Sun,Jul26,2026
ಕನ್ನಡ / English

ರಾಹುಲ್ ಗಾಂಧಿ ಬ್ರಿಟನ್​​ಗೆ ಹೋಗಿ ಭಾರತದ ಪ್ರಜಾಪ್ರಭುತ್ವದ ಬಗ್ಗೆ ಬಾಲಿಶ ಹೇಳಿಕೆ ಖಂಡನೀಯ: ಪ್ರಲ್ಹಾದ್ ಜೋಶಿ | JANATA NEWS

07 Mar 2023

ಬಳ್ಳಾರಿ : ಬ್ರಿಟನ್​ನಲ್ಲಿ ಭಾರತದ ಪ್ರಜಾಪ್ರಭುತ್ವದ ಬಗ್ಗೆ ಕಾಂಗ್ರೆಸ್​​ ನಾಯಕ ರಾಹುಲ್ ಗಾಂಧಿ ಅತ್ಯಂತ ಬಾಲಿಶವಾಗಿ ಹೇಳಿಕೆ ನೀಡಿರುವುದು ಖಂಡನೀಯ ಎಂದು ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

ಬಳ್ಳಾರಿಯಲ್ಲಿ ಮಾತನಾಡಿದ ಸಚಿವ ಪ್ರಲ್ಹಾದ್ ಜೋಶಿ, "ಬ್ರಿಟನ್, ಅಮೆರಿಕಾ ಎಂದು ಓಡಾಡುತ್ತಿರುವ ರಾಹುಲ್ ಗಾಂಧಿ ದೇಶದ ಪ್ರಜಾಪ್ರಭುತ್ವದ ಬಗ್ಗೆ ನೀಡುತ್ತಿರುವ ಹೇಳಿಕೆ ಖಂಡನೀಯ. ರಾಹುಲ್ ಗಾಂಧಿ ಅವರು ಬ್ರಿಟನ್ ನಲ್ಲಿ ಭಾರತದ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದಿದ್ದಾರೆ‌. ಪ್ರಪಂಚದ ಮೂರನೇ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಭಾರತ" ಎಂದು ಹೇಳಿದ್ದಾರೆ.

"ರಾಹುಲ್ ಗಾಂಧಿ ಅವರಿಗೆ ಮಾನಸಿಕವಾಗಿ ಏನೋ ಸಮಸ್ಯೆ ಆದ ಹಾಗಿದೆ. ಸತತ ಸೋಲಿನಿಂದ ಹತಾಶರಾಗಿ ಅವರು ದೇಶದ ಪ್ರಜಾಪ್ರಭುತ್ವದ ಬಗ್ಗೆ ಅತ್ಯಂತ ಬಾಲಿಶವಾಗಿ ಮಾತನಾಡುತ್ತಿದ್ದಾರೆ. ಮಾನಸಿಕವಾಗಿ ಅವರಿಗೆ ತೊಂದರೆ ಇದ್ದಂತೆ ಕಾಣ್ತಿದೆ. ಪ್ರತಿಪಕ್ಷಗಳ ಮೈಕ್ ಗಳು ಆಫ್ ಆಗ್ತಾ ಇವೆ ಅಂದಿದ್ದಾರೆ. ಆದರೆ ದೇಶದ ಜನರೇ ಅವರ ಮೈಕ್ ಗಳನ್ನ ಆಫ್ ಮಾಡಿದ್ದಾರೆ ಅನ್ನೋ ಸತ್ಯವನ್ನ ರಾಹುಲ್ ಗಾಂಧಿ ತಿಳಿದುಕೊಳ್ಳಬೇಕು" ಎಂದು ಲೇವಡಿ ಮಾಡಿದ್ದಾರೆ.

ಇತ್ತೀಚೆಗೆ ಲೋಕಸಭೆಯಲ್ಲಿ ಮೋಷನ್ ಆಫ್​​ ಥ್ಯಾಂಕ್ಸ್ ವೇಳೆ ರಾಹುಲ್ ಗಾಂಧಿ ಅವರಿಗೆ 1 ಗಂಟೆ 9 ನಿಮಿಷ ಮಾತನಾಡಲು ಸಮಯದ ಅವಕಾಶವಿತ್ತು‌. ಆದ್ರೆ ಸ್ಪೀಕರ್ ಅವರು ಅವರು 2 ಗಂಟೆ ಸಮಯ ಕೊಟ್ಟಿದ್ರು. ಸದನದಲ್ಲಿ ಪ್ರತಿಪಕ್ಷಗಳಿಗೆ ಹೆಚ್ಚಿನ ಕಾಲಾವಕಾಶ ನೀಡಲಾಗ್ತಿದೆ. ಆದರೆ, ಪ್ರತಿಪಕ್ಷಗಳೇ ಸದನದಲ್ಲಿ ಚರ್ಚಿಸದೆ ಗದ್ದಲ ಎಬ್ಬಿಸಿದ್ದನ್ನ ದೇಶದ ಜನ ನೋಡಿದ್ದಾರೆ.

ಹೊರದೇಶಕ್ಕೆ ಹೋಗಿ ದೇಶದ ಪ್ರಜಾಪ್ರಭುತ್ವದ ಬಗ್ಗೆ ನೆಗೆಟಿವ್ ಆಗಿ ಮಾತಾಡುವ ರಾಹುಲ್ ಗಾಂಧಿ ತಮ್ಮ ಅಜ್ಜಿ ತುರ್ತು ಪರಿಸ್ಥಿತಿ ಜಾರಿ ಮಾಡಿದ್ದು ಮರೆತಿದ್ದಾರೆ. ಇಡೀ ಪ್ರಜಾಪ್ರಭುತ್ವದ ವಿರುದ್ಧ ತುರ್ತು ಪರಿಸ್ಥಿತಿ ಹೇರಿ ಸರ್ವಾಧಿಕಾರಿ ಧೋರಣೆ ಅನುಸರಿಸಿದವರು ಕಾಂಗ್ರೆಸ್ ನವರೇ ಎಂದು ಪ್ರಲ್ಹಾದ್ ಜೋಶಿ ತಿರುಗೇಟು ನೀಡಿದ್ದಾರೆ.

ಹೊರದೇಶಕ್ಕೆ ಹೋಗಿ ದೇಶದ ಪ್ರಜಾಪ್ರಭುತ್ವದ ಬಗ್ಗೆ ನೆಗೆಟಿವ್ ಆಗಿ ಮಾತಾಡುವ ರಾಹುಲ್ ಗಾಂಧಿ ತಮ್ಮ ಅಜ್ಜಿ ಇಂದಿರಾ ಗಾಂಧಿ ತುರ್ತು ಪರಿಸ್ಥಿತಿ ಜಾರಿ ಮಾಡಿದ್ದು ಮರೆತಿದ್ದಾರೆ. ಇಡೀ ಪ್ರಜಾಪ್ರಭುತ್ವದ ವಿರುದ್ಧ ತುರ್ತು ಪರಿಸ್ಥಿತಿ ಹೇರಿ ಸರ್ವಾಧಿಕಾರಿ ಧೋರಣೆ ಅನುಸರಿಸಿದವರು ಕಾಂಗ್ರೆಸ್‌ನವರೇ. ಇಡೀ ಮಂತ್ರಿಮಂಡಲ ಜಾರಿ ಮಾಡಿದ ನಿರ್ಣಯಗಳನ್ನ ಹರಿದುಹಾಕುವ ಮೂಲಕ ಪ್ರಜಾಪ್ರಭುತ್ವಕ್ಕೆ ಅವಮಾನ ಮಾಡಿದವರು ರಾಹುಲ್ ಗಾಂಧಿ. ಈಗ ಪ್ರಜಾಪ್ರಭುತ್ವ ತೊಂದರೆಯಲ್ಲಿದೆ ಅಂತಿದ್ದಾರೆ ಎಂದು ಪ್ರಲ್ಹಾದ್ ಜೋಶಿ ಕಿಡಿಕಾರಿದ್ದಾರೆ.

RELATED TOPICS:
English summary :Rahul Gandhi goes to Britain and makes childish statements about Indian democracy condemnable: Pralhad Joshi

ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ  ರಿಜಿಜು ಮನವಿ
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ ರಿಜಿಜು ಮನವಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ

ನ್ಯೂಸ್ MORE NEWS...