Sun,Jul26,2026
ಕನ್ನಡ / English

ರಾಜ್ಯದಲ್ಲಿ ಪಕ್ಷ ಕಟ್ಟಿದ ಪ್ರಮುಖರಲ್ಲಿ ನಾನು ಒಬ್ಬ, ನನ್ನನ್ನು ಕಡೆಗಣಿಸುವ ಪ್ರಶ್ನೆಯೇ ಬರುವುದಿಲ್ಲ: ಬಿಎಸ್​ವೈ | JANATA NEWS

15 Dec 2022

ಕೊಪ್ಪಳ : ಬಿಜೆಪಿ ಪಕ್ಷ ಹಗಲು ರಾತ್ರಿ ಕಟ್ಟಿ ಬೆಳೆಸಿದವೆಲ್ಲಿ ನಾನೂ ಒಬ್ಬ, ನನ್ನನ್ನು ಯಾರೂ ಕಡೆಗಣಿಸಿಲ್ಲ. ಹೀಗಾಗಿ ಪಕ್ಷದಲ್ಲಿ ನನ್ನನ್ನು ಕಡೆಗಣಿಸುವ ಪ್ರಶ್ನೆಯೇ ಬರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸ್ಪಷ್ಟನೆ ನೀಡಿದ್ದಾರೆ.

ಯಡಿಯೂರಪ್ಪ ಅವರನ್ನ ಪಕ್ಷದಲ್ಲಿ ಕಡೆಗಣಿಸಲಾಗಿದೆ ಎಂಬ ಆರೋಪಗಳಿಗೆ ಸಂಬಂಧಿಸಿ ಮಾತನಾಡಿದ ಅವರು, ನನಗೆ ನನ್ನದೇ ಆದ ಶಕ್ತಿ ಇದೆ, ನಾನು ಪಕ್ಷ ಕಟ್ಟಿ ಬೆಳೆಸಿದ್ದೇನೆ.

ಇಲ್ಲಿ ಯಾರೂ ಯಾರನ್ನೂ ಮುಗಿಸಲು ಆಗಲ್ಲ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ, ಗೊಂದಲಗಳು ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಕಾಂಗ್ರೆಸ್ ನಾಯಕರು ತಮ್ಮ ಪಕ್ಷವನ್ನ ನೋಡಿಕೊಳ್ಳಲಿ. ನಮ್ಮ ಬಗ್ಗೆ ಅವರಿಗೇಕೆ ಚಿಂತೆ. ನಮ್ಮ ಪಕ್ಷದಲ್ಲಿ ಎಲ್ಲವೂ ಸರಿಯಿದೆ. ರಾಜ್ಯ ಬಿಜೆಪಿ ನಾಯಕರು ಒಗ್ಗಟ್ಟಾಗಿದ್ದೇವೆ, ಯಾವುದೇ ಗೊಂದಲಗಳಿಲ್ಲ. ನಾನು ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದೇನೆ ಎಂದರು.

ನನ್ನನ್ನು ಈ ಸಮಾವೇಶಕ್ಕೆ ಆಹ್ವಾನ ನೀಡಿಲ್ಲ ಎನ್ನುವಂತಹ ಮಾತಲ್ಲ‌. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಆಗಮಿಸುವ ಹಿನ್ನೆಲೆಯಲ್ಲಿ ನಾನು ಎಲ್ಲ ಕಾರ್ಯಕ್ರಮ ರದ್ದು ಪಡಿಸಿ ಈ ಸಮಾವೇಶದಲ್ಲಿ ಪಾಲ್ಗೊಳ್ಳಲು ಬಂದಿರುವೆ. ಇಲ್ಲಿ ನನ್ನ ಯಾರೂ ಕಡೆಗಣನೆ ಮಾಡಿಲ್ಲ ಎಂದರು.

ಕೊಪ್ಪಳಕ್ಕೆ ಬಿಜೆಪಿ ರಾಷ್ತ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಆಗಮಿಸುತ್ತಿದ್ದಾರೆ. ಹಾಗಾಗಿ ನಾನು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬಂದಿದ್ದೇನೆ. ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಹಾಗೂ ಜೆ ಪಿ ನಡ್ಡಾ ನೇತೃತ್ವದಲ್ಲಿ ಮತ್ತೊಮ್ಮೆ ಕರ್ನಾಟಕದಲ್ಲಿ 150 ಹೆಚ್ಚು ಬಿಜೆಪಿ ಸ್ಥಾನಗಳ ಗೆಲ್ಲಲಿದ್ದು, ಮತ್ತೆ ಸರ್ಕಾರ ರಚನೆ ಮಾಡುವುದು ನಿಶ್ಚಿತ ಎಂದರು.

ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ತರುವುದೊಂದಿಗೆ ನನ್ನ ಆಸೆಯಾಗಿದೆ. ವಿಜಯೇಂದ್ರ ಎಲ್ಲಿ ಸ್ಪರ್ಧಿಸಬೇಕು ಎನ್ನುವುದು ಪಕ್ಷ ನಿರ್ಧರಿಸುತ್ತದೆ. ಕಾಂಗ್ರೆಸ್ ಪ್ರತ್ಯೇಕ ಯಾತ್ರೆ ಬಗ್ಗೆ ನಾನೇನು ಹೇಳುವುದಿಲ್ಲ, ಅದು ಅವರ ಪಕ್ಷದ ವಿಚಾರ ಎಂದರು.

ಇದೇ ವೇಳೆ ಜನಾರ್ದನ್ ರೆಡ್ಡಿ ಬಿಜೆಪಿ ಸೇರ್ಪಡೆ ವಿಚಾರಕ್ಕೆ ಪ್ರತಿಕ್ರಿಯಿಸಿ.. ಜನಾರ್ದನ್ ರೆಡ್ಡಿ ನನಗೆ ಸಿಕ್ಕಿದ್ರು ಮಾತನಾಡಿದ್ದೇನೆ. ನಾವೆಲ್ಲ ಮುಖಂಡರು ಮಾತನಾಡಿದ್ದೇವೆ. ರೆಡ್ಡಿ ಬಿಜೆಪಿಯಲ್ಲಿ ಇರ್ತಾರೆ, ನಮ್ಮ ಜೊತಯಲ್ಲೇ ಇರ್ತಾರೆ. , ಅವರು ಮನೆ ಮಾಡಿರೋದಕ್ಕೆ ಗೊಂದಲ ಉಂಟಾಗಿದೆ. ಅವರು ಎಲ್ಲಿ ಸ್ಪರ್ಧೆ ಮಾಡಬೇಕು ಅನ್ನೋದನ್ನ ಪಕ್ಷ ತೀರ್ಮಾನ ಮಾಡುತ್ತದೆ ಎಂದರು.

RELATED TOPICS:
English summary :I am one of the leaders who built the party in the state, there is no question of ignoring me: BSY

ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ  ರಿಜಿಜು ಮನವಿ
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ ರಿಜಿಜು ಮನವಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ

ನ್ಯೂಸ್ MORE NEWS...