Sun,Jul26,2026
ಕನ್ನಡ / English

ದೇಹವನ್ನು ಅಗ್ನಿಗೆ ಅರ್ಪಿಸಿ, ಸ್ಮಾರಕ ಕಟ್ಟಬೇಡಿ: ಸಿದ್ದೇಶ್ವರ ಶ್ರೀಗಳ ಅಂತಿಮ ಅಭಿನಂದನಾ ಪತ್ರದಲ್ಲಿ ಏನಿದೆ? | JANATA NEWS

03 Jan 2023

ವಿಜಯಪುರ : ನಡೆದಾಡುವ ದೇವರೆಂದೇ ಖ್ಯಾತರಾದ ವಿಜಯಪುರ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು ವಯೋಸಹಜ ಅನಾರೋಗ್ಯದ ಕಾರಣದಿಂದ ನಿನ್ನೆ ಸಂಜೆ ದೈವಾಧೀನರಾಗಿದ್ದಾರೆ.

ನಾಡಿನ ಪ್ರಸಿದ್ಧ ಪ್ರವಚನಕಾರ, ಭಕ್ತರ ಮನದಲ್ಲಿ ನಡೆದಾಡುವ ದೇವರೆಂದೇ ಖ್ಯಾತಿ ಗಳಿಸಿದ್ದ ವಿಜಯಪುರದ ಸಿದ್ದೇಶ್ವರ ಶ್ರೀಗಳು ರಚಿಸಿದ್ದ ಅಂತಿಮ ಅಭಿವಂದನ ಪತ್ರ ಇಲ್ಲಿದೆ.

ಮುಖ್ಯವಾಗಿ ನನ್ನ ಯಾವುದೇ ಬಗೆಯ ಸ್ಮಾರಕ ನಿರ್ಮಾಣ ಮಾಡಬಾರದೆಂದು 2014ರಲ್ಲೇ ವಿಲ್ ಬರೆದಿದ್ದರು. ಈ ಪತ್ರಕ್ಕೆ ನ್ಯಾಯಾಧೀಶರು ಸಹಿ ಹಾಕಿದ್ದಾರೆ. ನಿನ್ನೆ ವೈಕುಂಠ ಏಕಾದಶಿ ದಿನವಾಗಿದ್ದು ಸ್ವರ್ಗದ ಎಲ್ಲ ಬಾಗಿಲುಗಳು ತೆರೆದಿರುತ್ತವೆ ಎಂದು ಹಿಂದೂ ಪೌರಾಣಿಕ ನಂಬಿಕೆ. ಸಿದ್ದೇಶ್ವರ ಶ್ರೀಗಳು ಇಂಥ ವಿಶೇಷ ದಿನದಂದೇ ಇಹಲೋಕ ತ್ಯಜಿಸಿದ್ದಾರೆ. ಇವರು ಅಂತಿಮ ಅಭಿವಂದನ ಪತ್ರದ ಸಾಲುಗಳು ಹೀಗಿವೆ..

ಬದುಕು ಅನುಭವಗಳ ಪ್ರವಾಹ. ಅದರ ಸಿರಿವಂತಿಕೆಯು ವಿಶ್ವ ಚಿಂತನೆ ಹಾಗೂ ಸತ್ಯ ಶೋಧನೆಗಳಿಂದ ಅದರ ಸೌಂದರ್ಯವು ರಾಗ, ದ್ವೇಷ ರಹಿತವಾದ ಹಾಗೂ ಅಸೀಮಿತವಾದ ಸದ್ಭಾವದಿಂದ. ಅದನ್ನು ಸುಭಗ ಹಾಗೂ ಸಮೃದ್ಧಗೊಳಿಸುವುದೇ ಸಾಧನೆ. ಅಂತಹ ಜೀವನದ ಉಪಯುಕ್ತವಾದ ಅನುಭವಗಳನ್ನು ಆಸಕ್ತರೊಂದಿಗೆ ಹಂಚಿಕೊಳ್ಳುವುದೇ ಧರ್ಮ. ಅದು ಸ್ವ-ಪರ ನೆಮ್ಮದಿಗೆ ಕಾರಣ. ನನ್ನದು ಆವೇಗವಿಲ್ಲದ, ಸಾವಧಾನದ ಸಾಮಾನ್ಯ ಬದುಕು. ಅದನ್ನು ರೂಪಿಸಿದವರು ಗುರುದೇವರು.

ಅದನ್ನು ಹದುಳಿಸಿದವರು ನಾಡಿನ ಪೂಜ್ಯರು, ಹಿತೈಷಿಗಳು, ಸಹ- ಹೃದಯರು, ಸಾಧಕರು ಹಾಗೂ ಶ್ರೀ ಸಾಮಾನ್ಯರು. ನಿಸರ್ಗವು ಮೈಮನಸ್ಸುಗಳಿಗೆ ತಂಪನ್ನಿತ್ತಿದೆ. ತಾತ್ವಿಕ ಚಿಂತನೆಗಳು ತಿಳಿ ಬೆಳಗ ಹರಡಿವೆ. ಜಾಗತಿಕ ತತ್ವಜ್ಞಾನಿಗಳ ಮತ್ತು ವಿಜ್ಞಾನಿಗಳ ಶೋಧನೆಗಳು ದೃಷ್ಠಿಯ ಪರಿಸೀಮೆಯನ್ನು ದೂರ ದೂರ ಸರಿಸಿವೆ. ಆದ್ದರಿಂದಲೇ ನಾನು ಎಲ್ಲರಿಗೂ ಎಲ್ಲದಕ್ಕೂ ಉಪಕೃತ. ಬದುಕು ಮುಗಿಯುತ್ತಿದೆ. ದೀಪ ಆರಿದಂತೆ. ತೆರೆ ಅಡಗಿದಂತೆ. ಮೇಘ ಕರಗಿದಂತೆ. ಉಳಿಯುವುದು ಬರೀ ಬಯಲು. ಮಹಾಮೌನ, ಶೂನ್ಯ ಸತ್ಯ. ಹಲವು ದಶಕಗಳ ಕಾಲ ಈ ಅದ್ಭುತ ಜಗತ್ತಿನಲ್ಲಿ ಬಾಳಿದ್ದೇನೆ. ನೋಡಿ ತಿಳಿದು ಅನುಭವಿಸಿದ್ದೇನೆ. ನನ್ನ ಬದುಕು ಕೊನೆಗೊಳ್ಳುವ ಮುಂಚೆ ಅದನ್ನು ಕೃತಜ್ಞತೆಯಿಂದ ಸ್ಮರಿಸಬೇಕು. ಅದಕ್ಕಾಗಿ ಈ ಅಂತಿಮ ಅಭಿವಂದನ ಪತ್ರ.

ದೇಹದ ವಿಷಯದಲ್ಲಿ ಒಂದೆರಡು ಆಶಯಗಳು -
ದೇಹವನ್ನು ಭೂಮಿಯಲ್ಲಿಡುವ ಬದಲು ಅಗ್ನಿಯರ್ಪಿತ ಮಾಡುವುದು. ಶ್ರಾದ್ಧಿಕ ವಿಧಿ-ವಿಧಾನಕರ್ಮಗಳು ಅನಗತ್ಯ. ಚಿತಾಭಸ್ಮವನ್ನು ನದಿ ಅಥವಾ ಸಾಗರದಲ್ಲಿ ವಿಸರ್ಜಿಸುವುದು. ಯಾವುದೇ ಬಗೆಯ ಸ್ಮಾರಕ ನಿರ್ಮಿಸಲಾಗದು.

ಅಂತಿಮ ನೆನಹು; "ಸತ್ಯವೂ ಇಲ್ಲ, ಅಸತ್ಯವೂ ಇಲ್ಲ. ಸಹಜವೂ ಇಲ್ಲ, ಅಸಹಜವೂ ಇಲ್ಲ. ನಾನೂ ಇಲ್ಲ, ನೀನೂ ಇಲ್ಲ. ಇಲ್ಲ, ಇಲ್ಲ ಎಂಬುದು ತಾನಿಲ್ಲ. ಗುಹೇಶ್ವರನೆಂಬುದು ತಾ ಬಯಲು". ಅಂತ್ಯಃ ಪ್ರಣಾಮಾಂಜಲಿಃ! ಎಂದು ಅಭಿವಂದನಾ ಪತ್ರವನ್ನು ಶ್ರೀಗಳು ಬರೆದಿದ್ದಾರೆ.

RELATED TOPICS:
English summary :Offer the body to fire, do not build a monument: What is in Siddeshwar Sri final eulogy?

ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ  ರಿಜಿಜು ಮನವಿ
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ ರಿಜಿಜು ಮನವಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ

ನ್ಯೂಸ್ MORE NEWS...