Sun,Jul26,2026
ಕನ್ನಡ / English

ನಮ್ಮ ಸರ್ಕಾರವು ವಿದ್ಯುತ್ ದರ ಹೆಚ್ಚಳ ಆದೇಶ ಮಾಡಿಲ್ಲ, ಮಾಜಿ ಸಿಎಂ ಬೊಮ್ಮಾಯಿ ಸ್ಪಷ್ಟನೆ | JANATA NEWS

13 Jun 2023

ಹಾವೇರಿ : ನಮ್ಮ ಕಾಲದಲ್ಲಿ ವಿದ್ಯುತ್ ದರ ಹೆಚ್ಚಳ ಮಾಡಿಲ್ಲ. ಕಾಂಗ್ರೆಸ್‌ ಸರ್ಕಾರದಿಂದಲೇ ವಿದ್ಯುತ್ ದರ ಹೆಚ್ಚಳದ ಆಜ್ಞೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.

ಕೆ‌.ಇ.ಆರ್.ಸಿ ಅದೊಂದು ಸ್ಟೆಚುಟರಿ ಬಾಡಿಯವರು ಮಾರ್ಚ್​ನಲ್ಲಿ ಹೆಚ್ಚಳದ ಪ್ರಸ್ತಾವನೆ ಕೊಟ್ಟರೂ, ನಾವು ಒಪ್ಪಿಗೆ ಕೊಟ್ಟಿರಲಿಲ್ಲ. ನಾವು ವಿದ್ಯುತ್ ದರ್ ಹೆಚ್ಚಳದ ಯಾವುದೇ ಆದೇಶ ಮಾಡಿಲ್ಲ. ಕಾಂಗ್ರೆಸ್​ನವರು ಬಂದ ಮೇಲೆಯೇ ವಿದ್ಯುತ್ ದರ ಹೆಚ್ಚಳ ಮಾಡಿದ್ದಾರೆ. ಅವರ ಆಜ್ಞೆಯಿಂದಲೇ ವಿದ್ಯುತ್ ದರ ಹೆಚ್ಚಳ ಆಗಿದೆ ಎಂದರು.

ಏಪ್ರಿಲ್​ನಿಂದ ವಿದ್ಯುತ್ ದರ ಹೆಚ್ಚಳ ಮಾಡಿದ್ದಾರೆ. ಇದು ಬಹಳ ದೊಡ್ಡ ಭಾರ ಇದೆ. ಬರುವ ದಿನಗಳಲ್ಲಿ ಎಲೆಕ್ಟ್ರಿಸಿಟಿ ಕ್ಷೇತ್ರ ಬಹಳ ಸಂಕಷ್ಟಕ್ಕೆ ಈಡಾಗಲಿದೆ. ಸಾರಿಗೆ ಹಾಗೂ ವಿದ್ಯುತ್ ಕ್ಷೇತ್ರಗಳಗೆ ಹಣ ಕೊಡಬೇಕು. ಒಂದು ವರ್ಷ ಬಿಟ್ಟು ಸಬ್ಸಿಡಿ ಕೊಟ್ಟರೆ ಆಗಲ್ಲ. ಮುಂಗಡವಾಗಿ ಸಬ್ಸಿಡಿ ಕೊಡಬೇಕು ಎಂದರು.

ಬಸ್‌ನಲ್ಲಿ ಅಧಿಕ ಮಂದಿ ಪ್ರಯಾಣ ಮಾಡುತ್ತಿರುವುದರಿಂದ ಸಾರ್ವಜನಿಕರಿಗೆ ಮತ್ತು ಶಾಲಾ ಮಕ್ಕಳಿಗೂ ಬಹಳ ತೊಂದರೆ ಆಗುತ್ತಿದೆ. ಹೀಗಾಗಿ, ಶಾಲಾ ಮಕ್ಕಳು ಬಸ್ ಫುಟ್ ಬೋರ್ಡ್ ಮೇಲೆ ನಿಂತು ಪ್ರಯಾಣ ಮಾಡುತ್ತಿದ್ದಾರೆ. ಹಾನಗಲ್ ತಾಲೂಕಿನಲ್ಲಿ ಸೋಮವಾರ ಒಂದು ಅನಾಹುತ ಕೂಡ ಆಗಿದೆ. ಈ ತರ ಆಗದ ಹಾಗೆ ನೋಡಿಕೊಳ್ಳಬೇಕು. ವ್ಯವಸ್ಥೆ ಹದಗೆಡಬಾರದು. ಶಾಲಾ ಮಕ್ಕಳ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.

ಶಾಲಾ ಮಕ್ಕಳಿಗೆ ಸ್ಕೂಲ್ ಬಸ್ ಕೊಡಬೇಕು ಎಂದು ಈಗಾಗಲೇ ನಾವು ಆಜ್ಞೆ ಕೂಡ ಮಾಡಿದ್ದೇವೆ. ಇದಕ್ಕೆ ಬಜೆಟ್‌ನಲ್ಲಿ ಹಣ ಕೂಡ ಇಟ್ಟಿದ್ದೇವೆ. ಸಾರಿಗೆ ಹಾಗೂ ವಿದ್ಯುತ್ ಕ್ಷೇತ್ರಗಳಿಗೆ ಸರಿಯಾಗಿ ಹಣ ಕೊಟ್ಟು ನಿರ್ವಹಿಸದೇ ಇದ್ದರೆ, ಸಾರಿಗೆ ಸ್ಥಗಿತ ಆಗುವುದು, ವಿದ್ಯುತ್ ಶಕ್ತಿ ನಿಲ್ಲುವುದು ಗ್ಯಾರಂಟಿ ಆಗುತ್ತದೆ ಎಂದು ಮಾಜಿ ಸಿಎಂ ಬೊಮ್ಮಾಯಿ‌ ಆತಂಕ ವ್ಯಕ್ತಪಡಿಸಿದರು.

RELATED TOPICS:
English summary :Our government has not ordered a hike in electricity rates, former CM Bommai clarified

ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ  ರಿಜಿಜು ಮನವಿ
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ ರಿಜಿಜು ಮನವಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ

ನ್ಯೂಸ್ MORE NEWS...