Sun,Jul26,2026
ಕನ್ನಡ / English

ಸೋಲಾಗಿದ್ದು ಕಾರ್ಯಕರ್ತರಿಂದಲ್ಲ, ಬಿಜೆಪಿ ಪಕ್ಷದ ತಪ್ಪು ನಿರ್ಧಾರದಿಂದ: ರೇಣುಕಾಚಾರ್ಯ | JANATA NEWS

27 Jun 2023

ದಾವಣಗೆರೆ : 2023ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋಲೋದಕ್ಕೆ 8 ಕಾರಣಗಳ ಪಟ್ಟಿ ಕೊಟ್ಟಿದ್ದಾರೆ ಮಾಜಿ ಸಚಿವ ರೇಣುಕಾಚಾರ್ಯ. ನಮ್ಮ ಸರ್ಕಾರದ ತಪ್ಪು ನಿರ್ಧಾರಗಳಿಂದ ನಾವು ಸೋತಿದ್ದಾಗಿ ಹೇಳಿದ್ದಾರೆ.

ಈ ವಿಚಾರವಾಗಿ ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ ಮಾತನಾಡಿರುವ ಅವರು, ಡಾ. ಸುಧಾಕರ್ ಕೆಲಸಕ್ಕೆ ಬಾರದ ಪ್ರಣಾಳಿಕೆ ಮಾಡಿದ್ರು ಎಂದು ರೇಣುಕಾಚಾರ್ಯ ಹರಿಹಾಯ್ದಿದ್ದಾರೆ.

ಬಿಎಸ್‌ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಕ್ಕೆ ಇಳಿಸಿದ್ದೇ ಬಿಜೆಪಿ ಸೋಲಿಗೆ ಕಾರಣ ಅಂತ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ. ಒಂದು ವೇಳೆ, ಅವರೇ ಐದು ವರ್ಷ ಮುಂದುವರಿದಿದ್ದರೆ ಈ ಬಾರಿಯೂ ನಮ್ಮದೇ ಸರ್ಕಾರ ಬರುತ್ತಿತ್ತು ಎಂದು ಅವರು ಹೇಳಿದ್ದಾರೆ.

ನಾನು ಒಳಮೀಸಲಾತಿ ಕೊಡಬೇಡಿ ಎಂದು ಈ ಮೊದಲೇ ಹೇಳಿದ್ದೆ. ಆದರೆ ಚುನಾವಣಾ ಹೊತ್ತಲ್ಲಿ ಜಾರಿ ಮಾಡಿದ್ದು ಭಾರೀ ಪೆಟ್ಟು ಕೊಟ್ಟಿತು. ಕೇಂದ್ರ ಸರ್ಕಾರದ ಅಕ್ಕಿ ಕೊಡೋದು ನಿಲ್ಲಿಸಬೇಡಿ ಅಂತೆಯೂ ಹೇಳಿದ್ದೆ ಎಂದು ಇದೇ ಸಂದರ್ಭದಲ್ಲಿ ಅವರು ತಿಳಿಸಿದರು.

ಬಡ ಜನರ ತಿನ್ನುವ ಹೊಟ್ಟೆ ಮೇಲೆ ಹೊಡೆಯುವ ಕೆಲಸ ಮಾಡಿದರು‌. ಹತ್ತು ಕೆಜಿ ಅಕ್ಕಿ ನೀಡುವುದು ಬಿಟ್ಟು ಕಡಿತ ಮಾಡಿದರು ಅಂತ ರೇಣುಕಾಚಾರ್ಯ ಸ್ವಪಕ್ಷದ ವಿರುದ್ಧ ಆಕ್ರೋಶ ಹೊರಹಾಕಿದ್ರು. ಎನ್‌ಪಿಎಸ್ ನೌಕರರ ಮನವಿಯನ್ನು ಸ್ವೀಕಾರ ಮಾಡಿ ಎಂದು ಹೇಳಿದರೂ ಮಾಡಲಿಲ್ಲ ಅಂತ ಬೇಸರ ವ್ಯಕ್ತಪಡಿಸಿದರು.

ಡಾ ಸುಧಾಕರ್‌ ಅವರು ಬೊಮ್ಮಾಯಿ ಸರ್ಕಾರದಲ್ಲಿ ಆರೋಗ್ಯ ಸಚಿವರಾಗಿದ್ದರು. ಅವರನ್ನು ಚುನಾವಣಾ ಪ್ರಣಾಳಿಕೆ ಸಮಿತಿಯ ಅಧ್ಯಕ್ಷರನ್ನಾಗಿ ಮಾಡಲಾಗಿತ್ತು. ಕೆಲಸಕ್ಕೆ ಬಾರದ ಪ್ರನಾಳಿಕೆ ಮಾಡಿದ್ದಾರೆ ಎಂದು ಸ್ವಪಕ್ಷದ ವಿರುದ್ದ ಅಕ್ರೋಶಗೊಂಡರು. ರೇಣುಕಾಚಾರ್ಯ ಗೆ ಒಬ್ಬನಿಗೆ ಅಲ್ಲ ರಾಜ್ಯದ ಎಲ್ಲಾ ಕಾರ್ಯಕರ್ತರಿಗೆ ನೋವಾಗಿದೆ ಅಂತ ಹೇಳಿದ್ರು.

ಈಶ್ವರಪ್ಪ ಹಾಗೂ ಜಗದೀಶ್‌ ಶೆಟ್ಟರ್‌ ಅವರಿಗೆ ಟಿಕೆಟ್‌ ಅನ್ನು ನಿರಾಕರಿಸಿದ್ದು ಬಹುದೊಡ್ಡ ತಪ್ಪು. ಅವರಿಗೇನು ಮಹಾ ವಯಸ್ಸಾಗಿತ್ತು. ಅವರೇನು ತಪ್ಪು ಮಾಡಿದ್ದರು ಎಂದು ರೇಣುಕಾಚಾರ್ಯ ಪ್ರಶ್ನಿಸಿದ್ದಾರೆ.

ರಾಜ್ಯದ ಅಧ್ಯಕ್ಷರು ಗೊಂದಲದ ಹೇಳಿಕೆ ನೀಡುತ್ತಾ ಬಂದಿದ್ದಾರೆ.‌ ರಾಜೀನಾಮೆ ನೀಡುತ್ತೇನೆ, ಒಮ್ಮೆ ನೀಡೋದಿಲ್ಲ ಅಂತ ಗೊಂದಲದ ಹೇಳಿಕೆ ನೀಡುತ್ತಿದ್ದಾರೆ ಅಂತ ರೇಣುಕಾಚಾರ್ಯ ಹೇಳಿದ್ದಾರೆ.

ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನು ಸಮರ್ಥನಿದ್ದೇನೆ. ಶಾಸಕನಾಗಿ, ಸಚಿವನಾಗಿ ಅನುಭವವಿದೆ. ಆದರೆ ಒತ್ತಡ ಮಾಡುವುದಿಲ್ಲ ಎಂದು ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ರಾಜ್ಯಾಧ್ಯಕ್ಷ ಪಟ್ಟದ ಆಸೆಯನ್ನು ಬಹಿರಂಗಪಡಿಸಿದ್ದಾರೆ.

RELATED TOPICS:
English summary :Defeated not by activists, but by wrong decision of BJP party: Renukacharya

ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ  ರಿಜಿಜು ಮನವಿ
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ ರಿಜಿಜು ಮನವಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ

ನ್ಯೂಸ್ MORE NEWS...