Sun,Jul26,2026
ಕನ್ನಡ / English

ಚಿತ್ರದುರ್ಗ ವೈದ್ಯೆ ರೂಪಾ ಸಾವು ಕೇಸ್: ಪೋಸ್ಟ್ ಮಾರ್ಟಂನಲ್ಲಿ ಸಾವಿನ ರಹಸ್ಯ ಬಯಲು! | JANATA NEWS

07 Dec 2022

ಚಿತ್ರದುರ್ಗ : ಚಿತ್ರದುರ್ಗದ ಜಿಲ್ಲಾ ಕುಷ್ಠರೋಗ ನಿವಾರಣಾಧಿಕಾರಿ ಡಾ.ರೂಪಾ ಮೃತಪಟ್ಟಿದ್ದು ಆತ್ಮಹತ್ಯೆಯೋ, ಹತ್ಯೆಯೋ ಎನ್ನುವ ಪ್ರಶ್ನೆಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ.

ಚಿತ್ರದುರ್ಗ ನಗರದ ವಿ.ಪಿ.ಬಡಾವಣೆಯ ಮನೆಯಲ್ಲಿ ಡಾ.ರೂಪಾ ಅವರು ಸೋಮವಾರ ಅನುಮಾಸ್ಪದವಾಗಿ ಸಾವನ್ನಪ್ಪಿದ್ದರು. ತಾಯಿ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ಬೆಳಿಗ್ಗೆ 8 ಗಂಟೆಯ ವೇಳೆಗೆ ಪುತ್ರ ಗಮನಿಸಿ ಎರಡನೇ ಮಹಡಿಯಲ್ಲಿದ್ದ ತಂದೆ ಡಾ.ರವಿಗೆ ಮಾಹಿತಿ ನೀಡಿದ್ದಾನೆ. ವಿಷಯ ತಿಳಿದ ರವಿ ಕೂಡಲೇ ಧಾವಿಸಿ ಪತ್ನಿಯ ದೇಹವನ್ನು ಪರಿಶೀಲಿಸಿದ್ದಾರೆ, ತಲೆಯಲ್ಲಿ ತೀವ್ರ ರಕ್ತಸ್ರಾವ ಆಗಿದ್ದರಿಂದ ಕೂಡಲೇ. ತುರುವನೂರು ರಸ್ತೆಯ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಮೃತದೇಹ ಸಾಗಿಸಿದ್ದಾರೆ. ಮನೆಯಲ್ಲಿ ಕಾಲುಜಾರಿ ಬಿದ್ದು ತಲೆಗೆ ಪೆಟ್ಟುಬಿದ್ದು ಮೃತಪಟ್ಟಿದ್ದಾಗಿ ರವಿ ಅವರು ಮಾಹಿತಿ ನೀಡಿದ್ದರು.

ರೂಪಾ ಅವರು ಸೋಮವಾರ ಬೆಳಿಗ್ಗೆ 6ಕ್ಕೆ ಹಾಸಿಗೆಯಿಂದ ಎದ್ದಿದ್ದರು. ಏರೊಬಿಕ್‌ಗೆ ತೆರಳಬೇಕಿದ್ದ ಅವರು ತರಬೇತುದಾರರು ರಜೆ ಹಾಕಿದ್ದರಿಂದ ಮನೆಯಲ್ಲಿಯೇ ಉಳಿಯಬೇಕಾಯಿತು. ಲೆಮನ್‌ ಟೀ ಸೇವಿಸಿದ ಬಳಿಕ ಪತಿ ಮನೆಯ ಎರಡನೇ ಮಹಡಿಯಲ್ಲಿದ್ದ ಜಿಮ್‌ಗೆ ತೆರಳಿದ್ದರು. 16 ವರ್ಷದ ಪುತ್ರ ಹಾಗೂ ಅತ್ತೆ ಮನೆಯಲ್ಲಿಯೇ ಇದ್ದರು.

ತಲೆಯ ಬಲಭಾಗದಿಂದ ಹಾರಿದ ಗುಂಡು ಎಡಭಾಗದಿಂದ ಹೊರಗೆ ಬಂದಿದೆ. ರೂಪಾ ಅವರ ತಲೆಯಿಂದ ಹೊರಗೆ ಬಂದ ಗುಂಡು ಗೋಡೆಗೆ ತಗುಲಿ ಟೇಬಲ್‌ ಮೇಲೆ ಬಿದ್ದಿದೆ. ಗುಂಡು ಹಾಗೂ ರಿವಾಲ್ವಾರ್‌ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದು ಇಂಗ್ಲೆಂಡ್‌ನ ರಿವಾಲ್ವಾರ್‌ ಆಗಿದ್ದು, ಡಾ.ರವಿ ಪರವಾನಗಿ ಹೊಂದಿದ್ದರು..

ಪೋಸ್ಟ್ ಮಾರ್ಟಂ ಮಾಡಿದಮೇಲೆ ರೂಪಾಳ ಸಾವಿನ ಪ್ರಕರಣದಲ್ಲಿ ಅಸಲಿ ಸತ್ಯ ಬಯಲಿಗೆ ಬಂದಿದೆ. ಅದೇನಂದ್ರೆ, ಮನೆಯಲ್ಲಿ ಯಾರೂ ಇಲ್ಲದ ವೇಳೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ಬಯಲಿಗೆ ಬಂದಿದೆ

ಇನ್ನು ವೈದ್ಯೆ ರೂಪಾ ಸಾವನ್ನಪ್ಪಿದ್ದ ರೂಮಿನಲ್ಲಿ ಅವರು ಬರೆದಿದ್ದಾರೆ ಎನ್ನಲಾದ ಡೆತ್ ನೋಟ್ ಸಿಕ್ಕಿದೆಯಂತೆ. ಆ ಪತ್ರದಲ್ಲಿ ಈ ಸಾವಿಗೆ ನಾನೇ ಕಾರಣ. ಹೃದಯಾಘಾತವಾಗಿ ಮೃತಪಟ್ಟಿದ್ದಾಗಿ ಹೇಳಿ, ಪೋಲೀಸರಿಗೆ ಈ ಕುರಿತು ಮಾಹಿತಿ ನೀಡಬೇಡಿ, ಎಂದು ಬರೆಯಲಾಗಿದೆಯಂತೆ. ತನ್ನ ಪತಿ ಡಾ.ರವಿಗೆ ಅಡ್ರೆಸ್ ಮಾಡಿ ಪತ್ರ ಬರೆದಿದ್ದ ರೂಪಾ, ನೀನು ನನಗೆ ಮೋಸ ಮಾಡಿದೆ, ನನ್ನಿಂದಲೂ ಕೆಲವು ತಪ್ಪುಗಳಾಗಿವೆ ಎಂದು ಉಲ್ಲೇಖಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಚಿತ್ರದುರ್ಗ ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ರೂಪಾ ಪತ್ರ ಬರೆದಿದ್ದು ಕನ್ನಡದಲ್ಲಿ ಎನ್ನುವುದು ಅನುಮಾನಕ್ಕೆ ಕಾರಣವಾಗಿದೆ. ಸ್ವತಃ ವೈದ್ಯೆಯಾಗಿರುವ ರೂಪಾ ಕನ್ನಡ ಅಕ್ಷರಗಳಲ್ಲಿ ಲೆಟರ್ ಬರೆದು ಇಂಗ್ಲೀಷ್ನಲ್ಲಿ ಸಹಿ ಮಾಡಿದ್ದಾರೆ ಎಂಬ ಸಹಜ ಅನುಮಾನ ವ್ಯಕ್ತವಾಗಿದೆ.

ಇದರ ಮಧ್ಯೆ,ಡಾ. ರೂಪಾ ಖಿನ್ನತೆಗೆ ಒಳಗಾಗಿದ್ದಳು ಅನ್ನೋದ ಬೆಳಕಿಗೆ ಬಂದಿದೆ. ಹೌದು.. 25 ಎಕರೆ ಜಮೀನಿನಲ್ಲಿ ದಾಳಿಂಬೆ ಬೆಳೆದು ಕೋಟ್ಯಂತರ ರೂಪಾಯಿ ಸಾಲ‌ ಮಾಡಿ ಕೈ ಸುಟ್ಟುಕೊಂಡಿದ್ದರು. ಅದರ ಬಗ್ಗೆ ಹಲವು ಇಬ್ಬರ ನಡುವೆ ಚರ್ಚೆಯಾಗಿತ್ತು.. ಜೊತೆಗೆ ಹೋಟೆಲ್ ಖರೀದಿಸಿ ಅದ್ರಲ್ಲೂ ನಷ್ಟ ಅನುಭವಿಸಿದ್ದರು. ಇತ್ತೀಚೆಗೆ ಪೋಷಕರ ಸಾವಿನಿಂದ ವೈದ್ಯೆ ರೂಪಾ ಕುಗ್ಗಿಹೋಗಿದ್ದರು ಅಂತ ಹೇಳಲಾಗ್ತಿದೆ. ಇದೇ ಕಾರಣಕ್ಕೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಅಂತ ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.

ಮೇಲ್ನೋಟಕ್ಕೆ ಇದೊಂದು ಆತ್ಮಹತ್ಯೆ ಎಂಬಂತೆ ಗೋಚರವಾಗುತ್ತಿದ್ದು. ರೂಪಾ ಸಹೋದರ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ದೂರು ನೀಡಿದ್ದಾರೆ. ತನಿಖೆಯ ಬಳಿಕ ನಿಜಾಂಶ ಹೊರಬರಲಿದೆ..

RELATED TOPICS:
English summary :Chitradurga doctor Rupa death case: The secret of death is revealed in the post mortem!

ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ  ರಿಜಿಜು ಮನವಿ
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ ರಿಜಿಜು ಮನವಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ

ನ್ಯೂಸ್ MORE NEWS...