Sun,Jul26,2026
ಕನ್ನಡ / English

ರಾತ್ರಿ ಮಟನ್ ತಿಂದು, ಹಗಲಿನಲ್ಲಿ ನಾನ್ ವೆಜಿಟೇರಿಯನ್​ಗೆ ಬೈತಾರೆ: ಖರ್ಗೆ ಲೇವಡಿ | JANATA NEWS

03 May 2023

ಕಲಬುರಗಿ : ರಾತ್ರಿ ಚೆನ್ನಾಗಿ ಮಟನ್ ತಿಂದು, ಬೆಳಗ್ಗೆ ಆದ ಕೂಡಲೇ ನಾನ್ ವೆಜ್ ತಿನ್ನೋರ ಬಗ್ಗೆ ಕೆಟ್ಟದಾಗಿ ಮಾತನಾಡೋದು ಹಾಗೂ ಅವರ ಮೇಲೆ ಎಗರಾಡೋರು ನೀವು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಲೇವಡಿ ಮಾಡಿದ್ದಾರೆ.

ಬಜರಂಗದಳ ರದ್ದು ವಿಚಾರ ಕುರಿತು ಮಾತನಾಡಿ, ಅದರ ಬಗ್ಗೆ ಪ್ರಣಾಳಿಕೆ ಅಧ್ಯಕ್ಷರು ಸ್ಪಷ್ಟನೆ ನೀಡಿದ್ದಾರೆ. ಹೀಗಾಗಿ ಆ ಕುರಿತು ಚರ್ಚೆ ಮಾಡಲು ಹೋಗಲ್ಲ ಎಂದು ತಿಳಿಸಿದರು.

ಬಿಜೆಪಿಯವರು ರಾತ್ರಿ ಹೊತ್ತಿನಲ್ಲಿ ಮಟನ್ ತಿಂದು ಬೆಳಗ್ಗೆ ಎದ್ದ ನಂತರ ನಾನ್ ವೆಬ್ ತಿನ್ನೋವರನ್ನು ಬೈಯ್ಯುತ್ತಾರೆ. ದಿನವಿಡೀ ಮಾಂಸಾಹಾರಿಗಳನ್ನು ಬೈಯ್ಯುವುದೇ ಇವರ ಕೆಲಸವಾಗಿರುತ್ತದೆ. ಆದರೆ, ರಾತ್ರಿ ಹೊತ್ತು ಅವರೇ ನಾನ್ ವೆಜ್ ಚೆನ್ನಾಗಿ ತಿನ್ನುತ್ತಾರೆ ಎಂದು ಲೇವಡಿ ಮಾಡಿದ್ದಾರೆ.

ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ಬಿಜೆಪಿ ಹೇಳಿಕೆ ಕುರಿತು ಪ್ರತಿಕ್ರಿಯಿಸಿ, ಪ್ರತಿ ವಿರೋಧ ಪಕ್ಷದವರು ಸಹಜವಾಗಿ ಒಬ್ಬರ ಮೇಲೆ ಒಬ್ಬರು ಹೇಳ್ತಾರೆ. ಅದೇ ರೀತಿ ಕಾಂಗ್ರೆಸ್ ಪ್ರಣಾಳಿಕೆ ಜಾರಿ ಮಾಡಲು ಆಗಲ್ಲಾ ಅಂತ ಹೇಳ್ತಿದ್ದಾರೆ. ಕಳೆದ ಬಾರಿ ಕೂಡಾ ಇದೇ ರೀತಿ ಹೇಳಿದ್ದರು. ಆದರೆ ಕಳೆದ ಬಾರಿ ನಾವು ನೀಡಿದ್ದ ಆಶ್ವಾಸನೆಗಳನ್ನು ಈಡೇರಿಸಿದ್ದೆವು. ಬಜೆಟ್ ಅನುದಾನ, ಆದಾಯ ನೋಡಿಯೇ ಗ್ಯಾರಂಟಿ ಯೋಜನೆಗಳನ್ನು ನೀಡಿದ್ದೇವೆ. ಅವರು ಹೇಳ್ತಾ ಹೋಗ್ತಾರೆ. ಆದರೆ ನಾವು ಮಾಡಿ ತೋರಿಸುತ್ತಿದ್ದೇವೆ ಎಂದು ಬಿಜೆಪಿಗೆ ಟಾಂಗ್ ಕೊಟ್ಟರು.

ಇದೇ ವೇಳೆ, ಸಂಘಪರಿವಾರದ ನಾಯಕರ ವರ್ತನೆಯ ಬಗ್ಗೆ ಅಸಮಾಧಾನ ಹೊರಹಾಕಿದ ಖರ್ಗೆ, ಕಾಂಗ್ರೆಸ್ ಏನೇ ಹೇಳಿದರೂ ಅದನ್ನು ತಿರುಚಿಕೊಂಡು ಅದಕ್ಕೆ ಬೇರೊಂದು ಬಣ್ಣ ಹಚ್ಚುವುದೇ ಬಿಜೆಪಿ ಹಾಗೂ ಸಂಘ ಪರಿವಾರದ ನಾಯಕರ ಕೆಲಸವಾಗಿದೆ. ಈಗ ಭಜರಂಗದಳದ ವಿಚಾರದಲ್ಲೂ ಹಾಗೇ ಆಗುತ್ತಿದೆ ಎಂದರು

ಕೆಲವರಿಗೆ ಪ್ರಚಾರ ಬೇಕು, ಪ್ರಚಾರದಿಂದಲೇ ಎಲ್ಲಾ ಸಿಗುತ್ತೆ ಅಂತ ಅಂದುಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಚುನಾವಣೆ ಅನ್ನೋದು ವಾರ್ ಇದ್ದಂತೆ. ನನಗೆ ಹಿಂಗ ಅಂದ್ರು ಹಂಗ ಅಂದ್ರು ಅಂತ ಅಳುತ್ತಾ ಕೂತುಕೋದಿಲ್ಲಾ. ಇದೇ ಬಿಜೆಪಿಯವರು ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಬಗ್ಗೆ ಏನೆಲ್ಲಾ ಮಾತನಾಡಿದ್ದಾರೆ?. ಮುಂಜಾನೆ ಯಿಂದ ಸಂಜೆವರಗೆ ಅಳ್ತಾನೇ ಇರೋದು ಪ್ರಧಾನಿ ಕೆಲಸನಾ?. ನಾನು ಮೋದಿಗಿಂತ ಜಾತಿ ವ್ಯವಸ್ಥೆ ಯಲ್ಲಿ ಕೆಳಗೆ ಇದ್ದೀನಿ. ನಾನು ದಲಿತ ಜಾತಿಗೆ ಸೇರಿದವನು. ಮೋದಿ ಮತ್ತು ಶಾ ಅವರು ಯಾವ ರಾಜ್ಯಕ್ಕೆ ಎಷ್ಟು ಸಲ ಹೋಗಿದ್ದಾರೆ. ಅವರು ಹಣಬಲ, ಮಜಲ್ ಪವರ್ ಹೊಂದಿದ್ದಾರೆ ಎಂದು ಕಿಡಿಕಾರಿದ್ದಾರೆ.

RELATED TOPICS:
English summary :Eat mutton at night, feed non-vegetarians during the day: Kharge teases

ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ  ರಿಜಿಜು ಮನವಿ
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ ರಿಜಿಜು ಮನವಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ

ನ್ಯೂಸ್ MORE NEWS...