Sat,May30,2026
ಕನ್ನಡ / English

ಸೋಲಾಗಿದ್ದು ಕಾರ್ಯಕರ್ತರಿಂದಲ್ಲ, ಬಿಜೆಪಿ ಪಕ್ಷದ ತಪ್ಪು ನಿರ್ಧಾರದಿಂದ: ರೇಣುಕಾಚಾರ್ಯ | JANATA NEWS

27 Jun 2023

ದಾವಣಗೆರೆ : 2023ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋಲೋದಕ್ಕೆ 8 ಕಾರಣಗಳ ಪಟ್ಟಿ ಕೊಟ್ಟಿದ್ದಾರೆ ಮಾಜಿ ಸಚಿವ ರೇಣುಕಾಚಾರ್ಯ. ನಮ್ಮ ಸರ್ಕಾರದ ತಪ್ಪು ನಿರ್ಧಾರಗಳಿಂದ ನಾವು ಸೋತಿದ್ದಾಗಿ ಹೇಳಿದ್ದಾರೆ.

ಈ ವಿಚಾರವಾಗಿ ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ ಮಾತನಾಡಿರುವ ಅವರು, ಡಾ. ಸುಧಾಕರ್ ಕೆಲಸಕ್ಕೆ ಬಾರದ ಪ್ರಣಾಳಿಕೆ ಮಾಡಿದ್ರು ಎಂದು ರೇಣುಕಾಚಾರ್ಯ ಹರಿಹಾಯ್ದಿದ್ದಾರೆ.

ಬಿಎಸ್‌ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಕ್ಕೆ ಇಳಿಸಿದ್ದೇ ಬಿಜೆಪಿ ಸೋಲಿಗೆ ಕಾರಣ ಅಂತ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ. ಒಂದು ವೇಳೆ, ಅವರೇ ಐದು ವರ್ಷ ಮುಂದುವರಿದಿದ್ದರೆ ಈ ಬಾರಿಯೂ ನಮ್ಮದೇ ಸರ್ಕಾರ ಬರುತ್ತಿತ್ತು ಎಂದು ಅವರು ಹೇಳಿದ್ದಾರೆ.

ನಾನು ಒಳಮೀಸಲಾತಿ ಕೊಡಬೇಡಿ ಎಂದು ಈ ಮೊದಲೇ ಹೇಳಿದ್ದೆ. ಆದರೆ ಚುನಾವಣಾ ಹೊತ್ತಲ್ಲಿ ಜಾರಿ ಮಾಡಿದ್ದು ಭಾರೀ ಪೆಟ್ಟು ಕೊಟ್ಟಿತು. ಕೇಂದ್ರ ಸರ್ಕಾರದ ಅಕ್ಕಿ ಕೊಡೋದು ನಿಲ್ಲಿಸಬೇಡಿ ಅಂತೆಯೂ ಹೇಳಿದ್ದೆ ಎಂದು ಇದೇ ಸಂದರ್ಭದಲ್ಲಿ ಅವರು ತಿಳಿಸಿದರು.

ಬಡ ಜನರ ತಿನ್ನುವ ಹೊಟ್ಟೆ ಮೇಲೆ ಹೊಡೆಯುವ ಕೆಲಸ ಮಾಡಿದರು‌. ಹತ್ತು ಕೆಜಿ ಅಕ್ಕಿ ನೀಡುವುದು ಬಿಟ್ಟು ಕಡಿತ ಮಾಡಿದರು ಅಂತ ರೇಣುಕಾಚಾರ್ಯ ಸ್ವಪಕ್ಷದ ವಿರುದ್ಧ ಆಕ್ರೋಶ ಹೊರಹಾಕಿದ್ರು. ಎನ್‌ಪಿಎಸ್ ನೌಕರರ ಮನವಿಯನ್ನು ಸ್ವೀಕಾರ ಮಾಡಿ ಎಂದು ಹೇಳಿದರೂ ಮಾಡಲಿಲ್ಲ ಅಂತ ಬೇಸರ ವ್ಯಕ್ತಪಡಿಸಿದರು.

ಡಾ ಸುಧಾಕರ್‌ ಅವರು ಬೊಮ್ಮಾಯಿ ಸರ್ಕಾರದಲ್ಲಿ ಆರೋಗ್ಯ ಸಚಿವರಾಗಿದ್ದರು. ಅವರನ್ನು ಚುನಾವಣಾ ಪ್ರಣಾಳಿಕೆ ಸಮಿತಿಯ ಅಧ್ಯಕ್ಷರನ್ನಾಗಿ ಮಾಡಲಾಗಿತ್ತು. ಕೆಲಸಕ್ಕೆ ಬಾರದ ಪ್ರನಾಳಿಕೆ ಮಾಡಿದ್ದಾರೆ ಎಂದು ಸ್ವಪಕ್ಷದ ವಿರುದ್ದ ಅಕ್ರೋಶಗೊಂಡರು. ರೇಣುಕಾಚಾರ್ಯ ಗೆ ಒಬ್ಬನಿಗೆ ಅಲ್ಲ ರಾಜ್ಯದ ಎಲ್ಲಾ ಕಾರ್ಯಕರ್ತರಿಗೆ ನೋವಾಗಿದೆ ಅಂತ ಹೇಳಿದ್ರು.

ಈಶ್ವರಪ್ಪ ಹಾಗೂ ಜಗದೀಶ್‌ ಶೆಟ್ಟರ್‌ ಅವರಿಗೆ ಟಿಕೆಟ್‌ ಅನ್ನು ನಿರಾಕರಿಸಿದ್ದು ಬಹುದೊಡ್ಡ ತಪ್ಪು. ಅವರಿಗೇನು ಮಹಾ ವಯಸ್ಸಾಗಿತ್ತು. ಅವರೇನು ತಪ್ಪು ಮಾಡಿದ್ದರು ಎಂದು ರೇಣುಕಾಚಾರ್ಯ ಪ್ರಶ್ನಿಸಿದ್ದಾರೆ.

ರಾಜ್ಯದ ಅಧ್ಯಕ್ಷರು ಗೊಂದಲದ ಹೇಳಿಕೆ ನೀಡುತ್ತಾ ಬಂದಿದ್ದಾರೆ.‌ ರಾಜೀನಾಮೆ ನೀಡುತ್ತೇನೆ, ಒಮ್ಮೆ ನೀಡೋದಿಲ್ಲ ಅಂತ ಗೊಂದಲದ ಹೇಳಿಕೆ ನೀಡುತ್ತಿದ್ದಾರೆ ಅಂತ ರೇಣುಕಾಚಾರ್ಯ ಹೇಳಿದ್ದಾರೆ.

ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನು ಸಮರ್ಥನಿದ್ದೇನೆ. ಶಾಸಕನಾಗಿ, ಸಚಿವನಾಗಿ ಅನುಭವವಿದೆ. ಆದರೆ ಒತ್ತಡ ಮಾಡುವುದಿಲ್ಲ ಎಂದು ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ರಾಜ್ಯಾಧ್ಯಕ್ಷ ಪಟ್ಟದ ಆಸೆಯನ್ನು ಬಹಿರಂಗಪಡಿಸಿದ್ದಾರೆ.

RELATED TOPICS:
English summary :Defeated not by activists, but by wrong decision of BJP party: Renukacharya

ಕೇರಳ ವಿಧಾನಸಭೆಯಲ್ಲಿ ವಂದೇ ಮಾತರಂ ಗೀತೆಯನ್ನು ಸಂಪೂರ್ಣವಾಗಿ ಹಾಡದ ಕಾರಣ ಗದ್ದಲ
ಕೇರಳ ವಿಧಾನಸಭೆಯಲ್ಲಿ ವಂದೇ ಮಾತರಂ ಗೀತೆಯನ್ನು ಸಂಪೂರ್ಣವಾಗಿ ಹಾಡದ ಕಾರಣ ಗದ್ದಲ
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿ, ಮಂತ್ರಿಮಂಡಲ ವಜಾ ಮಾಡಿದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿ, ಮಂತ್ರಿಮಂಡಲ ವಜಾ ಮಾಡಿದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್
ಅರ್ಮೇನಿಯಾ ಮಿಲಿಟರಿ ಮೆರವಣಿಗೆಯಲ್ಲಿ ಭಾರತೀಯ ಮೂಲದ ಫಿರಂಗಿ, ವಾಯು ರಕ್ಷಣಾ ವ್ಯವಸ್ಥೆಗಳು, ರಾಡಾರ್ ಪ್ರದರ್ಶನ
ಅರ್ಮೇನಿಯಾ ಮಿಲಿಟರಿ ಮೆರವಣಿಗೆಯಲ್ಲಿ ಭಾರತೀಯ ಮೂಲದ ಫಿರಂಗಿ, ವಾಯು ರಕ್ಷಣಾ ವ್ಯವಸ್ಥೆಗಳು, ರಾಡಾರ್ ಪ್ರದರ್ಶನ
ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆಯನ್ನು ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆಯನ್ನು ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
3 ಗಂಟೆಗೆ ರಾಜೀನಾಮೆ ನೀಡಲಿದ್ದಾರೆ ಮುಖ್ಯಮಂತ್ರಿ ಸಿದ್ದರಾಮಯ್ಯ : ಡಿಕೆ ಶಿವಕುಮಾರ್ ಹೊಸ ಸಿಎಂ
3 ಗಂಟೆಗೆ ರಾಜೀನಾಮೆ ನೀಡಲಿದ್ದಾರೆ ಮುಖ್ಯಮಂತ್ರಿ ಸಿದ್ದರಾಮಯ್ಯ : ಡಿಕೆ ಶಿವಕುಮಾರ್ ಹೊಸ ಸಿಎಂ
ಅಂತಾರಾಷ್ಟ್ರೀಯ ಗಡಿಗಳ ಬಳಿಯ ಅಕ್ರಮ ರಚನೆಗಳ ವಿರುದ್ಧ ಕ್ರಮ ಕೈಗೊಳ್ಳಲು ಅಮಿತ್ ಶಾ ಆದೇಶ
ಅಂತಾರಾಷ್ಟ್ರೀಯ ಗಡಿಗಳ ಬಳಿಯ ಅಕ್ರಮ ರಚನೆಗಳ ವಿರುದ್ಧ ಕ್ರಮ ಕೈಗೊಳ್ಳಲು ಅಮಿತ್ ಶಾ ಆದೇಶ
ಅಸ್ಸಾಂ ವಿಧಾನಸಭೆಯು ಏಕರೂಪ ನಾಗರಿಕ ಸಂಹಿತೆ ಮಸೂದೆ, 2026 ಅನ್ನು ಅಂಗೀಕರಿಸಿದೆ
ಅಸ್ಸಾಂ ವಿಧಾನಸಭೆಯು ಏಕರೂಪ ನಾಗರಿಕ ಸಂಹಿತೆ ಮಸೂದೆ, 2026 ಅನ್ನು ಅಂಗೀಕರಿಸಿದೆ
ಕರ್ನಾಟಕದಲ್ಲಿ ಶೀಘ್ರದಲ್ಲೇ ಹೊಸ ಸಿಎಂ ಮತ್ತು ನಾಲ್ವರು ಡಿಸಿಎಂಗಳ ನೇಮಕ ಸಾಧ್ಯತೆ?
ಕರ್ನಾಟಕದಲ್ಲಿ ಶೀಘ್ರದಲ್ಲೇ ಹೊಸ ಸಿಎಂ ಮತ್ತು ನಾಲ್ವರು ಡಿಸಿಎಂಗಳ ನೇಮಕ ಸಾಧ್ಯತೆ?
ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನಟ ರಣವೀರ್ ಸಿಂಗ್ ಪ್ರಾರ್ಥನೆ ಸಲ್ಲಿಸಿದರು.
ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನಟ ರಣವೀರ್ ಸಿಂಗ್ ಪ್ರಾರ್ಥನೆ ಸಲ್ಲಿಸಿದರು.
ಪೋರ್ಟಲ್‌ನಲ್ಲಿ ವಕ್ಫ್ ಮಂಡಳಿ ಅಕ್ರಮವಾಗಿ ಅಪ್‌ಲೋಡ್ ಮಾಡಲಾದ ಆಸ್ತಿಗಳನ್ನು ತೆಗೆದುಹಾಕಲು ಕೇಂದ್ರಕ್ಕೆ ರಾಜೀವ್ ಚಂದ್ರಶೇಖರ್ ಮನವಿ
ಪೋರ್ಟಲ್‌ನಲ್ಲಿ ವಕ್ಫ್ ಮಂಡಳಿ ಅಕ್ರಮವಾಗಿ ಅಪ್‌ಲೋಡ್ ಮಾಡಲಾದ ಆಸ್ತಿಗಳನ್ನು ತೆಗೆದುಹಾಕಲು ಕೇಂದ್ರಕ್ಕೆ ರಾಜೀವ್ ಚಂದ್ರಶೇಖರ್ ಮನವಿ
ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭ: 3ನೇ ಸ್ಥಾನದಲ್ಲಿ ಆಸೀನರಾಗಿದ್ದ ಎಚ್‌ಡಿ ಕುಮಾರಸ್ವಾಮಿ
ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭ: 3ನೇ ಸ್ಥಾನದಲ್ಲಿ ಆಸೀನರಾಗಿದ್ದ ಎಚ್‌ಡಿ ಕುಮಾರಸ್ವಾಮಿ
ತನ್ನ ಸ್ವಂತ ತಂದೆಗೆ ನಿಷ್ಠೆ ತೋರದ ಮಗ ದೇಶಕ್ಕೆ ನಿಷ್ಠನಾಗಿರುತ್ತಾನೆಯೇ? - ರಾಹುಲ್ ಗಾಂಧಿ ಸಮಗ್ರತೆ ಪ್ರಶ್ನಿಸಿದ ಎಸ್.ಜೈಶಂಕರ್
ತನ್ನ ಸ್ವಂತ ತಂದೆಗೆ ನಿಷ್ಠೆ ತೋರದ ಮಗ ದೇಶಕ್ಕೆ ನಿಷ್ಠನಾಗಿರುತ್ತಾನೆಯೇ? - ರಾಹುಲ್ ಗಾಂಧಿ ಸಮಗ್ರತೆ ಪ್ರಶ್ನಿಸಿದ ಎಸ್.ಜೈಶಂಕರ್

ನ್ಯೂಸ್ MORE NEWS...