Wed,Feb04,2026
ಕನ್ನಡ / English

ಭಾರತ್ ಜೋಡೋ ಯಾತ್ರೆ ಮೂಲಕ ರಾಹುಲ್ ಗಾಂಧಿ ಅವರ ಬಾಡಿ ಫಿಟ್ನೆಸ್ ಪ್ರದರ್ಶನವಾಗುತ್ತಿದೆ | JANATA NEWS

14 Oct 2022

ಉಡುಪಿ : ಭಾರತ್ ಜೋಡೋ ಯಾತ್ರೆ ಮೂಲಕ ರಾಹುಲ್ ಗಾಂಧಿ ಅವರ ಬಾಡಿ ಫಿಟ್ನೆಸ್ ಪ್ರದರ್ಶನವಾಗುತ್ತಿದೆ ಎಂದು ಉಡುಪಿಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಲೇವಡಿ​ ಮಾಡಿದ್ದಾರೆ.

ದೇಶದ ನಾಯಕತ್ವ ವಹಿಸಲು ರಾಹುಲ್​ಗೆ ಸಾಧ್ಯನಾ? ಪಕ್ಷದ ನೇತೃತ್ವ ವಹಿಸದವ ದೇಶದ ನೇತೃತ್ವ ವಹಿಸಲು ಅಸಾಧ್ಯ. ಪ್ರಧಾನಿ ಮೋದಿಗೆ ಸರಿಸಾಟಿಯಾಗಲಾಗದ ರಾಹುಲ್‍ ಗಾಂಧಿ ಅವರಿಗೆ ಬಾಡಿ ಫಿಟ್ನೆಸ್ ಇದ್ದರೂ ಮೈಂಡ್ ಫಿಟ್ನೆಸ್ ಸೇರಿದಂತೆ ದೇಶವಾಳಲು ಫಿಟ್ ಇದ್ದಾರಾ ಎಂದು ಶೋಭಾ ಕರಂದ್ಲಾಜೆ ಪ್ರಶ್ನಿಸಿದರು.

ಮೋದಿಗೆ ಸರಿಸಾಟಿಯಾಗುವ ರಾಹುಲ್ ಕನಸು ನನಸಾಗಲ್ಲ. ಬಾಡಿ ಫಿಟ್ನೆಸ್ ಇದೆ, ಮೆಂಟಲ್ ಫಿಟ್ನೆಸ್ ಇದ್ದಾರಾ? ದೇಶವನ್ನು ಆಳಲು ಮೆಂಟಲಿ ​​ಫಿಟ್ನೆಸ್​ ಇದ್ದಾರೋ ಇಲ್ವೋ ಎಂದು ದೇಶದ ಜನ ತೀರ್ಮಾನ ಮಾಡುತ್ತಾರೆ ಎಂದು ಕಾಲೆಳೆದಿದ್ದಾರೆ.

ಮುಸ್ಲಿಂ ಮಹಿಳೆಗೆ ಸ್ವಾತಂತ್ರ್ಯ ಸಿಗಬೇಕಾದರೆ ಹಿಜಾಬ್​ಗೆ ಅವಕಾಶ ಕೊಡಬಾರದು, ಹಿಜಾಬ್ ಪ್ರಕರಣ ಸಂವಿಧಾನಿಕ ಪೀಠಕ್ಕೆ ವರ್ಗಾವಣೆ ಆಗಬಹುದು. ಇಬ್ಬರು ನ್ಯಾಯಮೂರ್ತಿಗಳು ಒಮ್ಮತಕ್ಕೆ ಬರಲು ಸಾಧ್ಯವಾಗಿಲ್ಲ. ಸಂವಿಧಾನಿಕ ಪೀಠದಲ್ಲಿ ಹಿಜಾಬ್ ದೇಶಕ್ಕೆ ಬೇಕೋ ಬೇಡವೋ ಎಂದು ತೀರ್ಮಾನವಾಗುತ್ತದೆ. ಎಲ್ಲಾ ಮಹಿಳೆಯರು ಸ್ವಾತಂತ್ರ್ಯವಾಗಿ ಬದುಕಲು ನ್ಯಾಯಾಲಯ ಅವಕಾಶ ಮಾಡಿಕೊಡಬಹುದು. ಮುಸ್ಲಿಂ ಹೆಣ್ಣು ಮಕ್ಕಳು ಈ ಬಗ್ಗೆ ಗಂಭೀರವಾಗಿ ಆಲೋಚನೆ ಮಾಡಬೇಕು ಎಂದು ಸೂಚಿಸಿದರು.

ಮುಸ್ಲಿಂ ಹೆಣ್ಮಕ್ಕಳು ಈಗಲಾದರೂ ಯೋಚಿಸಬೇಕು. ಮನೆ ಮಂದಿ, ಗಂಡಸರು ಹೆಣ್ಮಕ್ಕಳಿಗೆ ಹಿಜಾಬ್ ಧರಿಸಲು ಒತ್ತಡ ಹೇರಿದರೂ ಸುಪ್ರೀಂ ಕೋರ್ಟ್ ತೀರ್ಪಿನಿಂದ ಹಿಜಾಬ್ ಧರಿಸುವ ಅಗತ್ಯವಿಲ್ಲವೆಂದಾದರೆ ಹೆಣ್ಮಕ್ಕಳಿಗೆ ಸ್ವಾತಂತ್ರ್ಯ ಸಿಗಬಹುದು. ಮುಸ್ಲಿಂ ಹೆಣ್ಮಕ್ಕಳಿಗೆ ಶಿಕ್ಷಣ, ಉದ್ಯೋಗ ಸಿಗಬೇಕು, ಸ್ವಂತ ಕಾಲಲ್ಲಿ ನಿಲ್ಲಬೇಕು. ಗಂಡಸರು ಹಾಕಿದ ತಾಳಕ್ಕೆ ಕುಣಿದು, ನಿಮ್ಮ ಇಚ್ಛೆಗೆ ವಿರುದ್ಧವಾಗಿ ನಡೆಯಬೇಡಿ. ಈಗಲಾದರೂ ಅರ್ಥ ಮಾಡಿಕೊಳ್ಳಿ ಎಂದು ಹಿಜಾಬ್ ಪರ ಹೋರಾಟದಲ್ಲಿ ಪಾಲ್ಗೊಂಡ ವಿದ್ಯಾರ್ಥಿನಿಯರಲ್ಲಿ ಮನವಿ ಮಾಡಿದರು.

RELATED TOPICS:
English summary :Rahul Gandhi body fitness is being demonstrated through Bharat Jodo Yatra

ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್, ಭಾರತೀಯ ಸರಕುಗಳ ಮೇಲಿನ ಸುಂಕ ಕಡಿತ ಘೋಷಣೆ
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್, ಭಾರತೀಯ ಸರಕುಗಳ ಮೇಲಿನ ಸುಂಕ ಕಡಿತ ಘೋಷಣೆ
ಸರ್ಕಾರಿ ಸಂಸ್ಥೆಗಳಿಗೆ ನೆಹರು-ಗಾಂಧಿ ಕುಟುಂಬದ ಹೆಸರಿಡುವ ವಿಚಾರವಾಗಿ ವಿಧಾನಸಭೆಯಲ್ಲಿ ಗದ್ದಲ
ಸರ್ಕಾರಿ ಸಂಸ್ಥೆಗಳಿಗೆ ನೆಹರು-ಗಾಂಧಿ ಕುಟುಂಬದ ಹೆಸರಿಡುವ ವಿಚಾರವಾಗಿ ವಿಧಾನಸಭೆಯಲ್ಲಿ ಗದ್ದಲ
ಭದ್ರತಾ ಪಡೆಗಳು ಕಾರ್ಯಾಚರಣೆ ಹೆಚ್ಚಿಸಿದ ನಂತರವೂ ಬಲೂಚಿಸ್ತಾನದಲ್ಲಿ ಪಾಕ್ ಸೇನೆಯ ಹಿನ್ನಡೆ ಮುಂದುವರೆದಿದೆ
ಭದ್ರತಾ ಪಡೆಗಳು ಕಾರ್ಯಾಚರಣೆ ಹೆಚ್ಚಿಸಿದ ನಂತರವೂ ಬಲೂಚಿಸ್ತಾನದಲ್ಲಿ ಪಾಕ್ ಸೇನೆಯ ಹಿನ್ನಡೆ ಮುಂದುವರೆದಿದೆ
 ಹಣಕ್ಕಾಗಿ ಭಿಕ್ಷೆ ಬೇಡಲು ನಮಗೆ ನಾಚಿಕೆಯಾಗುತ್ತಿದೆ - ಆರ್ಥಿಕ ಸಂಕಷ್ಟ ಒಪ್ಪಿಕೊಂಡ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್
ಹಣಕ್ಕಾಗಿ ಭಿಕ್ಷೆ ಬೇಡಲು ನಮಗೆ ನಾಚಿಕೆಯಾಗುತ್ತಿದೆ - ಆರ್ಥಿಕ ಸಂಕಷ್ಟ ಒಪ್ಪಿಕೊಂಡ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್
ಮೈಸೂರಿನಲ್ಲಿ ರಹಸ್ಯ ಡ್ರಗ್ಸ್ ಪ್ರಯೋಗಾಲಯ ಬಯಲು :ಪ್ರಮುಖ ಅಂತರರಾಜ್ಯ ಮಾದಕ ವಸ್ತುಗಳ ಸಿಂಡಿಕೇಟ್ ಮೇಲೆ ಎನ್‌ಸಿಬಿ ದಾಳಿ
ಮೈಸೂರಿನಲ್ಲಿ ರಹಸ್ಯ ಡ್ರಗ್ಸ್ ಪ್ರಯೋಗಾಲಯ ಬಯಲು :ಪ್ರಮುಖ ಅಂತರರಾಜ್ಯ ಮಾದಕ ವಸ್ತುಗಳ ಸಿಂಡಿಕೇಟ್ ಮೇಲೆ ಎನ್‌ಸಿಬಿ ದಾಳಿ
ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿಜೆ ರಾಯ್ ಶವವಾಗಿ ಪತ್ತೆಯಾಗಿದ್ದಾರೆ : ಆತ್ಮಹತ್ಯೆ ಶಂಕೆ
ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿಜೆ ರಾಯ್ ಶವವಾಗಿ ಪತ್ತೆಯಾಗಿದ್ದಾರೆ : ಆತ್ಮಹತ್ಯೆ ಶಂಕೆ
ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿಜೆ ರಾಯ್ ಶವವಾಗಿ ಪತ್ತೆಯಾಗಿದ್ದಾರೆ : ಆತ್ಮಹತ್ಯೆ ಶಂಕೆ
ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿಜೆ ರಾಯ್ ಶವವಾಗಿ ಪತ್ತೆಯಾಗಿದ್ದಾರೆ : ಆತ್ಮಹತ್ಯೆ ಶಂಕೆ
ಟಿಎಂಸಿ ಸರ್ಕಾರಕ್ಕೆ ಭಾರಿ ಹಿನ್ನಡೆ : ಗಡಿ ಭೂಮಿ ಬಿಎಸ್‌ಎಫ್‌ಗೆ ಹಸ್ತಾಂತರಿಸುವಂತೆ ಪ.ಬಂ.ಸರ್ಕಾರಕ್ಕೆ ಕಲ್ಕತ್ತಾ ಹೈಕೋರ್ಟ್ ಆದೇಶ
ಟಿಎಂಸಿ ಸರ್ಕಾರಕ್ಕೆ ಭಾರಿ ಹಿನ್ನಡೆ : ಗಡಿ ಭೂಮಿ ಬಿಎಸ್‌ಎಫ್‌ಗೆ ಹಸ್ತಾಂತರಿಸುವಂತೆ ಪ.ಬಂ.ಸರ್ಕಾರಕ್ಕೆ ಕಲ್ಕತ್ತಾ ಹೈಕೋರ್ಟ್ ಆದೇಶ
ಹೊಸ ಯುಜಿಸಿ ಸಮಾನತೆ ನಿಯಮಗಳಿಗೆ ಸುಪ್ರೀಂ ಕೋರ್ಟ್ ವಿರಾಮ: ಏನು ಮತ್ತು ಹೇಗೆ?
ಹೊಸ ಯುಜಿಸಿ ಸಮಾನತೆ ನಿಯಮಗಳಿಗೆ ಸುಪ್ರೀಂ ಕೋರ್ಟ್ ವಿರಾಮ: ಏನು ಮತ್ತು ಹೇಗೆ?
ಖಾಸಗಿ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ದೇಶಾದ್ಯಂತ ಶೋಕ
ಖಾಸಗಿ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ದೇಶಾದ್ಯಂತ ಶೋಕ
ರಾಜ್ಯದಲ್ಲಿ ಮತ್ತೊಂದು ಸ್ಲೀಪರ್ ನೈಟ್ ಬಸ್ ಬೆಂಕಿಗೆ ಆಹುತಿ
ರಾಜ್ಯದಲ್ಲಿ ಮತ್ತೊಂದು ಸ್ಲೀಪರ್ ನೈಟ್ ಬಸ್ ಬೆಂಕಿಗೆ ಆಹುತಿ
ಜಗತ್ತಿನ ಎಲ್ಲಾ ಒಪ್ಪಂದಗಳ ತಾಯಿ : ಭಾರತ-ಇಯು ವ್ಯಾಪಾರ ಒಪ್ಪಂದವು ಕಾರ್ಯತಂತ್ರದ ಸಹಭಾಗಿತ್ವದಲ್ಲಿ ಪ್ರಮುಖ ಹೆಜ್ಜೆ
ಜಗತ್ತಿನ ಎಲ್ಲಾ ಒಪ್ಪಂದಗಳ ತಾಯಿ : ಭಾರತ-ಇಯು ವ್ಯಾಪಾರ ಒಪ್ಪಂದವು ಕಾರ್ಯತಂತ್ರದ ಸಹಭಾಗಿತ್ವದಲ್ಲಿ ಪ್ರಮುಖ ಹೆಜ್ಜೆ

ನ್ಯೂಸ್ MORE NEWS...