Sun,Jul26,2026
ಕನ್ನಡ / English

ಭಾರತ್ ಜೋಡೋ ಯಾತ್ರೆ ಮೂಲಕ ರಾಹುಲ್ ಗಾಂಧಿ ಅವರ ಬಾಡಿ ಫಿಟ್ನೆಸ್ ಪ್ರದರ್ಶನವಾಗುತ್ತಿದೆ | JANATA NEWS

14 Oct 2022

ಉಡುಪಿ : ಭಾರತ್ ಜೋಡೋ ಯಾತ್ರೆ ಮೂಲಕ ರಾಹುಲ್ ಗಾಂಧಿ ಅವರ ಬಾಡಿ ಫಿಟ್ನೆಸ್ ಪ್ರದರ್ಶನವಾಗುತ್ತಿದೆ ಎಂದು ಉಡುಪಿಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಲೇವಡಿ​ ಮಾಡಿದ್ದಾರೆ.

ದೇಶದ ನಾಯಕತ್ವ ವಹಿಸಲು ರಾಹುಲ್​ಗೆ ಸಾಧ್ಯನಾ? ಪಕ್ಷದ ನೇತೃತ್ವ ವಹಿಸದವ ದೇಶದ ನೇತೃತ್ವ ವಹಿಸಲು ಅಸಾಧ್ಯ. ಪ್ರಧಾನಿ ಮೋದಿಗೆ ಸರಿಸಾಟಿಯಾಗಲಾಗದ ರಾಹುಲ್‍ ಗಾಂಧಿ ಅವರಿಗೆ ಬಾಡಿ ಫಿಟ್ನೆಸ್ ಇದ್ದರೂ ಮೈಂಡ್ ಫಿಟ್ನೆಸ್ ಸೇರಿದಂತೆ ದೇಶವಾಳಲು ಫಿಟ್ ಇದ್ದಾರಾ ಎಂದು ಶೋಭಾ ಕರಂದ್ಲಾಜೆ ಪ್ರಶ್ನಿಸಿದರು.

ಮೋದಿಗೆ ಸರಿಸಾಟಿಯಾಗುವ ರಾಹುಲ್ ಕನಸು ನನಸಾಗಲ್ಲ. ಬಾಡಿ ಫಿಟ್ನೆಸ್ ಇದೆ, ಮೆಂಟಲ್ ಫಿಟ್ನೆಸ್ ಇದ್ದಾರಾ? ದೇಶವನ್ನು ಆಳಲು ಮೆಂಟಲಿ ​​ಫಿಟ್ನೆಸ್​ ಇದ್ದಾರೋ ಇಲ್ವೋ ಎಂದು ದೇಶದ ಜನ ತೀರ್ಮಾನ ಮಾಡುತ್ತಾರೆ ಎಂದು ಕಾಲೆಳೆದಿದ್ದಾರೆ.

ಮುಸ್ಲಿಂ ಮಹಿಳೆಗೆ ಸ್ವಾತಂತ್ರ್ಯ ಸಿಗಬೇಕಾದರೆ ಹಿಜಾಬ್​ಗೆ ಅವಕಾಶ ಕೊಡಬಾರದು, ಹಿಜಾಬ್ ಪ್ರಕರಣ ಸಂವಿಧಾನಿಕ ಪೀಠಕ್ಕೆ ವರ್ಗಾವಣೆ ಆಗಬಹುದು. ಇಬ್ಬರು ನ್ಯಾಯಮೂರ್ತಿಗಳು ಒಮ್ಮತಕ್ಕೆ ಬರಲು ಸಾಧ್ಯವಾಗಿಲ್ಲ. ಸಂವಿಧಾನಿಕ ಪೀಠದಲ್ಲಿ ಹಿಜಾಬ್ ದೇಶಕ್ಕೆ ಬೇಕೋ ಬೇಡವೋ ಎಂದು ತೀರ್ಮಾನವಾಗುತ್ತದೆ. ಎಲ್ಲಾ ಮಹಿಳೆಯರು ಸ್ವಾತಂತ್ರ್ಯವಾಗಿ ಬದುಕಲು ನ್ಯಾಯಾಲಯ ಅವಕಾಶ ಮಾಡಿಕೊಡಬಹುದು. ಮುಸ್ಲಿಂ ಹೆಣ್ಣು ಮಕ್ಕಳು ಈ ಬಗ್ಗೆ ಗಂಭೀರವಾಗಿ ಆಲೋಚನೆ ಮಾಡಬೇಕು ಎಂದು ಸೂಚಿಸಿದರು.

ಮುಸ್ಲಿಂ ಹೆಣ್ಮಕ್ಕಳು ಈಗಲಾದರೂ ಯೋಚಿಸಬೇಕು. ಮನೆ ಮಂದಿ, ಗಂಡಸರು ಹೆಣ್ಮಕ್ಕಳಿಗೆ ಹಿಜಾಬ್ ಧರಿಸಲು ಒತ್ತಡ ಹೇರಿದರೂ ಸುಪ್ರೀಂ ಕೋರ್ಟ್ ತೀರ್ಪಿನಿಂದ ಹಿಜಾಬ್ ಧರಿಸುವ ಅಗತ್ಯವಿಲ್ಲವೆಂದಾದರೆ ಹೆಣ್ಮಕ್ಕಳಿಗೆ ಸ್ವಾತಂತ್ರ್ಯ ಸಿಗಬಹುದು. ಮುಸ್ಲಿಂ ಹೆಣ್ಮಕ್ಕಳಿಗೆ ಶಿಕ್ಷಣ, ಉದ್ಯೋಗ ಸಿಗಬೇಕು, ಸ್ವಂತ ಕಾಲಲ್ಲಿ ನಿಲ್ಲಬೇಕು. ಗಂಡಸರು ಹಾಕಿದ ತಾಳಕ್ಕೆ ಕುಣಿದು, ನಿಮ್ಮ ಇಚ್ಛೆಗೆ ವಿರುದ್ಧವಾಗಿ ನಡೆಯಬೇಡಿ. ಈಗಲಾದರೂ ಅರ್ಥ ಮಾಡಿಕೊಳ್ಳಿ ಎಂದು ಹಿಜಾಬ್ ಪರ ಹೋರಾಟದಲ್ಲಿ ಪಾಲ್ಗೊಂಡ ವಿದ್ಯಾರ್ಥಿನಿಯರಲ್ಲಿ ಮನವಿ ಮಾಡಿದರು.

RELATED TOPICS:
English summary :Rahul Gandhi body fitness is being demonstrated through Bharat Jodo Yatra

ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ  ರಿಜಿಜು ಮನವಿ
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ ರಿಜಿಜು ಮನವಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ

ನ್ಯೂಸ್ MORE NEWS...