Sun,Jul26,2026
ಕನ್ನಡ / English

ಅಧಿಕಾರಿಗಳ ಕಿರುಕುಳ ​​ತಾಳಲಾರದೆ ಶಿಕ್ಷಕ ಆತ್ಮಹತ್ಯೆ! | JANATA NEWS

13 Feb 2023

ವಿಜಯಪುರ : ನನಗಿಂತಲೂ ನನ್ನ ವಿದ್ಯಾರ್ಥಿಗಳ ಭವಿಷ್ಯ ಮುಖ್ಯ ಎಂದು ಡೆತ್​ನೋಟ್ ಬರೆದಿಟ್ಟು ಸಿಂದಗಿ ತಹಶೀಲ್ದಾರ್ ಕಚೇರಿಯ ಆವರಣದ ಮರಕ್ಕೆ ಶಿಕ್ಷಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸಾಸಾಬಳ ಗ್ರಾಮದ ಸರ್ಕಾರಿ ಶಾಲೆಯ ಶಿಕ್ಷಕ ಬಸವರಾಜ್ (55) ಆತ್ಮಹತ್ಯೆಗೆ ಶರಣಾದವರು. ಶಿಕ್ಷಕ ಡೆತ್ ನೋಟ್ ಬರೆದಿಟ್ಟು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಶಾಲೆಯ ಹಿಂದಿನ ಮುಖ್ಯ ಶಿಕ್ಷಕ ಎಸ್.ಎಲ್.ಭಜಂತ್ರಿ, ಸಿಂದಗಿ ಬಿಇಓ, ಸಿಆರ್​ಪಿ ಜಿ.ಎನ್.ಪಾಟೀಲ್ ಅವರ ಕಿರುಕುಳವೇ ಆತ್ಮಹತ್ಯೆಗೆ ಕಾರಣ ಎಂದು ಡೆತ್​ನೋಟ್​ನಲ್ಲಿ ಉಲ್ಲೇಖ ಮಾಡಿದ್ದಾರೆ.

ಡೆತ್​ ನೋಟ್​ನಲ್ಲಿ ಏನಿದೆ?

ಎಸ್​ ಎಲ್ ಭಜಂತ್ರಿ ಮುಖ್ಯಶಿಕ್ಷಕ ಹುದ್ದೆಯನ್ನು, ಶಿಕ್ಷಕ ಬಸವರಾಜಗೆ ವರ್ಗಾಯಿಸಿದ್ದರು. ಈ ವೇಳೆ ಶಿಕ್ಷಕರ, ಹಾಗೂ ಮಕ್ಕಳ ಹಾಜರಾತಿ ದಾಖಲಿಸುವ 1ನೇ ನಂಬರ್ ರಿಜಿಸ್ಟರ್​ನ್ನು ಹಸ್ತಾಂತರ ಮಾಡಿದ್ದರು. ಆದರೆ ಭಜಂತ್ರಿ ವಿದ್ಯಾರ್ಥಿಗಳ ದಾಖಲಾತಿ ವಿವರ, ಜಾತಿ, ಜನ್ಮ ದಿನಾಂಕಗಳನ್ನು 1ನೇ ನಂಬರ್ ರಿಜಿಸ್ಟರ್​ ಸರಿಯಾಗಿ ದಾಖಲಿಸದೇ,​ ಅಪೂರ್ಣ ರೀತಿಯಲ್ಲಿ ವರ್ಗಾಯಿಸಿದ್ದರು.

ಈ ಸಂಬಂಧ ಎಸ್​ ಎಲ್ ಭಜಂತ್ರಿಯನ್ನು, ಶಿಕ್ಷಕ ಬಸವರಾಜ್​ ಪ್ರಶ್ನಿಸಿದರೇ “ನಾನು ಸಿಆರ್​ಪಿ ಆಗುತ್ತೇನೆ, ಆಗಾಗ ಬಂದು 1ನೇ ನಂಬರ್ ರಿಜಿಸ್ಟರ್ ಸರಿಪಡಿಸುವುದಾಗಿ ಹೇಳಿದ್ದರು. ಆದರೆ ಹಿಂದಿನ ಮುಖ್ಯ ಶಿಕ್ಷಕ ಎಸ್ ಎಲ್ ಭಜಂತ್ರಿ ರಿಜಿಸ್ಟರ್​ನ್ನು ಸರಿಪಡಿಸದೇ ಸತಾಯಿಸುತ್ತಿದ್ದರು. ಈ ಬಗ್ಗೆ ಸಿಂದಗಿ ಬಿಇಓ ಗಮನಕ್ಕೂ ತಂದಿದ್ದರೂ ಪ್ರಯೋಜನವಾಗಿಲ್ಲ. ಇದಕ್ಕೆ ಪ್ರತಿಯಾಗಿ ಬಿಇಓ ಹೆಚ್ ಎಂ ಹರಿನಾಳ ಟಾರ್ಚರ್ ನೋಟಿಸ್ ಕೊಡುತ್ತಿದ್ದನು. ಸಾಸಾಬಳ ಶಾಲೆಯ ಸಹಶಿಕ್ಷಕ ಶಿಕ್ಷಕ ಬಿಎಂ ತಳವಾರ ನಿಂದಲೂ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿದ್ದಾರೆ.

ಅಲ್ಲದೇ ನನ್ನ ಮೇಲೆ ಅಲಿಗೆಷನ್ ಮಾಡಿ, ಗ್ರಾಮದ ಸಂಗಮೇಶ್ ಚಿಂಚೋಳಿ ಎಂಬುವರು ಹಾಗೂ ಸಿಆರ್​ಪಿ ​​ನನ್ನಿಂದ ಹಣ ಪಡೆದಿದ್ದರು. ಹಾಗೇ ಬಿಸಿಯೂಟ ಯೋಜನೆಯಗೆ ಹೆಚ್ಚುವರಿ ವಿದ್ಯಾರ್ಥಿಗಳ ದಾಖಲಾತಿ ತೋರಿಸಿ ಹಣ ಲಪಟಾಯಿಸುತ್ತಿದ್ದರು. ಶಿಕ್ಷಕ ಬಸವರಾಜ್ ವಿರುದ್ಧ ಸಂಗಮೇಶ್ ಚಿಂಚೋಳಿ ಬಿಇಓಗೆ ದೂರು ಕೊಟ್ಟಿದ್ದರು. ನನಗಿಂತಲೂ ನನ್ನ ವಿದ್ಯಾರ್ಥಿಗಳ ಭವಿಷ್ಯ ಮುಖ್ಯ. ನನ್ನ ಹೆಂಡತಿ ಓರ್ವ ಮಗಳಿಗೆ ನ್ಯಾಯ ಒದಗಿಸಿಕೊಡಬೇಕು ಎಂದು ಡೆತ್ ನೋಟ್​​ನಲ್ಲಿ ಮನವಿ ಮಾಡಿದ್ದಾರೆ.

ಈ ಕುರಿತು ಡೆತ್ ನೋಟಿನಲ್ಲಿ ಬಸವರಾಜ ಉಲ್ಲೇಖಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎಂ.ಹರನಾಳ, ಜಿ.ಎನ್ ಪಾಟೀಲ, ಎಸ್.ಎಲ್.ಬಜಂತ್ರಿ, ಸಂಗಮೇಶ ಚಿಂಚೊಳ್ಳಿ, ಎಸ್.ಎಲ್.ಬಜಂತ್ರಿ, ಬಿ.ಎಂ.ತಳವಾರ ಅವರುಗಳೇ ನನ್ನ ಗಂಡನ ಸಾವಿಗೆ ನೇರ ಕಾರಣ ಎಂದು ಪತ್ನಿ ಮಹಾದೇವಿ ಬಸವರಾಜ ನಾಯಕಲ್ ಸಿಂದಗಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

RELATED TOPICS:
English summary :Unable to bear the harassment of the authorities, the teacher committed suicide

ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ  ರಿಜಿಜು ಮನವಿ
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ ರಿಜಿಜು ಮನವಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ

ನ್ಯೂಸ್ MORE NEWS...