Sun,Jul26,2026
ಕನ್ನಡ / English

ನಂದಿಬೆಟ್ಟದ ಟಿಪ್ಪು ಡ್ರಾಪ್ ನಿಂದ ಬಿದ್ದು ಯುವಕ ಆತ್ಮಹತ್ಯೆ | JANATA NEWS

14 Feb 2023

ಚಿಕ್ಕಬಳ್ಳಾಪುರ : ನಂದಿಬೆಟ್ಟದ ಟಿಪ್ಪು ಡ್ರಾಪ್ ನಿಂದ ಬಿದ್ದು ಯುವಕ ಆತ್ಮಹತ್ಯೆ ಮಾಡಿಕೊಡಿರುವ ಘಟನೆ ಬೆಳಕಿಗೆ ಬಂದಿದೆ.

ಮೂರು ದಿನಗಳಿಂದ ಅನಾಥವಾಗಿದ್ದ ಬೈಕ್ ಹಿಂದೆ ಬಿದ್ದಿದ್ದ ಪೊಲೀಸರಿಗೆ ಯುವಕನ ಆತ್ಮಹತ್ಯೆ ಪ್ರಕರಣ ತಿಳಿದಿದೆ. ವಿಶ್ವವಿಖ್ಯಾತ ನಂದಿಗಿರಿಧಾಮಕ್ಕೆ ಬಂದು ಅರುಣ್ ಎಂಬಾತ ಆತ್ಮಹತ್ಯೆ ಮಾಡಿಕೊಂಡಿದ್ದು, ಆತನ ಮೃತದೇಹ ಸಹ ಪತ್ತೆಯಾಗಿದೆ.

ಆತ್ಮಹತ್ಯೆ ಮಾಡಿಕೊಂಡ ಅರುಣ್ ಮೂಲತಃ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಅಂಬರಹಳ್ಳಿ ನಿವಾಸಿಯಾಗಿದ್ದು, ಬೆಂಗಳೂರಿನ ಬಿಟಿಎಂ ಲೇಔಟ್​ನಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಫಾರ್ಮಾಸಿಸ್ಟ್ ಆಗಿ ಕೆಲಸ ಮಾಡುತ್ತಿದ್ದು ಸ್ನೇಹಿತರು ಜೊತೆ ಪಿಜಿಯಲ್ಲಿ ಉಳಿದುಕೊಂಡಿದ್ದ.

ಕಳೆದ ಶನಿವಾರ ತನ್ನ ಸ್ನೇಹಿತನ ಕೆಎ 11 ಇಎಸ್ 9027 ನಂಬರಿನ ಡ್ಯೂಕ್ ಬೈಕ್ ನಲ್ಲಿ ನಂದಿಬೆಟ್ಟಕ್ಕೆ ಬಂದ ಅರುಣ್, ಪಾರ್ಕಿಂಗ್ ಪ್ಲಾಟ್​ನಲ್ಲಿ ತನ್ನ ಬೈಕ್ ನಿಲ್ಲಿಸಿ ಅಲ್ಲಿದ್ದ ಲಾಕ್​ರೂಂ ನಲ್ಲಿ ತನ್ನ ಹೆಲ್ಮೆಟ್ ಇಟ್ಟು ಸೀದಾ ನಂದಿಬೆಟ್ಟದ ಮೇಲ್ಭಾಗಕ್ಕೆ ಹೋಗಿದ್ದಾನೆ. ಆದರೆ ಶನಿವಾರ ಬೆಟ್ಟದ ಮೇಲೆ ಹೋದವನು ಮರಳಿ ವಾಪಾಸ್ ಬಂದಿಲ್ಲ.

ಶನಿವಾರ, ಭಾನುವಾರ, ಸೋಮವಾರ ಕಾದರೂ ಅರುಣ್ ವಾಪಾಸ್ ಬಾರದ ಹಿನ್ನೆಲೆ ಅನುಮಾನಗೊಂಡ ಹೆಲ್ಮೆಟ್ ಲಾಕ್ ರೂಂ ಮಾಲೀಕರು ಪೊಲೀಸರಿಗೆ ತಿಳಿಸಿದ್ದು ಸಿ ಸಿ ಟಿವಿ ದೃಶ್ಯಾವಳಿ ಪರಿಶೀಲನೆ ನಡೆಸಿದಾಗ ಅರುಣ್ ಹೋಗಿರುವ ವಿಡಿಯೋ ಸಿಕ್ಕಿದೆ. ಆದರೆ ವಾಪಾಸ್ ಬಂದಿರೋ ವಿಡಿಯೋ ಸಿಕ್ಕಿಲ್ಲ. ಹೀಗಾಗಿ ಬೆಟ್ಟವೆಲ್ಲಾ ತಡಿಕಾಡಿದಾಗ ಟಿಪ್ಪು ಡ್ರಾಪ್ ನ ಜಾಗದಲ್ಲಿ ಅರುಣ್ ಬ್ಯಾಗ್ ಪತ್ತೆಯಾಗಿದೆ.

ಇನ್ನೂ ಬ್ಯಾಗ್ ನಲ್ಲಿ ಡೆತ್ ನೋಟ್ ಸಹ ಪತ್ತೆಯಾಗಿದ್ದು, ಡೆತ್ ನೋಟ್​ನಲ್ಲಿ ಸಾವಿಗೆ ನಿಖರ ಕಾರಣ ಬರೆದಿಲ್ಲವಾದರೂ 'ತಾನು ಸಂತೋಷವಾಗಿ ಸಾಯುತ್ತಿದ್ದೇನೆ. ರಾಜಕೀಯ ವ್ಯವಸ್ಥೆ ಸರಿ ಇಲ್ಲ. ನಟ ಉಪೇಂದ್ರರ ಪ್ರಜಾಕೀಯ ಪಕ್ಷದ ಸಿದ್ದಾಂತಗಳನ್ನ ಜನ ಬೆಂಬಲಿಸಿಬೇಕು' ಎಂಬ ಅಭಿಲಾಷೆ ಹೊರ ಹಾಕಿದ್ದಾನೆ ಎನ್ನಲಾಗಿದೆ.

RELATED TOPICS:
English summary :A young man commits suicide after falling from tipu drop in Nandibetta

ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ  ರಿಜಿಜು ಮನವಿ
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ ರಿಜಿಜು ಮನವಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ

ನ್ಯೂಸ್ MORE NEWS...