Wed,Apr15,2026
ಕನ್ನಡ / English

ಉಡುಪಿ ಕೃಷ್ಣ ಮಠಕ್ಕೆ ಜಾಗ ಕೊಟ್ಟಿದ್ದು ಮುಸ್ಲಿಂ ರಾಜನಲ್ಲ, ಪೇಜಾವರ ಶ್ರೀ ಸ್ಪಷ್ಟನೆ | JANATA NEWS

08 Mar 2023

ತುಮಕೂರು : ಉಡುಪಿ ಕೃಷ್ಣ ಮಠಕ್ಕೆ ಜಾಗ ಕೊಟ್ಟಿದ್ದು ಮುಸ್ಲಿಂ ರಾಜರು, ಎಂಬ ಮಿಥುನ್ ರೈ ಹೇಳಿಕೆಗೆ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು ತಿರುಗೇಟು ಕೊಟ್ಟಿದ್ದಾರೆ.

ಆಧಾರ ರಹಿತವಾದ ಹೇಳಿಕೆ ಇಟ್ಟುಕೊಂಡು ಚರ್ಚಿಸಿದರೆ ಅದಕ್ಕೆ ಅರ್ಥವಿಲ್ಲ. ಕೃಷ್ಣ ಮಠಕ್ಕೆ ರಾಮಭೋಜ ಅರಸ ಜಾಗ ಕೊಟ್ಟಿದ್ದಕ್ಕೆ ಆಧಾರಗಳಿವೆ, ಗುರುಗಳ ಹೇಳಿಕೆಯನ್ನು ಅವರು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ ಎಂದು ತುಮಕೂರಿನಲ್ಲಿ ಪೇಜಾವರ ಶ್ರೀ ಹೇಳಿದ್ದಾರೆ.

ಮಧ್ವಾಚಾರ್ಯರು ಎಲ್ಲ ಶಿಷ್ಯರೊಡನೆ ಸೇರಿಕೊಂಡು ಬದ್ರಿ ಯಾತ್ರೆಗೆ ಹೊರಟಿದ್ರು. ಹಾಗೆ ಯಾತ್ರೆಗೆ ಹೋಗುವಾಗ ಗಂಗಾ ನದಿಯನ್ನ ದಾಟಬೇಕಿತ್ತು. ಅಲ್ಲೊಬ್ಬ ತುರ್ಕರ ರಾಜ ಆಳ್ವಿಕೆ ಮಾಡುತ್ತಿದ್ದನು. ನದಿ ದಾಟಲಿಕ್ಕೆ ಬೇಕಾದ ಎಲ್ಲಾ ವ್ಯವಸ್ಥೆಯನ್ನ ಆತ ನಿಲ್ಲಿಸಿದ್ದ. ಆಗ ಮಧ್ವಾಚಾರ್ಯರು ಗಂಗಾ ನದಿಯನ್ನ ಈಜಿಯೇ ದಾಟಲು ಮುಂದಾದರು. ಬಳಿಕ ಶಿಷ್ಯರಿಗೆ ತಮ್ಮ ಕಾಲನ್ನ ಹಿಡಿದುಕೊಳ್ಳಲು ಹೇಳಿದರು. ಆಗ ತುರ್ಕ ರಾಜನ ಸೈನಿಕರು ಇವರತ್ತ ಓಡಿಬಂದರು. ಆದರೆ ಮಧ್ವಾಚಾರ್ಯರು ಸ್ವಲ್ಪವೂ ಹೆದರದೇ ಅವರಿಗೆ ತಿಳಿ ಹೇಳಿದರು.

ಆದರೆ ಮಧ್ವಾಚಾರ್ಯರು ತಮ್ಮ ಶಿಷ್ಯರೊಂದಿಗೆ ನದಿಯನ್ನು ಈಜಿಕೊಂಡು ದಾಟುವಾಗ ಸೇನೆ ಇವರನ್ನು ತಡೆಯಲು ಬಂತು. ಈಜುತ್ತಲೇ ನಾವು ಬರುವವರೆಗೆ ಅಲ್ಲೇ ಇರಿ, ನಾವು ನಿಶಸ್ತ್ರಧಾರಿಗಳು ಎಂದು ಸೈನಿಕರಿಗೆ ತಿಳಿಸಿದರು. ನಂತರ ದಡ ತಲುಪಿ ನಿರ್ಭೀತರಾಗಿ ಸೈನಿಕರ ಕಡೆ ನಡೆದರು. ಆಚಾರ್ಯರ ತೇಜಸ್ಸು ತುಂಬಿದ ಮಮತೆಯ ಕಣ್ಣುಗಳಿಗೆ ತುರ್ಕರ ದೊರೆ ಕೂಡ ಪ್ರಭಾವಕ್ಕೆ ಒಳಗಾದ.

ಅದನ್ನ ನಮ್ಮ ಗುರುಗಳು ಉಲ್ಲೇಖ ಮಾಡಿದ್ದಾರೆ ಹೊರತು, ಉಡುಪಿ ಮಠದ ಜಾಗವನ್ನ ಮುಸ್ಲಿಂ ರಾಜರು ನೀಡಿದ್ದು ಎಂದು ಹೇಳಿದ್ದಲ್ಲ. ಈ ಗೊಂದಲದಿಂದ ಅವರು ಈ ರೀತಿಯ ಹೇಳಿಕೆ ಕೊಟ್ಟಿರಬಹುದು. ಆದ್ರೆ ಅದು ಆಧಾರ ರಹಿತವಾಗಿರೋದ್ರಿಂದ ಈ ಚರ್ಚೆಯನ್ನ ಮುಂದುವರಿಸೋದು ಅರ್ಥಹೀನ ಎಂಬುದು ನನ್ನ ಅನಿಸಿಕೆ ಎಂದಿದ್ದಾರೆ.

RELATED TOPICS:
English summary :It was not the Muslim king who gave the land to Udupi Krishna Mutt, it was Shri Acharane of Page

ಪ್ರಧಾನಿ ಮೋದಿ ಗೆ ದೂರವಾಣಿ ಕರೆ ಮಾಡಿ 40 ನಿಮಿಷ ಮಾತನಾಡಿದ ಅಧ್ಯಕ್ಷ ಟ್ರಂಪ್
ಪ್ರಧಾನಿ ಮೋದಿ ಗೆ ದೂರವಾಣಿ ಕರೆ ಮಾಡಿ 40 ನಿಮಿಷ ಮಾತನಾಡಿದ ಅಧ್ಯಕ್ಷ ಟ್ರಂಪ್
ಹೆಬ್ಬಾಳದಲ್ಲಿ 55 ಎಕರೆ ಭೂಮಿ ಖಾಸಗಿ ಸಂಸ್ಥೆಗೆ ವರ್ಗಾವಣೆ ರದ್ದುಗೊಳಿಸಿದ ಹೈಕೋರ್ಟ್ : ಸಿಬಿಐ ತನಿಖೆಗೆ ಆದೇಶ
ಹೆಬ್ಬಾಳದಲ್ಲಿ 55 ಎಕರೆ ಭೂಮಿ ಖಾಸಗಿ ಸಂಸ್ಥೆಗೆ ವರ್ಗಾವಣೆ ರದ್ದುಗೊಳಿಸಿದ ಹೈಕೋರ್ಟ್ : ಸಿಬಿಐ ತನಿಖೆಗೆ ಆದೇಶ
ಟಿಸಿಎಸ್ ನಲ್ಲಿ ಪಿಓಎಸ್ಎಚ್(ಪೊಶ್) ಆಡಿಟ್ ಕೋರಿದ ಎನ್ಐಟಿಇಎಸ್ : ಐಟಿ ವಲಯದಾದ್ಯಂತ ವ್ಯಾಪಕ ತನಿಖೆಗೆ ಒತ್ತಾಯ
ಟಿಸಿಎಸ್ ನಲ್ಲಿ ಪಿಓಎಸ್ಎಚ್(ಪೊಶ್) ಆಡಿಟ್ ಕೋರಿದ ಎನ್ಐಟಿಇಎಸ್ : ಐಟಿ ವಲಯದಾದ್ಯಂತ ವ್ಯಾಪಕ ತನಿಖೆಗೆ ಒತ್ತಾಯ
 ಟಿಸಿಎಸ್ ನಾಸಿಕ್ ಪ್ರಕರಣ: ಕಾರ್ಯಾಚರಣೆ ಮುಖ್ಯಸ್ಥ ಕಸ್ಟಡಿಗೆ ; ಟಾಟಾ ಇಂದ ಆಂತರಿಕ ತನಿಖೆ ವಿಸ್ತರಣೆ
ಟಿಸಿಎಸ್ ನಾಸಿಕ್ ಪ್ರಕರಣ: ಕಾರ್ಯಾಚರಣೆ ಮುಖ್ಯಸ್ಥ ಕಸ್ಟಡಿಗೆ ; ಟಾಟಾ ಇಂದ ಆಂತರಿಕ ತನಿಖೆ ವಿಸ್ತರಣೆ
ಜನರ ಹೆಸರುಗಳನ್ನು ಅಂತಿಮ ತೀರ್ಪಿನ ನಂತರ ಸೇರಿಸಿದರೆ... ಮತ ಚಲಾಯಿಸಲು ಅವಕಾಶ - ಸುಪ್ರೀಂ
ಜನರ ಹೆಸರುಗಳನ್ನು ಅಂತಿಮ ತೀರ್ಪಿನ ನಂತರ ಸೇರಿಸಿದರೆ... ಮತ ಚಲಾಯಿಸಲು ಅವಕಾಶ - ಸುಪ್ರೀಂ
ಹಿರಿಯ ಗಾಯಕಿ ಆಶಾ ಬೋಸ್ಲೆ ನಿಧನ : ಪ್ರಧಾನಿ ಮೋದಿ ಸಂತಾಪ
ಹಿರಿಯ ಗಾಯಕಿ ಆಶಾ ಬೋಸ್ಲೆ ನಿಧನ : ಪ್ರಧಾನಿ ಮೋದಿ ಸಂತಾಪ
 ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ವಂದೇ ಭಾರತ್ ಸ್ಲೀಪರ್ ರೈಲು ಸೇವೆಗೆ ಅನುಮೋದನೆ
ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ವಂದೇ ಭಾರತ್ ಸ್ಲೀಪರ್ ರೈಲು ಸೇವೆಗೆ ಅನುಮೋದನೆ
ನಾಸಿಕ್ ಟಿಸಿಎಸ್ ಪ್ರಕರಣ: ಮತಾಂತರ, ಮೂಲಭೂತೀಕರಣ ಆರೋಪಗಳ ಮೇಲೆ ತನಿಖೆ ಆರಂಭ
ನಾಸಿಕ್ ಟಿಸಿಎಸ್ ಪ್ರಕರಣ: ಮತಾಂತರ, ಮೂಲಭೂತೀಕರಣ ಆರೋಪಗಳ ಮೇಲೆ ತನಿಖೆ ಆರಂಭ
ದೋಷಾರೋಪಣೆ ಪ್ರಕ್ರಿಯೆ ಆರಂಭವಾದ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ
ದೋಷಾರೋಪಣೆ ಪ್ರಕ್ರಿಯೆ ಆರಂಭವಾದ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ
2008ರ ಮಾಲೆಗಾಂವ್ ಸ್ಫೋಟ ಪ್ರಕರಣ: ಕರ್ನಲ್ ಪುರೋಹಿತ್‌ಗೆ ಬ್ರಿಗೇಡಿಯರ್ ಬಡ್ತಿಗೆ ಅನುಮತಿ
2008ರ ಮಾಲೆಗಾಂವ್ ಸ್ಫೋಟ ಪ್ರಕರಣ: ಕರ್ನಲ್ ಪುರೋಹಿತ್‌ಗೆ ಬ್ರಿಗೇಡಿಯರ್ ಬಡ್ತಿಗೆ ಅನುಮತಿ
ಪ್ರತಿಯೊಬ್ಬ ಸೈನಿಕ ಡ್ರೋನ್ ಹಾರಿಸಲು ಸಿದ್ದವಾಗಬೇಕು - ಪ್ರತಿ ಸೈನಿಕನಿಗೆ ಡ್ರೋನ್ ಒದಗಿಸಲು ಸೇನಾ ಮುಖ್ಯಸ್ಥರು
ಪ್ರತಿಯೊಬ್ಬ ಸೈನಿಕ ಡ್ರೋನ್ ಹಾರಿಸಲು ಸಿದ್ದವಾಗಬೇಕು - ಪ್ರತಿ ಸೈನಿಕನಿಗೆ ಡ್ರೋನ್ ಒದಗಿಸಲು ಸೇನಾ ಮುಖ್ಯಸ್ಥರು
ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳಿಗೆ ಶಿಕ್ಷೆ ವಿಧಿಸಿದ ಬೆಂಗಳೂರು ನ್ಯಾಯಾಲಯ
ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳಿಗೆ ಶಿಕ್ಷೆ ವಿಧಿಸಿದ ಬೆಂಗಳೂರು ನ್ಯಾಯಾಲಯ

ನ್ಯೂಸ್ MORE NEWS...