Sun,Jul26,2026
ಕನ್ನಡ / English

ಕಾಂಗ್ರೆಸ್ ನವರಿಗೆ ನನ್ನ ಸಮಾಧಿ ಚಿಂತೆ, ನನಗೆ ಅಭಿವೃದ್ಧಿ ಚಿಂತೆ | JANATA NEWS

12 Mar 2023

ಮಂಡ್ಯ : ಇಂದು ಪ್ರಧಾನಿ ಮೋದಿ ಜಿಲ್ಲೆಗೆ ಭೇಟಿ ನೀಡಿದ್ದು, ಬೆಂಗಳೂರು - ಮೈಸೂರು ದಶಪಥ ರಸ್ತೆಯನ್ನು ಉದ್ಘಾಟನೆ ಮಾಡಿದ್ದಾರೆ. ಅದಕ್ಕೂ ಮೊದಲು ಜೆಡಿಎಸ್​ ಭದ್ರಕೋಟೆಯಲ್ಲಿ ನಮೋ ಭರ್ಜರಿ ರೋಡ್​ ಶೋ ನಡೆಸಿದರು. ಈ ವೇಳೆ ಮಂಡ್ಯ ಜನ ಪ್ರಧಾನಿ ಮೇಲೆ ಕೇಸರಿ ಹೂ ಮಳೆಯನ್ನೇ ಸುರಿಸಿದರು.

janata



ಈ ವೇಳೆ ಜನರನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಪ್ರತಿ ಬಾರಿಯೂ ಕರ್ನಾಟಕಕ್ಕೆ ಬಂದಾಗ ಅಭೂತಪೂರ್ವ ಸ್ವಾಗತ ಸಿಕ್ಕಿದೆ. ಸಕ್ಕರೆ ನಗರ ಮಂಡ್ಯ ಜನ ತೋರಿಸಿದ ಪ್ರೀತಿಗೆ ವಂದನೆ. ಸಕ್ಕರೆ ನಗರದ ಪ್ರೀತಿಗೆ ಶಿರಬಾಗಿ ನಮಿಸುತ್ತೇನೆ. ತಾಯಿ ಭುವನೇಶ್ವರಿಗೆ ನನ್ನ ನಮನಗಳು, ಆದಿ ಚುಂಚನಗಿರಿ, ಮೇಲುಕೋಟೆಯ ಗುರುಗಳಿಗೂ ನಮನಗಳು, ಸಕ್ಕರೆ ನಗರ ಮಂಡ್ಯ, ಮಧುರ ಮಂಡ್ಯ ಎಂದು ಕನ್ನಡದಲ್ಲಿ ಭಾಷಣ ಆರಂಭಿಸಿದ ಪ್ರಧಾನಿ ಮೋದಿ, ಕಳೆದ ಕೆಲವು ದಿನಗಳಿಂದ ಕರ್ನಾಟಕ ಜನತಾ ಜನಾರ್ದನರ ಭೇಟಿಯ ಅವಕಾಶ ಸಿಗುತ್ತಿದೆ. ಇಲ್ಲಿ ನನಗೆ ಅಭೂತಪೂರ್ವ ಸ್ವಾಗತ ಸಿಗುತ್ತಿದೆ. ನೀವು ನಮಗೆ ನೀಡಿದ ಪ್ರೀತಿಯನ್ನು ಬಡ್ಡಿ ಸಮೇತ ವಾಪಸ್​ ಮಾಡುತ್ತೇವೆ ಎಂದು ಭರವಸೆ ನೀಡಿದರು.

janata



ಈ ಹೆದ್ದಾರಿ ಉದ್ಘಾಟನೆಯು ಪರಿಶ್ರಮದ ಭಾಗವಾಗಿದೆ. ಮೈಸೂರು-ಬೆಂಗಳೂರು ನಡುವೆ ಅರ್ಧಕ್ಕಿಂತಹ ಪ್ರಯಾಣ ಅವಧಿ ಕಡಿಮೆಯಾಗಿದೆ. ಮೈಸೂರು-ಕುಶಾಲನಗರ ನಡುವೆಯೂ ಹೆದ್ದಾರಿ ಅಭಿವೃದ್ಧಿ ಆಗಲಿದೆ. ಇದರ ಮೂಲಕ ಸಮೃದ್ಧಿಯ ರಸ್ತೆಯು ತೆರೆದುಕೊಳ್ಳಲಿದೆ. ದೇಶದಲ್ಲಿ ಮೂಲಸೌಕರ್ಯ ಬಗ್ಗೆ ಚರ್ಚೆಯಾದಾಗಲೆಲ್ಲ ಸರ್​. ಎಂ. ವಿಶ್ವೇಶ್ವರಯ್ಯ ಮತ್ತು ನಾಲ್ವಡಿ ಕೃಷ್ಣರಾಜ ಒಡೆಯರ್​ ಹೆಸರು ಪ್ರಸ್ತುತ. ಅವರ ಮುಂದಾಲೋಚನೆಯ ಫಲ ಈಗ ಇಲ್ಲಿ ಕಾಣುತ್ತಿದೆ ಎಂದರು. 2014ಕ್ಕೂ ಮೊದಲಿದ್ದ ಕಾಂಗ್ರೆಸ್ ಸರ್ಕಾರ ಬಡವರನ್ನು ಲೂಟಿ ಮಾಡಿದೆ. ಕಾಂಗ್ರೆಸ್ ನಾಯಕರು ನರೇಂದ್ರ ಮೋದಿಯವರನ್ನು ಸಮಾಧಿ ಮಾಡುವ ಕನಸು ಕಾಣುತ್ತಿದ್ದಾರೆ ಎಂದು ಕಾಂಗ್ರೆಸ್ ಮೇಲೆ ಹರಿಹಾಯ್ದಿದ್ದಾರೆ.

ಬಡವರನ್ನು ಲೂಟಿ ಮಾಡುವ ಸರ್ಕಾರವಿತ್ತು. ಅದನ್ನು ಕಿತ್ತೊಗೆಯಲಾಗಿದೆ. ಅಭಿವೃದ್ಧಿಗಾಗಿ ಮತ್ತೆ ಡಬ್ಬಲ್ ಎಂಜಿನ್ ಸರ್ಕಾರವನ್ನೇ ಗೆಲ್ಲಿಸಿ. ಕಾಂಗ್ರೆಸ್ ನವರು ಸಮಾಧಿ ತೆಗೆಯುವ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಆದ್ರೆ ನಾನು ಬೆಂಗಳೂರು - ಮೈಸೂರು ಹೆದ್ದಾರಿಯ ಕೆಲಸದಲ್ಲಿ ಬ್ಯುಸಿಯಾಗಿದ್ದೇನೆ. ಕಾಂಗ್ರೆಸ್ ನವರಿಗೆ ನನ್ನ ಸಮಾಧಿ ಚಿಂತೆ, ನನಗೆ ಅಭಿವೃದ್ಧಿ ಚಿಂತೆ ಎಂದಿದ್ದಾರೆ.

ಡಬಲ್ ಎಂಜಿನ್ ಸರ್ಕಾರದ ಅಭಿವೃದ್ಧಿಗೆ ಈ ರಸ್ತೆಯೂ ಸಾಕ್ಷಿಯಾಗಿದೆ. ನಿಮ್ಮ ಪ್ರೀತಿಯ ಋಣವನ್ನು ಅಭಿವೃದ್ಧಿ ಮೂಲಕ ಬಡ್ಡಿ ಸಮೇತ ತೀರಿಸುತ್ತೇನೆ. ಸಾಮಾಜಿಕ ಜಾಲತಾಣದಲ್ಲಿ ಈ ಹೈವೇ ಬಗ್ಗೆ ಬಹಳ ಚರ್ಚೆಯಾಗುತ್ತಿದೆ. ಈ ಹೈವೆ ಬಗ್ಗೆ ಬಹಳ ಮೆಚ್ಚುಗೆ ಬರುತ್ತಿದೆ. ದೇಶದ ಎಲ್ಲಾ ಕಡೆ ಈ ರೀತಿ ಹೈವೆ ಮಾಡಿ ಎಂದು ಜನರು ಕೇಳುತ್ತಿದ್ದಾರೆ. ಈ ರಸ್ತೆ ನೋಡಿದ ಯುವಕರ ಮನದಲ್ಲಿ ಹೆಮ್ಮೆ, ಗರ್ವ ಮೂಡಿದೆ ಎಂದು ನುಡಿದರು.

janata

RELATED TOPICS:
English summary :Congress is worried about my grave, I am worried about development

ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ  ರಿಜಿಜು ಮನವಿ
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ ರಿಜಿಜು ಮನವಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ

ನ್ಯೂಸ್ MORE NEWS...