Wed,Apr15,2026
ಕನ್ನಡ / English

ಸೋಲಾಗಿದ್ದು ಕಾರ್ಯಕರ್ತರಿಂದಲ್ಲ, ಬಿಜೆಪಿ ಪಕ್ಷದ ತಪ್ಪು ನಿರ್ಧಾರದಿಂದ: ರೇಣುಕಾಚಾರ್ಯ | JANATA NEWS

27 Jun 2023

ದಾವಣಗೆರೆ : 2023ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋಲೋದಕ್ಕೆ 8 ಕಾರಣಗಳ ಪಟ್ಟಿ ಕೊಟ್ಟಿದ್ದಾರೆ ಮಾಜಿ ಸಚಿವ ರೇಣುಕಾಚಾರ್ಯ. ನಮ್ಮ ಸರ್ಕಾರದ ತಪ್ಪು ನಿರ್ಧಾರಗಳಿಂದ ನಾವು ಸೋತಿದ್ದಾಗಿ ಹೇಳಿದ್ದಾರೆ.

ಈ ವಿಚಾರವಾಗಿ ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ ಮಾತನಾಡಿರುವ ಅವರು, ಡಾ. ಸುಧಾಕರ್ ಕೆಲಸಕ್ಕೆ ಬಾರದ ಪ್ರಣಾಳಿಕೆ ಮಾಡಿದ್ರು ಎಂದು ರೇಣುಕಾಚಾರ್ಯ ಹರಿಹಾಯ್ದಿದ್ದಾರೆ.

ಬಿಎಸ್‌ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಕ್ಕೆ ಇಳಿಸಿದ್ದೇ ಬಿಜೆಪಿ ಸೋಲಿಗೆ ಕಾರಣ ಅಂತ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ. ಒಂದು ವೇಳೆ, ಅವರೇ ಐದು ವರ್ಷ ಮುಂದುವರಿದಿದ್ದರೆ ಈ ಬಾರಿಯೂ ನಮ್ಮದೇ ಸರ್ಕಾರ ಬರುತ್ತಿತ್ತು ಎಂದು ಅವರು ಹೇಳಿದ್ದಾರೆ.

ನಾನು ಒಳಮೀಸಲಾತಿ ಕೊಡಬೇಡಿ ಎಂದು ಈ ಮೊದಲೇ ಹೇಳಿದ್ದೆ. ಆದರೆ ಚುನಾವಣಾ ಹೊತ್ತಲ್ಲಿ ಜಾರಿ ಮಾಡಿದ್ದು ಭಾರೀ ಪೆಟ್ಟು ಕೊಟ್ಟಿತು. ಕೇಂದ್ರ ಸರ್ಕಾರದ ಅಕ್ಕಿ ಕೊಡೋದು ನಿಲ್ಲಿಸಬೇಡಿ ಅಂತೆಯೂ ಹೇಳಿದ್ದೆ ಎಂದು ಇದೇ ಸಂದರ್ಭದಲ್ಲಿ ಅವರು ತಿಳಿಸಿದರು.

ಬಡ ಜನರ ತಿನ್ನುವ ಹೊಟ್ಟೆ ಮೇಲೆ ಹೊಡೆಯುವ ಕೆಲಸ ಮಾಡಿದರು‌. ಹತ್ತು ಕೆಜಿ ಅಕ್ಕಿ ನೀಡುವುದು ಬಿಟ್ಟು ಕಡಿತ ಮಾಡಿದರು ಅಂತ ರೇಣುಕಾಚಾರ್ಯ ಸ್ವಪಕ್ಷದ ವಿರುದ್ಧ ಆಕ್ರೋಶ ಹೊರಹಾಕಿದ್ರು. ಎನ್‌ಪಿಎಸ್ ನೌಕರರ ಮನವಿಯನ್ನು ಸ್ವೀಕಾರ ಮಾಡಿ ಎಂದು ಹೇಳಿದರೂ ಮಾಡಲಿಲ್ಲ ಅಂತ ಬೇಸರ ವ್ಯಕ್ತಪಡಿಸಿದರು.

ಡಾ ಸುಧಾಕರ್‌ ಅವರು ಬೊಮ್ಮಾಯಿ ಸರ್ಕಾರದಲ್ಲಿ ಆರೋಗ್ಯ ಸಚಿವರಾಗಿದ್ದರು. ಅವರನ್ನು ಚುನಾವಣಾ ಪ್ರಣಾಳಿಕೆ ಸಮಿತಿಯ ಅಧ್ಯಕ್ಷರನ್ನಾಗಿ ಮಾಡಲಾಗಿತ್ತು. ಕೆಲಸಕ್ಕೆ ಬಾರದ ಪ್ರನಾಳಿಕೆ ಮಾಡಿದ್ದಾರೆ ಎಂದು ಸ್ವಪಕ್ಷದ ವಿರುದ್ದ ಅಕ್ರೋಶಗೊಂಡರು. ರೇಣುಕಾಚಾರ್ಯ ಗೆ ಒಬ್ಬನಿಗೆ ಅಲ್ಲ ರಾಜ್ಯದ ಎಲ್ಲಾ ಕಾರ್ಯಕರ್ತರಿಗೆ ನೋವಾಗಿದೆ ಅಂತ ಹೇಳಿದ್ರು.

ಈಶ್ವರಪ್ಪ ಹಾಗೂ ಜಗದೀಶ್‌ ಶೆಟ್ಟರ್‌ ಅವರಿಗೆ ಟಿಕೆಟ್‌ ಅನ್ನು ನಿರಾಕರಿಸಿದ್ದು ಬಹುದೊಡ್ಡ ತಪ್ಪು. ಅವರಿಗೇನು ಮಹಾ ವಯಸ್ಸಾಗಿತ್ತು. ಅವರೇನು ತಪ್ಪು ಮಾಡಿದ್ದರು ಎಂದು ರೇಣುಕಾಚಾರ್ಯ ಪ್ರಶ್ನಿಸಿದ್ದಾರೆ.

ರಾಜ್ಯದ ಅಧ್ಯಕ್ಷರು ಗೊಂದಲದ ಹೇಳಿಕೆ ನೀಡುತ್ತಾ ಬಂದಿದ್ದಾರೆ.‌ ರಾಜೀನಾಮೆ ನೀಡುತ್ತೇನೆ, ಒಮ್ಮೆ ನೀಡೋದಿಲ್ಲ ಅಂತ ಗೊಂದಲದ ಹೇಳಿಕೆ ನೀಡುತ್ತಿದ್ದಾರೆ ಅಂತ ರೇಣುಕಾಚಾರ್ಯ ಹೇಳಿದ್ದಾರೆ.

ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನು ಸಮರ್ಥನಿದ್ದೇನೆ. ಶಾಸಕನಾಗಿ, ಸಚಿವನಾಗಿ ಅನುಭವವಿದೆ. ಆದರೆ ಒತ್ತಡ ಮಾಡುವುದಿಲ್ಲ ಎಂದು ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ರಾಜ್ಯಾಧ್ಯಕ್ಷ ಪಟ್ಟದ ಆಸೆಯನ್ನು ಬಹಿರಂಗಪಡಿಸಿದ್ದಾರೆ.

RELATED TOPICS:
English summary :Defeated not by activists, but by wrong decision of BJP party: Renukacharya

ಪ್ರಧಾನಿ ಮೋದಿ ಗೆ ದೂರವಾಣಿ ಕರೆ ಮಾಡಿ 40 ನಿಮಿಷ ಮಾತನಾಡಿದ ಅಧ್ಯಕ್ಷ ಟ್ರಂಪ್
ಪ್ರಧಾನಿ ಮೋದಿ ಗೆ ದೂರವಾಣಿ ಕರೆ ಮಾಡಿ 40 ನಿಮಿಷ ಮಾತನಾಡಿದ ಅಧ್ಯಕ್ಷ ಟ್ರಂಪ್
ಹೆಬ್ಬಾಳದಲ್ಲಿ 55 ಎಕರೆ ಭೂಮಿ ಖಾಸಗಿ ಸಂಸ್ಥೆಗೆ ವರ್ಗಾವಣೆ ರದ್ದುಗೊಳಿಸಿದ ಹೈಕೋರ್ಟ್ : ಸಿಬಿಐ ತನಿಖೆಗೆ ಆದೇಶ
ಹೆಬ್ಬಾಳದಲ್ಲಿ 55 ಎಕರೆ ಭೂಮಿ ಖಾಸಗಿ ಸಂಸ್ಥೆಗೆ ವರ್ಗಾವಣೆ ರದ್ದುಗೊಳಿಸಿದ ಹೈಕೋರ್ಟ್ : ಸಿಬಿಐ ತನಿಖೆಗೆ ಆದೇಶ
ಟಿಸಿಎಸ್ ನಲ್ಲಿ ಪಿಓಎಸ್ಎಚ್(ಪೊಶ್) ಆಡಿಟ್ ಕೋರಿದ ಎನ್ಐಟಿಇಎಸ್ : ಐಟಿ ವಲಯದಾದ್ಯಂತ ವ್ಯಾಪಕ ತನಿಖೆಗೆ ಒತ್ತಾಯ
ಟಿಸಿಎಸ್ ನಲ್ಲಿ ಪಿಓಎಸ್ಎಚ್(ಪೊಶ್) ಆಡಿಟ್ ಕೋರಿದ ಎನ್ಐಟಿಇಎಸ್ : ಐಟಿ ವಲಯದಾದ್ಯಂತ ವ್ಯಾಪಕ ತನಿಖೆಗೆ ಒತ್ತಾಯ
 ಟಿಸಿಎಸ್ ನಾಸಿಕ್ ಪ್ರಕರಣ: ಕಾರ್ಯಾಚರಣೆ ಮುಖ್ಯಸ್ಥ ಕಸ್ಟಡಿಗೆ ; ಟಾಟಾ ಇಂದ ಆಂತರಿಕ ತನಿಖೆ ವಿಸ್ತರಣೆ
ಟಿಸಿಎಸ್ ನಾಸಿಕ್ ಪ್ರಕರಣ: ಕಾರ್ಯಾಚರಣೆ ಮುಖ್ಯಸ್ಥ ಕಸ್ಟಡಿಗೆ ; ಟಾಟಾ ಇಂದ ಆಂತರಿಕ ತನಿಖೆ ವಿಸ್ತರಣೆ
ಜನರ ಹೆಸರುಗಳನ್ನು ಅಂತಿಮ ತೀರ್ಪಿನ ನಂತರ ಸೇರಿಸಿದರೆ... ಮತ ಚಲಾಯಿಸಲು ಅವಕಾಶ - ಸುಪ್ರೀಂ
ಜನರ ಹೆಸರುಗಳನ್ನು ಅಂತಿಮ ತೀರ್ಪಿನ ನಂತರ ಸೇರಿಸಿದರೆ... ಮತ ಚಲಾಯಿಸಲು ಅವಕಾಶ - ಸುಪ್ರೀಂ
ಹಿರಿಯ ಗಾಯಕಿ ಆಶಾ ಬೋಸ್ಲೆ ನಿಧನ : ಪ್ರಧಾನಿ ಮೋದಿ ಸಂತಾಪ
ಹಿರಿಯ ಗಾಯಕಿ ಆಶಾ ಬೋಸ್ಲೆ ನಿಧನ : ಪ್ರಧಾನಿ ಮೋದಿ ಸಂತಾಪ
 ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ವಂದೇ ಭಾರತ್ ಸ್ಲೀಪರ್ ರೈಲು ಸೇವೆಗೆ ಅನುಮೋದನೆ
ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ವಂದೇ ಭಾರತ್ ಸ್ಲೀಪರ್ ರೈಲು ಸೇವೆಗೆ ಅನುಮೋದನೆ
ನಾಸಿಕ್ ಟಿಸಿಎಸ್ ಪ್ರಕರಣ: ಮತಾಂತರ, ಮೂಲಭೂತೀಕರಣ ಆರೋಪಗಳ ಮೇಲೆ ತನಿಖೆ ಆರಂಭ
ನಾಸಿಕ್ ಟಿಸಿಎಸ್ ಪ್ರಕರಣ: ಮತಾಂತರ, ಮೂಲಭೂತೀಕರಣ ಆರೋಪಗಳ ಮೇಲೆ ತನಿಖೆ ಆರಂಭ
ದೋಷಾರೋಪಣೆ ಪ್ರಕ್ರಿಯೆ ಆರಂಭವಾದ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ
ದೋಷಾರೋಪಣೆ ಪ್ರಕ್ರಿಯೆ ಆರಂಭವಾದ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ
2008ರ ಮಾಲೆಗಾಂವ್ ಸ್ಫೋಟ ಪ್ರಕರಣ: ಕರ್ನಲ್ ಪುರೋಹಿತ್‌ಗೆ ಬ್ರಿಗೇಡಿಯರ್ ಬಡ್ತಿಗೆ ಅನುಮತಿ
2008ರ ಮಾಲೆಗಾಂವ್ ಸ್ಫೋಟ ಪ್ರಕರಣ: ಕರ್ನಲ್ ಪುರೋಹಿತ್‌ಗೆ ಬ್ರಿಗೇಡಿಯರ್ ಬಡ್ತಿಗೆ ಅನುಮತಿ
ಪ್ರತಿಯೊಬ್ಬ ಸೈನಿಕ ಡ್ರೋನ್ ಹಾರಿಸಲು ಸಿದ್ದವಾಗಬೇಕು - ಪ್ರತಿ ಸೈನಿಕನಿಗೆ ಡ್ರೋನ್ ಒದಗಿಸಲು ಸೇನಾ ಮುಖ್ಯಸ್ಥರು
ಪ್ರತಿಯೊಬ್ಬ ಸೈನಿಕ ಡ್ರೋನ್ ಹಾರಿಸಲು ಸಿದ್ದವಾಗಬೇಕು - ಪ್ರತಿ ಸೈನಿಕನಿಗೆ ಡ್ರೋನ್ ಒದಗಿಸಲು ಸೇನಾ ಮುಖ್ಯಸ್ಥರು
ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳಿಗೆ ಶಿಕ್ಷೆ ವಿಧಿಸಿದ ಬೆಂಗಳೂರು ನ್ಯಾಯಾಲಯ
ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳಿಗೆ ಶಿಕ್ಷೆ ವಿಧಿಸಿದ ಬೆಂಗಳೂರು ನ್ಯಾಯಾಲಯ

ನ್ಯೂಸ್ MORE NEWS...