Sun,Jul26,2026
ಕನ್ನಡ / English

ಜು.5ರೊಳಗೆ ಎಲ್ಲ ಭರವಸೆ ಈಡೇರಿಸಬೇಕು, ಈಡೇರಿಸದಿದ್ದಲ್ಲಿ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ | JANATA NEWS

22 Jun 2023

ದಾವಣಗೆರೆ : ಜು.5ರೊಳಗೆ ಎಲ್ಲ ಭರವಸೆ ಈಡೇರಿಸಬೇಕು, ಈಡೇರಿಸದಿದ್ದಲ್ಲಿ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸುವುದಾಗಿ ಬಿ.ಎಸ್. ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.

ದಾವಣಗೆರೆಯಲ್ಲಿ ಮಾತನಾಡಿದ ಅವರು, ಕೇಂದ್ರದವರು ಅಕ್ಕಿ ಕೊಡುವುದಾಗಿ ಹೇಳಿರಲಿಲ್ಲ. ಕೇಂದ್ರ ಸರ್ಕಾರ ನೀಡುತ್ತಿರುವ 5 ಕೆಜಿ ಜೊತೆಗೆ ರಾಜ್ಯ ಸರ್ಕಾರ 10 ಕೆಜಿ ಸೇರಿ ಪ್ರತಿಯೊಬ್ಬರಿಗೆ 15 ಕೆಜಿ ಅಕ್ಕಿ ಕೊಡಬೇಕು ಎಂದು ಒತ್ತಾಯಿಸಿ ಬಜೆಟ್ ಅಧಿವೇಶನ ಪ್ರಾರಂಭದಿಂದ ಮುಗಿಯುವರೆಗೂ ವಿಧಾನ ಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಎದುರು ತಾವೇ ಧರಣಿ, ಸತ್ಯಾಗ್ರಹ ನಡೆಸುವುದಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.

ಕಾಂಗ್ರೆಸ್ ತನ್ನ ಸುಳ್ಳು ಭರವಸೆಯಿಂದ ಇಷ್ಟು ಸೀಟು ಗೆದ್ದಿದೆ ಎಂದು ತಿಳಿಸಿದರು. ಭರವಸೆ ಈಡೇರಿಸಲು ಯೋಗ್ಯತೆ ಇರದಿದ್ದರೆ ಅಧಿಕಾರ ಬಿಟ್ಟು ತೊಲಗಬೇಕು ಎಂದು ಅವರು ಆಗ್ರಹಿಸಿದರು.

ರಾಜ್ಯ ಸರ್ಕಾರ ಗ್ಯಾರಂಟಿಗಳನ್ನು ಜಾರಿಗೆ ತರದಿದ್ದರೆ ಗಾಂಧಿ ಪ್ರತಿಮೆ ಬಳಿ ಧರಣಿ ನಡೆಸುತ್ತೇವೆ. ಇದರಲ್ಲಿ ಬಿಜೆಪಿ ರಾಜ್ಯ ನಾಯಕರು ಭಾಗವಹಿಸುತ್ತಾರೆ. ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣದ ನಂತರ ಪ್ರತಿಭಟನೆ ನಡೆಸಲಾಗುವುದು. ರಾಜ್ಯ ಸರ್ಕಾರ ಕೊಟ್ಟ ಭರವಸೆ ಈಡೇರಿಸುವವರೆಗೂ ನಾವು ಪ್ರತಿಭಟನೆ ಕೈ ಬಿಡುವುದಿಲ್ಲ ಎಂದರು.

ರಾಜ್ಯಾದ್ಯಂತ 7 ತಂಡಗಳ ಪ್ರವಾಸ ಶುರುವಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಪ್ರವಾಸ ಮುಗಿಸಿ ಇಂದು ದಾವಣಗೆರೆ ಜಿಲ್ಲೆಗೆ ಬಂದಿದ್ದೇನೆ. ಕಾಂಗ್ರೆಸ್ ಸರ್ಕಾರ ಮನೆ‌ ಮನೆಗೆ ಹೋಗಿ 5 ಗ್ಯಾರಂಟಿ ಪತ್ರ ಕೊಟ್ಟು ಬಂದಿದ್ದಾರೆ.

ಕಾಂಗ್ರೆಸ್ ಪಕ್ಷವು 5 ಗ್ಯಾರಂಟಿ ಕೊಟ್ಟಿದ್ದು, ಮಹಿಳೆಯರಿಗೆ ಉಚಿತ ಬಸ್ ಎಂಬುದು ಜಾರಿಯಲ್ಲಿದೆ. ಅದಕ್ಕೂ ಕೆಲವು ಅಡ್ಡಿ ಆತಂಕಗಳಿವೆ. ಉಳಿದ 4 ಗ್ಯಾರಂಟಿಗಳನ್ನು ವಿಧಾನಮಂಡಲ ಅಧಿವೇಶನಕ್ಕೆ ಮೊದಲು ಕಾರ್ಯರೂಪಕ್ಕೆ ತರದೆ ಇದ್ದರೆ ಸದನದ ಒಳಗೆ ಮತ್ತು ಹೊರಗಡೆ ಸತ್ಯಾಗ್ರಹ ಮಾಡಲಿದ್ದೇವೆ ಎಂದು ಎಚ್ಚರಿಸಿದರು.

ಇಂದು ರಾತ್ರಿ 12 ಗಂಟೆಗೆ ಅಮೆರಿಕ ಸಂಸತ್ ಉದ್ದೇಶಿಸಿ ನಮ್ಮ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ. ನರೇಂದ್ರ ಮೋದಿ ಅಂತವರು ಪ್ರಧಾನಿಯಾಗಿ ಸಿಕ್ಕಿರುವುದು ನಮ್ಮ ಸೌಭಾಗ್ಯ ಎಂದರು.

ನರೇಂದ್ರ ಮೋದಿ ಅವರು ಪ್ರಧಾನಿಯಾದ ಮೇಲೆ ಭಾರತ ಜಗತ್ತಿನ 5 ನೇ ಅತಿ ದೊಡ್ಡ ಆರ್ಥಿಕ ಶಕ್ತಿಯ ದೇಶ ವಾಗಿದೆ. ಎಂಟು ವರ್ಷಗಳಲ್ಲಿ 530 ಬಿಲಿಯನ್ ಡಾಲರ್ ಬಂಡವಾಳವನ್ನು ಭಾರತದಲ್ಲಿ ಹೂಡಿಕೆ ಮಾಡಲಾ ಗಿದೆ. ಸ್ಟಾರ್ಟಪ್‌ನಲ್ಲಿ ವಿಶ್ವದ ಮೂರನೇ ರಾಷ್ಟ್ಟವಾಗಿದೆ. 2023ರಲ್ಲಿ ಅಮೆರಿಕಾ, ಚೀನಾಕ್ಕಿಂತಲೂ ಹೆಚ್ಚಿನ ಜಿಡಿಪಿ ಹೊಂದಿದೆ. ಈಗ ಭಾರತದ ಜಿಡಿಪಿ ಶೇ.9.1 ರಷ್ಟಿದೆ. ವಿವಿಧ ಯೋಜನೆಗಳ ಮೂಲಕ ಜನರ ಖಾತೆಗೆ ನೇರ ಹಣ ವರ್ಗಾವಣೆ ಆಗಿದೆ. ಆದರೂ, ಕರ್ನಾಟಕದ ಕಾಂಗ್ರೆಸ್‌ನವರು ಬಾಯಿ ಬಡುಕರಂತೆ ಮೋದಿಯವರ ಬಗ್ಗೆ ಮನ ಬಂದಂತೆ ಮಾತನಾಡುತ್ತಾರೆ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

RELATED TOPICS:
English summary :All the promises should be fulfilled by June 5, if not fulfilled, protest near the Gandhi statue of Vidhansouda.

ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ  ರಿಜಿಜು ಮನವಿ
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ ರಿಜಿಜು ಮನವಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ

ನ್ಯೂಸ್ MORE NEWS...