Sun,Jul26,2026
ಕನ್ನಡ / English

ನಾವು ಸೋತ ಬಿಜೆಪಿ ಅಭ್ಯರ್ಥಿಗಳನ್ನು ಸೆಳೆಯುತ್ತಿಲ್ಲ. ಅಲ್ಲೇ ಬಿರುಕು, ಅಸಮಾಧಾನ ಸೃಷ್ಟಿ ಆಗುತ್ತಿದೆ! | JANATA NEWS

24 Jun 2023

ಹುಬ್ಬಳ್ಳಿ : ಬಿಜೆಪಿಯಲ್ಲಿ ಬಹಳಷ್ಟು ಅಸಮಾಧಾನ ಇದೆ. ಅದು ಯಾವಾಗ ಸ್ಫೋಟ ಆಗುತ್ತದೆ ಎಂಬುದು ಗೊತ್ತಿಲ್ಲ. ನಾವು ಸೋತ ಬಿಜೆಪಿ ಅಭ್ಯರ್ಥಿಗಳನ್ನು ಸೆಳೆಯುತ್ತಿಲ್ಲ. ಅಲ್ಲೇ ಬಿರುಕು, ಅಸಮಾಧಾನ ಸೃಷ್ಟಿ ಆಗುತ್ತಿದೆ ಎಂದು ನೂತನ ವಿಧಾನ ಪರಿಷತ್‌ ಸದಸ್ಯ ಜಗದೀಶ್‌ ಶೆಟ್ಟರ್‌ ಹೇಳಿದ್ದಾರೆ.

ರಂಟಿಗಳು ಬಡ ಜನತೆಗೆ ಅನುಕೂಲಕರವಾಗಿದ್ದು ಅವುಗಳನ್ನು ಸಹಿಸಿಕೊಳ್ಳುವ ಕೆಲಸ ಬಿಜೆಪಿ ಅವರಿಂದ ಆಗುತ್ತಿಲ್ಲ ಎಂದರು.

ಭಾರತೀಯ ಆಹಾರ ನಿಗಮದ (ಎಫ್ಸಿಐ) ಮೂಲಕ ಕರ್ನಾಟಕ ಅಕ್ಕಿ ಖರೀದಿಗೆ ನಿರಾಕರಿಸಿರುವ ಕೇಂದ್ರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಜಗದೀಶ್ ಶೆಟ್ಟರ್, ಇದು ಅಕ್ಷಮ್ಯ ಅಪರಾಧ' ಎಂದು ಆರೋಪಿಸಿದರು. ಅನ್ನಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರ ಅಕ್ಕಿ ನೀಡದೆ ರಾಜಕೀಯ ಮಾಡುತ್ತಿರುವುದು ಸರಿಯಲ್ಲ. ಬಡವರ ಊಟದ ವಿಚಾರದಲ್ಲಿ ಯಾರೂ ಸಹ ಇಂತಹ ಕಾರ್ಯ ಮಾಡಬಾರದು ಎಂದರು.

ಬಡವರಿಗೆ 10 ಕೆಜಿ ಅಕ್ಕಿಯನ್ನು ನೀಡುತ್ತೇವೆ ಎಂದು ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿದೆ ಬಿಜೆಪಿಯವರ ಹೇಳಿಕೆಯಂತೆ ಮೊದಲು ಕೇಂದ್ರದ ಅಪ್ಪಣೆ ಪಡೆದುಕೊಂಡು ನಾವು ಘೋಷಣೆ ಮಾಡಬೇಕಿತ್ತಾ? ಇದು ಒಕ್ಕೂಟ ವ್ಯವಸ್ಥೆಗೆ ಸರಿಯಾದ ಕ್ರಮವಲ್ಲ ಎಂದು ಶೆಟ್ಟರ ನುಡಿದರು.

ಮೊದಲಿಗೆ ಅಕ್ಕಿ ನೀಡುವುದಾಗಿ ಭರವಸೆ ನೀಡಿ ಈಗ ರಾಜಕೀಯ ಕಾರಣಕ್ಕೆ ಅದನ್ನು ನಿರಾಕರಿಸುತ್ತಿದ್ದಾರೆ. ಕೇಂದ್ರ ಸರ್ಕಾರ ಹೆಚ್ಚುವರಿ ಅಕ್ಕಿಯನ್ನು ರಾಜ್ಯಕ್ಕೆ ನೀಡಬೇಕು ಎಂದು ಒತ್ತಾಯಿಸಿದರು. ಈ ನಡುವೆ ಕೇಂದ್ರ ಸರ್ಕಾರ ರಾಜ್ಯಕ್ಕೆ ಅಕ್ಕಿ ನೀಡಲು ನಿರಾಕರಿಸಿರುವ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಕುರಿತು ಚರ್ಚೆ ನಡೆಸಲು ಸಭೆ ನಡೆಸುತ್ತಿದ್ದಾರೆ.

ಸಂವಿಧಾನ ಬದ್ಧ ಹಾಗೂ ಒಕ್ಕೂಟ ವ್ಯವಸ್ಥೆಯಡಿ ಕಾಂಗ್ರೆಸ್ ಪಕ್ಷ ಕೇಂದ್ರದಿಂದ ಅಕ್ಕಿಯನ್ನು ಕೇಳುತ್ತಿದೆ. ಅದನ್ನು ಉಚಿತವಾಗಿ ಏನು ಕೇಳುತ್ತಿಲ್ಲ. ಹಣ ನೀಡುತ್ತೇವೆ ಎಂದರೂ ಸಹ ಅಕ್ಕಿ ನೀಡದೆ ರಾಜಕೀಯ ಮಾಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.

ಕೇಂದ್ರ ಸರ್ಕಾರ ಕನಿಷ್ಠ ಬೆಂಬಲ ಬೆಲೆಯಡಿ ವಿವಿಧ ರಾಜ್ಯಗಳಿಂದ ಆಹಾರ ಧಾನ್ಯಗಳನ್ನು ಪಡೆದುಕೊಂಡು ಎಫ್‌ಸಿಐ ಅಡಿ ಸಂಗ್ರಹಿಸುತ್ತದೆ. ಆ ರೀತಿ ಸಂಗ್ರಹವಾದ ಅಕ್ಕಿಯನ್ನು ನಾವು ಕೇಳುತ್ತಿದ್ದೇವೆ ಇಲ್ಲವಾದರೆ ಕೇಂದ್ರ ಸರ್ಕಾರ ಧಾನ್ಯಗಳ ಸಂಗ್ರಹ ಅಧಿಕಾರವನ್ನು ಆಯಾ ರಾಜ್ಯಗಳಿಗೆ ನೀಡಿ ಬಿಡಲಿ ಎಂದರು

ಉತ್ತರ ಕರ್ನಾಟಕದ ಜ್ವಲಂತ ಸಮಸ್ಯೆಗಳ ಬಗ್ಗೆ ವಿಧಾನ ಪರಿಷತ್‌ನಲ್ಲಿ ಚರ್ಚೆ ಮಾಡುತ್ತೇನೆ. ಈ ಭಾಗದ ಅನೇಕ ಅಭಿವೃದ್ಧಿ ಕೆಲಸ ಕಾರ್ಯಗಳು ನೆನಗುದಿಗೆ ಬಿದ್ದಿವೆ, ಅವುಗಳನ್ನ ಆದಷ್ಟು ಬೇಗ ಪರಿಹಾರ ಮಾಡಲಿಕ್ಕೆ ಸಂಬಂಧಪಟ್ಟ ಸಚಿವರೊಂದಿಗೆ ಚರ್ಚೆ ಮಾಡುತ್ತೇನೆ. ರಾಜಕೀಯದಲ್ಲಿ ಬೇರೆ ಬೇರೆ ಅಧ್ಯಾಯಗಳಿರ್ತಾವೆ, ಇದು ನನ್ನ ಹೊಸ ಅಧ್ಯಾಯ, ಎರಡನೆಯ ಇನ್ನಿಂಗ್ಸ್ ಎಂದು ತಿಳಿಸಿದರು.

ಲೋಕಸಭಾ ಚುನಾವಣೆ ದೃಷ್ಟಿಯಿಂದ ಈಗಾಗಲೇ ನಮ್ಮ ಪಕ್ಷದ ವರಿಷ್ಠರ ಜತೆಗೆ ಚರ್ಚೆ ಮಾಡಿದ್ದೇನೆ. ಲೋಕಸಭಾ ಚುನಾವಣೆಯಲ್ಲಿ ಪಕ್ಷ ಯಾವುದೇ ಜವಾಬ್ದಾರಿ ಕೊಟ್ಟರು ನಾನು ಸಿದ್ದನಿದ್ದೇನೆ. ಎಲ್ಲಿಯೇ ಪ್ರವಾಸ ಮಾಡಿ ಅಂದ್ರು ನಾನು ನನ್ನ‌ ಸಮಯವನ್ನ ಕೊಡುತ್ತೇನೆ. ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸ್ಥಾನ ಗೆಲ್ಲಲು ನಾನೂ ಪ್ರಯತ್ನ ಮಾಡ್ತೇನಿ. ಈ ಚುನಾವಣೆಯಲ್ಲಿ ನಿಮ್ಮ‌ ಉಪಯೋಗ ತೆಗೆದುಕೊಳ್ಳುತ್ತೆವೆ ಎಂದು ನಮ್ಮ‌ ಪಕ್ಷ ಹೇಳಿದೆ ಎಂದರು.

RELATED TOPICS:
English summary :We are not attracting defeated BJP candidates. There is a rift, resentment is being created

ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ  ರಿಜಿಜು ಮನವಿ
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ ರಿಜಿಜು ಮನವಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ
ಇದು ನನ್ನ ಬಯಕೆ,. ನನ್ನ ಬೇಡಿಕೆಗಳು ಬದಲಾಗಿವೆ ಎಂದ ರಾಹುಲ್ ಗಾಂಧಿ ಮಾತುಗಳು ಸರಿಯಲ್ಲ - ಕೇಂದ್ರ ಸಚಿವ ಸಿಂಗ್
ಇದು ನನ್ನ ಬಯಕೆ,. ನನ್ನ ಬೇಡಿಕೆಗಳು ಬದಲಾಗಿವೆ ಎಂದ ರಾಹುಲ್ ಗಾಂಧಿ ಮಾತುಗಳು ಸರಿಯಲ್ಲ - ಕೇಂದ್ರ ಸಚಿವ ಸಿಂಗ್

ನ್ಯೂಸ್ MORE NEWS...