Sun,Jul26,2026
ಕನ್ನಡ / English

ನಾನು ಹಿಂದು, ನಮ್ಮಪ್ಪ-ಅವ್ವನೂ ಹಿಂದು, ಸಿ.ಟಿ. ರವಿ ಹೇಳಿದ ಮಾತ್ರಕ್ಕೆ ನಾನು ಮುಸ್ಲಿಂನಾಗಿ ಬಿಡುತ್ತೇನಾ? | JANATA NEWS

11 Feb 2023

ವಿಜಯಪುರ : ನಾನು ಹಿಂದೂ, ನಮ್ಮಪ್ಪ - ಅವ್ವನೂ ಹಿಂದೂ. ನಾನು ಹಿಂದೂ ಅಲ್ಲವಾ, ನಮ್ಮವ್ವ - ನಮ್ಮಪ್ಪ ಹಿಂದುಗಳಲ್ಲವಾ? ಸಿಟಿ ರವಿ ಹೇಳಿದ ಮಾತ್ರಕ್ಕೆ ನಾನು ಮುಸ್ಲಿಮನಾಗಿ ಬಿಡುತ್ತೇನಾ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಪ್ರಜಾಧ್ವನಿ ಯಾತ್ರೆ ಹಿನ್ನೆಲೆ ಶನಿವಾರ ಸಿಂದಗಿ ವಿಧಾನ ಸಭೆ ಕ್ಷೇತ್ರಕ್ಕೆ ಆಗಮಿಸಿದ್ದ ಅವರು ಮಾತನಾಡಿ, ನಾನು ಹಿಂದು, ನಮ್ಮವ್ವ-ನಮ್ಮಪ್ಪ ಹಿಂದು. ನನ್ನ ಹೆಸರು ಸಿದ್ದರಾಮಯ್ಯ ಎಂದಿರಿಸಿಲ್ಲವೇ? ಸಿ.ಟಿ. ರವಿ ಹೇಳಿದ ಮಾತ್ರಕ್ಕೆ ನಾನು ಮುಸ್ಲಿಂನಾಗಿ ಬಿಡುತ್ತೇನಾ? ಎಂದು ಪ್ರಶ್ನಿಸಿದರು.

ಮುಂದುವರಿದು ಹಿಂದು ಹಾಗೂ ಹಿಂದುತ್ವ ಎಂಬ ಪದದ ಬಗ್ಗೆ ನಿಮಗೆ ಗೊತ್ತಾ ಎಂದು ಮಾಧ್ಯಮ ಪ್ರತಿನಿಧಿಗಳನ್ನು ಪ್ರಶ್ನಿಸಿದರು. ಹಿಂದುತ್ವದ ಬಗ್ಗೆ ಗೊತ್ತಿದ್ದರೆ ತಿಳಿಸಿ, ಗೊತ್ತಿಲ್ಲದಿದ್ದರೆ ಕೇಳುವುದು ಬೇಡ ಎಂದರು.

ಹಿಂದುತ್ವದ ಬಗ್ಗೆ ಗೊತ್ತಿದ್ದರೆ ತಿಳಿಸಿ, ಗೊತ್ತಿಲ್ಲದಿದ್ದರೆ ಕೇಳುವುದು ಬೇಡ. ನಮ್ಮ ಸರ್ಕಾರದಲ್ಲಿ 15 ಲಕ್ಷ ಮನೆಗಳನ್ನು ಕೊಟ್ಟಿದ್ದೇವು. ಎಲ್ಲವೂ ಮುಸ್ಲಿಮರಿಗೆ ಕೊಟ್ಟಿದ್ದೇವಾ? ಕೇವಲ ಶೇ.5ರಷ್ಟು ಮಾತ್ರ ಮುಸ್ಲಿಮರಿಗೆ ಕೊಟ್ಟಿತ್ತು. ಶೇ.95ರಷ್ಟನ್ನು ಹಿಂದೂಗಳಿಗೆ ಕೊಡಲಾಗಿತ್ತು ಎಂದು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದರು.

ಬಿಜೆಪಿಯವರಿಗೆ ಭ್ರಷ್ಟಾಚಾರ, ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆ ಬದಲಾವಣೆ ಮಾಡಲು ಆಗಿಲ್ಲ. ರೈತರ ಬಿಕ್ಕಟ್ಟಿಗೆ ಪರಿಹಾರ ಒದಗಿಸಲಾಗಿಲ್ಲ. ರೈತರ ಆದಾಯ ದುಪ್ಪಟ್ಟು ಮಾಡುವುದಾಗಿ 2017ರಲ್ಲಿ ಹೇಳಿದ್ದರು. ಆದರೆ, ರೈತರ ಸಾಲ ದುಪ್ಪಟ್ಟಾಯಿತೇ ಹೊರತು ಆದಾಯ ದುಪ್ಪಟ್ಟು ಆಗಲಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿಕಾರಿದರು.

ತಮ್ಮ ಸುಳ್ಳು ಮುಚ್ಚಿಕೊಳ್ಳಲು ಬಿಜೆಪಿ ಇಲ್ಲ ಸಲ್ಲದ ಹೇಳಿಕೆ ಕೊಡುತ್ತಿದೆ. ಲಂಬಾಣಿ ಜನರಿಗೆ ತಾಂಡಾಗಳನ್ನು ಕಂದಾಯ ಗ್ರಾಮ ಮಾಡಲು ಕಾನೂನು ಮಾಡಿದ್ದು ನಾವು. ಇಲ್ಲಿ ಹಕ್ಕು ಪತ್ರ ಕೊಡಲು ಬಂದು ಯೋಜನೆ ನಮ್ಮದೆಂದರೆ? ಅಡುಗೆ ಮಾಡಿದ್ದು ನಾವು ಬಡಿಸಿಬಿಟ್ಟು ನಮ್ಮದೆಂದಂತಿದೆ ಎಂದರು.

ಅನ್ನಭಾಗ್ಯದ ಅಕ್ಕಿ ಪ್ರಮಾಣವನ್ನು ಏಳು ಕೆಜಿಯಿಂದ 5 ಕೆಜಿಗೆ ಇಳಿಸಿದ್ದು ಸುಳ್ಳಾ? ಅಕ್ಕಿ ಕೇಂದ್ರ ಸರ್ಕಾರದ್ದು, ಚೀಲ ಮಾತ್ರ ಕಾಂಗ್ರೆಸ್‌ನದ್ದು ಎನ್ನುವ ಬಿಜೆಪಿಗರು ತಮ್ಮದೇ ಪಕ್ಷದ ಆಡಳಿತವಿರುವ ಉತ್ತರ ಪ್ರದೇಶ, ಗುಜರಾತ, ಅಸ್ಸಾಂನಲ್ಲಿ ಅಕ್ಕಿಯನ್ನು ಏಕೆ ಕೊಡುತ್ತಿಲ್ಲ? ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ 10 ಕೆಜಿ ಅಕ್ಕಿ ಕೊಡುವುದಾಗಿ ಭರವಸೆ ನೀಡಿದ್ದೇವೆ ಎಂದು ಹೇಳಿದರು.

RELATED TOPICS:
English summary :I am a Hindu, our father is also a Hindu, C.T. Do I quit being a Muslim just because Ravi says it?

ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ  ರಿಜಿಜು ಮನವಿ
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ ರಿಜಿಜು ಮನವಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ

ನ್ಯೂಸ್ MORE NEWS...