Wed,Apr15,2026
ಕನ್ನಡ / English

ಕಾಂಗ್ರೆಸ್ ನವರಿಗೆ ನನ್ನ ಸಮಾಧಿ ಚಿಂತೆ, ನನಗೆ ಅಭಿವೃದ್ಧಿ ಚಿಂತೆ | JANATA NEWS

12 Mar 2023

ಮಂಡ್ಯ : ಇಂದು ಪ್ರಧಾನಿ ಮೋದಿ ಜಿಲ್ಲೆಗೆ ಭೇಟಿ ನೀಡಿದ್ದು, ಬೆಂಗಳೂರು - ಮೈಸೂರು ದಶಪಥ ರಸ್ತೆಯನ್ನು ಉದ್ಘಾಟನೆ ಮಾಡಿದ್ದಾರೆ. ಅದಕ್ಕೂ ಮೊದಲು ಜೆಡಿಎಸ್​ ಭದ್ರಕೋಟೆಯಲ್ಲಿ ನಮೋ ಭರ್ಜರಿ ರೋಡ್​ ಶೋ ನಡೆಸಿದರು. ಈ ವೇಳೆ ಮಂಡ್ಯ ಜನ ಪ್ರಧಾನಿ ಮೇಲೆ ಕೇಸರಿ ಹೂ ಮಳೆಯನ್ನೇ ಸುರಿಸಿದರು.

janata



ಈ ವೇಳೆ ಜನರನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಪ್ರತಿ ಬಾರಿಯೂ ಕರ್ನಾಟಕಕ್ಕೆ ಬಂದಾಗ ಅಭೂತಪೂರ್ವ ಸ್ವಾಗತ ಸಿಕ್ಕಿದೆ. ಸಕ್ಕರೆ ನಗರ ಮಂಡ್ಯ ಜನ ತೋರಿಸಿದ ಪ್ರೀತಿಗೆ ವಂದನೆ. ಸಕ್ಕರೆ ನಗರದ ಪ್ರೀತಿಗೆ ಶಿರಬಾಗಿ ನಮಿಸುತ್ತೇನೆ. ತಾಯಿ ಭುವನೇಶ್ವರಿಗೆ ನನ್ನ ನಮನಗಳು, ಆದಿ ಚುಂಚನಗಿರಿ, ಮೇಲುಕೋಟೆಯ ಗುರುಗಳಿಗೂ ನಮನಗಳು, ಸಕ್ಕರೆ ನಗರ ಮಂಡ್ಯ, ಮಧುರ ಮಂಡ್ಯ ಎಂದು ಕನ್ನಡದಲ್ಲಿ ಭಾಷಣ ಆರಂಭಿಸಿದ ಪ್ರಧಾನಿ ಮೋದಿ, ಕಳೆದ ಕೆಲವು ದಿನಗಳಿಂದ ಕರ್ನಾಟಕ ಜನತಾ ಜನಾರ್ದನರ ಭೇಟಿಯ ಅವಕಾಶ ಸಿಗುತ್ತಿದೆ. ಇಲ್ಲಿ ನನಗೆ ಅಭೂತಪೂರ್ವ ಸ್ವಾಗತ ಸಿಗುತ್ತಿದೆ. ನೀವು ನಮಗೆ ನೀಡಿದ ಪ್ರೀತಿಯನ್ನು ಬಡ್ಡಿ ಸಮೇತ ವಾಪಸ್​ ಮಾಡುತ್ತೇವೆ ಎಂದು ಭರವಸೆ ನೀಡಿದರು.

janata



ಈ ಹೆದ್ದಾರಿ ಉದ್ಘಾಟನೆಯು ಪರಿಶ್ರಮದ ಭಾಗವಾಗಿದೆ. ಮೈಸೂರು-ಬೆಂಗಳೂರು ನಡುವೆ ಅರ್ಧಕ್ಕಿಂತಹ ಪ್ರಯಾಣ ಅವಧಿ ಕಡಿಮೆಯಾಗಿದೆ. ಮೈಸೂರು-ಕುಶಾಲನಗರ ನಡುವೆಯೂ ಹೆದ್ದಾರಿ ಅಭಿವೃದ್ಧಿ ಆಗಲಿದೆ. ಇದರ ಮೂಲಕ ಸಮೃದ್ಧಿಯ ರಸ್ತೆಯು ತೆರೆದುಕೊಳ್ಳಲಿದೆ. ದೇಶದಲ್ಲಿ ಮೂಲಸೌಕರ್ಯ ಬಗ್ಗೆ ಚರ್ಚೆಯಾದಾಗಲೆಲ್ಲ ಸರ್​. ಎಂ. ವಿಶ್ವೇಶ್ವರಯ್ಯ ಮತ್ತು ನಾಲ್ವಡಿ ಕೃಷ್ಣರಾಜ ಒಡೆಯರ್​ ಹೆಸರು ಪ್ರಸ್ತುತ. ಅವರ ಮುಂದಾಲೋಚನೆಯ ಫಲ ಈಗ ಇಲ್ಲಿ ಕಾಣುತ್ತಿದೆ ಎಂದರು. 2014ಕ್ಕೂ ಮೊದಲಿದ್ದ ಕಾಂಗ್ರೆಸ್ ಸರ್ಕಾರ ಬಡವರನ್ನು ಲೂಟಿ ಮಾಡಿದೆ. ಕಾಂಗ್ರೆಸ್ ನಾಯಕರು ನರೇಂದ್ರ ಮೋದಿಯವರನ್ನು ಸಮಾಧಿ ಮಾಡುವ ಕನಸು ಕಾಣುತ್ತಿದ್ದಾರೆ ಎಂದು ಕಾಂಗ್ರೆಸ್ ಮೇಲೆ ಹರಿಹಾಯ್ದಿದ್ದಾರೆ.

ಬಡವರನ್ನು ಲೂಟಿ ಮಾಡುವ ಸರ್ಕಾರವಿತ್ತು. ಅದನ್ನು ಕಿತ್ತೊಗೆಯಲಾಗಿದೆ. ಅಭಿವೃದ್ಧಿಗಾಗಿ ಮತ್ತೆ ಡಬ್ಬಲ್ ಎಂಜಿನ್ ಸರ್ಕಾರವನ್ನೇ ಗೆಲ್ಲಿಸಿ. ಕಾಂಗ್ರೆಸ್ ನವರು ಸಮಾಧಿ ತೆಗೆಯುವ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಆದ್ರೆ ನಾನು ಬೆಂಗಳೂರು - ಮೈಸೂರು ಹೆದ್ದಾರಿಯ ಕೆಲಸದಲ್ಲಿ ಬ್ಯುಸಿಯಾಗಿದ್ದೇನೆ. ಕಾಂಗ್ರೆಸ್ ನವರಿಗೆ ನನ್ನ ಸಮಾಧಿ ಚಿಂತೆ, ನನಗೆ ಅಭಿವೃದ್ಧಿ ಚಿಂತೆ ಎಂದಿದ್ದಾರೆ.

ಡಬಲ್ ಎಂಜಿನ್ ಸರ್ಕಾರದ ಅಭಿವೃದ್ಧಿಗೆ ಈ ರಸ್ತೆಯೂ ಸಾಕ್ಷಿಯಾಗಿದೆ. ನಿಮ್ಮ ಪ್ರೀತಿಯ ಋಣವನ್ನು ಅಭಿವೃದ್ಧಿ ಮೂಲಕ ಬಡ್ಡಿ ಸಮೇತ ತೀರಿಸುತ್ತೇನೆ. ಸಾಮಾಜಿಕ ಜಾಲತಾಣದಲ್ಲಿ ಈ ಹೈವೇ ಬಗ್ಗೆ ಬಹಳ ಚರ್ಚೆಯಾಗುತ್ತಿದೆ. ಈ ಹೈವೆ ಬಗ್ಗೆ ಬಹಳ ಮೆಚ್ಚುಗೆ ಬರುತ್ತಿದೆ. ದೇಶದ ಎಲ್ಲಾ ಕಡೆ ಈ ರೀತಿ ಹೈವೆ ಮಾಡಿ ಎಂದು ಜನರು ಕೇಳುತ್ತಿದ್ದಾರೆ. ಈ ರಸ್ತೆ ನೋಡಿದ ಯುವಕರ ಮನದಲ್ಲಿ ಹೆಮ್ಮೆ, ಗರ್ವ ಮೂಡಿದೆ ಎಂದು ನುಡಿದರು.

janata

RELATED TOPICS:
English summary :Congress is worried about my grave, I am worried about development

ಪ್ರಧಾನಿ ಮೋದಿ ಗೆ ದೂರವಾಣಿ ಕರೆ ಮಾಡಿ 40 ನಿಮಿಷ ಮಾತನಾಡಿದ ಅಧ್ಯಕ್ಷ ಟ್ರಂಪ್
ಪ್ರಧಾನಿ ಮೋದಿ ಗೆ ದೂರವಾಣಿ ಕರೆ ಮಾಡಿ 40 ನಿಮಿಷ ಮಾತನಾಡಿದ ಅಧ್ಯಕ್ಷ ಟ್ರಂಪ್
ಹೆಬ್ಬಾಳದಲ್ಲಿ 55 ಎಕರೆ ಭೂಮಿ ಖಾಸಗಿ ಸಂಸ್ಥೆಗೆ ವರ್ಗಾವಣೆ ರದ್ದುಗೊಳಿಸಿದ ಹೈಕೋರ್ಟ್ : ಸಿಬಿಐ ತನಿಖೆಗೆ ಆದೇಶ
ಹೆಬ್ಬಾಳದಲ್ಲಿ 55 ಎಕರೆ ಭೂಮಿ ಖಾಸಗಿ ಸಂಸ್ಥೆಗೆ ವರ್ಗಾವಣೆ ರದ್ದುಗೊಳಿಸಿದ ಹೈಕೋರ್ಟ್ : ಸಿಬಿಐ ತನಿಖೆಗೆ ಆದೇಶ
ಟಿಸಿಎಸ್ ನಲ್ಲಿ ಪಿಓಎಸ್ಎಚ್(ಪೊಶ್) ಆಡಿಟ್ ಕೋರಿದ ಎನ್ಐಟಿಇಎಸ್ : ಐಟಿ ವಲಯದಾದ್ಯಂತ ವ್ಯಾಪಕ ತನಿಖೆಗೆ ಒತ್ತಾಯ
ಟಿಸಿಎಸ್ ನಲ್ಲಿ ಪಿಓಎಸ್ಎಚ್(ಪೊಶ್) ಆಡಿಟ್ ಕೋರಿದ ಎನ್ಐಟಿಇಎಸ್ : ಐಟಿ ವಲಯದಾದ್ಯಂತ ವ್ಯಾಪಕ ತನಿಖೆಗೆ ಒತ್ತಾಯ
 ಟಿಸಿಎಸ್ ನಾಸಿಕ್ ಪ್ರಕರಣ: ಕಾರ್ಯಾಚರಣೆ ಮುಖ್ಯಸ್ಥ ಕಸ್ಟಡಿಗೆ ; ಟಾಟಾ ಇಂದ ಆಂತರಿಕ ತನಿಖೆ ವಿಸ್ತರಣೆ
ಟಿಸಿಎಸ್ ನಾಸಿಕ್ ಪ್ರಕರಣ: ಕಾರ್ಯಾಚರಣೆ ಮುಖ್ಯಸ್ಥ ಕಸ್ಟಡಿಗೆ ; ಟಾಟಾ ಇಂದ ಆಂತರಿಕ ತನಿಖೆ ವಿಸ್ತರಣೆ
ಜನರ ಹೆಸರುಗಳನ್ನು ಅಂತಿಮ ತೀರ್ಪಿನ ನಂತರ ಸೇರಿಸಿದರೆ... ಮತ ಚಲಾಯಿಸಲು ಅವಕಾಶ - ಸುಪ್ರೀಂ
ಜನರ ಹೆಸರುಗಳನ್ನು ಅಂತಿಮ ತೀರ್ಪಿನ ನಂತರ ಸೇರಿಸಿದರೆ... ಮತ ಚಲಾಯಿಸಲು ಅವಕಾಶ - ಸುಪ್ರೀಂ
ಹಿರಿಯ ಗಾಯಕಿ ಆಶಾ ಬೋಸ್ಲೆ ನಿಧನ : ಪ್ರಧಾನಿ ಮೋದಿ ಸಂತಾಪ
ಹಿರಿಯ ಗಾಯಕಿ ಆಶಾ ಬೋಸ್ಲೆ ನಿಧನ : ಪ್ರಧಾನಿ ಮೋದಿ ಸಂತಾಪ
 ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ವಂದೇ ಭಾರತ್ ಸ್ಲೀಪರ್ ರೈಲು ಸೇವೆಗೆ ಅನುಮೋದನೆ
ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ವಂದೇ ಭಾರತ್ ಸ್ಲೀಪರ್ ರೈಲು ಸೇವೆಗೆ ಅನುಮೋದನೆ
ನಾಸಿಕ್ ಟಿಸಿಎಸ್ ಪ್ರಕರಣ: ಮತಾಂತರ, ಮೂಲಭೂತೀಕರಣ ಆರೋಪಗಳ ಮೇಲೆ ತನಿಖೆ ಆರಂಭ
ನಾಸಿಕ್ ಟಿಸಿಎಸ್ ಪ್ರಕರಣ: ಮತಾಂತರ, ಮೂಲಭೂತೀಕರಣ ಆರೋಪಗಳ ಮೇಲೆ ತನಿಖೆ ಆರಂಭ
ದೋಷಾರೋಪಣೆ ಪ್ರಕ್ರಿಯೆ ಆರಂಭವಾದ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ
ದೋಷಾರೋಪಣೆ ಪ್ರಕ್ರಿಯೆ ಆರಂಭವಾದ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ
2008ರ ಮಾಲೆಗಾಂವ್ ಸ್ಫೋಟ ಪ್ರಕರಣ: ಕರ್ನಲ್ ಪುರೋಹಿತ್‌ಗೆ ಬ್ರಿಗೇಡಿಯರ್ ಬಡ್ತಿಗೆ ಅನುಮತಿ
2008ರ ಮಾಲೆಗಾಂವ್ ಸ್ಫೋಟ ಪ್ರಕರಣ: ಕರ್ನಲ್ ಪುರೋಹಿತ್‌ಗೆ ಬ್ರಿಗೇಡಿಯರ್ ಬಡ್ತಿಗೆ ಅನುಮತಿ
ಪ್ರತಿಯೊಬ್ಬ ಸೈನಿಕ ಡ್ರೋನ್ ಹಾರಿಸಲು ಸಿದ್ದವಾಗಬೇಕು - ಪ್ರತಿ ಸೈನಿಕನಿಗೆ ಡ್ರೋನ್ ಒದಗಿಸಲು ಸೇನಾ ಮುಖ್ಯಸ್ಥರು
ಪ್ರತಿಯೊಬ್ಬ ಸೈನಿಕ ಡ್ರೋನ್ ಹಾರಿಸಲು ಸಿದ್ದವಾಗಬೇಕು - ಪ್ರತಿ ಸೈನಿಕನಿಗೆ ಡ್ರೋನ್ ಒದಗಿಸಲು ಸೇನಾ ಮುಖ್ಯಸ್ಥರು
ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳಿಗೆ ಶಿಕ್ಷೆ ವಿಧಿಸಿದ ಬೆಂಗಳೂರು ನ್ಯಾಯಾಲಯ
ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳಿಗೆ ಶಿಕ್ಷೆ ವಿಧಿಸಿದ ಬೆಂಗಳೂರು ನ್ಯಾಯಾಲಯ

ನ್ಯೂಸ್ MORE NEWS...