Sat,May30,2026
ಕನ್ನಡ / English

ರಾಹುಲ್ ಗಾಂಧಿ ಬ್ರಿಟನ್​​ಗೆ ಹೋಗಿ ಭಾರತದ ಪ್ರಜಾಪ್ರಭುತ್ವದ ಬಗ್ಗೆ ಬಾಲಿಶ ಹೇಳಿಕೆ ಖಂಡನೀಯ: ಪ್ರಲ್ಹಾದ್ ಜೋಶಿ | JANATA NEWS

07 Mar 2023

ಬಳ್ಳಾರಿ : ಬ್ರಿಟನ್​ನಲ್ಲಿ ಭಾರತದ ಪ್ರಜಾಪ್ರಭುತ್ವದ ಬಗ್ಗೆ ಕಾಂಗ್ರೆಸ್​​ ನಾಯಕ ರಾಹುಲ್ ಗಾಂಧಿ ಅತ್ಯಂತ ಬಾಲಿಶವಾಗಿ ಹೇಳಿಕೆ ನೀಡಿರುವುದು ಖಂಡನೀಯ ಎಂದು ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

ಬಳ್ಳಾರಿಯಲ್ಲಿ ಮಾತನಾಡಿದ ಸಚಿವ ಪ್ರಲ್ಹಾದ್ ಜೋಶಿ, "ಬ್ರಿಟನ್, ಅಮೆರಿಕಾ ಎಂದು ಓಡಾಡುತ್ತಿರುವ ರಾಹುಲ್ ಗಾಂಧಿ ದೇಶದ ಪ್ರಜಾಪ್ರಭುತ್ವದ ಬಗ್ಗೆ ನೀಡುತ್ತಿರುವ ಹೇಳಿಕೆ ಖಂಡನೀಯ. ರಾಹುಲ್ ಗಾಂಧಿ ಅವರು ಬ್ರಿಟನ್ ನಲ್ಲಿ ಭಾರತದ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದಿದ್ದಾರೆ‌. ಪ್ರಪಂಚದ ಮೂರನೇ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಭಾರತ" ಎಂದು ಹೇಳಿದ್ದಾರೆ.

"ರಾಹುಲ್ ಗಾಂಧಿ ಅವರಿಗೆ ಮಾನಸಿಕವಾಗಿ ಏನೋ ಸಮಸ್ಯೆ ಆದ ಹಾಗಿದೆ. ಸತತ ಸೋಲಿನಿಂದ ಹತಾಶರಾಗಿ ಅವರು ದೇಶದ ಪ್ರಜಾಪ್ರಭುತ್ವದ ಬಗ್ಗೆ ಅತ್ಯಂತ ಬಾಲಿಶವಾಗಿ ಮಾತನಾಡುತ್ತಿದ್ದಾರೆ. ಮಾನಸಿಕವಾಗಿ ಅವರಿಗೆ ತೊಂದರೆ ಇದ್ದಂತೆ ಕಾಣ್ತಿದೆ. ಪ್ರತಿಪಕ್ಷಗಳ ಮೈಕ್ ಗಳು ಆಫ್ ಆಗ್ತಾ ಇವೆ ಅಂದಿದ್ದಾರೆ. ಆದರೆ ದೇಶದ ಜನರೇ ಅವರ ಮೈಕ್ ಗಳನ್ನ ಆಫ್ ಮಾಡಿದ್ದಾರೆ ಅನ್ನೋ ಸತ್ಯವನ್ನ ರಾಹುಲ್ ಗಾಂಧಿ ತಿಳಿದುಕೊಳ್ಳಬೇಕು" ಎಂದು ಲೇವಡಿ ಮಾಡಿದ್ದಾರೆ.

ಇತ್ತೀಚೆಗೆ ಲೋಕಸಭೆಯಲ್ಲಿ ಮೋಷನ್ ಆಫ್​​ ಥ್ಯಾಂಕ್ಸ್ ವೇಳೆ ರಾಹುಲ್ ಗಾಂಧಿ ಅವರಿಗೆ 1 ಗಂಟೆ 9 ನಿಮಿಷ ಮಾತನಾಡಲು ಸಮಯದ ಅವಕಾಶವಿತ್ತು‌. ಆದ್ರೆ ಸ್ಪೀಕರ್ ಅವರು ಅವರು 2 ಗಂಟೆ ಸಮಯ ಕೊಟ್ಟಿದ್ರು. ಸದನದಲ್ಲಿ ಪ್ರತಿಪಕ್ಷಗಳಿಗೆ ಹೆಚ್ಚಿನ ಕಾಲಾವಕಾಶ ನೀಡಲಾಗ್ತಿದೆ. ಆದರೆ, ಪ್ರತಿಪಕ್ಷಗಳೇ ಸದನದಲ್ಲಿ ಚರ್ಚಿಸದೆ ಗದ್ದಲ ಎಬ್ಬಿಸಿದ್ದನ್ನ ದೇಶದ ಜನ ನೋಡಿದ್ದಾರೆ.

ಹೊರದೇಶಕ್ಕೆ ಹೋಗಿ ದೇಶದ ಪ್ರಜಾಪ್ರಭುತ್ವದ ಬಗ್ಗೆ ನೆಗೆಟಿವ್ ಆಗಿ ಮಾತಾಡುವ ರಾಹುಲ್ ಗಾಂಧಿ ತಮ್ಮ ಅಜ್ಜಿ ತುರ್ತು ಪರಿಸ್ಥಿತಿ ಜಾರಿ ಮಾಡಿದ್ದು ಮರೆತಿದ್ದಾರೆ. ಇಡೀ ಪ್ರಜಾಪ್ರಭುತ್ವದ ವಿರುದ್ಧ ತುರ್ತು ಪರಿಸ್ಥಿತಿ ಹೇರಿ ಸರ್ವಾಧಿಕಾರಿ ಧೋರಣೆ ಅನುಸರಿಸಿದವರು ಕಾಂಗ್ರೆಸ್ ನವರೇ ಎಂದು ಪ್ರಲ್ಹಾದ್ ಜೋಶಿ ತಿರುಗೇಟು ನೀಡಿದ್ದಾರೆ.

ಹೊರದೇಶಕ್ಕೆ ಹೋಗಿ ದೇಶದ ಪ್ರಜಾಪ್ರಭುತ್ವದ ಬಗ್ಗೆ ನೆಗೆಟಿವ್ ಆಗಿ ಮಾತಾಡುವ ರಾಹುಲ್ ಗಾಂಧಿ ತಮ್ಮ ಅಜ್ಜಿ ಇಂದಿರಾ ಗಾಂಧಿ ತುರ್ತು ಪರಿಸ್ಥಿತಿ ಜಾರಿ ಮಾಡಿದ್ದು ಮರೆತಿದ್ದಾರೆ. ಇಡೀ ಪ್ರಜಾಪ್ರಭುತ್ವದ ವಿರುದ್ಧ ತುರ್ತು ಪರಿಸ್ಥಿತಿ ಹೇರಿ ಸರ್ವಾಧಿಕಾರಿ ಧೋರಣೆ ಅನುಸರಿಸಿದವರು ಕಾಂಗ್ರೆಸ್‌ನವರೇ. ಇಡೀ ಮಂತ್ರಿಮಂಡಲ ಜಾರಿ ಮಾಡಿದ ನಿರ್ಣಯಗಳನ್ನ ಹರಿದುಹಾಕುವ ಮೂಲಕ ಪ್ರಜಾಪ್ರಭುತ್ವಕ್ಕೆ ಅವಮಾನ ಮಾಡಿದವರು ರಾಹುಲ್ ಗಾಂಧಿ. ಈಗ ಪ್ರಜಾಪ್ರಭುತ್ವ ತೊಂದರೆಯಲ್ಲಿದೆ ಅಂತಿದ್ದಾರೆ ಎಂದು ಪ್ರಲ್ಹಾದ್ ಜೋಶಿ ಕಿಡಿಕಾರಿದ್ದಾರೆ.

RELATED TOPICS:
English summary :Rahul Gandhi goes to Britain and makes childish statements about Indian democracy condemnable: Pralhad Joshi

ಕೇರಳ ವಿಧಾನಸಭೆಯಲ್ಲಿ ವಂದೇ ಮಾತರಂ ಗೀತೆಯನ್ನು ಸಂಪೂರ್ಣವಾಗಿ ಹಾಡದ ಕಾರಣ ಗದ್ದಲ
ಕೇರಳ ವಿಧಾನಸಭೆಯಲ್ಲಿ ವಂದೇ ಮಾತರಂ ಗೀತೆಯನ್ನು ಸಂಪೂರ್ಣವಾಗಿ ಹಾಡದ ಕಾರಣ ಗದ್ದಲ
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿ, ಮಂತ್ರಿಮಂಡಲ ವಜಾ ಮಾಡಿದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿ, ಮಂತ್ರಿಮಂಡಲ ವಜಾ ಮಾಡಿದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್
ಅರ್ಮೇನಿಯಾ ಮಿಲಿಟರಿ ಮೆರವಣಿಗೆಯಲ್ಲಿ ಭಾರತೀಯ ಮೂಲದ ಫಿರಂಗಿ, ವಾಯು ರಕ್ಷಣಾ ವ್ಯವಸ್ಥೆಗಳು, ರಾಡಾರ್ ಪ್ರದರ್ಶನ
ಅರ್ಮೇನಿಯಾ ಮಿಲಿಟರಿ ಮೆರವಣಿಗೆಯಲ್ಲಿ ಭಾರತೀಯ ಮೂಲದ ಫಿರಂಗಿ, ವಾಯು ರಕ್ಷಣಾ ವ್ಯವಸ್ಥೆಗಳು, ರಾಡಾರ್ ಪ್ರದರ್ಶನ
ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆಯನ್ನು ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆಯನ್ನು ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
3 ಗಂಟೆಗೆ ರಾಜೀನಾಮೆ ನೀಡಲಿದ್ದಾರೆ ಮುಖ್ಯಮಂತ್ರಿ ಸಿದ್ದರಾಮಯ್ಯ : ಡಿಕೆ ಶಿವಕುಮಾರ್ ಹೊಸ ಸಿಎಂ
3 ಗಂಟೆಗೆ ರಾಜೀನಾಮೆ ನೀಡಲಿದ್ದಾರೆ ಮುಖ್ಯಮಂತ್ರಿ ಸಿದ್ದರಾಮಯ್ಯ : ಡಿಕೆ ಶಿವಕುಮಾರ್ ಹೊಸ ಸಿಎಂ
ಅಂತಾರಾಷ್ಟ್ರೀಯ ಗಡಿಗಳ ಬಳಿಯ ಅಕ್ರಮ ರಚನೆಗಳ ವಿರುದ್ಧ ಕ್ರಮ ಕೈಗೊಳ್ಳಲು ಅಮಿತ್ ಶಾ ಆದೇಶ
ಅಂತಾರಾಷ್ಟ್ರೀಯ ಗಡಿಗಳ ಬಳಿಯ ಅಕ್ರಮ ರಚನೆಗಳ ವಿರುದ್ಧ ಕ್ರಮ ಕೈಗೊಳ್ಳಲು ಅಮಿತ್ ಶಾ ಆದೇಶ
ಅಸ್ಸಾಂ ವಿಧಾನಸಭೆಯು ಏಕರೂಪ ನಾಗರಿಕ ಸಂಹಿತೆ ಮಸೂದೆ, 2026 ಅನ್ನು ಅಂಗೀಕರಿಸಿದೆ
ಅಸ್ಸಾಂ ವಿಧಾನಸಭೆಯು ಏಕರೂಪ ನಾಗರಿಕ ಸಂಹಿತೆ ಮಸೂದೆ, 2026 ಅನ್ನು ಅಂಗೀಕರಿಸಿದೆ
ಕರ್ನಾಟಕದಲ್ಲಿ ಶೀಘ್ರದಲ್ಲೇ ಹೊಸ ಸಿಎಂ ಮತ್ತು ನಾಲ್ವರು ಡಿಸಿಎಂಗಳ ನೇಮಕ ಸಾಧ್ಯತೆ?
ಕರ್ನಾಟಕದಲ್ಲಿ ಶೀಘ್ರದಲ್ಲೇ ಹೊಸ ಸಿಎಂ ಮತ್ತು ನಾಲ್ವರು ಡಿಸಿಎಂಗಳ ನೇಮಕ ಸಾಧ್ಯತೆ?
ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನಟ ರಣವೀರ್ ಸಿಂಗ್ ಪ್ರಾರ್ಥನೆ ಸಲ್ಲಿಸಿದರು.
ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನಟ ರಣವೀರ್ ಸಿಂಗ್ ಪ್ರಾರ್ಥನೆ ಸಲ್ಲಿಸಿದರು.
ಪೋರ್ಟಲ್‌ನಲ್ಲಿ ವಕ್ಫ್ ಮಂಡಳಿ ಅಕ್ರಮವಾಗಿ ಅಪ್‌ಲೋಡ್ ಮಾಡಲಾದ ಆಸ್ತಿಗಳನ್ನು ತೆಗೆದುಹಾಕಲು ಕೇಂದ್ರಕ್ಕೆ ರಾಜೀವ್ ಚಂದ್ರಶೇಖರ್ ಮನವಿ
ಪೋರ್ಟಲ್‌ನಲ್ಲಿ ವಕ್ಫ್ ಮಂಡಳಿ ಅಕ್ರಮವಾಗಿ ಅಪ್‌ಲೋಡ್ ಮಾಡಲಾದ ಆಸ್ತಿಗಳನ್ನು ತೆಗೆದುಹಾಕಲು ಕೇಂದ್ರಕ್ಕೆ ರಾಜೀವ್ ಚಂದ್ರಶೇಖರ್ ಮನವಿ
ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭ: 3ನೇ ಸ್ಥಾನದಲ್ಲಿ ಆಸೀನರಾಗಿದ್ದ ಎಚ್‌ಡಿ ಕುಮಾರಸ್ವಾಮಿ
ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭ: 3ನೇ ಸ್ಥಾನದಲ್ಲಿ ಆಸೀನರಾಗಿದ್ದ ಎಚ್‌ಡಿ ಕುಮಾರಸ್ವಾಮಿ
ತನ್ನ ಸ್ವಂತ ತಂದೆಗೆ ನಿಷ್ಠೆ ತೋರದ ಮಗ ದೇಶಕ್ಕೆ ನಿಷ್ಠನಾಗಿರುತ್ತಾನೆಯೇ? - ರಾಹುಲ್ ಗಾಂಧಿ ಸಮಗ್ರತೆ ಪ್ರಶ್ನಿಸಿದ ಎಸ್.ಜೈಶಂಕರ್
ತನ್ನ ಸ್ವಂತ ತಂದೆಗೆ ನಿಷ್ಠೆ ತೋರದ ಮಗ ದೇಶಕ್ಕೆ ನಿಷ್ಠನಾಗಿರುತ್ತಾನೆಯೇ? - ರಾಹುಲ್ ಗಾಂಧಿ ಸಮಗ್ರತೆ ಪ್ರಶ್ನಿಸಿದ ಎಸ್.ಜೈಶಂಕರ್

ನ್ಯೂಸ್ MORE NEWS...