Wed,Feb04,2026
ಕನ್ನಡ / English

ಜಿ. ಪರಮೇಶ್ವರ್​ ಮೇಲೆ ಕಲ್ಲೆಸೆತ ಪ್ರಕರಣ, ಹೂವುಗಳಲ್ಲಿ ಯಾರೋ ದುಷ್ಕರ್ಮಿಗಳು ಕಲ್ಲು ಹಾಕಿದ್ರು! | JANATA NEWS

29 Apr 2023

ತುಮಕೂರು : ಜಿ. ಪರಮೇಶ್ವರ್​ ಮೇಲೆ ಕೊರಟಗೆರೆ ಕ್ಷೇತ್ರದಲ್ಲಿ ಕಲ್ಲು ತೂರಾಟ ನಡೆದ ಪ್ರಕರಣ ಕುರಿತಂತೆ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ನಮ್ಮ ಕಾರ್ಯಕರ್ತರು ಬೇಡ ಎಂದರು ಮೇಲಕ್ಕೆತ್ತಿದ್ದರು, ಜೆಸಿಬಿ ಮೂಲಕ ಹೂ ಹಾಕಲು ರೆಡಿಮಾಡಿಕೊಂಡಿದ್ದರು. ಕೂಡಲೇ ತಲೆಗೆ ಏನೋ ಬಡಿದಂತಾಯಿತು. ತಲೆಗೆ ಕಲ್ಲು ಬೀಳುತ್ತಿದ್ದಂತೆ ಜೋರಾಗಿ ಕೂಗಿದೆ. ಕೂಡಲೇ ನಮ್ಮ ಆಸ್ಪತ್ರೆಯ ವೈದ್ಯರು ಚಿಕಿತ್ಸೆ ನೀಡಿದರು ಎಂದರು.

ಜಿ. ಪರಮೇಶ್ವರ್​ ಅವರು ಗೆಲ್ಲುವುದು ಖಚಿತ, ಹೀಗಾಗಿ ಕಲ್ಲು ಎಸೆತದಲ್ಲಿ ವಿರೋಧಿಗಳ ಕೈವಾಡ ಇದೆ ಎಂದು ಪರಮೇಶ್ವರ್​ ಆಪ್ತರು ಆರೋಪ ಮಾಡಿದ್ದಾರೆ. ಅವರಿಗೆ ಒಂದಲ್ಲ ಎರಡು ಬಾರಿ ಕಲ್ಲು ಎಸೆತವಾಗಿದೆ. ಮೊದಲ ಬಾರಿ ನಡೆದ ದಾಳಿಯಲ್ಲಿ ಅದೃಷ್ಟವಶಾತ್ ಪರಮೇಶ್ವರ್​ ಪಾರಾಗಿದ್ದರು. ಎರಡನೇ ಬಾರಿ ನಡೆದ ದಾಳಿಯಲ್ಲಿ‌ ಪರಮೇಶ್ವರ್​ಗೆ ಕಲ್ಲೇಟು ಬಿದ್ದಿದೆ ಆರೋಪಿಸಿದ್ದಾರೆ.

ಜಿ. ಪರಮೇಶ್ವರ್ ತಗುಲಿದ ಕಲ್ಲಿನ ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಹೂ ಚೆಲ್ಲಲು ತಂದಿದ್ದ ಜೆಸಿಬಿಯಲ್ಲೇ ಬಂತಾ ಕಲ್ಲು? ಇಲ್ಲ ವಿರೋಧಿಗಳು ಏನಾದ್ರು ಹೂ ಹಾಕುವುದನ್ನೇ ಕಾದು ಪರಂ ಕಡೆಗೆ ಕಲ್ಲು ಬಿಸಿದ್ರಾ? ಎಂಬ ಎರಡು ಆಯಾಮದಲ್ಲಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಜಿ. ಪರಮೇಶ್ವರ್ ಮಾತನಾಡಿ ಹೂವುಗಳಲ್ಲಿ ದುಷ್ಕರ್ಮಿಗಳು ಕಲ್ಲು ಹಾಕಿದ್ದರು ಎಂದನಿಸುತ್ತದೆ. ನನಗೆ ಶತ್ರುಗಳು ಕಡಿಮೆ ಇದೆ ಎಂದು ತಿಳಿದಿದ್ದೆ, ಈ ಬಗ್ಗೆ ತನಿಖೆ ಮಾಡಲು ಎಸ್ ಪಿ ಗೆ ಹೇಳಿದ್ದೇನೆ. 1999 ರಲ್ಲಿ ನನಗೆ ಚಾಕುವಿನಿಂದ ತಿವಿಯಲು ಮುಂದಾಗಿದ್ದರು. ಪದೇ ಪದೇ ಇಂತಹ ಘಟನೆ ಸಂಭವಿಸುತ್ತಿದೆ. ತಲೆಗೆ ಒಂದೂವರೆ ಇಂಚು ಗಾಯವಾಗಿದೆ, ವೈದ್ಯರ ಜೊತೆ ಚರ್ಚಿಸಿ ಚುನಾವಣಾ ಪ್ರಚಾರಕ್ಕೆ ಹೋಗುವ ಬಗ್ಗೆ ನಿರ್ಧರಿಸುತ್ತೇನೆ. ನಾನು ಯಾವುದಕ್ಕೂ ಹೆದರಲ್ಲ ಎಂದರು.

RELATED TOPICS:
English summary :The case of stone pelting on Parameshwar, someone stoned the flowers!

ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್, ಭಾರತೀಯ ಸರಕುಗಳ ಮೇಲಿನ ಸುಂಕ ಕಡಿತ ಘೋಷಣೆ
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್, ಭಾರತೀಯ ಸರಕುಗಳ ಮೇಲಿನ ಸುಂಕ ಕಡಿತ ಘೋಷಣೆ
ಸರ್ಕಾರಿ ಸಂಸ್ಥೆಗಳಿಗೆ ನೆಹರು-ಗಾಂಧಿ ಕುಟುಂಬದ ಹೆಸರಿಡುವ ವಿಚಾರವಾಗಿ ವಿಧಾನಸಭೆಯಲ್ಲಿ ಗದ್ದಲ
ಸರ್ಕಾರಿ ಸಂಸ್ಥೆಗಳಿಗೆ ನೆಹರು-ಗಾಂಧಿ ಕುಟುಂಬದ ಹೆಸರಿಡುವ ವಿಚಾರವಾಗಿ ವಿಧಾನಸಭೆಯಲ್ಲಿ ಗದ್ದಲ
ಭದ್ರತಾ ಪಡೆಗಳು ಕಾರ್ಯಾಚರಣೆ ಹೆಚ್ಚಿಸಿದ ನಂತರವೂ ಬಲೂಚಿಸ್ತಾನದಲ್ಲಿ ಪಾಕ್ ಸೇನೆಯ ಹಿನ್ನಡೆ ಮುಂದುವರೆದಿದೆ
ಭದ್ರತಾ ಪಡೆಗಳು ಕಾರ್ಯಾಚರಣೆ ಹೆಚ್ಚಿಸಿದ ನಂತರವೂ ಬಲೂಚಿಸ್ತಾನದಲ್ಲಿ ಪಾಕ್ ಸೇನೆಯ ಹಿನ್ನಡೆ ಮುಂದುವರೆದಿದೆ
 ಹಣಕ್ಕಾಗಿ ಭಿಕ್ಷೆ ಬೇಡಲು ನಮಗೆ ನಾಚಿಕೆಯಾಗುತ್ತಿದೆ - ಆರ್ಥಿಕ ಸಂಕಷ್ಟ ಒಪ್ಪಿಕೊಂಡ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್
ಹಣಕ್ಕಾಗಿ ಭಿಕ್ಷೆ ಬೇಡಲು ನಮಗೆ ನಾಚಿಕೆಯಾಗುತ್ತಿದೆ - ಆರ್ಥಿಕ ಸಂಕಷ್ಟ ಒಪ್ಪಿಕೊಂಡ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್
ಮೈಸೂರಿನಲ್ಲಿ ರಹಸ್ಯ ಡ್ರಗ್ಸ್ ಪ್ರಯೋಗಾಲಯ ಬಯಲು :ಪ್ರಮುಖ ಅಂತರರಾಜ್ಯ ಮಾದಕ ವಸ್ತುಗಳ ಸಿಂಡಿಕೇಟ್ ಮೇಲೆ ಎನ್‌ಸಿಬಿ ದಾಳಿ
ಮೈಸೂರಿನಲ್ಲಿ ರಹಸ್ಯ ಡ್ರಗ್ಸ್ ಪ್ರಯೋಗಾಲಯ ಬಯಲು :ಪ್ರಮುಖ ಅಂತರರಾಜ್ಯ ಮಾದಕ ವಸ್ತುಗಳ ಸಿಂಡಿಕೇಟ್ ಮೇಲೆ ಎನ್‌ಸಿಬಿ ದಾಳಿ
ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿಜೆ ರಾಯ್ ಶವವಾಗಿ ಪತ್ತೆಯಾಗಿದ್ದಾರೆ : ಆತ್ಮಹತ್ಯೆ ಶಂಕೆ
ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿಜೆ ರಾಯ್ ಶವವಾಗಿ ಪತ್ತೆಯಾಗಿದ್ದಾರೆ : ಆತ್ಮಹತ್ಯೆ ಶಂಕೆ
ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿಜೆ ರಾಯ್ ಶವವಾಗಿ ಪತ್ತೆಯಾಗಿದ್ದಾರೆ : ಆತ್ಮಹತ್ಯೆ ಶಂಕೆ
ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿಜೆ ರಾಯ್ ಶವವಾಗಿ ಪತ್ತೆಯಾಗಿದ್ದಾರೆ : ಆತ್ಮಹತ್ಯೆ ಶಂಕೆ
ಟಿಎಂಸಿ ಸರ್ಕಾರಕ್ಕೆ ಭಾರಿ ಹಿನ್ನಡೆ : ಗಡಿ ಭೂಮಿ ಬಿಎಸ್‌ಎಫ್‌ಗೆ ಹಸ್ತಾಂತರಿಸುವಂತೆ ಪ.ಬಂ.ಸರ್ಕಾರಕ್ಕೆ ಕಲ್ಕತ್ತಾ ಹೈಕೋರ್ಟ್ ಆದೇಶ
ಟಿಎಂಸಿ ಸರ್ಕಾರಕ್ಕೆ ಭಾರಿ ಹಿನ್ನಡೆ : ಗಡಿ ಭೂಮಿ ಬಿಎಸ್‌ಎಫ್‌ಗೆ ಹಸ್ತಾಂತರಿಸುವಂತೆ ಪ.ಬಂ.ಸರ್ಕಾರಕ್ಕೆ ಕಲ್ಕತ್ತಾ ಹೈಕೋರ್ಟ್ ಆದೇಶ
ಹೊಸ ಯುಜಿಸಿ ಸಮಾನತೆ ನಿಯಮಗಳಿಗೆ ಸುಪ್ರೀಂ ಕೋರ್ಟ್ ವಿರಾಮ: ಏನು ಮತ್ತು ಹೇಗೆ?
ಹೊಸ ಯುಜಿಸಿ ಸಮಾನತೆ ನಿಯಮಗಳಿಗೆ ಸುಪ್ರೀಂ ಕೋರ್ಟ್ ವಿರಾಮ: ಏನು ಮತ್ತು ಹೇಗೆ?
ಖಾಸಗಿ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ದೇಶಾದ್ಯಂತ ಶೋಕ
ಖಾಸಗಿ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ದೇಶಾದ್ಯಂತ ಶೋಕ
ರಾಜ್ಯದಲ್ಲಿ ಮತ್ತೊಂದು ಸ್ಲೀಪರ್ ನೈಟ್ ಬಸ್ ಬೆಂಕಿಗೆ ಆಹುತಿ
ರಾಜ್ಯದಲ್ಲಿ ಮತ್ತೊಂದು ಸ್ಲೀಪರ್ ನೈಟ್ ಬಸ್ ಬೆಂಕಿಗೆ ಆಹುತಿ
ಜಗತ್ತಿನ ಎಲ್ಲಾ ಒಪ್ಪಂದಗಳ ತಾಯಿ : ಭಾರತ-ಇಯು ವ್ಯಾಪಾರ ಒಪ್ಪಂದವು ಕಾರ್ಯತಂತ್ರದ ಸಹಭಾಗಿತ್ವದಲ್ಲಿ ಪ್ರಮುಖ ಹೆಜ್ಜೆ
ಜಗತ್ತಿನ ಎಲ್ಲಾ ಒಪ್ಪಂದಗಳ ತಾಯಿ : ಭಾರತ-ಇಯು ವ್ಯಾಪಾರ ಒಪ್ಪಂದವು ಕಾರ್ಯತಂತ್ರದ ಸಹಭಾಗಿತ್ವದಲ್ಲಿ ಪ್ರಮುಖ ಹೆಜ್ಜೆ

ನ್ಯೂಸ್ MORE NEWS...