Sun,Jul26,2026
ಕನ್ನಡ / English

ಬಿಜೆಪಿ ಸರ್ಕಾರದ ಮೇಲೆ 40 ಪರ್ಸೆಂಟ್​ ಆರೋಪದ ಬಗ್ಗೆ ತನಿಖೆ ನಡೆಸಿ: ಕಾಂಗ್ರೆಸ್​ಗೆ ಕುಮಾರಸ್ವಾಮಿ ಸವಾಲು | JANATA NEWS

12 Jun 2023

ರಾಮನಗರ : ಬಿಜೆಪಿ ಸರಕಾರದ ವಿರುದ್ಧ 40% ಆರೋಪ ಮಾಡಿದ ಬಗ್ಗೆ ಕಾಂಗ್ರೆಸ್​ ನಾಯಕರು ಸಾಬೀತು ಮಾಡಿದ್ದಾರಾ? ಲೋಕಾಯುಕ್ತಕ್ಕೆ ದೂರು ನೀಡಿದ್ದರಾ? ಈಗ ನೋಡಿದರೆ ನನಗೆ ಪುಕ್ಕಟೆ ಸಲಹೆ ನೀಡುತ್ತಿದ್ದಾರೆ ಎಂದು ಮಾಜಿ ಸಿಎಂ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್​ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ಚನ್ನಪಟ್ಟಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಳೆದ ಬಾರಿಯೂ ನನಗೆ ಚುನಾವಣೆ ಎದುರಿಸುವ ಆಸಕ್ತಿ ಇರಲಿಲ್ಲ. ಆದ್ರೆ ಕಾರ್ಯಕರ್ತರ ಒತ್ತಾಸೆಯಿಂದ ರಾಜಕಾರಣದಲ್ಲಿದ್ದೇನೆ ಎಂದರು.

ಲೋಕಸಭಾ ಚುನಾವಣಾ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಚರ್ಚೆ ವಿಚಾರಕ್ಕೆ ಪ್ರತಿಕ್ರಿಯಿಸಿ, ರಾಜಕಾರಣದಲ್ಲಿ ಊಹಾಪೋಹ ಮಾಮೂಲಿ. ಇದೆಲ್ಲಾ ಗಾಳಿ ಸುದ್ದಿ, ಆ ರೀತಿಯ ಯಾವುದೇ ಚರ್ಚೆ ಆಗುತ್ತಿಲ್ಲ. ಈ ವಿಚಾರವನ್ನು ನನ್ನ ಮುಂದೆ ಯಾರೂ ಪ್ರಸ್ತಾಪ ಮಾಡಿಲ್ಲ. ಲೋಕಸಭಾ ಚುನಾವಣೆ ಬಗ್ಗೆ ನಾನು ಜಿಲ್ಲಾವಾರು ಸಭೆ ಮಾಡಿದ್ದೇನೆ. ಗೆದ್ದವರು, ಸೋತವರ ಜೊತೆ ಮಾತನಾಡಿದ್ದೇನೆ. ಯಾವ ರೀತಿ ಚುನಾವಣೆ ಎದುರಿಸಬೇಕು ಎಂಬುದರ ಕುರಿತು ರೂಪುರೇಷೆ ಸಿದ್ಧ ಮಾಡುತ್ತಿದ್ದೇವೆ ಎಂದು ಹೇಳಿದರು.

ಸಂಸದ ಡಿ.ಕೆ. ಸುರೇಶ್‌ಗೆ ಪರೋಕ್ಷವಾಗಿ ಟಾಂಗ್ ನೀಡಿದ ಅವರು, “ನನ್ನ ವಿಚಾರ ಬಿಡಿ, ರಾಮನಗರದ ಹಾಲಿ ಸಂಸದರ ವಿಚಾರವನ್ನೇ ಕೇಳಿ. ಭ್ರಷ್ಟಾಚಾರದ ಮಧ್ಯೆ ಚುನಾವಣೆ ಬೇಡ ಅಂತಿದ್ದಾರೆ. ಅಂಥವರೇ ಚುನಾವಣೆ ಬೇಡ ಎಂದು ಹೇಳುತ್ತಿರುವಾಗ ನಮ್ಮದು ಯಾವ ಲೆಕ್ಕ ಎಂದು ಡಿ.ಕೆ. ಸುರೇಶ್ ಹೆಸರೇಳದೆ ವ್ಯಂಗ್ಯವಾಡಿದರು.

ಈಗ ಕಾಂಗ್ರೆಸ್ ನವರದ್ದೇ ಸರ್ಕಾರ ಇದೆ. 40% ವಿಚಾರವನ್ನು ತನಿಖೆ ಮಾಡಿಸಲಿ, ಸತ್ಯ ಜನರ ಮುಂದೆ ಇಡಲಿ. ಆರೋಪ ಮಾಡಿದವರ ಬಳಿ ಸಾಕ್ಷ್ಯ ಇರಲೇಬೇಕಲ್ಲವೇ? ಗುತ್ತಿಗೆದಾರರ ಸಂಘದವರು ದೂರು ಕೊಟ್ಟಿದ್ದರಲ್ಲ, ಅವರು ಸಾಕ್ಷಿ ಇಟ್ಟಿದ್ದರೇ? ಲೋಕಾಯುಕ್ತಕ್ಕೆ ದೂರು ನೀಡಲು ಅಡ್ಡಿ ಮಾಡಿದ್ದವರು ಯಾರು? ಎಂದು ಅವರು ಪ್ರಶ್ನಿಸಿದರು.

ಸರ್ಕಾರದ ಐದು ಗ್ಯಾರಂಟಿ ಯೋಜನೆ ಬಗ್ಗೆ ಚರ್ಚೆ ಮಾಡಲು ಇನ್ನೂ ಸಮಯ ಇದೆ. ಕೊಟ್ಟ ಮಾತನ್ನು ಉಳಿಸಿಕೊಳ್ಳುತೇವೆ ಅಂತಿದ್ದಾರೆ. ಆದರೆ ಫಲಾನುಭವಿಗಳಿಗೆ ಹೇಗೆ ತಲುಪಿಸುತ್ತಾರೆ ಅನ್ನೋದು ಮುಖ್ಯ. ಮೊದಲು ಬಾಡಿಗೆದಾರರಿಗೆ ಉಚಿತ ವಿದ್ಯುತ್ ಇಲ್ಲ ಅಂತಿದ್ದರು. ಆಮೇಲೆ ಕೊಡ್ತೇವಿ ಅಂದರು. ಈಗ ಮಾಲೀಕರು ಬಾಡಿಗೆದಾರರು ಅಗ್ರಿಮೆಂಟ್ ಕೊಡ್ತಿಲ್ಲ. ನಾನಾ ಸಮಸ್ಯೆಗಳು ಉದ್ಭವ ಆಗ್ತಿವೆ. ಘೋಷಣೆ ಮಾಡ್ದಾಗ ನನಗೂ ಫ್ರೀ, ನಿನಗೂ ಫ್ರೀ ಅಂದ್ರಿ.! ಈಗ ಅದನ್ನು ಯಾವ ರೀತಿ ನಿಭಾಯಿಸುತ್ತಾರೆ ನೋಡಬೇಕು ಎಂದು ಹೇಳಿದರು.

RELATED TOPICS:
English summary :Investigate 40 percent allegation on BJP govt: Kumaraswamy challenges Congress

ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ  ರಿಜಿಜು ಮನವಿ
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ ರಿಜಿಜು ಮನವಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ

ನ್ಯೂಸ್ MORE NEWS...