Wed,Feb04,2026
ಕನ್ನಡ / English

ಗ್ಯಾರಂಟಿಗಳನ್ನು ಘೋಷಿಸುವಾಗ ಕಾಂಗ್ರೆಸ್​ ನಾಯಕರ ತಲೆಯಲ್ಲಿ ಮೆದುಳು ಇರಲಿಲ್ಲವೇ ಸಗಣಿ ತುಂಬಿತ್ತೇ? | JANATA NEWS

21 Jun 2023

ಚಿಕ್ಕಮಗಳೂರು : ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್​ ಪಕ್ಷ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಒಂದಾದ ಅನ್ನಭಾಗ್ಯ ಯೋಜನೆ ಜಾರಿಗೆ ಸಂಬಂಧಿಸಿದಂತೆ ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಗ್ಯಾರಂಟಿಗಳನ್ನು ಘೋಷಿಸುವಾಗ ಕಾಂಗ್ರೆಸ್​ ನಾಯಕರ ತಲೆಯಲ್ಲಿ ಮೆದುಳು ಇರಲಿಲ್ಲವೇ ಸಗಣಿ ತುಂಬಿತ್ತೇ ಎಂದು ಪ್ರಶ್ನಿಸಿದ್ದಾರೆ.

ಕೇಂದ್ರ ಸರ್ಕಾರದ 5 ಕೆಜಿ ಅಕ್ಕಿ ಜೊತೆ ನೀವು ಘೋಷಿಸಿರುವಂತೆ 10 ಕೆಜಿ ಅಕ್ಕಿ ಕೊಡಿ. ಅಂದರೆ ಒಬ್ಬರಿಗೆ ತಲಾ 15 ಕೆಜಿ ಅಕ್ಕಿ ಕೊಡಬೇಕು. ಅಕ್ಕಿ ಕೊಡಲು ಆಗದಿದ್ದರೆ ಅಧಿಕಾರ ಬಿಟ್ಟು ತೊಲಗಿ ಎಂದು ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಕೇಂದ್ರ ಸರ್ಕಾರ ಅಕ್ಕಿ ದಾಸ್ತಾನು ಇಟ್ಟುಕೊಂಡಿರುವುದು ತುರ್ತು ಸಂದರ್ಭಕ್ಕಅಗಿಯೇ ಹೊರತು ಕರ್ನಾಟಕಕ್ಕೆ ಕೊಡುವುದಕ್ಕೆ ಅಲ್ಲ. ಬರ, ಸಾಂಕ್ರಾಮಿಕ, ನೆರೆಯಂತಹ ಸಂದರ್ಭಗಳನ್ನು ನಿಭಾಯಿಸಲೆಂದು ಅಕ್ಕಿಯನ್ನು ದಾಸ್ತಾನು ಇಟ್ಟುಕೊಳ್ಳಲಾಗಿದೆ. ಬೇರೆ ರಾಜ್ಯಗಳಿಂದ ಅಥವಾ ರೈತರಿಂದ ಅಕ್ಕಿಯನ್ನು ಖರೀದಿಸಿ ಕಾಂಗ್ರೆಸ್​ನವರು ಜನತೆಗೆ ಕೊಡಲಿ ಎಂದು ಆಗ್ರಹಿಸಿದ್ದಾರೆ.

ಒಂದೇ ತಿಂಗಳಿಗೆ ರಾಜ್ಯದಲ್ಲಿ ಅರಾಜಕತೆ ತುಂಬಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ ಅವರು, ಕಾಂಗ್ರೆಸ್ಸಿಗರಿಗೆ ಮಾನ-ಮರ್ಯಾದೆ ಇಲ್ಲ. ವೋಟು ಹಾಕಿಸಿಕೊಂಡು ಜನರಿಗೆ ಮೋಸ ಮಾಡಿದ್ದೀರಾ. ಸಿದ್ದರಾಮಯ್ಯನವರೇ ನಿಮ್ಮ ಬೇಜವಾಬ್ದಾರಿ ಹೇಳಿಕೆಗಳನ್ನು ವಾಪಸ್ಸು ತೆಗೆದುಕೊಳ್ಳಿ. ರಾಜ್ಯ ಸರ್ಕಾರ ಒಂದು ಬೇಜವಾಬ್ದಾರಿಯ ಸರ್ಕಾರ. ಚುನಾವಣೆಯನ್ನು ಗೆಲ್ಲುವುದಕ್ಕೆ ಇಲ್ಲಸಲ್ಲದ ಭರವಸೆ, ಆಸೆ ತೋರಿಸಿದ್ದರು ಎಂದು ವಾಗ್ದಾಳಿ ನಡೆಸಿದರು.

ಕಾಂಗ್ರೆಸ್​ ಸರ್ಕಾರ ಅಧಿಕಾರಕ್ಕೆ ಬಂದ ಒಂದು ತಿಂಗಳಲ್ಲೇ ರಾಜ್ಯದಲ್ಲಿ ಅರಾಜಕತೆ ಸೃಷ್ಟಿಯಾಗಿದೆ. ಕೊಟ್ಟ ಮಾತಿನಂತೆ ನಡೆದುಕೊಳ್ಳಲಾಗದೆ ಸಿದ್ದರಾಮಯ್ಯನವರು ಪ್ರಧಾನಿ ನರೇಂದ್ರ ಮೋದಿ ಅವರತ್ತ ಬೊಟ್ಟು ಮಾಡುತ್ತಿದ್ಧಾರೆ. ಗ್ಯಾರಂಟಿಗ ಹೆಸರಿನಲ್ಲಿ ಮತ ಪಡೆದಿರುವ ಸಿದ್ದರಾಮಯ್ಯನವರು ಅಧಿಕಾರ ನಡೆಸುವ ಯೋಗ್ಯತೆ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

RELATED TOPICS:
English summary :Did the Congress leaders not have brains while announcing the guarantees?

ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್, ಭಾರತೀಯ ಸರಕುಗಳ ಮೇಲಿನ ಸುಂಕ ಕಡಿತ ಘೋಷಣೆ
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್, ಭಾರತೀಯ ಸರಕುಗಳ ಮೇಲಿನ ಸುಂಕ ಕಡಿತ ಘೋಷಣೆ
ಸರ್ಕಾರಿ ಸಂಸ್ಥೆಗಳಿಗೆ ನೆಹರು-ಗಾಂಧಿ ಕುಟುಂಬದ ಹೆಸರಿಡುವ ವಿಚಾರವಾಗಿ ವಿಧಾನಸಭೆಯಲ್ಲಿ ಗದ್ದಲ
ಸರ್ಕಾರಿ ಸಂಸ್ಥೆಗಳಿಗೆ ನೆಹರು-ಗಾಂಧಿ ಕುಟುಂಬದ ಹೆಸರಿಡುವ ವಿಚಾರವಾಗಿ ವಿಧಾನಸಭೆಯಲ್ಲಿ ಗದ್ದಲ
ಭದ್ರತಾ ಪಡೆಗಳು ಕಾರ್ಯಾಚರಣೆ ಹೆಚ್ಚಿಸಿದ ನಂತರವೂ ಬಲೂಚಿಸ್ತಾನದಲ್ಲಿ ಪಾಕ್ ಸೇನೆಯ ಹಿನ್ನಡೆ ಮುಂದುವರೆದಿದೆ
ಭದ್ರತಾ ಪಡೆಗಳು ಕಾರ್ಯಾಚರಣೆ ಹೆಚ್ಚಿಸಿದ ನಂತರವೂ ಬಲೂಚಿಸ್ತಾನದಲ್ಲಿ ಪಾಕ್ ಸೇನೆಯ ಹಿನ್ನಡೆ ಮುಂದುವರೆದಿದೆ
 ಹಣಕ್ಕಾಗಿ ಭಿಕ್ಷೆ ಬೇಡಲು ನಮಗೆ ನಾಚಿಕೆಯಾಗುತ್ತಿದೆ - ಆರ್ಥಿಕ ಸಂಕಷ್ಟ ಒಪ್ಪಿಕೊಂಡ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್
ಹಣಕ್ಕಾಗಿ ಭಿಕ್ಷೆ ಬೇಡಲು ನಮಗೆ ನಾಚಿಕೆಯಾಗುತ್ತಿದೆ - ಆರ್ಥಿಕ ಸಂಕಷ್ಟ ಒಪ್ಪಿಕೊಂಡ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್
ಮೈಸೂರಿನಲ್ಲಿ ರಹಸ್ಯ ಡ್ರಗ್ಸ್ ಪ್ರಯೋಗಾಲಯ ಬಯಲು :ಪ್ರಮುಖ ಅಂತರರಾಜ್ಯ ಮಾದಕ ವಸ್ತುಗಳ ಸಿಂಡಿಕೇಟ್ ಮೇಲೆ ಎನ್‌ಸಿಬಿ ದಾಳಿ
ಮೈಸೂರಿನಲ್ಲಿ ರಹಸ್ಯ ಡ್ರಗ್ಸ್ ಪ್ರಯೋಗಾಲಯ ಬಯಲು :ಪ್ರಮುಖ ಅಂತರರಾಜ್ಯ ಮಾದಕ ವಸ್ತುಗಳ ಸಿಂಡಿಕೇಟ್ ಮೇಲೆ ಎನ್‌ಸಿಬಿ ದಾಳಿ
ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿಜೆ ರಾಯ್ ಶವವಾಗಿ ಪತ್ತೆಯಾಗಿದ್ದಾರೆ : ಆತ್ಮಹತ್ಯೆ ಶಂಕೆ
ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿಜೆ ರಾಯ್ ಶವವಾಗಿ ಪತ್ತೆಯಾಗಿದ್ದಾರೆ : ಆತ್ಮಹತ್ಯೆ ಶಂಕೆ
ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿಜೆ ರಾಯ್ ಶವವಾಗಿ ಪತ್ತೆಯಾಗಿದ್ದಾರೆ : ಆತ್ಮಹತ್ಯೆ ಶಂಕೆ
ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿಜೆ ರಾಯ್ ಶವವಾಗಿ ಪತ್ತೆಯಾಗಿದ್ದಾರೆ : ಆತ್ಮಹತ್ಯೆ ಶಂಕೆ
ಟಿಎಂಸಿ ಸರ್ಕಾರಕ್ಕೆ ಭಾರಿ ಹಿನ್ನಡೆ : ಗಡಿ ಭೂಮಿ ಬಿಎಸ್‌ಎಫ್‌ಗೆ ಹಸ್ತಾಂತರಿಸುವಂತೆ ಪ.ಬಂ.ಸರ್ಕಾರಕ್ಕೆ ಕಲ್ಕತ್ತಾ ಹೈಕೋರ್ಟ್ ಆದೇಶ
ಟಿಎಂಸಿ ಸರ್ಕಾರಕ್ಕೆ ಭಾರಿ ಹಿನ್ನಡೆ : ಗಡಿ ಭೂಮಿ ಬಿಎಸ್‌ಎಫ್‌ಗೆ ಹಸ್ತಾಂತರಿಸುವಂತೆ ಪ.ಬಂ.ಸರ್ಕಾರಕ್ಕೆ ಕಲ್ಕತ್ತಾ ಹೈಕೋರ್ಟ್ ಆದೇಶ
ಹೊಸ ಯುಜಿಸಿ ಸಮಾನತೆ ನಿಯಮಗಳಿಗೆ ಸುಪ್ರೀಂ ಕೋರ್ಟ್ ವಿರಾಮ: ಏನು ಮತ್ತು ಹೇಗೆ?
ಹೊಸ ಯುಜಿಸಿ ಸಮಾನತೆ ನಿಯಮಗಳಿಗೆ ಸುಪ್ರೀಂ ಕೋರ್ಟ್ ವಿರಾಮ: ಏನು ಮತ್ತು ಹೇಗೆ?
ಖಾಸಗಿ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ದೇಶಾದ್ಯಂತ ಶೋಕ
ಖಾಸಗಿ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ದೇಶಾದ್ಯಂತ ಶೋಕ
ರಾಜ್ಯದಲ್ಲಿ ಮತ್ತೊಂದು ಸ್ಲೀಪರ್ ನೈಟ್ ಬಸ್ ಬೆಂಕಿಗೆ ಆಹುತಿ
ರಾಜ್ಯದಲ್ಲಿ ಮತ್ತೊಂದು ಸ್ಲೀಪರ್ ನೈಟ್ ಬಸ್ ಬೆಂಕಿಗೆ ಆಹುತಿ
ಜಗತ್ತಿನ ಎಲ್ಲಾ ಒಪ್ಪಂದಗಳ ತಾಯಿ : ಭಾರತ-ಇಯು ವ್ಯಾಪಾರ ಒಪ್ಪಂದವು ಕಾರ್ಯತಂತ್ರದ ಸಹಭಾಗಿತ್ವದಲ್ಲಿ ಪ್ರಮುಖ ಹೆಜ್ಜೆ
ಜಗತ್ತಿನ ಎಲ್ಲಾ ಒಪ್ಪಂದಗಳ ತಾಯಿ : ಭಾರತ-ಇಯು ವ್ಯಾಪಾರ ಒಪ್ಪಂದವು ಕಾರ್ಯತಂತ್ರದ ಸಹಭಾಗಿತ್ವದಲ್ಲಿ ಪ್ರಮುಖ ಹೆಜ್ಜೆ

ನ್ಯೂಸ್ MORE NEWS...