Sun,Jul26,2026
ಕನ್ನಡ / English

ಪ್ರಿಯಕರನಿಗಾಗಿ 11 ತಿಂಗಳ ಮಗು ಬಿಟ್ಟು ಫ್ರೀ ಬಸ್ಸಲ್ಲಿ ಹುಬ್ಬಳ್ಳಿಯಿಂದ ಮಂಗಳೂರಿಗೆ ಬಂದ ವಿವಾಹಿತೆ! | JANATA NEWS

14 Jun 2023

ಮಂಗಳೂರು : ರಾಜ್ಯದಲ್ಲಿ ಜೂನ್ 11 ರಿಂದ ಶಕ್ತಿ ಯೋಜನೆಯ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಆರಂಭಗೊಂಡಿದ್ದು, ಮಹಿಳಾ ಪ್ರಯಾಣಿಕ ಓಡಾಟ ಹೆಚ್ಚಾಗಿದೆ.

ಈ ನಡುವೆ ಪ್ರಿಯಕರನನ್ನ ನೋಡಲು ಫ್ರೀ ಬಸ್ ಹತ್ತಿ‌ ಪ್ರಿಯತಮೆ ಬಂದಿರುವ ಘಟನೆ ನಡೆದಿದೆ. ತನ್ನ 11 ತಿಂಗಳ ಮಗವನ್ನು ಬಿಟ್ಟು ಹುಬ್ಬಳಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿಗೆ ಬಂದು ಪ್ರಿಯಕರನೊಂದಿಗೆ ನಾಪತ್ತೆಯಾಗಿದ್ದಾಳೆ.

ಈ ಹಿಂದೆಯೇ ಇಬ್ಬರ ನಡುವೆ ಪ್ರೀತಿ ಶುರುವಾಗಿತ್ತು. ಯುವತಿಗೆ ಬೇರೆಯವನ ಜೊತೆ ಮದುವೆ ಆದ ಬಳಿಕವೂ ತನ್ನ ಪ್ರಿಯಕರನ‌ ಜೊತೆ ಒಡನಾಟದಲ್ಲಿದ್ದಳು. ಪುತ್ತೂರು ಕೋಡಿಂಬಾಡಿ ಸಮೀಪದಲ್ಲಿ ಪ್ರಿಯಕರ ತೋಟದ ಕೆಲಸ ಮಾಡುತ್ತಿದ್ದ.

ಯುವಕನೋರ್ವನನ್ನು ಪ್ರೀತಿಸುತ್ತಿರುವುದು ತಿಳಿದಿದ್ದ ಮನೆಯವರು ನೇರವಾಗಿ ತನ್ನ ಪ್ರಿಯಕರನ ಹತ್ತಿರ ಹೋಗಿರಬಹುದು ಎಂಬ ಶಂಕೆಯಿಂದ ಆಕೆಯ ಮನೆಯವರು ರಾತ್ರಿ ವೇಳೆ ಪುತ್ತೂರಿನ ಕೋಡಿಬಾಡಿಗೆ ಬಂದು ಹುಡುಕಾಡಿದ್ದಾರೆ.

ಇವರಿಬ್ಬರನ್ನ ಹುಡುಕಿಕೊಂಡು ಬಂದ ಕುಟುಂಬಸ್ಥರಿಗೆ ಗ್ರಾಮ ಪಂಚಾಯತ್ ಸದಸ್ಯ ಜಯಪ್ರಕಾಶ್ ಬದಿನಾರ್ ಧೈರ್ಯ ಹೇಳಿದ್ದಾರೆ. ಮಹಿಳೆ ಮನೆಯವರಿಂದ ಗ್ರಾಮ ಪಂಚಾಯಿಸಿ ಸದಸ್ಯ ಮಾಹಿತಿ ಪಡೆದುಕೊಂಡು ತಕ್ಷಣ ಪೊಲೀಸರಿಗೆ ತಿಳಿಸಿದ್ದಾರೆ. ಮಾಹಿತಿ ಆಧರಿಸಿ ಪೊಲೀಸರು ಅವರ ಜೊತೆ ಹುಡುಕಾಟ ಆರಂಭಿಸಿದ್ದಾರೆ.

ತನ್ನ ಗಂಡನಲ್ಲಿ ಆಧಾರ್ ಲಿಂಕ್ ಮಾಡಿ ಬರುತ್ತೇನೆಂದು ಹೇಳಿ ಈಕೆ ಮನೆಯಿಂದ ಎಸ್ಕೇಪ್ ಆಗಿದ್ದಾಳೆ. ಆಧಾರ್ ಕಾರ್ಡ್ ಅನ್ನು ಬಸ್ಸಿನಲ್ಲಿ ಪ್ರಯಾಣಿಸುವಾಗ ಕಂಡಕ್ಟರ್ ಗೆ ತೋರಿಸಲು ತಂದಿದ್ದಳು. ಗಂಡನಲ್ಲಿ ಆಧಾರ್ ಲಿಂಕ್ ಬಗ್ಗೆ ಸುಳ್ಳು ಹೇಳಿ ಎಸ್ಕೇಪ್ ಆಗಿದ್ದಾಳೆ. ಇದೀಗ ಎರಡೂ ಮನೆಯವರಿಂದ ಮಹಿಳೆ ಹಾಗೂ ಆಕೆಯ ಪ್ರಿಯಕರನಿಗಾಗಿ ಹುಡುಕಾಟ‌ ನಡೆಸುತ್ತಿದ್ದಾರೆ. ಇದೀಗ ಇಬ್ಬರೂ ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ.

RELATED TOPICS:
English summary :A married woman left her 11-month-old baby for her lover and came to Mangalore from Hubli in a free bus!

ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ  ರಿಜಿಜು ಮನವಿ
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ ರಿಜಿಜು ಮನವಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ

ನ್ಯೂಸ್ MORE NEWS...