Sun,Jul26,2026
ಕನ್ನಡ / English

ಈಗಾಗಲೇ ಕೇಂದ್ರ ಸರ್ಕಾರ 5 ಕೆಜಿ ಅಕ್ಕಿ ಉಚಿತವಾಗಿ ಕೊಡುತ್ತಿದೆ, ಹೆಚ್ಚು ಅಕ್ಕಿ ಕೊಡಲು ಒಪ್ಪಿರಲಿಲ್ಲ ಅಷ್ಟೇ, ಅಕ್ಕಿ ವಿತರಣೆ ರಾಜ್ಯ ಸರ್ಕಾರದ ಜವಾಬ್ದಾರಿ! | JANATA NEWS

18 Jun 2023

ಶಿವಮೊಗ್ಗ : ಅಕ್ಕಿ ವಿತರಣೆ ರಾಜ್ಯ ಸರ್ಕಾರದ ಜವಾಬ್ದಾರಿ, ಕಾಂಗ್ರೆಸ್ ಎಲ್ಲಿಯಾದರೂ ಖರೀದಿ ಮಾಡಿ ಕೊಡಲಿ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ರಾಜ್ಯದ ಜನರಿಗೆ 10 ಕೆ.ಜಿ. ಅಕ್ಕಿ ಕೊಡುವ ಗ್ಯಾರಂಟಿ ಅನುಷ್ಠಾನದ ವಿಚಾರದಲ್ಲಿ ಕೇಂದ್ರದ ವಿರುದ್ಧ ಆರೋಪ ಮಾಡುವ ಮೂಲಕ ರಾಜ್ಯದ ಕಾಂಗ್ರೆಸ್ ಸರ್ಕಾರ ಸುಮ್ಮನೆ ಗೊಂದಲ ಸೃಷ್ಟಿಸಿದೆ ಎಂದು ಬಿಎಸ್ ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.

ಈಗಾಗಲೇ ಕೇಂದ್ರ ಸರ್ಕಾರ 5 ಕೆಜಿ ಅಕ್ಕಿ ಉಚಿತವಾಗಿ ಕೊಡುತ್ತಿದೆ. ಹೆಚ್ಚುವರಿಯಾಗಿ ಅಕ್ಕಿ ಕೊಡಲು ಕೇಂದ್ರ ಒಪ್ಪಿರಲಿಲ್ಲ. ಅದು ರಾಜ್ಯ ಸರ್ಕಾರದ ಜವಾಬ್ದಾರಿ, ಎಲ್ಲಿಯಾದರೂ ಖರೀದಿ ಮಾಡಿ ಕೊಡಲಿ ಎಂದು ಹೇಳಿದರು.

ಕಾಂಗ್ರೆಸ್ ನಾಯಕರು 10 ಕೆಜಿ ಅಕ್ಕಿ ವಿತರಣೆ ಮಾಡುತ್ತೇವೆ ಎಂದು ಭರವಸೆ ಕೊಟ್ಟಿದ್ದರು. ಅದರಂತೆ ಅಕ್ಕಿ ವಿತರಣೆ ಮಾಡಬೇಕು. 1 ಗ್ರಾಂ ಕಡಿಮೆಯಾದರೂ ಜನ ಅದನ್ನು ಒಪ್ಪುವುದಿಲ್ಲ. ಕೇಂದ್ರ ಸರ್ಕಾರವನ್ನು ಅನಗತ್ಯ ದೂಷಿಸುವುದು ಸರಿಯಲ್ಲ.

ಹಾಗೇ ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ಮತ್ತೊಂದು ಎಚ್ಚರಿಕೆ ನೀಡಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ. ಕಾಂಗ್ರೆಸ್ ನಾಯಕರು 10 ಕೆ.ಜಿ. ಅಕ್ಕಿಯನ್ನ ಕೊಡುತ್ತೇವೆ ಅಂತಾ ಚುನಾವಣೆಗೆ ಮುನ್ನ ಭರವಸೆ ಕೊಟ್ಟಿದ್ದರು. ಅದರಂತೆ ಅಷ್ಟೂ ಅಕ್ಕಿ ವಿತರಣೆ ಮಾಡಬೇಕಿದೆ. 1 ಗ್ರಾಂ ಕಡಿಮೆಯಾದರೂ ರಾಜ್ಯದ ಜನರು ಒಪ್ಪಲ್ಲ. ಅವರು ಕೊಟ್ಟ ಭರವಸೆ ಈಡೇರಿಸಬೇಕು ಎಂದು ಯಡಿಯೂರಪ್ಪ ಆಗ್ರಹಿಸಿದ್ದಾರೆ. ಅಲ್ಲದೆ ಅಕ್ಕಿ ವಿಚಾರದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಮಾತನಾಡಿದ್ದ ಕಾಂಗ್ರೆಸ್ ನಾಯಕರಿಗೆ ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ.

RELATED TOPICS:
English summary :Distribution of rice is the responsibility of the state government, buy it and give it anywhere

ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ  ರಿಜಿಜು ಮನವಿ
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ ರಿಜಿಜು ಮನವಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ

ನ್ಯೂಸ್ MORE NEWS...