Wed,Apr15,2026
ಕನ್ನಡ / English

ಅಪ್ಪನ ಹತ್ಯೆಗೈದು 30 ತುಂಡು ತುಂಡಾಗಿ ಕತ್ತರಿಸಿ ಕೊಳವೆಬಾವಿಗೆ ತುರುಕಿದ ಮಗ! | JANATA NEWS

13 Dec 2022

ಬಾಗಲಕೋಟೆ : ಮಗನೊಬ್ಬ ತಂದೆಯನ್ನ ಹತ್ಯೆ ಮಾಡಿ 30ಕ್ಕೂ ಹೆಚ್ಚು ತುಂಡುಗಳನ್ನಾಗಿ ಕತ್ತರಿಸಿ ಕೊಳವೆ ಬಾವಿಗೆ ಬಿಸಾಕಿರುವ ಭಯಾನಕ ಘಟನೆ ಮುಧೋಳ ನಗರದಲ್ಲಿ ನಡೆದಿದೆ.

ಪರಶುರಾಮ ಕುಳಲಿ(54) ಹತ್ಯೆಯಾಗಿರುವ ವ್ಯಕ್ತಿ. ಆತನ ಪುತ್ರ ವಿಠಲ ಕುಳಲಿ(20) ರಾಡ್‍ನಿಂದ ಹೊಡೆದು ತಂದೆಯನ್ನು ಕೊಲೆ ಮಾಡಿರುವ ಆರೋಪಿ. ತಂದೆಯ ದೇಹವನ್ನು 30ಕ್ಕೂ ಹೆಚ್ಚ ತುಂಡು ತುಂಡು ಮಾಡಿ ಕೊಳವೆ ಬಾವಿಗೆ ಹಾಕಿದ್ದಾನೆ.

ನನ್ನ ಗಂಡ ಒಂದು ವಾರದಿಂದ ಕಾಣಿಸ್ತಿಲ್ಲ. ನನಗೆ ನನ್ನ ಮಗನ ಮೇಲೆ ಅನುಮಾನ ಇದೆ. ದಯವಿಟ್ಟು ತನಿಖೆ ಮಾಡಿ ಹುಡುಕಿಕೊಡಿ ಸರ್​… ಎಂದು ಮಹಿಳೆಯೊಬ್ಬರು ಪೊಲೀಸ್​ ಠಾಣೆ ಮೆಟ್ಟಿಲೇರಿದ್ದರು.

ಕುಡಿದ ಮತ್ತಲ್ಲಿ ತಂದೆ ಮಗನ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಡಿಸೆಂಬರ್​ 6 ರಂದು ಮದ್ಯಪಾನ ಮಾಡಿದ್ದ ಮಗನಿಗೆ ಪರಶುರಾಮ ಬೈದು, ಎರಡೇಟು ಹೊಡೆದು ಬುದ್ಧಿವಾದ ಹೇಳಿದ್ದ ಎನ್ನಲಾಗಿದೆ. ಇದರಿಂದ ಕೋಪಗೊಂಡ ವಿಠಲ ತಂದೆಗೆ ರಾಡ್​ನಿಂದ ಹೊಡೆದು ಹತ್ಯೆ ಮಾಡಿದ್ದಾನೆ.

ಬಳಿಕ ತಂದೆ ಶವವನ್ನು ಎಸೆಯಲು ಮುಧೋಳ ಹೊರವಲಯದ ಮಂಟೂರ್ ಬೈಪಾಸ್ ಬಳಿಯಿರುವ ತಮ್ಮ ಹೊಲಕ್ಕೆ ಹೋಗಿದ್ದಾನೆ. ಹೊಲದಲ್ಲಿನ ಬೋರ್​ವೆಲ್​ನಲ್ಲಿ ತಂದೆ ಶವ ಹಾಕಲು ಪ್ರಯತ್ನಿಸಿದ್ದಾನೆ. ಆದ್ರೆ ಅದು ಒಳಕ್ಕೆ ಹೋಗಿಲ್ಲ. ಹೀಗಾಗಿ ಕೊಡಲಿ ತೆಗೆದುಕೊಂಡು ಶವವನ್ನು 30ಕ್ಕೂ ಹೆಚ್ಚು ತುಂಡುಗಳನ್ನಾಗಿ ಮಾಡಿ ನಂತರ ಕೊಳವೆ ಬಾವಿಯೊಳಕ್ಕೆ ಹಾಕಿದ್ದಾನೆ.

ಬಳಿಕ ಒಂದು ವಾರ ಏನೂ ಅರಿಯದಂತೆ ಊರಲ್ಲಿ ಓಡಾಡಿಕೊಂಡಿದ್ದ. ಅನುಮಾನಗೊಂಡ ತಾಯಿ, ಮುಧೋಳ ಠಾಣೆಯಲ್ಲಿ ಮಿಸ್ಸಿಂಗ್​ ಕೇಸ್​ ದಾಖಲಿಸಿದ್ದರು.

ಆರೋಪಿ ವಿಠಲನನ್ನು ಬಂಧಿಸಿರುವ ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

RELATED TOPICS:
English summary :The son who killed his father and cut him into 30 pieces and pushed them into the borehole!

ಪ್ರಧಾನಿ ಮೋದಿ ಗೆ ದೂರವಾಣಿ ಕರೆ ಮಾಡಿ 40 ನಿಮಿಷ ಮಾತನಾಡಿದ ಅಧ್ಯಕ್ಷ ಟ್ರಂಪ್
ಪ್ರಧಾನಿ ಮೋದಿ ಗೆ ದೂರವಾಣಿ ಕರೆ ಮಾಡಿ 40 ನಿಮಿಷ ಮಾತನಾಡಿದ ಅಧ್ಯಕ್ಷ ಟ್ರಂಪ್
ಹೆಬ್ಬಾಳದಲ್ಲಿ 55 ಎಕರೆ ಭೂಮಿ ಖಾಸಗಿ ಸಂಸ್ಥೆಗೆ ವರ್ಗಾವಣೆ ರದ್ದುಗೊಳಿಸಿದ ಹೈಕೋರ್ಟ್ : ಸಿಬಿಐ ತನಿಖೆಗೆ ಆದೇಶ
ಹೆಬ್ಬಾಳದಲ್ಲಿ 55 ಎಕರೆ ಭೂಮಿ ಖಾಸಗಿ ಸಂಸ್ಥೆಗೆ ವರ್ಗಾವಣೆ ರದ್ದುಗೊಳಿಸಿದ ಹೈಕೋರ್ಟ್ : ಸಿಬಿಐ ತನಿಖೆಗೆ ಆದೇಶ
ಟಿಸಿಎಸ್ ನಲ್ಲಿ ಪಿಓಎಸ್ಎಚ್(ಪೊಶ್) ಆಡಿಟ್ ಕೋರಿದ ಎನ್ಐಟಿಇಎಸ್ : ಐಟಿ ವಲಯದಾದ್ಯಂತ ವ್ಯಾಪಕ ತನಿಖೆಗೆ ಒತ್ತಾಯ
ಟಿಸಿಎಸ್ ನಲ್ಲಿ ಪಿಓಎಸ್ಎಚ್(ಪೊಶ್) ಆಡಿಟ್ ಕೋರಿದ ಎನ್ಐಟಿಇಎಸ್ : ಐಟಿ ವಲಯದಾದ್ಯಂತ ವ್ಯಾಪಕ ತನಿಖೆಗೆ ಒತ್ತಾಯ
 ಟಿಸಿಎಸ್ ನಾಸಿಕ್ ಪ್ರಕರಣ: ಕಾರ್ಯಾಚರಣೆ ಮುಖ್ಯಸ್ಥ ಕಸ್ಟಡಿಗೆ ; ಟಾಟಾ ಇಂದ ಆಂತರಿಕ ತನಿಖೆ ವಿಸ್ತರಣೆ
ಟಿಸಿಎಸ್ ನಾಸಿಕ್ ಪ್ರಕರಣ: ಕಾರ್ಯಾಚರಣೆ ಮುಖ್ಯಸ್ಥ ಕಸ್ಟಡಿಗೆ ; ಟಾಟಾ ಇಂದ ಆಂತರಿಕ ತನಿಖೆ ವಿಸ್ತರಣೆ
ಜನರ ಹೆಸರುಗಳನ್ನು ಅಂತಿಮ ತೀರ್ಪಿನ ನಂತರ ಸೇರಿಸಿದರೆ... ಮತ ಚಲಾಯಿಸಲು ಅವಕಾಶ - ಸುಪ್ರೀಂ
ಜನರ ಹೆಸರುಗಳನ್ನು ಅಂತಿಮ ತೀರ್ಪಿನ ನಂತರ ಸೇರಿಸಿದರೆ... ಮತ ಚಲಾಯಿಸಲು ಅವಕಾಶ - ಸುಪ್ರೀಂ
ಹಿರಿಯ ಗಾಯಕಿ ಆಶಾ ಬೋಸ್ಲೆ ನಿಧನ : ಪ್ರಧಾನಿ ಮೋದಿ ಸಂತಾಪ
ಹಿರಿಯ ಗಾಯಕಿ ಆಶಾ ಬೋಸ್ಲೆ ನಿಧನ : ಪ್ರಧಾನಿ ಮೋದಿ ಸಂತಾಪ
 ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ವಂದೇ ಭಾರತ್ ಸ್ಲೀಪರ್ ರೈಲು ಸೇವೆಗೆ ಅನುಮೋದನೆ
ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ವಂದೇ ಭಾರತ್ ಸ್ಲೀಪರ್ ರೈಲು ಸೇವೆಗೆ ಅನುಮೋದನೆ
ನಾಸಿಕ್ ಟಿಸಿಎಸ್ ಪ್ರಕರಣ: ಮತಾಂತರ, ಮೂಲಭೂತೀಕರಣ ಆರೋಪಗಳ ಮೇಲೆ ತನಿಖೆ ಆರಂಭ
ನಾಸಿಕ್ ಟಿಸಿಎಸ್ ಪ್ರಕರಣ: ಮತಾಂತರ, ಮೂಲಭೂತೀಕರಣ ಆರೋಪಗಳ ಮೇಲೆ ತನಿಖೆ ಆರಂಭ
ದೋಷಾರೋಪಣೆ ಪ್ರಕ್ರಿಯೆ ಆರಂಭವಾದ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ
ದೋಷಾರೋಪಣೆ ಪ್ರಕ್ರಿಯೆ ಆರಂಭವಾದ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ
2008ರ ಮಾಲೆಗಾಂವ್ ಸ್ಫೋಟ ಪ್ರಕರಣ: ಕರ್ನಲ್ ಪುರೋಹಿತ್‌ಗೆ ಬ್ರಿಗೇಡಿಯರ್ ಬಡ್ತಿಗೆ ಅನುಮತಿ
2008ರ ಮಾಲೆಗಾಂವ್ ಸ್ಫೋಟ ಪ್ರಕರಣ: ಕರ್ನಲ್ ಪುರೋಹಿತ್‌ಗೆ ಬ್ರಿಗೇಡಿಯರ್ ಬಡ್ತಿಗೆ ಅನುಮತಿ
ಪ್ರತಿಯೊಬ್ಬ ಸೈನಿಕ ಡ್ರೋನ್ ಹಾರಿಸಲು ಸಿದ್ದವಾಗಬೇಕು - ಪ್ರತಿ ಸೈನಿಕನಿಗೆ ಡ್ರೋನ್ ಒದಗಿಸಲು ಸೇನಾ ಮುಖ್ಯಸ್ಥರು
ಪ್ರತಿಯೊಬ್ಬ ಸೈನಿಕ ಡ್ರೋನ್ ಹಾರಿಸಲು ಸಿದ್ದವಾಗಬೇಕು - ಪ್ರತಿ ಸೈನಿಕನಿಗೆ ಡ್ರೋನ್ ಒದಗಿಸಲು ಸೇನಾ ಮುಖ್ಯಸ್ಥರು
ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳಿಗೆ ಶಿಕ್ಷೆ ವಿಧಿಸಿದ ಬೆಂಗಳೂರು ನ್ಯಾಯಾಲಯ
ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳಿಗೆ ಶಿಕ್ಷೆ ವಿಧಿಸಿದ ಬೆಂಗಳೂರು ನ್ಯಾಯಾಲಯ

ನ್ಯೂಸ್ MORE NEWS...