಜಿಲ್ಲೆಯಲ್ಲಿ ನಡೆದಿರುವ ಭ್ರಷ್ಟ ಪರಿಹಾರ ಕಾಮಗಾರಿಗಳ ಕುರಿತು ವಿಧಾನಮಂಡಲ ಅಧಿವೇಶನದಲ್ಲಿ ಚರ್ಚೆ ನಡೆಸುತ್ತೇನೆ, ಮುಂಬರುವ ಚುನಾವಣೆಯಲ್ಲಿ ಭಾಗವಹಿಸುತ್ತೇನೆ ಎಂದು ಹೇಳಿದರು. 2018, 19, 20ರಲ್ಲಿ ಆದ ಮಳೆಯ ಹಾನಿಗೆ ಸರ್ಕಾರ ಇನ್ನೂ ಕೂಡ ಪರಿಹಾರ ನೀಡಿಲ್ಲ. ಸೇತುವೆ ತಡೆಗೋಡೆಗಳನ್ನು ತೀರಾ ಕಳಪೆಯಾಗಿ ಮಾಡಿದ್ದಾರೆ. ಅದಕ್ಕೆ ಅವೆಲ್ಲಾ ಹೀಗಾಗಿವೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

RELATED TOPICS:
English summary :The government has given money and protested against me

ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ  ರಿಜಿಜು ಮನವಿ
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ ರಿಜಿಜು ಮನವಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ

ನ್ಯೂಸ್ MORE NEWS...