Sat,May30,2026
ಕನ್ನಡ / English

ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ ಗೆಳೆಯರಿಂದಲೇ ನವವಿವಾಹಿತ ಹತ್ಯೆ | JANATA NEWS

08 Feb 2023

ಹಾಸನ : ನಾಲ್ಕು ದಿನಗಳ ಹಿಂದೆ ನಾಪತ್ತೆ ಆಗಿದ್ದ ಯುವಕನ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ.

ಹಾಸನದ ಹೊಯ್ಸಳನಗರ ಬಡಾವಣೆಯ ಲಿಖಿತ್ ಗೌಡ (26) ಸಂಜೆ ಮನೆಯಿಂದ ಹೋದವರು ರಾತ್ರಿಯಾದರೂ ಬಂದಿಲ್ಲ. ಫೋನ್ ಮಾಡಿದ್ರೆ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಮನೆಯಿಂದ ಹೋಗುವಾಗ ಸ್ನೇಹಿತ ಸಾಗರ್ ಜೊತೆಗೆ ಹೋಗುವದಾಗಿ ಹೇಳಿದ್ದರಿಂದ ಅವನಿಗೆ ಫೋನ್ ಮಾಡಿದ್ರೆ ಅವನ ಮೊಬೈಲ್ ಕೂಡ ಆಫ್ ಆಗಿತ್ತು. ಭಯಗೊಂಡ ಮನೆಯವರು ಬಡಾವಣೆ ಠಾಣೆಗೆ ಮಿಸ್ಸಿಂಗ್ ಕೇಸ್ ದಾಖಲಿಸಿದ್ದ ನೀಡಿದ್ದರು.

ಲಿಖಿತ್ ಗೌಡ ಕಳೆದ ಎಂಟು ತಿಂಗಳ ಹಿಂದೆ ಮದುವೆ ಆಗಿದ್ದರು. ಬಿಎಂ ರಸ್ತೆಯಲ್ಲಿ ಕಾರ್ ಸರ್ವೀಸ್ ಸ್ಟೇಷನ್ ಮಾಡಿದ್ದ. ಬಂದ ಹಣವನ್ನ ಬೇರೆ ವ್ಯವಹಾರಕ್ಕೆ ತೊಡಗಿಸಲು ಯೋಚನೆ ಮಾಡಿದ್ದ.

ಆಗ ತನ್ನದೇ ಸ್ನೇಹಿತ ನವೀನ್ ಮೂಲಕ ಒಂದು ಟ್ಯಾಂಕರ್ ಖರೀದಿ ಮಾಡೋಕೆ ಯೋಚಿಸಿ ಟ್ಯಾಂಕರ್ ನೋಡಿದ್ದ. 12 ಲಕ್ಷ ರೂಪಾಯಿಗೆ ವ್ಯವಹಾರದ ಮಾತನಾಡಿ ಎರಡೂವರೆ ಲಕ್ಷ ಅಡ್ವಾನ್ಸ್ ಕೂಡ ಕೊಟ್ಟಿದ್ದ. ವಾಹನ ಇಷ್ಟ ಆಗದ ಕಾರಣ ವ್ಯವಹಾರ ಕ್ಯಾನ್ಸಲ್ ಮಾಡಿದ್ದ. ಪಡೆದಿದ್ದ ಎರಡೂವರೆ ಲಕ್ಷ ಅಡ್ವಾನ್ಸ್ ಹಣ ವಾಪಸ್ ಕೊಡಲು ಹೇಳಿದ್ದ, ಆದ್ರೆ ಒಂದೂವರೆ ವರ್ಷದಿಂದ ಹಣ ವಾಪಸ್ ಕೊಡದೆ ಸತಾಯಿಸುತ್ತಿದ್ದ.

ಹಣ ವಾಪಸ್ ನೀಡದ ಹಿನ್ನೆಲೆಯಲ್ಲಿ ಲಿಖಿತ್‌ಗೌಡ ಹಾಗೂ ನವೀನ್ ಮಧ್ಯೆ ಮನಸ್ಥಾಪ ಉಂಟಾಗಿತ್ತು. ಇದರಿಂದ ಕೋಪಗೊಂಡ ಲಿಖಿತ್‌ಗೌಡ ಹತ್ತು ಲಕ್ಷದ ಚೆಕ್ ಬೌನ್ಸ್ ಕೇಸ್ ಹಾಕಿ, ಆಯಕ್ವಿವ್ ಹೊಂಡಾ ಆಯಕ್ಟೀವಾ ಬೈಕ್ ಸೀಜ್ ಮಾಡಿಕೊಂಡು ಬಂದಿದ್ದ.

ಫೆಬ್ರವರಿ 5 ರಂದು ಸಂಜೆ ಹಣ ಕೊಡೋದಾಗಿ ನವೀನ್ ಹಾಗೂ ಸಾಗರ್ ಎಂಬುವವರು ಲಿಖಿತ್​​ನನ್ನು ಕರೆದುಕೊಂಡು ಹೋಗಿದ್ದರಂತೆ. ಅಂದಿನಿಂದಲೂ ಎಲ್ಲರ ಫೋನ್ ಸ್ವಿಚ್ ಆಫ್ ಆಗಿತ್ತು.

ತೀವ್ರ ಹುಡುಕಾಟ ನಡೆಸಿದ ಬಳಿಕ ಲಿಖಿತ್ ನನ್ನು ಕರೆದೊಯ್ದಿದ್ದ ಸಾಗರ್ ಗ್ರಾಮದ ಪಕ್ಕದ ಯೋಗಿಹಳ್ಳಿ ಅರಣ್ಯ ಪ್ರದೇಶದಲ್ಲಿ ಪೊಲೀಸರು ಶೋಧ ಕಾರ್ಯ ನಡೆಸಿದಾಗ ಲಿಖಿತ್ ಗೌಡ ಮೃತದೇಹ ಪತ್ತೆಯಾಗಿದೆ. ಲಿಖಿತ್ ನನ್ನು ಇರಿದು ಸಾಯಿಸಿರೋ ಹಂತಕರು ಮೃತದೇಹವನ್ನು ಕಾಡಿನಲ್ಲಿ ಬಿಸಾಡಿ ಎಸ್ಕೇಪ್ ಆಗಿದ್ದಾರೆ.

RELATED TOPICS:
English summary :The newlyweds were killed by their friends for asking for the loan back

ಕೇರಳ ವಿಧಾನಸಭೆಯಲ್ಲಿ ವಂದೇ ಮಾತರಂ ಗೀತೆಯನ್ನು ಸಂಪೂರ್ಣವಾಗಿ ಹಾಡದ ಕಾರಣ ಗದ್ದಲ
ಕೇರಳ ವಿಧಾನಸಭೆಯಲ್ಲಿ ವಂದೇ ಮಾತರಂ ಗೀತೆಯನ್ನು ಸಂಪೂರ್ಣವಾಗಿ ಹಾಡದ ಕಾರಣ ಗದ್ದಲ
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿ, ಮಂತ್ರಿಮಂಡಲ ವಜಾ ಮಾಡಿದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿ, ಮಂತ್ರಿಮಂಡಲ ವಜಾ ಮಾಡಿದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್
ಅರ್ಮೇನಿಯಾ ಮಿಲಿಟರಿ ಮೆರವಣಿಗೆಯಲ್ಲಿ ಭಾರತೀಯ ಮೂಲದ ಫಿರಂಗಿ, ವಾಯು ರಕ್ಷಣಾ ವ್ಯವಸ್ಥೆಗಳು, ರಾಡಾರ್ ಪ್ರದರ್ಶನ
ಅರ್ಮೇನಿಯಾ ಮಿಲಿಟರಿ ಮೆರವಣಿಗೆಯಲ್ಲಿ ಭಾರತೀಯ ಮೂಲದ ಫಿರಂಗಿ, ವಾಯು ರಕ್ಷಣಾ ವ್ಯವಸ್ಥೆಗಳು, ರಾಡಾರ್ ಪ್ರದರ್ಶನ
ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆಯನ್ನು ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆಯನ್ನು ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
3 ಗಂಟೆಗೆ ರಾಜೀನಾಮೆ ನೀಡಲಿದ್ದಾರೆ ಮುಖ್ಯಮಂತ್ರಿ ಸಿದ್ದರಾಮಯ್ಯ : ಡಿಕೆ ಶಿವಕುಮಾರ್ ಹೊಸ ಸಿಎಂ
3 ಗಂಟೆಗೆ ರಾಜೀನಾಮೆ ನೀಡಲಿದ್ದಾರೆ ಮುಖ್ಯಮಂತ್ರಿ ಸಿದ್ದರಾಮಯ್ಯ : ಡಿಕೆ ಶಿವಕುಮಾರ್ ಹೊಸ ಸಿಎಂ
ಅಂತಾರಾಷ್ಟ್ರೀಯ ಗಡಿಗಳ ಬಳಿಯ ಅಕ್ರಮ ರಚನೆಗಳ ವಿರುದ್ಧ ಕ್ರಮ ಕೈಗೊಳ್ಳಲು ಅಮಿತ್ ಶಾ ಆದೇಶ
ಅಂತಾರಾಷ್ಟ್ರೀಯ ಗಡಿಗಳ ಬಳಿಯ ಅಕ್ರಮ ರಚನೆಗಳ ವಿರುದ್ಧ ಕ್ರಮ ಕೈಗೊಳ್ಳಲು ಅಮಿತ್ ಶಾ ಆದೇಶ
ಅಸ್ಸಾಂ ವಿಧಾನಸಭೆಯು ಏಕರೂಪ ನಾಗರಿಕ ಸಂಹಿತೆ ಮಸೂದೆ, 2026 ಅನ್ನು ಅಂಗೀಕರಿಸಿದೆ
ಅಸ್ಸಾಂ ವಿಧಾನಸಭೆಯು ಏಕರೂಪ ನಾಗರಿಕ ಸಂಹಿತೆ ಮಸೂದೆ, 2026 ಅನ್ನು ಅಂಗೀಕರಿಸಿದೆ
ಕರ್ನಾಟಕದಲ್ಲಿ ಶೀಘ್ರದಲ್ಲೇ ಹೊಸ ಸಿಎಂ ಮತ್ತು ನಾಲ್ವರು ಡಿಸಿಎಂಗಳ ನೇಮಕ ಸಾಧ್ಯತೆ?
ಕರ್ನಾಟಕದಲ್ಲಿ ಶೀಘ್ರದಲ್ಲೇ ಹೊಸ ಸಿಎಂ ಮತ್ತು ನಾಲ್ವರು ಡಿಸಿಎಂಗಳ ನೇಮಕ ಸಾಧ್ಯತೆ?
ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನಟ ರಣವೀರ್ ಸಿಂಗ್ ಪ್ರಾರ್ಥನೆ ಸಲ್ಲಿಸಿದರು.
ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನಟ ರಣವೀರ್ ಸಿಂಗ್ ಪ್ರಾರ್ಥನೆ ಸಲ್ಲಿಸಿದರು.
ಪೋರ್ಟಲ್‌ನಲ್ಲಿ ವಕ್ಫ್ ಮಂಡಳಿ ಅಕ್ರಮವಾಗಿ ಅಪ್‌ಲೋಡ್ ಮಾಡಲಾದ ಆಸ್ತಿಗಳನ್ನು ತೆಗೆದುಹಾಕಲು ಕೇಂದ್ರಕ್ಕೆ ರಾಜೀವ್ ಚಂದ್ರಶೇಖರ್ ಮನವಿ
ಪೋರ್ಟಲ್‌ನಲ್ಲಿ ವಕ್ಫ್ ಮಂಡಳಿ ಅಕ್ರಮವಾಗಿ ಅಪ್‌ಲೋಡ್ ಮಾಡಲಾದ ಆಸ್ತಿಗಳನ್ನು ತೆಗೆದುಹಾಕಲು ಕೇಂದ್ರಕ್ಕೆ ರಾಜೀವ್ ಚಂದ್ರಶೇಖರ್ ಮನವಿ
ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭ: 3ನೇ ಸ್ಥಾನದಲ್ಲಿ ಆಸೀನರಾಗಿದ್ದ ಎಚ್‌ಡಿ ಕುಮಾರಸ್ವಾಮಿ
ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭ: 3ನೇ ಸ್ಥಾನದಲ್ಲಿ ಆಸೀನರಾಗಿದ್ದ ಎಚ್‌ಡಿ ಕುಮಾರಸ್ವಾಮಿ
ತನ್ನ ಸ್ವಂತ ತಂದೆಗೆ ನಿಷ್ಠೆ ತೋರದ ಮಗ ದೇಶಕ್ಕೆ ನಿಷ್ಠನಾಗಿರುತ್ತಾನೆಯೇ? - ರಾಹುಲ್ ಗಾಂಧಿ ಸಮಗ್ರತೆ ಪ್ರಶ್ನಿಸಿದ ಎಸ್.ಜೈಶಂಕರ್
ತನ್ನ ಸ್ವಂತ ತಂದೆಗೆ ನಿಷ್ಠೆ ತೋರದ ಮಗ ದೇಶಕ್ಕೆ ನಿಷ್ಠನಾಗಿರುತ್ತಾನೆಯೇ? - ರಾಹುಲ್ ಗಾಂಧಿ ಸಮಗ್ರತೆ ಪ್ರಶ್ನಿಸಿದ ಎಸ್.ಜೈಶಂಕರ್

ನ್ಯೂಸ್ MORE NEWS...