Wed,Apr15,2026
ಕನ್ನಡ / English

ಅಕ್ಕಿ ವಿಷಯವಾಗಿ ಕಾಂಗ್ರೆಸ್ ಸರ್ಕಾರ ಪರ್ಯಾಯ ವ್ಯವಸ್ಥೆ ಮಾಡಬೇಕಿತ್ತು, ಸರ್ಕಾರದ ಜನಪ್ರಿಯತೆ ಬಹಳ ದಿನ ಉಳಿಯಲ್ಲ! | JANATA NEWS

18 Jun 2023

ಹುಬ್ಬಳ್ಳಿ : ಕಾಂಗ್ರೆಸ್ ಸರ್ಕಾರದ ಜನಪ್ರಿಯತೆ ಬಹಳ ದಿನ ಉಳಿಯುವುದಿಲ್ಲ. ಅಕ್ಕಿ ವಿಷಯವಾಗಿ ಕಾಂಗ್ರೆಸ್ ನಾಯಕರು ಪರ್ಯಾಯ ವ್ಯವಸ್ಥೆ ಮಾಡುವ ಬದಲಿಗೆ ಕುಂಟು ನೆಪ ಹೇಳುತ್ತಿದ್ದಾರೆ. ಕೇಂದ್ರದ ವಿರುದ್ಧ ಬೆಟ್ಟು ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.

ಹುಬ್ಬಳ್ಳಿ ತಾಲೂಕಿನ ಛಬ್ಬಿ ಗ್ರಾಮದಲ್ಲಿ ಮಾತನಾಡಿದ ಅವರು, ಇದು ಕಾಂಗ್ರೆಸ್ ಗ್ಯಾರಂಟಿಯಿಂದ ಹಿಂದೆ ಹೋದಂತೆ ಅರ್ಥ. ಇದೀಗ ಛತ್ತೀಸಗಡದಿಂದ ಅಕ್ಕಿ ತರುತ್ತೇವೆ ಎನ್ನುತ್ತಿದ್ದಾರೆ. ನಮಗೆ ಬಡಜನರಿಗೆ ಒಳ್ಳೆಯದು ಆದರೆ ಸಾಕು. ಎಲ್ಲಿಂದ ತೆಗೆದುಕೊಳ್ಳಬೇಕು, ಹೇಗೆ ತೆಗೆದುಕೊಳ್ಳಬೇಕು ಎನ್ನುವ ಪ್ರಶ್ನೆಯೇ ಇಲ್ಲ. ರಾಜ್ಯದ ರೈತರು ಅಕ್ಕಿ ಕೊಡಲು ಮುಂದೆ ಬಂದರೆ ಅದನ್ನು ಖರೀದಿ ಮಾಡಬೇಕು. ಬಿಜೆಪಿಯವರೇ ಕೊಡಸಿ ಎನ್ನುವುದು ಸರಿ ಅಲ್ಲ ಎಂದರು.

ಗ್ಯಾರಂಟಿ ಭ್ರಮೆ ಹುಟ್ಟಿಸಿದ್ದು ನೋಡಿದರೆ, ಸರಕಾರದ ಜನಪ್ರಿಯತೆ ಬಹಳ ದಿನ ಉಳಿಯಲ್ಲ. ನೀರು ಕೊಡದ ಸರಕಾರ ತೆಗೆದುಕೊಂಡು ಏನು ಮಾಡಬೇಕು ಎಂದರು.

ಅಕ್ಕಿ ವಿಷಯವಾಗಿ ಕಾಂಗ್ರೆಸ್ ಸರ್ಕಾರ ಪರ್ಯಾಯ ವ್ಯವಸ್ಥೆ ಮಾಡಬೇಕಿತ್ತು. ಇದೀಗ ಅಕ್ಕಿ ಬರಲ್ಲ ಅಂತ ಕುಂಟುನೆಪ ಹೇಳುತ್ತಿದ್ದಾರೆ. ಇದು ಕಾಂಗ್ರೆಸ್ ಗ್ಯಾರಂಟಿಯಿಂದ ಹಿಂದೆ ಹೋದಂತೆ ಅರ್ಥ. ಈಗ ಛತ್ತೀಸ್ ಗಢದಿಂದ ಅಕ್ಕಿ ತರುತ್ತೇವೆ ಎನ್ನುತ್ತಿದ್ದಾರೆ. ಏನೆಯಾದರು ಬಡ ಜನರಿಗೆ ಒಳ್ಳೆಯದಾದರೆ ಸಾಕು ನಮಗೆ ಎಂದರು.

ಅಕ್ಕಿಯನ್ನು ಎಲ್ಲಿಂದ ತೆಗೆದುಕೊಳ್ಳಬೇಕು, ಹೇಗೆ ತೆಗೆದುಕೊಳ್ಳಬೇಕು ಎನ್ನುವ ಪ್ರಶ್ನೆ ಇದೆ. ರಾಜ್ಯದ ರೈತರು ಅಕ್ಕಿ ಕೊಡುವುದಕ್ಕೆ ಮುಂದೆ ಬಂದರೆ ಅದನ್ನು ಖರೀದಿ ಮಾಡಬೇಕು. ಬಿಜೆಪಿಯವರೇ ಕೊಡಸಿ ಎನ್ನುವುದು ಸರಿಯಲ್ಲ. ಒಂದು ವೇಳೆ ಪ್ರತಿ ತಿಂಗಳೂ ಒಂದನೇ ತಾರೀಕಿಗೆ ರಾಜ್ಯದ ಜನರಿಗೆ ಅಕ್ಕಿ ಕೊಡದೆ ಹೋದರೆ, ನಾವು ಪ್ರತಿಭಟನೆ ಮಾಡುತ್ತೇವೆ ಎಂದು ಅವರು ಎಚ್ಚರಿಕೆ ನೀಡಿದರು.

ರಾಜ್ಯದಲ್ಲಿ ಬರಗಾಲ ಇದೆ. 500 ಹಳ್ಳಿಗೆ ಕುಡಿಯುವ ನೀರಿನ ಸಮಸ್ಯೆ ಇದೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಸುತ್ತಿಲ್ಲ. ಕೇವಲ ವಿಡಿಯೋ ಕಾನ್ಫರೆನ್ಸ್ ಮಾಡಿ ಸುಮ್ಮನಾಗಿದೆ. ಬರಗಾಲ ಇದ್ದ ಕಡೆ ಟಾಸ್ಕಪೋರ್ಸ್ ರಚನೆ ಮಾಡಬೇಕು ಎಂದರು.

RELATED TOPICS:
English summary :The Congress government should have made an alternative arrangement in the matter of rice

ಪ್ರಧಾನಿ ಮೋದಿ ಗೆ ದೂರವಾಣಿ ಕರೆ ಮಾಡಿ 40 ನಿಮಿಷ ಮಾತನಾಡಿದ ಅಧ್ಯಕ್ಷ ಟ್ರಂಪ್
ಪ್ರಧಾನಿ ಮೋದಿ ಗೆ ದೂರವಾಣಿ ಕರೆ ಮಾಡಿ 40 ನಿಮಿಷ ಮಾತನಾಡಿದ ಅಧ್ಯಕ್ಷ ಟ್ರಂಪ್
ಹೆಬ್ಬಾಳದಲ್ಲಿ 55 ಎಕರೆ ಭೂಮಿ ಖಾಸಗಿ ಸಂಸ್ಥೆಗೆ ವರ್ಗಾವಣೆ ರದ್ದುಗೊಳಿಸಿದ ಹೈಕೋರ್ಟ್ : ಸಿಬಿಐ ತನಿಖೆಗೆ ಆದೇಶ
ಹೆಬ್ಬಾಳದಲ್ಲಿ 55 ಎಕರೆ ಭೂಮಿ ಖಾಸಗಿ ಸಂಸ್ಥೆಗೆ ವರ್ಗಾವಣೆ ರದ್ದುಗೊಳಿಸಿದ ಹೈಕೋರ್ಟ್ : ಸಿಬಿಐ ತನಿಖೆಗೆ ಆದೇಶ
ಟಿಸಿಎಸ್ ನಲ್ಲಿ ಪಿಓಎಸ್ಎಚ್(ಪೊಶ್) ಆಡಿಟ್ ಕೋರಿದ ಎನ್ಐಟಿಇಎಸ್ : ಐಟಿ ವಲಯದಾದ್ಯಂತ ವ್ಯಾಪಕ ತನಿಖೆಗೆ ಒತ್ತಾಯ
ಟಿಸಿಎಸ್ ನಲ್ಲಿ ಪಿಓಎಸ್ಎಚ್(ಪೊಶ್) ಆಡಿಟ್ ಕೋರಿದ ಎನ್ಐಟಿಇಎಸ್ : ಐಟಿ ವಲಯದಾದ್ಯಂತ ವ್ಯಾಪಕ ತನಿಖೆಗೆ ಒತ್ತಾಯ
 ಟಿಸಿಎಸ್ ನಾಸಿಕ್ ಪ್ರಕರಣ: ಕಾರ್ಯಾಚರಣೆ ಮುಖ್ಯಸ್ಥ ಕಸ್ಟಡಿಗೆ ; ಟಾಟಾ ಇಂದ ಆಂತರಿಕ ತನಿಖೆ ವಿಸ್ತರಣೆ
ಟಿಸಿಎಸ್ ನಾಸಿಕ್ ಪ್ರಕರಣ: ಕಾರ್ಯಾಚರಣೆ ಮುಖ್ಯಸ್ಥ ಕಸ್ಟಡಿಗೆ ; ಟಾಟಾ ಇಂದ ಆಂತರಿಕ ತನಿಖೆ ವಿಸ್ತರಣೆ
ಜನರ ಹೆಸರುಗಳನ್ನು ಅಂತಿಮ ತೀರ್ಪಿನ ನಂತರ ಸೇರಿಸಿದರೆ... ಮತ ಚಲಾಯಿಸಲು ಅವಕಾಶ - ಸುಪ್ರೀಂ
ಜನರ ಹೆಸರುಗಳನ್ನು ಅಂತಿಮ ತೀರ್ಪಿನ ನಂತರ ಸೇರಿಸಿದರೆ... ಮತ ಚಲಾಯಿಸಲು ಅವಕಾಶ - ಸುಪ್ರೀಂ
ಹಿರಿಯ ಗಾಯಕಿ ಆಶಾ ಬೋಸ್ಲೆ ನಿಧನ : ಪ್ರಧಾನಿ ಮೋದಿ ಸಂತಾಪ
ಹಿರಿಯ ಗಾಯಕಿ ಆಶಾ ಬೋಸ್ಲೆ ನಿಧನ : ಪ್ರಧಾನಿ ಮೋದಿ ಸಂತಾಪ
 ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ವಂದೇ ಭಾರತ್ ಸ್ಲೀಪರ್ ರೈಲು ಸೇವೆಗೆ ಅನುಮೋದನೆ
ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ವಂದೇ ಭಾರತ್ ಸ್ಲೀಪರ್ ರೈಲು ಸೇವೆಗೆ ಅನುಮೋದನೆ
ನಾಸಿಕ್ ಟಿಸಿಎಸ್ ಪ್ರಕರಣ: ಮತಾಂತರ, ಮೂಲಭೂತೀಕರಣ ಆರೋಪಗಳ ಮೇಲೆ ತನಿಖೆ ಆರಂಭ
ನಾಸಿಕ್ ಟಿಸಿಎಸ್ ಪ್ರಕರಣ: ಮತಾಂತರ, ಮೂಲಭೂತೀಕರಣ ಆರೋಪಗಳ ಮೇಲೆ ತನಿಖೆ ಆರಂಭ
ದೋಷಾರೋಪಣೆ ಪ್ರಕ್ರಿಯೆ ಆರಂಭವಾದ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ
ದೋಷಾರೋಪಣೆ ಪ್ರಕ್ರಿಯೆ ಆರಂಭವಾದ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ
2008ರ ಮಾಲೆಗಾಂವ್ ಸ್ಫೋಟ ಪ್ರಕರಣ: ಕರ್ನಲ್ ಪುರೋಹಿತ್‌ಗೆ ಬ್ರಿಗೇಡಿಯರ್ ಬಡ್ತಿಗೆ ಅನುಮತಿ
2008ರ ಮಾಲೆಗಾಂವ್ ಸ್ಫೋಟ ಪ್ರಕರಣ: ಕರ್ನಲ್ ಪುರೋಹಿತ್‌ಗೆ ಬ್ರಿಗೇಡಿಯರ್ ಬಡ್ತಿಗೆ ಅನುಮತಿ
ಪ್ರತಿಯೊಬ್ಬ ಸೈನಿಕ ಡ್ರೋನ್ ಹಾರಿಸಲು ಸಿದ್ದವಾಗಬೇಕು - ಪ್ರತಿ ಸೈನಿಕನಿಗೆ ಡ್ರೋನ್ ಒದಗಿಸಲು ಸೇನಾ ಮುಖ್ಯಸ್ಥರು
ಪ್ರತಿಯೊಬ್ಬ ಸೈನಿಕ ಡ್ರೋನ್ ಹಾರಿಸಲು ಸಿದ್ದವಾಗಬೇಕು - ಪ್ರತಿ ಸೈನಿಕನಿಗೆ ಡ್ರೋನ್ ಒದಗಿಸಲು ಸೇನಾ ಮುಖ್ಯಸ್ಥರು
ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳಿಗೆ ಶಿಕ್ಷೆ ವಿಧಿಸಿದ ಬೆಂಗಳೂರು ನ್ಯಾಯಾಲಯ
ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳಿಗೆ ಶಿಕ್ಷೆ ವಿಧಿಸಿದ ಬೆಂಗಳೂರು ನ್ಯಾಯಾಲಯ

ನ್ಯೂಸ್ MORE NEWS...