Sun,Jul26,2026
ಕನ್ನಡ / English

ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ ಗೆಳೆಯರಿಂದಲೇ ನವವಿವಾಹಿತ ಹತ್ಯೆ | JANATA NEWS

08 Feb 2023

ಹಾಸನ : ನಾಲ್ಕು ದಿನಗಳ ಹಿಂದೆ ನಾಪತ್ತೆ ಆಗಿದ್ದ ಯುವಕನ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ.

ಹಾಸನದ ಹೊಯ್ಸಳನಗರ ಬಡಾವಣೆಯ ಲಿಖಿತ್ ಗೌಡ (26) ಸಂಜೆ ಮನೆಯಿಂದ ಹೋದವರು ರಾತ್ರಿಯಾದರೂ ಬಂದಿಲ್ಲ. ಫೋನ್ ಮಾಡಿದ್ರೆ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಮನೆಯಿಂದ ಹೋಗುವಾಗ ಸ್ನೇಹಿತ ಸಾಗರ್ ಜೊತೆಗೆ ಹೋಗುವದಾಗಿ ಹೇಳಿದ್ದರಿಂದ ಅವನಿಗೆ ಫೋನ್ ಮಾಡಿದ್ರೆ ಅವನ ಮೊಬೈಲ್ ಕೂಡ ಆಫ್ ಆಗಿತ್ತು. ಭಯಗೊಂಡ ಮನೆಯವರು ಬಡಾವಣೆ ಠಾಣೆಗೆ ಮಿಸ್ಸಿಂಗ್ ಕೇಸ್ ದಾಖಲಿಸಿದ್ದ ನೀಡಿದ್ದರು.

ಲಿಖಿತ್ ಗೌಡ ಕಳೆದ ಎಂಟು ತಿಂಗಳ ಹಿಂದೆ ಮದುವೆ ಆಗಿದ್ದರು. ಬಿಎಂ ರಸ್ತೆಯಲ್ಲಿ ಕಾರ್ ಸರ್ವೀಸ್ ಸ್ಟೇಷನ್ ಮಾಡಿದ್ದ. ಬಂದ ಹಣವನ್ನ ಬೇರೆ ವ್ಯವಹಾರಕ್ಕೆ ತೊಡಗಿಸಲು ಯೋಚನೆ ಮಾಡಿದ್ದ.

ಆಗ ತನ್ನದೇ ಸ್ನೇಹಿತ ನವೀನ್ ಮೂಲಕ ಒಂದು ಟ್ಯಾಂಕರ್ ಖರೀದಿ ಮಾಡೋಕೆ ಯೋಚಿಸಿ ಟ್ಯಾಂಕರ್ ನೋಡಿದ್ದ. 12 ಲಕ್ಷ ರೂಪಾಯಿಗೆ ವ್ಯವಹಾರದ ಮಾತನಾಡಿ ಎರಡೂವರೆ ಲಕ್ಷ ಅಡ್ವಾನ್ಸ್ ಕೂಡ ಕೊಟ್ಟಿದ್ದ. ವಾಹನ ಇಷ್ಟ ಆಗದ ಕಾರಣ ವ್ಯವಹಾರ ಕ್ಯಾನ್ಸಲ್ ಮಾಡಿದ್ದ. ಪಡೆದಿದ್ದ ಎರಡೂವರೆ ಲಕ್ಷ ಅಡ್ವಾನ್ಸ್ ಹಣ ವಾಪಸ್ ಕೊಡಲು ಹೇಳಿದ್ದ, ಆದ್ರೆ ಒಂದೂವರೆ ವರ್ಷದಿಂದ ಹಣ ವಾಪಸ್ ಕೊಡದೆ ಸತಾಯಿಸುತ್ತಿದ್ದ.

ಹಣ ವಾಪಸ್ ನೀಡದ ಹಿನ್ನೆಲೆಯಲ್ಲಿ ಲಿಖಿತ್‌ಗೌಡ ಹಾಗೂ ನವೀನ್ ಮಧ್ಯೆ ಮನಸ್ಥಾಪ ಉಂಟಾಗಿತ್ತು. ಇದರಿಂದ ಕೋಪಗೊಂಡ ಲಿಖಿತ್‌ಗೌಡ ಹತ್ತು ಲಕ್ಷದ ಚೆಕ್ ಬೌನ್ಸ್ ಕೇಸ್ ಹಾಕಿ, ಆಯಕ್ವಿವ್ ಹೊಂಡಾ ಆಯಕ್ಟೀವಾ ಬೈಕ್ ಸೀಜ್ ಮಾಡಿಕೊಂಡು ಬಂದಿದ್ದ.

ಫೆಬ್ರವರಿ 5 ರಂದು ಸಂಜೆ ಹಣ ಕೊಡೋದಾಗಿ ನವೀನ್ ಹಾಗೂ ಸಾಗರ್ ಎಂಬುವವರು ಲಿಖಿತ್​​ನನ್ನು ಕರೆದುಕೊಂಡು ಹೋಗಿದ್ದರಂತೆ. ಅಂದಿನಿಂದಲೂ ಎಲ್ಲರ ಫೋನ್ ಸ್ವಿಚ್ ಆಫ್ ಆಗಿತ್ತು.

ತೀವ್ರ ಹುಡುಕಾಟ ನಡೆಸಿದ ಬಳಿಕ ಲಿಖಿತ್ ನನ್ನು ಕರೆದೊಯ್ದಿದ್ದ ಸಾಗರ್ ಗ್ರಾಮದ ಪಕ್ಕದ ಯೋಗಿಹಳ್ಳಿ ಅರಣ್ಯ ಪ್ರದೇಶದಲ್ಲಿ ಪೊಲೀಸರು ಶೋಧ ಕಾರ್ಯ ನಡೆಸಿದಾಗ ಲಿಖಿತ್ ಗೌಡ ಮೃತದೇಹ ಪತ್ತೆಯಾಗಿದೆ. ಲಿಖಿತ್ ನನ್ನು ಇರಿದು ಸಾಯಿಸಿರೋ ಹಂತಕರು ಮೃತದೇಹವನ್ನು ಕಾಡಿನಲ್ಲಿ ಬಿಸಾಡಿ ಎಸ್ಕೇಪ್ ಆಗಿದ್ದಾರೆ.

RELATED TOPICS:
English summary :The newlyweds were killed by their friends for asking for the loan back

ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ  ರಿಜಿಜು ಮನವಿ
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ ರಿಜಿಜು ಮನವಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ

ನ್ಯೂಸ್ MORE NEWS...