Sun,Jul26,2026
ಕನ್ನಡ / English

ಸಿಎಂ ಬಸವರಾಜ ಬೊಮ್ಮಾಯಿ ಪರ ಅಬ್ಬರದ ಪ್ರಚಾರ ನಡೆಸಿದ ಸಚಿವ ಪ್ರಲ್ಹಾದ್ ಜೋಶಿ | JANATA NEWS

04 May 2023

ಹಾವೇರಿ : ಇಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಪರ ಚುನಾವಣಾ ಪ್ರಚಾರ ನಡೆಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪರ ಶಿಗ್ಗಾಂವಿಯಲ್ಲಿ ರೋಡ್ ಶೋ ನಡೆಸಿದ ಜೋಶಿಯವರು ಜನರಲ್ಲಿ ಬೊಮ್ಮಾಯಿಯವರನ್ನು ಗೆಲ್ಲಿಸುವಂತೆ ಕೋರಿ ಮತ ಯಾಚಿಸಿದರು.

ಪ್ರತಿ ಚುನಾವಣೆಗಳಲ್ಲೂ ಪ್ರಲ್ಹಾದ್ ಜೋಶಿ ಶಿಗ್ಗಾಂವಿ ಕ್ಷೇತ್ರಕ್ಕೆ ತೆರಳಿ ಸಿಎಂ ಬಸವರಾಜ ಬೊಮ್ಮಾಯಿ ಪರ ಚುನಾವಣಾ ಪ್ರಚಾರ ನಡೆಸುತ್ತಿದ್ದರು. ಈ ಬಾರಿ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದರೂ, ಕೂಡ ಪ್ರಲ್ಹಾದ್ ಜೋಶಿ ಶಿಗ್ಗಾಂವಿಗೆ ತೆರಳಿ ಅವರ ಪರ ರೋಡ್ ಶೋ ನಡೆಸಿ, ಮತ ಯಾಚಿಸಿದ್ದಾರೆ.

ಈ ವೇಳೆ ಸಾರ್ವಜನಿಕರನ್ನ ಉದ್ದೇಶಿಸಿ ಮಾತನಾಡಿದ ಪ್ರಲ್ಹಾದ್ ಜೋಶಿ, ಈ ಬಾರಿ ರಾಜ್ಯದಲ್ಲಿ ಬಿಜೆಪಿ 113 ಪ್ಲಸ್ 15 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಬಸವರಾಜ್ ಬೊಮ್ಮಾಯಿ ಅವರು ಸಿಎಂ ಆದ ಬಳಿಕ ಬಡವರಿಗೆ ವಿಶೇಷ ಆದ್ಯತೆ ನೀಡಿದ್ದಾರೆ. ರೈತರ ಮಕ್ಕಳಿಗೆ ವಿದ್ಯಾಸಿರಿ ಯೋಜನೆ ಕೊಡುವ ಮೂಲಕ ರೈತರ ಮಕ್ಕಳು ವಿದ್ಯಾಭ್ಯಾಸದಲ್ಲಿ ಮುಂದೆ ಬರಬೇಕು ಎಂಬ ಮನೋಭಾವವನ್ನ ಮೊದಲು ವ್ಯಕ್ಯಪಡಿಸಿದವರು ಬಸವರಾಜ್ ಬೊಮ್ಮಾಯಿ ಎಂದರು.

ಶಿಗ್ಗಾಂವಿ ಕ್ಷೇತ್ರವನ್ನ ಅಭಿವೃದ್ದಿಪಡಿಸಿದ್ದಾರೆ. ಈ ಬಾರಿ ಅತಿ ಹೆಚ್ಚು ಲೀಡ್ ನಲ್ಲಿ ಬೊಮ್ಮಾಯಿ ಅವರನ್ನ ಶಿಗ್ಗಾಂವಿ ಕ್ಷೇತ್ರದ ಜನತೆ ಗೆಲ್ಲಿಸಬೇಕು. ಸವಣೂರು ಹಾಗೂ ಶಿಗ್ಗಾಂವಿಯ ಪ್ರಮುಖ ಹಳ್ಳಿಗಳಿಗೆ ತೆರಳಿದ ಜೋಶಿ, ಬೊಮ್ಮಾಯಿ ಅವರನ್ನ ಈ ಬಾರಿ ಅತಿ ಹೆಚ್ಚು ಮತಗಳ ಅಂತರದ ಗೆಲ್ಲಿಸುವಂತೆ ಜನರಲ್ಲಿ ಮನವಿ ಮಾಡಿದರು.

RELATED TOPICS:
English summary :Minister Pralhad Joshi campaigned loudly for CM Basavaraj Bommai

ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ  ರಿಜಿಜು ಮನವಿ
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ ರಿಜಿಜು ಮನವಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ

ನ್ಯೂಸ್ MORE NEWS...