Sun,Jul26,2026
ಕನ್ನಡ / English

ಮಹಿಳೆಗೆ ಕಪಾಳಮೋಕ್ಷ ಪ್ರಕರಣ: ಕ್ಷಮೆಯಾಚಿಸಿದ ಸೋಮಣ್ಣ | JANATA NEWS

23 Oct 2022

ಚಾಮರಾಜನಗರ : ಮಹಿಳೆಗೆ ಕಪಾಳಮೋಕ್ಷ ಪ್ರಕರಣಕ್ಕೆ ಸಂಬಂಧಿಸಿದಂತೆ ವಸತಿ ಸಚಿವ ವಿ.ಸೋಮಣ್ಣ ಕ್ಷಮೆ ಯಾಚಿಸಿದ್ದಾರೆ.

45 ವರ್ಷ ಹಲವು ಏಳುಬೀಳು ಕಂಡಿದ್ದೇನೆ. ನಿನ್ನೆಯ ಕಾರ್ಯಕ್ರಮದಲ್ಲಿ ಸಣ್ಣ ಅಪಚಾರವನ್ನು ಮಾಡಿಲ್ಲ. ಪ್ರಾಯಶಃ ಯಾರಿಗಾದರೂ ಮನಸ್ಸಿಗೆ ನೋವಾಗಿದ್ದಾರೆ ಕ್ಷಮೆ ಯಾಚಿಸುತ್ತೇನೆ, ವಿಷಾದ ವ್ಯಕ್ತಪಡಿಸುತ್ತೇನೆ. ನಿನ್ನೆಯ ಘಟನೆ ಘಟನೆಯೇ ಅಲ್ಲ ಎಂದು ಹೇಳಿದರು.

ನಿನ್ನೆ ನಡೆದ ಘಟನೆ ಘಟನೆಯೇ ಅಲ್ಲ. ಆ ಹೆಣ್ಣು ಮಗಳು ಪದೇ ಪದೇ ವೇದಿಕೆ ಮೇಲೆ ಬರ್ತಾ ಇದ್ದಳು, ತಾಯಿ ಎಷ್ಟು ಸಾರಿ ಬರ್ತೀಯಾ ಅಂತ ವಿಚಾರಿಸಿದೆ. ನಿನ್ನ ಸಮಸ್ಯೆ ಬಗೆಹರಿಸ್ತೇನೆ ಎಂದು ಕೈಯಲ್ಲಿ ಪಕ್ಕಕ್ಕೆ ಸರಿಸಿದ್ದೇನೆ. ಅಷ್ಟೇ ವಿನಃ ನನಗೆ ಆಕೆಯನ್ನು ಹೊಡೆಯಬೇಕು ಎನ್ನುವ ಉದ್ದೇಶ ಇರಲಿಲ್ಲ ಎಂದು ಸಚಿವ ಸೋಮಣ್ಣ ಹೇಳಿದ್ದಾರೆ.

ಹೆಣ್ಣು ಮಕ್ಕಳ ಬಗ್ಗೆ ಅಪಾರವಾದ ಗೌರವ, ಮಮಕಾರ ಇದೆ. ನಾನು ಕೂಡ ಬಡತನದಿಂದಲೇ ಬಂದವನು. ಆ ಹೆಣ್ಣು ಮಗಳಿಗೆ ಸಹ ಹಕ್ಕು ಪತ್ರ ಕೊಡಿಸಿದ್ದೇನೆ. ಯಾರಿಗಾದರೂ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಸಚಿವರು ತಿಳಿಸಿದರು.

ಮಹಿಳೆಗೆ ಒತ್ತಡ ಹೇರಿ ಹೇಳಿಕೆ ಕೊಡಿಸಿದ್ದಾರೆ ಎನ್ನುವ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸೋಮಣ್ಣ, ಅದರ ಅವಶ್ಯಕತೆ ನನಗೆ ಇಲ್ಲ. ಆ ರೀತಿ ಜೀವನ ಮಾಡಿಲ್ಲ. ಈ ಸೋಮಣ್ಣ ಯಾವತ್ತು ಕ್ಷುಲ್ಲಕ ಕೆಲಸ ಮಾಡಿಲ್ಲ. ಸೋಮಣ್ಣ ಸೋಮಣ್ಣ ಆಗಿಯೇ ಇದ್ದೇನೆ ಎಂದರು.

ಸಂಸ್ಕಾರಯುತವಾಗಿ ಜೀವನ ಮಾಡಿದ್ದೇನೆ. ನನಗೆ ಹೆಣ್ಣು ಮಕ್ಕಳು ತಾಯಿಂದಿರ ಸಮಾನ. ಇಷ್ಟೊಂದು ಜನ ನನ್ನ ಕಾರ್ಯ ವೈಖರಿಯನ್ನು ವಿರೋಧಿಸ್ತಾರೆ ಅಂತ ದೇವರಾಣೆಗೂ ಗೊತ್ತಿರಲಿಲ್ಲ. ನನ್ನ ಪತ್ನಿ ಬಿಟ್ಟರೆ ಉಳಿದ ಹೆಣ್ಣು ಮಕ್ಕಳೆಲ್ಲಾ ಸಹೋದರಿಯರು, ತಾಯಿಂದಿರ ಸಮಾನ. ನನ್ನಿಂದ ಯಾರಿಗಾದರು ನೋವಾಗಿದ್ದರೆ ವಿಷಾದ ವ್ಯಕ್ತಪಡಿಸ್ತೀನಿ ಎಂದು ಎರಡೆರಡು ಬಾರಿ ಸಚಿವರು ಕ್ಷಮೆ ಕೇಳಿದ್ದಾರೆ.

RELATED TOPICS:
English summary :Woman slapped case: Somanna apologizes

ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ  ರಿಜಿಜು ಮನವಿ
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ ರಿಜಿಜು ಮನವಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ

ನ್ಯೂಸ್ MORE NEWS...