Wed,Feb04,2026
ಕನ್ನಡ / English

ಮರ್ಯಾದಾ ಹತ್ಯೆ: ಪ್ರೇಮಿಗಳನ್ನ ಒಂದು ಮಾಡ್ತೀವಿ ಎಂದು ಕರೆದು ಹತ್ಯೆ | JANATA NEWS

18 Oct 2022

ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಭೀಕರ ಮರ್ಯಾದಾ ಹತ್ಯೆ ಬೆಳಕಿಗೆ ಬಂದಿದೆ. ಯುವತಿಯ ತಂದೆ ಹಾಗೂ ಮಾವಂದಿರು ಪ್ರೇಮಿಗಳಿಬ್ಬರನ್ನು ಕೊಲೆಗೈದು ಕೃಷ್ಣಾ ನದಿಗೆ ಎಸೆದಿದ್ದಾರೆ ಎನ್ನಲಾಗಿದೆ.

ಕಳೆದ ಕೆಲ ದಿನಗಳ ಹಿಂದೆ ಇಬ್ಬರು ನಾಪತ್ತೆಯಾಗಿದ್ದಾರೆ ಎಂದು ಇಬ್ಬರ ಪೋಷಕರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಗ್ರಾಮದ ವಿಶ್ವನಾಥ್ ನೆಲಗಿ(24) ಹಾಗೂ ರಾಜೇಶ್ವರಿ(18) ಹತ್ಯೆಯಾದ ಪ್ರೇಮಿಗಳು. ಸುಮಾರು 4-5 ವರ್ಷಗಳಿಂದ ವಿಶ್ವನಾಥ್ ಹಾಗೂ ರಾಜೇಶ್ವರಿ ಪರಸ್ಪರ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು.

ಈ ವಿಚಾರ ತಿಳಿದ ರಾಜೇಶ್ವರಿ ಪೋಷಕರು, ಅಪ್ರಾಪ್ತ ಮಗಳ ಪ್ರೀತಿಗೆ ಅಡ್ಡಿಪಡಿಸಿ ಬುದ್ಧಿ ಮಾತು ಹೇಳಿದ್ದರು. ವಿಶ್ವನಾಥ್‌ನ ಮನೆಯವರು ಆತನನ್ನು ಕೂಲಿ ಕೆಲಸಕ್ಕೆಂದು ಕೇರಳದ ಕಾಸರಗೋಡಿಗೆ ಕಳುಹಿಸಿದ್ದರು.

ಆದರೆ ರಾಜೇಶ್ವರಿಯ ತಂದೆ ಪರಸಪ್ಪ ಕರಡಿ ಇಬ್ಬರನ್ನೂ ಒಂದು ಮಾಡಿಸುವುದಾಗಿ ನಂಬಿಸಿ, ವಿಶ್ವನಾಥ್‌ನನ್ನು ಊರಿಗೆ ಬರುವಂತೆ ಹೇಳಿದ್ದಾರೆ. ನರಗುಂದ ಬಳಿ ಇದ್ದ ವಿಶ್ವನಾಥನನ್ನು ನಂಬಿಸಿ ರಾಜೇಶ್ವರಿ, ನಿನ್ನನ್ನು ಒಂದು ಮಾಡೋದಾಗಿ ಬೇವಿನಮಟ್ಟಿ ಗ್ರಾಮದಿಂದ ಕರೆದೊಯ್ದಿದ್ದರಂತೆ. ಇತ್ತ ಬಾಲಕಿಯನ್ನು ಕರೆತಂದಿದ್ದ ಆರೋಪಿಗಳು ರಾಜೇಶ್ವರಿ ಕತ್ತನ್ನು ವೇಲ್ ನಿಂದ ಬಿಗಿದು ಕೊಲೆ ಮಾಡಿದ್ದರಂತೆ. ಇತ್ತ ವಿಶ್ವನಾಥನ ಮರ್ಮಾಂಗ ಹಾಗೂ ಎದೆಗೆ ಕಲ್ಲಿನಿಂದ ಹೊಡೆದು ಕೊಲೆ ಮಾಡಿದ್ದರಂತೆ.

ಅಲ್ಲಿಂದ ಇಬ್ಬರ ಮೃತ ದೇಹಗಳನ್ನು ಕ್ರೂಸರ್ ವಾಹನದಲ್ಲಿ ಕೊಂಡೊಯ್ದಿದ್ದಾರೆ. ಶವಗಳನ್ನು ಹುನಗುಂದ ಎನ್‌ಹೆಚ್ 50ಯ ಕೃಷ್ಣಾ ನದಿ ಬ್ರಿಡ್ಜ್ ಮೇಲೆ ಕೊಂಡೊಯ್ದು, ಸಾಕ್ಷಿ ನಾಶ ಮಾಡುವ ಉದ್ದೇಶದಿಂದ ಶವಗಳ ಮೇಲಿನ ಬಟ್ಟೆ ಬಿಚ್ಚಿ, ಹರಿಯುತ್ತಿದ್ದ ಕೃಷ್ಣಾ ನದಿಗೆ ಎಸೆದಿದ್ದಾರೆ. ನಂತರ ಅವರಿಬ್ಬರ ಬಟ್ಟೆಗಳನ್ನು ಸಂಗಮ ಕ್ರಾಸ್ ಬಳಿ ತಂದು ಸುಟ್ಟು ಹಾಕಿದ್ದಾರೆ.

ವಿಚಾರಣೆಗೆ ಸಂದರ್ಭದಲ್ಲಿ ಅನುಮಾನಗೊಂಡ ಪೊಲೀಸರು, ಶಂಕೆಯ ಮೇರೆಗೆ ಅಕ್ಟೋಬರ್ 15 ರಂದು ಯುವತಿಯ ಸಹೋದರ ರವಿ ಹುಲ್ಲಣ್ಣವರನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಸಂದರ್ಭದಲ್ಲಿ ಆರೋಪಿ ಕೃತ್ಯದ ಬಗ್ಗೆ ಬಾಯ್ಬಿಟ್ಟಿದ್ದಾನೆ ಎನ್ನಲಾಗಿದೆ.

ಯುವತಿ ತಂದೆ ಪರಸಪ್ಪ ಕರಡಿ ಕುಮ್ಮಕ್ಕಿನಿಂದಲೇ ಕೊಲೆ ಮಾಡಿದ್ದಾಗಿ ಹೇಳಿದ್ದಾನೆ ಎನ್ನಲಾಗಿದೆ. ಪ್ರಕರಣದ ಸಂಬಂಧ ಬಾಗಲಕೋಟೆ ಗ್ರಾಮೀಣ ಠಾಣೆ ಪೊಲೀಸರು, ರಾಜೇಶ್ವರಿ ಕರಡಿ (17) ವಿಶ್ವನಾಥ ನೆಲಗಿ (22) ಕೊಲೆಯಾದ ಪ್ರೇಮಿಗಳು. ಪ್ರಕರಣದಲ್ಲಿ ರಾಜೇಶ್ವರಿ ಅಣ್ಣ ರವಿ ಹುಲ್ಲಣ್ಣವರ (19), ಮಾವಂದಿರರಾದ ಹನುಮಂತ ಮಲ್ನಾಡದ (22), ಬೀರಪ್ಪ ದಳವಾಯಿ (18) ಎಂಬ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

RELATED TOPICS:
English summary :Honor killing: Killing of lovers by calling them

ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್, ಭಾರತೀಯ ಸರಕುಗಳ ಮೇಲಿನ ಸುಂಕ ಕಡಿತ ಘೋಷಣೆ
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್, ಭಾರತೀಯ ಸರಕುಗಳ ಮೇಲಿನ ಸುಂಕ ಕಡಿತ ಘೋಷಣೆ
ಸರ್ಕಾರಿ ಸಂಸ್ಥೆಗಳಿಗೆ ನೆಹರು-ಗಾಂಧಿ ಕುಟುಂಬದ ಹೆಸರಿಡುವ ವಿಚಾರವಾಗಿ ವಿಧಾನಸಭೆಯಲ್ಲಿ ಗದ್ದಲ
ಸರ್ಕಾರಿ ಸಂಸ್ಥೆಗಳಿಗೆ ನೆಹರು-ಗಾಂಧಿ ಕುಟುಂಬದ ಹೆಸರಿಡುವ ವಿಚಾರವಾಗಿ ವಿಧಾನಸಭೆಯಲ್ಲಿ ಗದ್ದಲ
ಭದ್ರತಾ ಪಡೆಗಳು ಕಾರ್ಯಾಚರಣೆ ಹೆಚ್ಚಿಸಿದ ನಂತರವೂ ಬಲೂಚಿಸ್ತಾನದಲ್ಲಿ ಪಾಕ್ ಸೇನೆಯ ಹಿನ್ನಡೆ ಮುಂದುವರೆದಿದೆ
ಭದ್ರತಾ ಪಡೆಗಳು ಕಾರ್ಯಾಚರಣೆ ಹೆಚ್ಚಿಸಿದ ನಂತರವೂ ಬಲೂಚಿಸ್ತಾನದಲ್ಲಿ ಪಾಕ್ ಸೇನೆಯ ಹಿನ್ನಡೆ ಮುಂದುವರೆದಿದೆ
 ಹಣಕ್ಕಾಗಿ ಭಿಕ್ಷೆ ಬೇಡಲು ನಮಗೆ ನಾಚಿಕೆಯಾಗುತ್ತಿದೆ - ಆರ್ಥಿಕ ಸಂಕಷ್ಟ ಒಪ್ಪಿಕೊಂಡ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್
ಹಣಕ್ಕಾಗಿ ಭಿಕ್ಷೆ ಬೇಡಲು ನಮಗೆ ನಾಚಿಕೆಯಾಗುತ್ತಿದೆ - ಆರ್ಥಿಕ ಸಂಕಷ್ಟ ಒಪ್ಪಿಕೊಂಡ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್
ಮೈಸೂರಿನಲ್ಲಿ ರಹಸ್ಯ ಡ್ರಗ್ಸ್ ಪ್ರಯೋಗಾಲಯ ಬಯಲು :ಪ್ರಮುಖ ಅಂತರರಾಜ್ಯ ಮಾದಕ ವಸ್ತುಗಳ ಸಿಂಡಿಕೇಟ್ ಮೇಲೆ ಎನ್‌ಸಿಬಿ ದಾಳಿ
ಮೈಸೂರಿನಲ್ಲಿ ರಹಸ್ಯ ಡ್ರಗ್ಸ್ ಪ್ರಯೋಗಾಲಯ ಬಯಲು :ಪ್ರಮುಖ ಅಂತರರಾಜ್ಯ ಮಾದಕ ವಸ್ತುಗಳ ಸಿಂಡಿಕೇಟ್ ಮೇಲೆ ಎನ್‌ಸಿಬಿ ದಾಳಿ
ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿಜೆ ರಾಯ್ ಶವವಾಗಿ ಪತ್ತೆಯಾಗಿದ್ದಾರೆ : ಆತ್ಮಹತ್ಯೆ ಶಂಕೆ
ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿಜೆ ರಾಯ್ ಶವವಾಗಿ ಪತ್ತೆಯಾಗಿದ್ದಾರೆ : ಆತ್ಮಹತ್ಯೆ ಶಂಕೆ
ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿಜೆ ರಾಯ್ ಶವವಾಗಿ ಪತ್ತೆಯಾಗಿದ್ದಾರೆ : ಆತ್ಮಹತ್ಯೆ ಶಂಕೆ
ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿಜೆ ರಾಯ್ ಶವವಾಗಿ ಪತ್ತೆಯಾಗಿದ್ದಾರೆ : ಆತ್ಮಹತ್ಯೆ ಶಂಕೆ
ಟಿಎಂಸಿ ಸರ್ಕಾರಕ್ಕೆ ಭಾರಿ ಹಿನ್ನಡೆ : ಗಡಿ ಭೂಮಿ ಬಿಎಸ್‌ಎಫ್‌ಗೆ ಹಸ್ತಾಂತರಿಸುವಂತೆ ಪ.ಬಂ.ಸರ್ಕಾರಕ್ಕೆ ಕಲ್ಕತ್ತಾ ಹೈಕೋರ್ಟ್ ಆದೇಶ
ಟಿಎಂಸಿ ಸರ್ಕಾರಕ್ಕೆ ಭಾರಿ ಹಿನ್ನಡೆ : ಗಡಿ ಭೂಮಿ ಬಿಎಸ್‌ಎಫ್‌ಗೆ ಹಸ್ತಾಂತರಿಸುವಂತೆ ಪ.ಬಂ.ಸರ್ಕಾರಕ್ಕೆ ಕಲ್ಕತ್ತಾ ಹೈಕೋರ್ಟ್ ಆದೇಶ
ಹೊಸ ಯುಜಿಸಿ ಸಮಾನತೆ ನಿಯಮಗಳಿಗೆ ಸುಪ್ರೀಂ ಕೋರ್ಟ್ ವಿರಾಮ: ಏನು ಮತ್ತು ಹೇಗೆ?
ಹೊಸ ಯುಜಿಸಿ ಸಮಾನತೆ ನಿಯಮಗಳಿಗೆ ಸುಪ್ರೀಂ ಕೋರ್ಟ್ ವಿರಾಮ: ಏನು ಮತ್ತು ಹೇಗೆ?
ಖಾಸಗಿ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ದೇಶಾದ್ಯಂತ ಶೋಕ
ಖಾಸಗಿ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ದೇಶಾದ್ಯಂತ ಶೋಕ
ರಾಜ್ಯದಲ್ಲಿ ಮತ್ತೊಂದು ಸ್ಲೀಪರ್ ನೈಟ್ ಬಸ್ ಬೆಂಕಿಗೆ ಆಹುತಿ
ರಾಜ್ಯದಲ್ಲಿ ಮತ್ತೊಂದು ಸ್ಲೀಪರ್ ನೈಟ್ ಬಸ್ ಬೆಂಕಿಗೆ ಆಹುತಿ
ಜಗತ್ತಿನ ಎಲ್ಲಾ ಒಪ್ಪಂದಗಳ ತಾಯಿ : ಭಾರತ-ಇಯು ವ್ಯಾಪಾರ ಒಪ್ಪಂದವು ಕಾರ್ಯತಂತ್ರದ ಸಹಭಾಗಿತ್ವದಲ್ಲಿ ಪ್ರಮುಖ ಹೆಜ್ಜೆ
ಜಗತ್ತಿನ ಎಲ್ಲಾ ಒಪ್ಪಂದಗಳ ತಾಯಿ : ಭಾರತ-ಇಯು ವ್ಯಾಪಾರ ಒಪ್ಪಂದವು ಕಾರ್ಯತಂತ್ರದ ಸಹಭಾಗಿತ್ವದಲ್ಲಿ ಪ್ರಮುಖ ಹೆಜ್ಜೆ

ನ್ಯೂಸ್ MORE NEWS...