Sun,Jul26,2026
ಕನ್ನಡ / English

ಅಕ್ಕಿ ವಿಷಯವಾಗಿ ಕಾಂಗ್ರೆಸ್ ಸರ್ಕಾರ ಪರ್ಯಾಯ ವ್ಯವಸ್ಥೆ ಮಾಡಬೇಕಿತ್ತು, ಸರ್ಕಾರದ ಜನಪ್ರಿಯತೆ ಬಹಳ ದಿನ ಉಳಿಯಲ್ಲ! | JANATA NEWS

18 Jun 2023

ಹುಬ್ಬಳ್ಳಿ : ಕಾಂಗ್ರೆಸ್ ಸರ್ಕಾರದ ಜನಪ್ರಿಯತೆ ಬಹಳ ದಿನ ಉಳಿಯುವುದಿಲ್ಲ. ಅಕ್ಕಿ ವಿಷಯವಾಗಿ ಕಾಂಗ್ರೆಸ್ ನಾಯಕರು ಪರ್ಯಾಯ ವ್ಯವಸ್ಥೆ ಮಾಡುವ ಬದಲಿಗೆ ಕುಂಟು ನೆಪ ಹೇಳುತ್ತಿದ್ದಾರೆ. ಕೇಂದ್ರದ ವಿರುದ್ಧ ಬೆಟ್ಟು ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.

ಹುಬ್ಬಳ್ಳಿ ತಾಲೂಕಿನ ಛಬ್ಬಿ ಗ್ರಾಮದಲ್ಲಿ ಮಾತನಾಡಿದ ಅವರು, ಇದು ಕಾಂಗ್ರೆಸ್ ಗ್ಯಾರಂಟಿಯಿಂದ ಹಿಂದೆ ಹೋದಂತೆ ಅರ್ಥ. ಇದೀಗ ಛತ್ತೀಸಗಡದಿಂದ ಅಕ್ಕಿ ತರುತ್ತೇವೆ ಎನ್ನುತ್ತಿದ್ದಾರೆ. ನಮಗೆ ಬಡಜನರಿಗೆ ಒಳ್ಳೆಯದು ಆದರೆ ಸಾಕು. ಎಲ್ಲಿಂದ ತೆಗೆದುಕೊಳ್ಳಬೇಕು, ಹೇಗೆ ತೆಗೆದುಕೊಳ್ಳಬೇಕು ಎನ್ನುವ ಪ್ರಶ್ನೆಯೇ ಇಲ್ಲ. ರಾಜ್ಯದ ರೈತರು ಅಕ್ಕಿ ಕೊಡಲು ಮುಂದೆ ಬಂದರೆ ಅದನ್ನು ಖರೀದಿ ಮಾಡಬೇಕು. ಬಿಜೆಪಿಯವರೇ ಕೊಡಸಿ ಎನ್ನುವುದು ಸರಿ ಅಲ್ಲ ಎಂದರು.

ಗ್ಯಾರಂಟಿ ಭ್ರಮೆ ಹುಟ್ಟಿಸಿದ್ದು ನೋಡಿದರೆ, ಸರಕಾರದ ಜನಪ್ರಿಯತೆ ಬಹಳ ದಿನ ಉಳಿಯಲ್ಲ. ನೀರು ಕೊಡದ ಸರಕಾರ ತೆಗೆದುಕೊಂಡು ಏನು ಮಾಡಬೇಕು ಎಂದರು.

ಅಕ್ಕಿ ವಿಷಯವಾಗಿ ಕಾಂಗ್ರೆಸ್ ಸರ್ಕಾರ ಪರ್ಯಾಯ ವ್ಯವಸ್ಥೆ ಮಾಡಬೇಕಿತ್ತು. ಇದೀಗ ಅಕ್ಕಿ ಬರಲ್ಲ ಅಂತ ಕುಂಟುನೆಪ ಹೇಳುತ್ತಿದ್ದಾರೆ. ಇದು ಕಾಂಗ್ರೆಸ್ ಗ್ಯಾರಂಟಿಯಿಂದ ಹಿಂದೆ ಹೋದಂತೆ ಅರ್ಥ. ಈಗ ಛತ್ತೀಸ್ ಗಢದಿಂದ ಅಕ್ಕಿ ತರುತ್ತೇವೆ ಎನ್ನುತ್ತಿದ್ದಾರೆ. ಏನೆಯಾದರು ಬಡ ಜನರಿಗೆ ಒಳ್ಳೆಯದಾದರೆ ಸಾಕು ನಮಗೆ ಎಂದರು.

ಅಕ್ಕಿಯನ್ನು ಎಲ್ಲಿಂದ ತೆಗೆದುಕೊಳ್ಳಬೇಕು, ಹೇಗೆ ತೆಗೆದುಕೊಳ್ಳಬೇಕು ಎನ್ನುವ ಪ್ರಶ್ನೆ ಇದೆ. ರಾಜ್ಯದ ರೈತರು ಅಕ್ಕಿ ಕೊಡುವುದಕ್ಕೆ ಮುಂದೆ ಬಂದರೆ ಅದನ್ನು ಖರೀದಿ ಮಾಡಬೇಕು. ಬಿಜೆಪಿಯವರೇ ಕೊಡಸಿ ಎನ್ನುವುದು ಸರಿಯಲ್ಲ. ಒಂದು ವೇಳೆ ಪ್ರತಿ ತಿಂಗಳೂ ಒಂದನೇ ತಾರೀಕಿಗೆ ರಾಜ್ಯದ ಜನರಿಗೆ ಅಕ್ಕಿ ಕೊಡದೆ ಹೋದರೆ, ನಾವು ಪ್ರತಿಭಟನೆ ಮಾಡುತ್ತೇವೆ ಎಂದು ಅವರು ಎಚ್ಚರಿಕೆ ನೀಡಿದರು.

ರಾಜ್ಯದಲ್ಲಿ ಬರಗಾಲ ಇದೆ. 500 ಹಳ್ಳಿಗೆ ಕುಡಿಯುವ ನೀರಿನ ಸಮಸ್ಯೆ ಇದೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಸುತ್ತಿಲ್ಲ. ಕೇವಲ ವಿಡಿಯೋ ಕಾನ್ಫರೆನ್ಸ್ ಮಾಡಿ ಸುಮ್ಮನಾಗಿದೆ. ಬರಗಾಲ ಇದ್ದ ಕಡೆ ಟಾಸ್ಕಪೋರ್ಸ್ ರಚನೆ ಮಾಡಬೇಕು ಎಂದರು.

RELATED TOPICS:
English summary :The Congress government should have made an alternative arrangement in the matter of rice

ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ  ರಿಜಿಜು ಮನವಿ
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ ರಿಜಿಜು ಮನವಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ
ಇದು ನನ್ನ ಬಯಕೆ,. ನನ್ನ ಬೇಡಿಕೆಗಳು ಬದಲಾಗಿವೆ ಎಂದ ರಾಹುಲ್ ಗಾಂಧಿ ಮಾತುಗಳು ಸರಿಯಲ್ಲ - ಕೇಂದ್ರ ಸಚಿವ ಸಿಂಗ್
ಇದು ನನ್ನ ಬಯಕೆ,. ನನ್ನ ಬೇಡಿಕೆಗಳು ಬದಲಾಗಿವೆ ಎಂದ ರಾಹುಲ್ ಗಾಂಧಿ ಮಾತುಗಳು ಸರಿಯಲ್ಲ - ಕೇಂದ್ರ ಸಚಿವ ಸಿಂಗ್

ನ್ಯೂಸ್ MORE NEWS...