Wed,Apr15,2026
ಕನ್ನಡ / English

ಕಾಂಗ್ರೆಸ್​​ನವರು ಆಂಜನೇಯನ ಬಾಲಕ್ಕೆ ಬೆಂಕಿ ಹಚ್ಚಿದ್ದಾರೆ! | JANATA NEWS

04 May 2023

ರಾಮನಗರ : ಕಾಂಗ್ರೆಸ್ ಅವರು ಆಂಜನೇಯನ ಬಾಲಕ್ಕೆ ಬೆಂಕಿ ಇಟ್ಟಿದ್ದೀರಿ, ಇದು ಇಡೀ ಪಕ್ಷವನ್ನು ಸುಟ್ಟು ಸರ್ವನಾಶ ಮಾಡುತ್ತೆ ಎಂದು ಸಚಿವ ಆರ್ ಅಶೋಕ್ ಎಚ್ಚರಿಕೆ ನೀಡಿದ್ದಾರೆ.

ಕನಕಪುರದಲ್ಲಿ ಇಂದು ಮಾತನಾಡಿದ ಅವರು, ತಾನು ಬಜರಂಗದಳದ ಸದಸ್ಯ, ಕಾಂಗ್ರೆಸ್ ನಾಯಕರಿಗೆ ಧಮ್ಮಿದ್ರೆ, ತಾಕತ್ತಿದ್ರೆ ಕ್ರಮ ಜರುಗಿಸಲಿ ನೋಡೋಣ ಅಂತ ಸವಾಲೆಸೆದರು. ಕಾಂಗ್ರೆಸ್ ನವರು ಆಂಜನೇಯನ ಬಾಲಕ್ಕೆ ಬೆಂಕಿ ಹಚ್ಚಿದ್ದಾರೆ, ಆ ಆಂಜನೇಯ ಬಾಲಕ್ಕೆ ಬೆಂಕಿ ಹತ್ತಿದಾಗ ಲಂಕೆಯನ್ನು ಸುಟ್ಟಂತೆಯೇ ಕಾಂಗ್ರೆಸ್ ಹಚ್ಚಿರುವ ಬೆಂಕಿ ಆ ಪಕ್ಷವನ್ನೇ ಅಗ್ನಿಗಾಹುತಿ ಮಾಡಲಿದೆ ಎಂದು ಕಿಡಿಕಾರಿದರು.

ಕನಕಪುರ ಕ್ಷೇತ್ರದಲ್ಲಿ ಈ ಬಾರಿ ಡಿಕೆ ಶಿವಕುಮಾರ್ ವಿರೋಧಿ ಅಲೆ ಇದೆ, ಹಾಗಾಗಿ ನಾವು ಗೆಲ್ಲುವ ವಾತಾವರಣ ಇದೆ. ಇಲ್ಲಿ ಜೆಡಿಎಸ್ ಕೂಡಾ ಪ್ರಚಾರ ಮಾಡುತ್ತಿಲ್ಲ. ಹೆಚ್​ಡಿ ಕುಮಾರಸ್ವಾಮಿ ಮತ್ತು ಹೆಚ್​ಡಿ ದೇವೇಗೌಡರು ಕ್ಷೇತ್ರಕ್ಕೆ ಬಂದಿಲ್ಲ. ನಾವು ಚುನಾವಣೆಯ ರಂಗನ್ನ ಕನಕಪುರಕ್ಕೆ ತಂದಿದ್ದೇವೆ.

ಬಜರಂಗದಳ ಬ್ಯಾನ್ ವಿಚಾರದಿಂದ ಕಾಂಗ್ರೆಸ್ ಇನ್ನಷ್ಟು ಸ್ಥಾನ ಕಳೆದುಕೊಳುತ್ತಾರೆ. ಹಿಂದೂ ರಕ್ಷಣೆ ಮಾಡುವವವರು ಬಜರಂಗದಳದವರು, ದೇಶ, ದೇವಸ್ಥಾನಗಳನ್ನು ರಕ್ಷಣೆ ಮಾಡೋದು ಬಜರಂಗದಳ. ಕಾಂಗ್ರೆಸ್ ನವರು ಬಜರಂಗದಳವನ್ನು ಪಿಎಫ್ಐಗೆ ಹೋಲಿಸುವುದನ್ನು ನಾನು ಖಂಡಿಸುತ್ತೇನೆ ಎಂದು ವಾಗ್ದಾಳಿ ನಡೆಸಿದರು.

ಸಿದ್ದರಾಮಯ್ಯ ಅವರು ಮೊದಲಿನಿಂದಲೂ ಕುಂಕುಮವನ್ನು ವಿರೋಧ ಮಾಡುತ್ತಾರೆ. ಟಿಪ್ಪು ಸುಲ್ತಾನ್ ಅವರನ್ನು ಒಲೈಕೆ ಮಾಡಿಕೊಳ್ಳುತ್ತಾರೆ. ಕಾಂಗ್ರೆಸ್​ ದೇಶದಲ್ಲಿ ಸರ್ವನಾಶವಾಗುತ್ತದೆ, ಲಂಕೆಯಲ್ಲಿ ರಾವಣ ಸಂಹಾರ ಆದ ರೀತಿ ರಾಜ್ಯದಲ್ಲಿ ಕಾಂಗ್ರೆಸ್ ಧೂಳಿಪಟವಾಗುತ್ತದೆ‌ ಎಂದರು.

RELATED TOPICS:
English summary :Congress has set Anjaneya tail on fire!

ಪ್ರಧಾನಿ ಮೋದಿ ಗೆ ದೂರವಾಣಿ ಕರೆ ಮಾಡಿ 40 ನಿಮಿಷ ಮಾತನಾಡಿದ ಅಧ್ಯಕ್ಷ ಟ್ರಂಪ್
ಪ್ರಧಾನಿ ಮೋದಿ ಗೆ ದೂರವಾಣಿ ಕರೆ ಮಾಡಿ 40 ನಿಮಿಷ ಮಾತನಾಡಿದ ಅಧ್ಯಕ್ಷ ಟ್ರಂಪ್
ಹೆಬ್ಬಾಳದಲ್ಲಿ 55 ಎಕರೆ ಭೂಮಿ ಖಾಸಗಿ ಸಂಸ್ಥೆಗೆ ವರ್ಗಾವಣೆ ರದ್ದುಗೊಳಿಸಿದ ಹೈಕೋರ್ಟ್ : ಸಿಬಿಐ ತನಿಖೆಗೆ ಆದೇಶ
ಹೆಬ್ಬಾಳದಲ್ಲಿ 55 ಎಕರೆ ಭೂಮಿ ಖಾಸಗಿ ಸಂಸ್ಥೆಗೆ ವರ್ಗಾವಣೆ ರದ್ದುಗೊಳಿಸಿದ ಹೈಕೋರ್ಟ್ : ಸಿಬಿಐ ತನಿಖೆಗೆ ಆದೇಶ
ಟಿಸಿಎಸ್ ನಲ್ಲಿ ಪಿಓಎಸ್ಎಚ್(ಪೊಶ್) ಆಡಿಟ್ ಕೋರಿದ ಎನ್ಐಟಿಇಎಸ್ : ಐಟಿ ವಲಯದಾದ್ಯಂತ ವ್ಯಾಪಕ ತನಿಖೆಗೆ ಒತ್ತಾಯ
ಟಿಸಿಎಸ್ ನಲ್ಲಿ ಪಿಓಎಸ್ಎಚ್(ಪೊಶ್) ಆಡಿಟ್ ಕೋರಿದ ಎನ್ಐಟಿಇಎಸ್ : ಐಟಿ ವಲಯದಾದ್ಯಂತ ವ್ಯಾಪಕ ತನಿಖೆಗೆ ಒತ್ತಾಯ
 ಟಿಸಿಎಸ್ ನಾಸಿಕ್ ಪ್ರಕರಣ: ಕಾರ್ಯಾಚರಣೆ ಮುಖ್ಯಸ್ಥ ಕಸ್ಟಡಿಗೆ ; ಟಾಟಾ ಇಂದ ಆಂತರಿಕ ತನಿಖೆ ವಿಸ್ತರಣೆ
ಟಿಸಿಎಸ್ ನಾಸಿಕ್ ಪ್ರಕರಣ: ಕಾರ್ಯಾಚರಣೆ ಮುಖ್ಯಸ್ಥ ಕಸ್ಟಡಿಗೆ ; ಟಾಟಾ ಇಂದ ಆಂತರಿಕ ತನಿಖೆ ವಿಸ್ತರಣೆ
ಜನರ ಹೆಸರುಗಳನ್ನು ಅಂತಿಮ ತೀರ್ಪಿನ ನಂತರ ಸೇರಿಸಿದರೆ... ಮತ ಚಲಾಯಿಸಲು ಅವಕಾಶ - ಸುಪ್ರೀಂ
ಜನರ ಹೆಸರುಗಳನ್ನು ಅಂತಿಮ ತೀರ್ಪಿನ ನಂತರ ಸೇರಿಸಿದರೆ... ಮತ ಚಲಾಯಿಸಲು ಅವಕಾಶ - ಸುಪ್ರೀಂ
ಹಿರಿಯ ಗಾಯಕಿ ಆಶಾ ಬೋಸ್ಲೆ ನಿಧನ : ಪ್ರಧಾನಿ ಮೋದಿ ಸಂತಾಪ
ಹಿರಿಯ ಗಾಯಕಿ ಆಶಾ ಬೋಸ್ಲೆ ನಿಧನ : ಪ್ರಧಾನಿ ಮೋದಿ ಸಂತಾಪ
 ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ವಂದೇ ಭಾರತ್ ಸ್ಲೀಪರ್ ರೈಲು ಸೇವೆಗೆ ಅನುಮೋದನೆ
ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ವಂದೇ ಭಾರತ್ ಸ್ಲೀಪರ್ ರೈಲು ಸೇವೆಗೆ ಅನುಮೋದನೆ
ನಾಸಿಕ್ ಟಿಸಿಎಸ್ ಪ್ರಕರಣ: ಮತಾಂತರ, ಮೂಲಭೂತೀಕರಣ ಆರೋಪಗಳ ಮೇಲೆ ತನಿಖೆ ಆರಂಭ
ನಾಸಿಕ್ ಟಿಸಿಎಸ್ ಪ್ರಕರಣ: ಮತಾಂತರ, ಮೂಲಭೂತೀಕರಣ ಆರೋಪಗಳ ಮೇಲೆ ತನಿಖೆ ಆರಂಭ
ದೋಷಾರೋಪಣೆ ಪ್ರಕ್ರಿಯೆ ಆರಂಭವಾದ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ
ದೋಷಾರೋಪಣೆ ಪ್ರಕ್ರಿಯೆ ಆರಂಭವಾದ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ
2008ರ ಮಾಲೆಗಾಂವ್ ಸ್ಫೋಟ ಪ್ರಕರಣ: ಕರ್ನಲ್ ಪುರೋಹಿತ್‌ಗೆ ಬ್ರಿಗೇಡಿಯರ್ ಬಡ್ತಿಗೆ ಅನುಮತಿ
2008ರ ಮಾಲೆಗಾಂವ್ ಸ್ಫೋಟ ಪ್ರಕರಣ: ಕರ್ನಲ್ ಪುರೋಹಿತ್‌ಗೆ ಬ್ರಿಗೇಡಿಯರ್ ಬಡ್ತಿಗೆ ಅನುಮತಿ
ಪ್ರತಿಯೊಬ್ಬ ಸೈನಿಕ ಡ್ರೋನ್ ಹಾರಿಸಲು ಸಿದ್ದವಾಗಬೇಕು - ಪ್ರತಿ ಸೈನಿಕನಿಗೆ ಡ್ರೋನ್ ಒದಗಿಸಲು ಸೇನಾ ಮುಖ್ಯಸ್ಥರು
ಪ್ರತಿಯೊಬ್ಬ ಸೈನಿಕ ಡ್ರೋನ್ ಹಾರಿಸಲು ಸಿದ್ದವಾಗಬೇಕು - ಪ್ರತಿ ಸೈನಿಕನಿಗೆ ಡ್ರೋನ್ ಒದಗಿಸಲು ಸೇನಾ ಮುಖ್ಯಸ್ಥರು
ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳಿಗೆ ಶಿಕ್ಷೆ ವಿಧಿಸಿದ ಬೆಂಗಳೂರು ನ್ಯಾಯಾಲಯ
ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳಿಗೆ ಶಿಕ್ಷೆ ವಿಧಿಸಿದ ಬೆಂಗಳೂರು ನ್ಯಾಯಾಲಯ

ನ್ಯೂಸ್ MORE NEWS...