Sat,May30,2026
ಕನ್ನಡ / English

ದೇಹವನ್ನು ಅಗ್ನಿಗೆ ಅರ್ಪಿಸಿ, ಸ್ಮಾರಕ ಕಟ್ಟಬೇಡಿ: ಸಿದ್ದೇಶ್ವರ ಶ್ರೀಗಳ ಅಂತಿಮ ಅಭಿನಂದನಾ ಪತ್ರದಲ್ಲಿ ಏನಿದೆ? | JANATA NEWS

03 Jan 2023

ವಿಜಯಪುರ : ನಡೆದಾಡುವ ದೇವರೆಂದೇ ಖ್ಯಾತರಾದ ವಿಜಯಪುರ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು ವಯೋಸಹಜ ಅನಾರೋಗ್ಯದ ಕಾರಣದಿಂದ ನಿನ್ನೆ ಸಂಜೆ ದೈವಾಧೀನರಾಗಿದ್ದಾರೆ.

ನಾಡಿನ ಪ್ರಸಿದ್ಧ ಪ್ರವಚನಕಾರ, ಭಕ್ತರ ಮನದಲ್ಲಿ ನಡೆದಾಡುವ ದೇವರೆಂದೇ ಖ್ಯಾತಿ ಗಳಿಸಿದ್ದ ವಿಜಯಪುರದ ಸಿದ್ದೇಶ್ವರ ಶ್ರೀಗಳು ರಚಿಸಿದ್ದ ಅಂತಿಮ ಅಭಿವಂದನ ಪತ್ರ ಇಲ್ಲಿದೆ.

ಮುಖ್ಯವಾಗಿ ನನ್ನ ಯಾವುದೇ ಬಗೆಯ ಸ್ಮಾರಕ ನಿರ್ಮಾಣ ಮಾಡಬಾರದೆಂದು 2014ರಲ್ಲೇ ವಿಲ್ ಬರೆದಿದ್ದರು. ಈ ಪತ್ರಕ್ಕೆ ನ್ಯಾಯಾಧೀಶರು ಸಹಿ ಹಾಕಿದ್ದಾರೆ. ನಿನ್ನೆ ವೈಕುಂಠ ಏಕಾದಶಿ ದಿನವಾಗಿದ್ದು ಸ್ವರ್ಗದ ಎಲ್ಲ ಬಾಗಿಲುಗಳು ತೆರೆದಿರುತ್ತವೆ ಎಂದು ಹಿಂದೂ ಪೌರಾಣಿಕ ನಂಬಿಕೆ. ಸಿದ್ದೇಶ್ವರ ಶ್ರೀಗಳು ಇಂಥ ವಿಶೇಷ ದಿನದಂದೇ ಇಹಲೋಕ ತ್ಯಜಿಸಿದ್ದಾರೆ. ಇವರು ಅಂತಿಮ ಅಭಿವಂದನ ಪತ್ರದ ಸಾಲುಗಳು ಹೀಗಿವೆ..

ಬದುಕು ಅನುಭವಗಳ ಪ್ರವಾಹ. ಅದರ ಸಿರಿವಂತಿಕೆಯು ವಿಶ್ವ ಚಿಂತನೆ ಹಾಗೂ ಸತ್ಯ ಶೋಧನೆಗಳಿಂದ ಅದರ ಸೌಂದರ್ಯವು ರಾಗ, ದ್ವೇಷ ರಹಿತವಾದ ಹಾಗೂ ಅಸೀಮಿತವಾದ ಸದ್ಭಾವದಿಂದ. ಅದನ್ನು ಸುಭಗ ಹಾಗೂ ಸಮೃದ್ಧಗೊಳಿಸುವುದೇ ಸಾಧನೆ. ಅಂತಹ ಜೀವನದ ಉಪಯುಕ್ತವಾದ ಅನುಭವಗಳನ್ನು ಆಸಕ್ತರೊಂದಿಗೆ ಹಂಚಿಕೊಳ್ಳುವುದೇ ಧರ್ಮ. ಅದು ಸ್ವ-ಪರ ನೆಮ್ಮದಿಗೆ ಕಾರಣ. ನನ್ನದು ಆವೇಗವಿಲ್ಲದ, ಸಾವಧಾನದ ಸಾಮಾನ್ಯ ಬದುಕು. ಅದನ್ನು ರೂಪಿಸಿದವರು ಗುರುದೇವರು.

ಅದನ್ನು ಹದುಳಿಸಿದವರು ನಾಡಿನ ಪೂಜ್ಯರು, ಹಿತೈಷಿಗಳು, ಸಹ- ಹೃದಯರು, ಸಾಧಕರು ಹಾಗೂ ಶ್ರೀ ಸಾಮಾನ್ಯರು. ನಿಸರ್ಗವು ಮೈಮನಸ್ಸುಗಳಿಗೆ ತಂಪನ್ನಿತ್ತಿದೆ. ತಾತ್ವಿಕ ಚಿಂತನೆಗಳು ತಿಳಿ ಬೆಳಗ ಹರಡಿವೆ. ಜಾಗತಿಕ ತತ್ವಜ್ಞಾನಿಗಳ ಮತ್ತು ವಿಜ್ಞಾನಿಗಳ ಶೋಧನೆಗಳು ದೃಷ್ಠಿಯ ಪರಿಸೀಮೆಯನ್ನು ದೂರ ದೂರ ಸರಿಸಿವೆ. ಆದ್ದರಿಂದಲೇ ನಾನು ಎಲ್ಲರಿಗೂ ಎಲ್ಲದಕ್ಕೂ ಉಪಕೃತ. ಬದುಕು ಮುಗಿಯುತ್ತಿದೆ. ದೀಪ ಆರಿದಂತೆ. ತೆರೆ ಅಡಗಿದಂತೆ. ಮೇಘ ಕರಗಿದಂತೆ. ಉಳಿಯುವುದು ಬರೀ ಬಯಲು. ಮಹಾಮೌನ, ಶೂನ್ಯ ಸತ್ಯ. ಹಲವು ದಶಕಗಳ ಕಾಲ ಈ ಅದ್ಭುತ ಜಗತ್ತಿನಲ್ಲಿ ಬಾಳಿದ್ದೇನೆ. ನೋಡಿ ತಿಳಿದು ಅನುಭವಿಸಿದ್ದೇನೆ. ನನ್ನ ಬದುಕು ಕೊನೆಗೊಳ್ಳುವ ಮುಂಚೆ ಅದನ್ನು ಕೃತಜ್ಞತೆಯಿಂದ ಸ್ಮರಿಸಬೇಕು. ಅದಕ್ಕಾಗಿ ಈ ಅಂತಿಮ ಅಭಿವಂದನ ಪತ್ರ.

ದೇಹದ ವಿಷಯದಲ್ಲಿ ಒಂದೆರಡು ಆಶಯಗಳು -
ದೇಹವನ್ನು ಭೂಮಿಯಲ್ಲಿಡುವ ಬದಲು ಅಗ್ನಿಯರ್ಪಿತ ಮಾಡುವುದು. ಶ್ರಾದ್ಧಿಕ ವಿಧಿ-ವಿಧಾನಕರ್ಮಗಳು ಅನಗತ್ಯ. ಚಿತಾಭಸ್ಮವನ್ನು ನದಿ ಅಥವಾ ಸಾಗರದಲ್ಲಿ ವಿಸರ್ಜಿಸುವುದು. ಯಾವುದೇ ಬಗೆಯ ಸ್ಮಾರಕ ನಿರ್ಮಿಸಲಾಗದು.

ಅಂತಿಮ ನೆನಹು; "ಸತ್ಯವೂ ಇಲ್ಲ, ಅಸತ್ಯವೂ ಇಲ್ಲ. ಸಹಜವೂ ಇಲ್ಲ, ಅಸಹಜವೂ ಇಲ್ಲ. ನಾನೂ ಇಲ್ಲ, ನೀನೂ ಇಲ್ಲ. ಇಲ್ಲ, ಇಲ್ಲ ಎಂಬುದು ತಾನಿಲ್ಲ. ಗುಹೇಶ್ವರನೆಂಬುದು ತಾ ಬಯಲು". ಅಂತ್ಯಃ ಪ್ರಣಾಮಾಂಜಲಿಃ! ಎಂದು ಅಭಿವಂದನಾ ಪತ್ರವನ್ನು ಶ್ರೀಗಳು ಬರೆದಿದ್ದಾರೆ.

RELATED TOPICS:
English summary :Offer the body to fire, do not build a monument: What is in Siddeshwar Sri final eulogy?

ಕೇರಳ ವಿಧಾನಸಭೆಯಲ್ಲಿ ವಂದೇ ಮಾತರಂ ಗೀತೆಯನ್ನು ಸಂಪೂರ್ಣವಾಗಿ ಹಾಡದ ಕಾರಣ ಗದ್ದಲ
ಕೇರಳ ವಿಧಾನಸಭೆಯಲ್ಲಿ ವಂದೇ ಮಾತರಂ ಗೀತೆಯನ್ನು ಸಂಪೂರ್ಣವಾಗಿ ಹಾಡದ ಕಾರಣ ಗದ್ದಲ
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿ, ಮಂತ್ರಿಮಂಡಲ ವಜಾ ಮಾಡಿದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿ, ಮಂತ್ರಿಮಂಡಲ ವಜಾ ಮಾಡಿದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್
ಅರ್ಮೇನಿಯಾ ಮಿಲಿಟರಿ ಮೆರವಣಿಗೆಯಲ್ಲಿ ಭಾರತೀಯ ಮೂಲದ ಫಿರಂಗಿ, ವಾಯು ರಕ್ಷಣಾ ವ್ಯವಸ್ಥೆಗಳು, ರಾಡಾರ್ ಪ್ರದರ್ಶನ
ಅರ್ಮೇನಿಯಾ ಮಿಲಿಟರಿ ಮೆರವಣಿಗೆಯಲ್ಲಿ ಭಾರತೀಯ ಮೂಲದ ಫಿರಂಗಿ, ವಾಯು ರಕ್ಷಣಾ ವ್ಯವಸ್ಥೆಗಳು, ರಾಡಾರ್ ಪ್ರದರ್ಶನ
ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆಯನ್ನು ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆಯನ್ನು ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
3 ಗಂಟೆಗೆ ರಾಜೀನಾಮೆ ನೀಡಲಿದ್ದಾರೆ ಮುಖ್ಯಮಂತ್ರಿ ಸಿದ್ದರಾಮಯ್ಯ : ಡಿಕೆ ಶಿವಕುಮಾರ್ ಹೊಸ ಸಿಎಂ
3 ಗಂಟೆಗೆ ರಾಜೀನಾಮೆ ನೀಡಲಿದ್ದಾರೆ ಮುಖ್ಯಮಂತ್ರಿ ಸಿದ್ದರಾಮಯ್ಯ : ಡಿಕೆ ಶಿವಕುಮಾರ್ ಹೊಸ ಸಿಎಂ
ಅಂತಾರಾಷ್ಟ್ರೀಯ ಗಡಿಗಳ ಬಳಿಯ ಅಕ್ರಮ ರಚನೆಗಳ ವಿರುದ್ಧ ಕ್ರಮ ಕೈಗೊಳ್ಳಲು ಅಮಿತ್ ಶಾ ಆದೇಶ
ಅಂತಾರಾಷ್ಟ್ರೀಯ ಗಡಿಗಳ ಬಳಿಯ ಅಕ್ರಮ ರಚನೆಗಳ ವಿರುದ್ಧ ಕ್ರಮ ಕೈಗೊಳ್ಳಲು ಅಮಿತ್ ಶಾ ಆದೇಶ
ಅಸ್ಸಾಂ ವಿಧಾನಸಭೆಯು ಏಕರೂಪ ನಾಗರಿಕ ಸಂಹಿತೆ ಮಸೂದೆ, 2026 ಅನ್ನು ಅಂಗೀಕರಿಸಿದೆ
ಅಸ್ಸಾಂ ವಿಧಾನಸಭೆಯು ಏಕರೂಪ ನಾಗರಿಕ ಸಂಹಿತೆ ಮಸೂದೆ, 2026 ಅನ್ನು ಅಂಗೀಕರಿಸಿದೆ
ಕರ್ನಾಟಕದಲ್ಲಿ ಶೀಘ್ರದಲ್ಲೇ ಹೊಸ ಸಿಎಂ ಮತ್ತು ನಾಲ್ವರು ಡಿಸಿಎಂಗಳ ನೇಮಕ ಸಾಧ್ಯತೆ?
ಕರ್ನಾಟಕದಲ್ಲಿ ಶೀಘ್ರದಲ್ಲೇ ಹೊಸ ಸಿಎಂ ಮತ್ತು ನಾಲ್ವರು ಡಿಸಿಎಂಗಳ ನೇಮಕ ಸಾಧ್ಯತೆ?
ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನಟ ರಣವೀರ್ ಸಿಂಗ್ ಪ್ರಾರ್ಥನೆ ಸಲ್ಲಿಸಿದರು.
ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನಟ ರಣವೀರ್ ಸಿಂಗ್ ಪ್ರಾರ್ಥನೆ ಸಲ್ಲಿಸಿದರು.
ಪೋರ್ಟಲ್‌ನಲ್ಲಿ ವಕ್ಫ್ ಮಂಡಳಿ ಅಕ್ರಮವಾಗಿ ಅಪ್‌ಲೋಡ್ ಮಾಡಲಾದ ಆಸ್ತಿಗಳನ್ನು ತೆಗೆದುಹಾಕಲು ಕೇಂದ್ರಕ್ಕೆ ರಾಜೀವ್ ಚಂದ್ರಶೇಖರ್ ಮನವಿ
ಪೋರ್ಟಲ್‌ನಲ್ಲಿ ವಕ್ಫ್ ಮಂಡಳಿ ಅಕ್ರಮವಾಗಿ ಅಪ್‌ಲೋಡ್ ಮಾಡಲಾದ ಆಸ್ತಿಗಳನ್ನು ತೆಗೆದುಹಾಕಲು ಕೇಂದ್ರಕ್ಕೆ ರಾಜೀವ್ ಚಂದ್ರಶೇಖರ್ ಮನವಿ
ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭ: 3ನೇ ಸ್ಥಾನದಲ್ಲಿ ಆಸೀನರಾಗಿದ್ದ ಎಚ್‌ಡಿ ಕುಮಾರಸ್ವಾಮಿ
ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭ: 3ನೇ ಸ್ಥಾನದಲ್ಲಿ ಆಸೀನರಾಗಿದ್ದ ಎಚ್‌ಡಿ ಕುಮಾರಸ್ವಾಮಿ
ತನ್ನ ಸ್ವಂತ ತಂದೆಗೆ ನಿಷ್ಠೆ ತೋರದ ಮಗ ದೇಶಕ್ಕೆ ನಿಷ್ಠನಾಗಿರುತ್ತಾನೆಯೇ? - ರಾಹುಲ್ ಗಾಂಧಿ ಸಮಗ್ರತೆ ಪ್ರಶ್ನಿಸಿದ ಎಸ್.ಜೈಶಂಕರ್
ತನ್ನ ಸ್ವಂತ ತಂದೆಗೆ ನಿಷ್ಠೆ ತೋರದ ಮಗ ದೇಶಕ್ಕೆ ನಿಷ್ಠನಾಗಿರುತ್ತಾನೆಯೇ? - ರಾಹುಲ್ ಗಾಂಧಿ ಸಮಗ್ರತೆ ಪ್ರಶ್ನಿಸಿದ ಎಸ್.ಜೈಶಂಕರ್

ನ್ಯೂಸ್ MORE NEWS...