Sun,Jul26,2026
ಕನ್ನಡ / English

ಅರ್ಕಾವತಿ ಹಗರಣದಲ್ಲಿದ್ದವರು ಕೆಲವೇ ದಿನಗಳಲ್ಲಿ ಜೈಲಿಗೆ ಹೋಗುತ್ತಾರೆ: ನಳಿನ್ ಕುಮಾರ್ ಕಟೀಲ್ | JANATA NEWS

25 Feb 2023

ರಾಮಚೂರು, : ಅರ್ಕಾವತಿ ಹಗರಣಕ್ಕೆ ಸಂಬಂಧಿಸಿ ಜಸ್ಟಿಸ್ ಕೆಂಪಣ್ಣನವರ ಆಯೋಗದ ವರದಿಯನ್ನು ನಮ್ಮ ಮುಖ್ಯಮಂತ್ರಿಯವರು ಸದನದಲ್ಲಿ ಮಂಡಿಸಿದ್ದಾರೆ. ಲೋಕಾಯುಕ್ತಕ್ಕೆ ಕೊಟ್ಟು ಸಂಪೂರ್ಣ ತನಿಖೆ ಮಾಡಿಸಲಾಗುತ್ತಿದೆ.

ಲಿಂಗಸೂಗೂರಿನಲ್ಲಿ ನಡೆದ ವಿಜಯಸಂಕಲ್ಪ ಯಾತ್ರೆಯಲ್ಲಿ ಭಾಗಿಯಾದ ವೇಳೆ ಮಾತನಾಡಿ, ಪ್ರಕರಣದಲ್ಲಿ ಭಾಗಿಯಾದ ನಾಯಕರ ವಿರುದ್ಧ ಕ್ರಮ ಆಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದರು.

ಕರ್ನಾಟಕದಲ್ಲಿ ಅಭಿವೃದ್ಧಿಯ ಹರಿಹಾರ ಯಡಿಯೂರಪ್ಪನವರಿಗೆ ಬೇಡಿಕೆ ಹಾಗೂ ಜನಬೆಂಬಲ ಇದೆ. ಸಿದ್ದರಾಮಯ್ಯನಿಗೆ ಇಲ್ಲ. 5 ವರ್ಷ ಆಡಳಿತ ಮಾಡಿದ ಸಿದ್ದರಾಮಯ್ಯನ ಅವಧಿಯಲ್ಲಿ 3 ಸಾವಿರ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರ ಅವಧಿಯಲ್ಲಿ ಅಧಿಕಾರಿಗಳ ಆತ್ಮಹತ್ಯೆ ನಿರಂತರವಾಗಿತ್ತು. ಸಿದ್ದರಾಮಯ್ಯನ ಕಾಲದಲ್ಲಿ ರೌಡಿರಾಜ್ಯ ಇತ್ತು ಎಂದು ಆರೋಪಿಸಿದರು.

24 ಜನ ಹಿಂದೂ ಕಾರ್ಯಕರ್ತರ ಹತ್ಯೆ ಆಗಿತ್ತು. ಹಿಂದೂ- ಮುಸ್ಲಿಮರ ನಡುವೆ ಕಲಹಕ್ಕಾಗಿ ಟಿಪ್ಪು ಜಯಂತಿ ಆರಂಭಿಸಿದರು. ಗಲಭೆಗಳನ್ನು ಸೃಷ್ಟಿಸಿದರು. ಹಿಂದುಳಿದ ವರ್ಗಗಳನ್ನು, ಕುರುಬರನ್ನು ತುಳಿದರು.

ತಾವು ಸಿಕ್ಕಿ ಬೀಳುತ್ತೇವೆ ಎಂದು ಲೋಕಾಯುಕ್ತವನ್ನು ಮುಚ್ಚಿಸಿದ್ದರು. ಹಲ್ಲಿಲ್ಲದ ಎಸಿಬಿಯನ್ನು ಹುಟ್ಟುಹಾಕಿದರು. ಕೆಂಪಣ್ಣ ವರದಿಯನ್ನು ಮುಚ್ಚಿಡುವ ಕೆಲಸ ಸಿದ್ದರಾಮಯ್ಯ ಮಾಡಿದ್ದರು. ಈಗ ಆ ವರದಿ ದಾಖಲಾತಿಗಳನ್ನು ಇಟ್ಟುಕೊಂಡು ತನಿಖೆ ಮಾಡಿಸುತ್ತೇವೆ. ಹಗರಣದಲ್ಲಿದ್ದವರು ಜೈಲಿಗೆ ಹೋಗುತ್ತಾರೆ ಎಂದು ತಿಳಿಸಿದರು.

ರಾಜ್ಯದಲ್ಲಿ ಪರಿವರ್ತನೆಯ ಗಾಳಿ ಬೀಸುತ್ತಿದೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ನಿರುದ್ಯೋಗಿಗಳಾಗಲಿದ್ದಾರೆ. ಎಲ್ಲೆಡೆ ಬಿಜೆಪಿ ಪರ ಅಲೆ ಇದೆ. ಮತ್ತೆ ಬಿಜೆಪಿ ಆಡಳಿತ ಬರಲಿದೆ ಎಂದು ಹುಲಿಯಾ ಕಾಡಿಗೆ ಹೋಗಲಿದೆ. ಬಂಡೆ ಒಡೆದು ಹೋಗಲಿದೆ. ಬಿಜೆಪಿಯ ಕಮಲ ಅರಳಲಿದೆ. ರಾಯಚೂರು ಕಲ್ಯಾಣ ಕರ್ನಾಟಕದ ಅನ್ನದ ಬಟ್ಟಲು. ಚಿನ್ನದ ನಾಡಿದು. ಆದರೆ, 60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ಪಕ್ಷವು ಚಿನ್ನದ ಬಟ್ಟಲನ್ನು ಕಬ್ಬಿಣದ, ಕಲ್ಲಿನ ಬಟ್ಟಲಾಗಿ ಮಾಡಿದೆ. ಇಲ್ಲಿ ಅಭಿವೃದ್ಧಿ ಮಾಡದೆ ಲೂಟಿ ಹೊಡೆಯುವ ಕಾರ್ಯ ಮಾಡಿದೆ ಎಂದು ಆರೋಪಿಸಿದರು.

ಬಾದಾಮಿಯಿಂದ ಸಿದ್ದರಾಮಯ್ಯನನ್ನು ಓಡಿಸಿದ್ದಾರೆ. ವರುಣಾಕ್ಕೆ ಬರಲು ಬಿಡುವುದಿಲ್ಲ. ಕೋಲಾರದಲ್ಲಿ ಜಾಗ ಇಲ್ಲ. ಮಾಜಿ ಮುಖ್ಯಮಂತ್ರಿಗೆ ಸೀಟೇ ಇಲ್ಲ ಎಂಬ ಪರಿಸ್ಥಿತಿ ಬಂದಿದೆ. ಕಾಂಗ್ರೆಸ್‍ನಲ್ಲಿ ಅವರು ಅಲೆಮಾರಿಯಾಗಿದ್ದಾರೆ ಎಂದು ಟೀಕಿಸಿದರು.

RELATED TOPICS:
English summary :Those involved in the Arkavati scam will go to jail in a few days: Nalin Kumar Kateel

ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ  ರಿಜಿಜು ಮನವಿ
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ ರಿಜಿಜು ಮನವಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ

ನ್ಯೂಸ್ MORE NEWS...