Sat,May30,2026
ಕನ್ನಡ / English

ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್​ ಮೆಟ್ಟು ಮೆಟ್ಟಿನಿಂದ ಹೊಡೆದಾಡಿಕೊಳ್ಳುತ್ತಾರೆ: ಯತ್ನಾಳ್ ವಿದಾತ್ಮಕ ಹೇಳಿಕೆ | JANATA NEWS

25 Jun 2023

ಬೆಳಗಾವಿ : ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್​ ಮೆಟ್ಟು ಮೆಟ್ಟಿನಿಂದ ಹೊಡೆದಾಡಿಕೊಳ್ಳುತ್ತಾರೆ ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿವಾದತ್ಮಕ ಹೇಳಿಕೆಯನ್ನು ನೀಡಿದ್ದಾರೆ.

ಬೆಳಗಾವಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಮಾಜಿ ಕೇಂದ್ರ ಸಚಿವ ಯತ್ನಾಳ್, ವಿಧಾನಸಭೆ ಚುನಾವಣೆಯಲ್ಲಿ ಏನಾಗಿದೆ ಎಲ್ಲರಿಗೂ ಗೊತ್ತು.ಯಾರು ಯಾರನ್ನ ಸೋಲಿಸಲು ಯತ್ನಿಸಿದ್ದಾರೆ ಅಂತಾ ಕಾರ್ಯಕರ್ತರಿಗೆ ಗೊತ್ತಿದೆ. ಕಾರ್ಯಕರ್ತರ ಭಾವನೆಯನ್ನ ಕೇಳದಿದ್ರೇ ಇದೇ ಗತಿ ಆಗೋದು.ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಎರಡು ತಾಸು ಕುಳಿತು ಸಭೆ ಮಾಡಿ ಎಂದು ಸಲಹೆ ನೀಡಿದರು.

ಈ ಸರ್ಕಾರ ಐದು ವರ್ಷ ನಡೆಯುವ ಸರ್ಕಾರ ಅಲ್ಲ ಲೋಕಸಭಾ ಚುನಾವಣೆ ಮುನ್ನ ಅಥವಾ ಬಳಿಕ ಅಕ್ಸಿಡೆಂಟ್ ಆಗುತ್ತದೆ . ಅಷ್ಟರಲ್ಲಿ ಇಬ್ಬರೂ ಮೆಟ್ಟು ಮೆಟ್ಟಿನಿಂದ ಹೊಡೆದಾಡಿಕೊಳ್ತಾರೆ ಅಂತ ಹೇಳಿದರು. ಇನ್ನೂ ಮೂರು ತಿಂಗಳಲ್ಲಿ ಗ್ಯಾರಂಟಿ ಬಣ್ಣ ಬಯಲು ಆಗಲಿದೆ. ದೇಶದಲ್ಲಿ ಸಮಾನ ನಾಗರಿಕ ಕಾಯ್ದೆ ಜಾರಿಯಾಗಲಿದೆ ಅಂತ ಅವರು ತಿಳಿಸಿದರು.

ಎಲ್ಲರೂ ಒಗ್ಗಟ್ಟಾಗಿ ಕೆಲಸಮಾಡಿ, ಇಲ್ಲದಿದ್ದರೆ ಪಕ್ಷದಿಂದ ಹೊರ ನಡೆಯಿರಿ. ನಾವ್ಯಾರು ಜಗಳ ಮಾಡಿತ್ತಿಲ್ಲ, ಪಕ್ಷ ನಿರ್ಣಯ ಮಾಡಿದವರ ಪರ ಕೆಲಸ ಮಾಡಿ. ಮುಂದಿನ 3 ತಿಂಗಳಲ್ಲಿ ಕಾಂಗ್ರೆಸ್​ ಪಕ್ಷದ ಗ್ಯಾರಂಟಿ ಬಣ್ಣ ಬಯಲಾಗಲಿದೆ.

ಸಿದ್ದರಾಮಯ್ಯನವರು ಏನ್ ಹೇಳಿದ್ರು ಎನ್ನುವುದನ್ನು ಹೊರತೆಗೆಯುತ್ತೇವೆ. ನಾವು ದನ ಕಾಯುತ್ತಿಲ್ಲ, ಆರ್ಥಿಕ ಸ್ಥಿತಿಗತಿ ಬಗ್ಗೆ ಗೊತ್ತಿದೆ. ಇದು ಐದು ವರ್ಷ ನಡೆಯುವ ಸರ್ಕಾರ ಅಲ್ಲ. ಲೋಕಸಭಾ ಚುನಾವಣೆ ಮುನ್ನ, ಇಲ್ಲ ಆದ ಬಳಿಕ ಆಕ್ಸಿಡೆಂಟ್ ಆಗುತ್ತೆ. ಅಷ್ಟರಲ್ಲಿ ಇಬ್ಬರು (ಸಿದ್ದರಾಮಯ್ಯ- ಡಿಕೆ ಶಿವಕುಮಾರ್) ಮೆಟ್ಟು ಮೆಟ್ಟಿನಿಂದ ಹೊಡೆದಾಡಿಕೊಳ್ಳುತ್ತಾರೆ ಎಂದರು.

ಗ್ಯಾರಂಟಿ ಎಲ್ಲವೂ ಮುಗಿತು ಇವರಿಗೆ ಗ್ಯಾರಂಟಿ ಕೊಡೊಕೆ ಸಾಧ್ಯವಿಲ್ಲ.ಈಗ ಹೇಗೆ ಒದ್ದಾಡುತ್ತಿದ್ದಾರೆ ಎಲ್ಲರೂ.ಯಾವ ಸರ್ಕಾರ ಬಂದರೂ ಇದು ಮಾಡಲು ಆಗುವುದಿಲ್ಲ.ಹಾಗಿದ್ದಿದ್ರೇ ಬೊಮ್ಮಾಯಿ ಅವರು ಕೊಡುತ್ತಿದ್ದರು. ಒಂದು ರೀತಿ ಕರ್ನಾಟಕದಲ್ಲಿ ಅರಾಜಕತೆ ಶುರುವಾಗಿದೆ. ಪಾಕಿಸ್ತಾನದ ಧ್ವಜ ಹಾರಾಡುತ್ತಿವೆ, ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ ಆಗುತ್ತಿವೆ‌.ನಾವು ಎಲ್ಲದಕ್ಕೂ ತಯಾರಾಗಬೇಕು ಇಲ್ಲವಾದರೆ ಮನೆಗೆ ಬಂದು ಹೊಡೆಯುತ್ತಾರೆ ಎಂದರು.

ಯಡಿಯೂರಪ್ಪ, ಬೊಮ್ಮಾಯಿ ಮನೆಗೆ ಸೌಜನ್ಯ ಭೇಟಿ ಅಂತಾರೆ. ಇವರು ಸೌಜನ್ಯ ಭೇಟಿ ಕೊಡ್ತಿಲ್ಲ ಸೋನಿಯಾ ಗಾಂಧಿಗೆ ಅಂಜಿಸುವ ಕೆಲಸ ಮಾಡ್ತಾರೆ.ಬೊಮ್ಮಾಯಿಯವರೇ ಅವರನ್ನ ನೀವು ಮನೆ ವರೆಗೂ ಬಿಟ್ಟುಕೊಳ್ಳಬೇಡಿ.ನಾವು ವಿರೋಧ ಪಕ್ಷದವರ ಮನೆಗೆ ಹೋಗುವುದಿಲ್ಲ ಅಂತಾರೆ‌.ಅದೇ ರೀತಿ ನಾವು ಅವರ ಮನೆಗೆ ಹೋಗುವುದಿಲ್ಲಾ ಅಂತಾ ಹೇಳಿ.ಅವರನ್ನ ಸ್ವಾಗತಿಸಿಕೊಂಡರೆ ನಮ್ಮ ಕಾರ್ಯಕರ್ತರು ಮಲಗಿ ಬಿಡುತ್ತಾರೆ. ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿ ಹಲಕಟಗಿರಿ ಮಾಡೊದಿದ್ರೇ ಅಲ್ಲಿಗೆ ಹೋಗಿ ಎಂದು ಕಿಡಿ ಕಾರಿದರು.

ನಾವು ಯಾರು ಜಗಳ ಮಾಡುತ್ತಿಲ್ಲ, ಪಾರ್ಟಿ ನಿರ್ಣಯ ಮಾಡಿದವರ ಪರ ಕೆಲಸ ಮಾಡಿ.ಮೂರು ತಿಂಗಳಲ್ಲಿ ಗ್ಯಾರಂಟಿ ಬಣ್ಣ ಬಯಲು ಆಗಲಿದೆ. ಸಿದ್ದರಾಮಯ್ಯನವರು ಎನ್ ಹೇಳಿದರು ಅದನ್ನ ಹೊರ ತೆಗೆಯುತ್ತೇವೆ. ನಾವು ಗಟ್ಟಿ ಇದ್ದೇವೆ, ದನ ಕಾಯುತ್ತಿಲ್ಲ, ಆರ್ಥಿಕತೆ ಬಗ್ಗೆಯೂ ಗೊತ್ತಿದೆ ಎಂದರು.

RELATED TOPICS:
English summary :Siddaramaiah, DK Sivakumar fight each other: Yatnal scholarly statement

ಕೇರಳ ವಿಧಾನಸಭೆಯಲ್ಲಿ ವಂದೇ ಮಾತರಂ ಗೀತೆಯನ್ನು ಸಂಪೂರ್ಣವಾಗಿ ಹಾಡದ ಕಾರಣ ಗದ್ದಲ
ಕೇರಳ ವಿಧಾನಸಭೆಯಲ್ಲಿ ವಂದೇ ಮಾತರಂ ಗೀತೆಯನ್ನು ಸಂಪೂರ್ಣವಾಗಿ ಹಾಡದ ಕಾರಣ ಗದ್ದಲ
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿ, ಮಂತ್ರಿಮಂಡಲ ವಜಾ ಮಾಡಿದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿ, ಮಂತ್ರಿಮಂಡಲ ವಜಾ ಮಾಡಿದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್
ಅರ್ಮೇನಿಯಾ ಮಿಲಿಟರಿ ಮೆರವಣಿಗೆಯಲ್ಲಿ ಭಾರತೀಯ ಮೂಲದ ಫಿರಂಗಿ, ವಾಯು ರಕ್ಷಣಾ ವ್ಯವಸ್ಥೆಗಳು, ರಾಡಾರ್ ಪ್ರದರ್ಶನ
ಅರ್ಮೇನಿಯಾ ಮಿಲಿಟರಿ ಮೆರವಣಿಗೆಯಲ್ಲಿ ಭಾರತೀಯ ಮೂಲದ ಫಿರಂಗಿ, ವಾಯು ರಕ್ಷಣಾ ವ್ಯವಸ್ಥೆಗಳು, ರಾಡಾರ್ ಪ್ರದರ್ಶನ
ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆಯನ್ನು ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆಯನ್ನು ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
3 ಗಂಟೆಗೆ ರಾಜೀನಾಮೆ ನೀಡಲಿದ್ದಾರೆ ಮುಖ್ಯಮಂತ್ರಿ ಸಿದ್ದರಾಮಯ್ಯ : ಡಿಕೆ ಶಿವಕುಮಾರ್ ಹೊಸ ಸಿಎಂ
3 ಗಂಟೆಗೆ ರಾಜೀನಾಮೆ ನೀಡಲಿದ್ದಾರೆ ಮುಖ್ಯಮಂತ್ರಿ ಸಿದ್ದರಾಮಯ್ಯ : ಡಿಕೆ ಶಿವಕುಮಾರ್ ಹೊಸ ಸಿಎಂ
ಅಂತಾರಾಷ್ಟ್ರೀಯ ಗಡಿಗಳ ಬಳಿಯ ಅಕ್ರಮ ರಚನೆಗಳ ವಿರುದ್ಧ ಕ್ರಮ ಕೈಗೊಳ್ಳಲು ಅಮಿತ್ ಶಾ ಆದೇಶ
ಅಂತಾರಾಷ್ಟ್ರೀಯ ಗಡಿಗಳ ಬಳಿಯ ಅಕ್ರಮ ರಚನೆಗಳ ವಿರುದ್ಧ ಕ್ರಮ ಕೈಗೊಳ್ಳಲು ಅಮಿತ್ ಶಾ ಆದೇಶ
ಅಸ್ಸಾಂ ವಿಧಾನಸಭೆಯು ಏಕರೂಪ ನಾಗರಿಕ ಸಂಹಿತೆ ಮಸೂದೆ, 2026 ಅನ್ನು ಅಂಗೀಕರಿಸಿದೆ
ಅಸ್ಸಾಂ ವಿಧಾನಸಭೆಯು ಏಕರೂಪ ನಾಗರಿಕ ಸಂಹಿತೆ ಮಸೂದೆ, 2026 ಅನ್ನು ಅಂಗೀಕರಿಸಿದೆ
ಕರ್ನಾಟಕದಲ್ಲಿ ಶೀಘ್ರದಲ್ಲೇ ಹೊಸ ಸಿಎಂ ಮತ್ತು ನಾಲ್ವರು ಡಿಸಿಎಂಗಳ ನೇಮಕ ಸಾಧ್ಯತೆ?
ಕರ್ನಾಟಕದಲ್ಲಿ ಶೀಘ್ರದಲ್ಲೇ ಹೊಸ ಸಿಎಂ ಮತ್ತು ನಾಲ್ವರು ಡಿಸಿಎಂಗಳ ನೇಮಕ ಸಾಧ್ಯತೆ?
ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನಟ ರಣವೀರ್ ಸಿಂಗ್ ಪ್ರಾರ್ಥನೆ ಸಲ್ಲಿಸಿದರು.
ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನಟ ರಣವೀರ್ ಸಿಂಗ್ ಪ್ರಾರ್ಥನೆ ಸಲ್ಲಿಸಿದರು.
ಪೋರ್ಟಲ್‌ನಲ್ಲಿ ವಕ್ಫ್ ಮಂಡಳಿ ಅಕ್ರಮವಾಗಿ ಅಪ್‌ಲೋಡ್ ಮಾಡಲಾದ ಆಸ್ತಿಗಳನ್ನು ತೆಗೆದುಹಾಕಲು ಕೇಂದ್ರಕ್ಕೆ ರಾಜೀವ್ ಚಂದ್ರಶೇಖರ್ ಮನವಿ
ಪೋರ್ಟಲ್‌ನಲ್ಲಿ ವಕ್ಫ್ ಮಂಡಳಿ ಅಕ್ರಮವಾಗಿ ಅಪ್‌ಲೋಡ್ ಮಾಡಲಾದ ಆಸ್ತಿಗಳನ್ನು ತೆಗೆದುಹಾಕಲು ಕೇಂದ್ರಕ್ಕೆ ರಾಜೀವ್ ಚಂದ್ರಶೇಖರ್ ಮನವಿ
ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭ: 3ನೇ ಸ್ಥಾನದಲ್ಲಿ ಆಸೀನರಾಗಿದ್ದ ಎಚ್‌ಡಿ ಕುಮಾರಸ್ವಾಮಿ
ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭ: 3ನೇ ಸ್ಥಾನದಲ್ಲಿ ಆಸೀನರಾಗಿದ್ದ ಎಚ್‌ಡಿ ಕುಮಾರಸ್ವಾಮಿ
ತನ್ನ ಸ್ವಂತ ತಂದೆಗೆ ನಿಷ್ಠೆ ತೋರದ ಮಗ ದೇಶಕ್ಕೆ ನಿಷ್ಠನಾಗಿರುತ್ತಾನೆಯೇ? - ರಾಹುಲ್ ಗಾಂಧಿ ಸಮಗ್ರತೆ ಪ್ರಶ್ನಿಸಿದ ಎಸ್.ಜೈಶಂಕರ್
ತನ್ನ ಸ್ವಂತ ತಂದೆಗೆ ನಿಷ್ಠೆ ತೋರದ ಮಗ ದೇಶಕ್ಕೆ ನಿಷ್ಠನಾಗಿರುತ್ತಾನೆಯೇ? - ರಾಹುಲ್ ಗಾಂಧಿ ಸಮಗ್ರತೆ ಪ್ರಶ್ನಿಸಿದ ಎಸ್.ಜೈಶಂಕರ್

ನ್ಯೂಸ್ MORE NEWS...