Sun,Jul26,2026
ಕನ್ನಡ / English

ಅಂತರ್ಜಾತಿ ವಿವಾಹ ಆಗಿದ್ದಕ್ಕೆ ಬಹಿಷ್ಕಾರ ಪ್ರಕರಣ: 12 ಮಂದಿ ಬಂಧನ | JANATA NEWS

10 Mar 2023

ಚಾಮರಾಜನಗರ : ಅಂತರ್ಜಾತಿ ವಿವಾಹ ಆಗಿದ್ದಕ್ಕೆ ಗ್ರಾಮದ ಮುಖಂಡರು ಅಮಾನವೀಯವಾಗಿ ನಡೆದುಕೊಂಡು ದಂಪತಿಗೆ ಬಹಿಷ್ಕಾರ ಹಾಕಿದ್ದ ಘಟನೆಗೆ ಸಂಬಂದಿಸಿದಂತೆ 12 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕೊಳ್ಳೇಗಾಲ ತಾಲೂಕಿನ ಕುಣಗಳ್ಳಿ ಗ್ರಾಮದಲ್ಲಿ ಇತ್ತೀಚೆಗೆ ಈ ಘಟನೆ ನಡೆದಿದೆ. ಈ ಸಂಬಂಧ ಪೊಲೀಸರು ಈ ಹಿಂದೆ ನಾಲ್ವರನ್ನು ಬಂಧಿಸಿದ್ದರು ಮತ್ತು ಎಂಟು ಆರೋಪಿಗಳು ಶುಕ್ರವಾರ ಪೊಲೀಸರ ಮುಂದೆ ಶರಣಾಗಿದ್ದಾರೆ.

ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಕುಣಗಳ್ಳಿಯಲ್ಲಿ ಪ್ರೇಮಿಗಳಿಬ್ಬರು ಅಂತರ್ ಜಾತಿ ವಿವಾಹ ಆಗಿದ್ದಕ್ಕೆ ಗ್ರಾಮದ ಯಜಮಾನರು 3 ಲಕ್ಷ ದಂಡ ಹಾಕಿ ಗ್ರಾಮದಿಂದ ಹೊರ ಉಳಿಯುವಂತೆ ಬಹಿಷ್ಕಾರ ಹಾಕಿದ್ದಾರೆ ಎಂದು ಕೊಳ್ಳೇಗಾಲ ಡಿ.ವೈ.ಎಸ್.ಪಿ ಕಚೇರಿಗೆ ಗೋವಿಂದರಾಜು ಹಾಗೂ ಶ್ವೇತಾ ದೂರು ಕೊಟ್ಟು ಅಳಲು ತೋಡಿಕೊಂಡಿದ್ದರು.

ಗೋವಿಂದರಾಜು ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಹೂವಿನ ಕೊಪ್ಪಲು ಗ್ರಾಮದ ದಲಿತ ಜನಾಂಗಕ್ಕೆ ಸೇರಿದ ಪ್ರಕಾಶ್ ಎಂಬುವರ ಮಗಳಾದ ಶ್ವೇತಾ ಜೊತೆ ಪರಸ್ಪರ ಪ್ರೀತಿಸಿ ಮನೆಯವರ ಸಮ್ಮುಖದಲ್ಲಿ 5 ವರ್ಷಗಳ ಹಿಂದೆ ಮಳವಳ್ಳಿಯ ಸಬ್ ರಿಜಿಸ್ಟರ್ ಕಚೇರಿಯಲ್ಲಿ ವಿವಾಹ ನೊಂದಣಿ ಮಾಡಿಸಿಕೊಂಡಿದ್ದರು.

ಗೋವಿಂದರಾಜು ಮಳವಳ್ಳಿಯಲ್ಲಿ ಮನೆ ಮಾಡಿಕೊಂಡು ಕೆಲಸ ನಿರ್ವಹಿಸುತ್ತಿದ್ದರು. ಆಗಾಗ ಗೋವಿಂದರಾಜು ಹಾಗೂ ಶ್ವೇತ ಕುಣಗಳ್ಳಿ ಗ್ರಾಮಕ್ಕೆ ಬಂದು ಹೋಗುತ್ತಿದ್ದು ಐದು ವರ್ಷದಿಂದ ಒಟ್ಟಿಗೆ ಜೀವನ ನಡೆಸುತ್ತಿದ್ದಾರೆ. ಗೋವಿಂದರಾಜು ಅವರ ಮನೆಯಲ್ಲಿ ಅಂತರ್ ಜಾತಿ ವಿವಾಹ ತಿಳಿದಿದ್ದರೂ ಸಹ ಮನೆಯವರು ಯಾರು ಸಹ ತೊಂದರೆ ನೀಡಲಿಲ್ಲ. ತಿಂಗಳಿಗೆ 2 ರಿಂದ 3 ಬಾರಿ ಗ್ರಾಮಕ್ಕೆ ಬಂದು ಹೋಗುತ್ತಿದ್ದರು.

ಆದರೆ ಗೋವಿಂದರಾಜು ಅವರ ಅಕ್ಕಪಕ್ಕದ ನಿವಾಸಿಗಳು ಅಂತರ್ ಜಾತಿ ವಿವಾಹದ ಬಗ್ಗೆ ಮಾಹಿತಿಯನ್ನು ಪಡೆದು ಶ್ವೇತಾ ನಮ್ಮ ಜಾತಿಯವಳಲ್ಲ, ಅವಳು ದಲಿತ ಜನಾಂಗಕ್ಕೆ ಸೇರಿದವಳು ಎಂದು ಪಕ್ಕದ ಮನೆಯವರಾದ ಜಯಲಕ್ಷ್ಮಿ, ಮಧು, ರಂಗಸ್ವಾಮಿ, ಕುಳ್ಳ, ಮಹದೇವಪ್ಪ ಮಹದೇವ ಶೆಟ್ಟಿ ಇವರುಗಳು ಗ್ರಾಮದ ಯಜಮಾನರುಗಳಿಗೆ ಮಾಹಿತಿ ನೀಡಿ ಎರಡರಿಂದ ಮೂರು ಬಾರಿ ಪಂಚಾಯಿತಿ ನಡೆಸಿ ದಂಡ ಕಟ್ಟಬೇಕು ಎಂದು ಸೂಚಿಸಿದ್ದರು.

ದಂಪತಿ ಡಿವೈಎಸ್ಪಿ ಕಚೇರಿಗೆ ದೂರು ನೀಡಿದ್ದಾರೆ. ಆದರೆ, ದೂರಿನ ವಿಷಯ ತಿಳಿದ ಹಿರಿಯರು ದಂಡದ ಮೊತ್ತವನ್ನು 6 ಲಕ್ಷಕ್ಕೆ ಹೆಚ್ಚಿಸಿ ಗ್ರಾಮದಲ್ಲಿ ಗೋವಿಂದರಾಜು ಕುಟುಂಬಕ್ಕೆ ಬಹಿಷ್ಕಾರ ಹಾಕಿದ್ದಾರೆ. ಗ್ರಾಮಸ್ಥರು ಕುಟುಂಬವನ್ನು ಗ್ರಾಮದಿಂದ ಹೊರಗೆ ಕಳುಹಿಸಿ, ಗ್ರಾಮದಿಂದ ಪಡಿತರ, ತರಕಾರಿ, ಹಾಲು ಖರೀದಿಸಬಾರದು ಮತ್ತು ನೀರು ತೆಗೆದುಕೊಳ್ಳಬಾರದು ಎಂದು ಆದೇಶಿಸಿದ್ದಾರೆ ಮತ್ತು ಅವರ ಈ ಆದೇಶವನ್ನು ಉಲ್ಲಂಘಿಸಿದರೆ ದಂಪತಿಯನ್ನು ಜೀವಂತ ಸುಟ್ಟು ಹಾಕುವುದಾಗಿ ಬೆದರಿಕೆ ಹಾಕಿದ್ದಾರೆ.

ಈ ಸಂಬಂಧ ಕೊಳ್ಳೇಗಾಲ ಡಿವೈಎಸ್ಪಿ ದೂರು ಪಡೆದು ಮಾಂಬಳ್ಳಿ ಪೊಲೀಸರಿಗೆ ಎಸ್ಸಿಎಸ್ಟಿ ದೌರ್ಜನ್ಯದಡಿ ಪ್ರಕರಣ ದಾಖಲಿಸುವಂತೆ ಸೂಚಿಸಿ ತನಿಖೆ ಕೈಗೊಂಡಿದ್ದರು. ಅದರಂತೆ, ಈಗ 12 ಮಂದಿ ಬಂಧನವಾಗಿದೆ.

RELATED TOPICS:
English summary :Excommunication case for inter-caste marriage: 12 arrested

ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ  ರಿಜಿಜು ಮನವಿ
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ ರಿಜಿಜು ಮನವಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ

ನ್ಯೂಸ್ MORE NEWS...