Sun,Jul26,2026
ಕನ್ನಡ / English

ಕಳೆನಾಶಕ ಸಿಂಪಡಿಸುವಾಗ ದೇಹದೊಳಗೆ ಸೇರಿ ಉಪವಲಯ ಅರಣ್ಯಾಧಿಕಾರಿ ಅನುಮಾನಾಸ್ಪದವಾಗಿ ಸಾವು

08 Jul 2023

ಕುಮಟಾ : ಗಿಡಗಳಿಗೆ ಕಳೆನಾಶಕ ಸಿಂಪಡಿಸಿದ ನಂತರ ದೇಹದೊಳಗೆ ಅಪಾಯಕಾರಿ ವಿಷ ಸೇರಿದ ಪರಿಣಾಮವಾಗಿ ಕರ್ತವ್ಯ ನಿರತ ಅರಣ್ಯಾಧಿಕಾರಿ ಅಸ್ವಸ್ಥಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ವಿಚಿತ್ರ ಘಟನೆ ವರದಿಯಾಗಿದೆ.

ದಾಂಡೇಲಿ ತಾಲ್ಲೂಕಿನ ಕುಳಗಿ ಶಾಖೆಯ ಉಪ ವಲಯಾರಣ್ಯಾಧಿಕಾರಿ ಯೋಗೇಶ್ ನಾಯ್ಕ ಮೃತ ದುರ್ದೈವಿ.

ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಹಲವೆಡೆ ಕಳೆದ 13 ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದು, ಕಳೆನಾಶಕ ಸಿಂಪಡಿಸುವ ವಿಧಾನದ ಬಗ್ಗೆ ಸಾಕಷ್ಟು ಅನುಭವ ಹೊಂದಿದ್ದ ಅಧಿಕಾರಿಯೊಬ್ಬರ ಸಾವು ಹಲವಾರು ಸಂಶಯಕ್ಕೆ ಕಾರಣವಾಗಿದೆ, ಎನ್ನಲಾಗಿದೆ.

ಮೂಲತ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲ್ಲೂಕಿನ ಬಾಡ ಗ್ರಾಮದವರಾದ ಯೋಗೇಶ್ ನಾಯ್ಕ ಅವರು ಹಳಿಯಾಳ ವಿಭಾಗದ ಕುಳಗಿ ಶಾಖೆಯ ವಿರ್ನೋಲಿ ವಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಜೂನ್ 27 ರಂದು ಸಾಗವಾನಿ ಸಸಿಗಳ ಕಳೆಯನ್ನು ನಾಶಪಡಿಸಲು ಹಾಗೂ ಭೂಮಿ ಒಳಗಡೆ ಇರುವ ಹುಳಹುಪ್ಪಡಿಗಳನ್ನು ಸಾಯಿಸಲು ವಿಷಪೂರಿತ ಕೀಟ ನಾಶಕವನ್ನು ಸಹೋದ್ಯೋಗಿಗಳ ಜೊತೆ ಯೋಗೇಶ ಸಹ ಸಿಂಪಡಿಸಿದ್ದರು, ಎನ್ನಲಾಗಿದೆ.

ಕೀಟನಾಶಕ ಸಿಂಪಡಿಸಿದ ನಂತರ ಯೋಗೇಶ್ ನಾಯ್ಕ ಅವರು ಕೈ ತೊಳೆಯದೆ ಊಟ, ನೀರು ಸೇವಿಸಿದ್ದಾರೆ, ಎನ್ನಲಾಗಿದೆ. ಮರುದಿನ ಯೋಗೇಶ್ ನಾಯ್ಕ ಅವರಿಗೆ ತೀವ್ರ ಅನಾರೋಗ್ಯ ಸಮಸ್ಯೆ ಉಂಟಾಗಿದೆ. ಅನಾರೋಗ್ಯ ಉಲ್ಬಣಗೊಳ್ಳುತ್ತಿದ್ದಂತೆಯೆ ಧಾರವಾಡದ ಎಸ್.ಡಿ.ಎಂ ಆಸ್ಪತ್ರೆಗೆ ಯೋಗೇಶ್ ನಾಯ್ಕ ಅವರನ್ನು ದಾಖಲಿಸಲಾಗಿದೆ.

ಚಿಕಿತ್ಸೆ ನಡೆಸಿದಾಗ ಆಗಲೇ ಕಿಡ್ನಿ, ಲಿವರ್, ಲಂಗ್ಸ್​​ಗಳು ಡ್ಯಾಮೇಜ್ ಆಗಿದ್ದವು. ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆಗೆ ಯೋಗೇಶ್ ನಾಯ್ಕ್ ಕೋಮಾ ಸ್ಥಿತಿಗೆ ತಲುಪಿದ್ದರು. ಅಲ್ಲೂ ಕೂಡ ಚಿಕಿತ್ಸೆಗೆ ಸ್ಪಂಧಿಸದ ಕಾರಣ ಹುಬ್ಬಳ್ಳಿಯ ಕಿಮ್ಸ್​​ಗೆ ಶಿಪ್ಟ್ ಆಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಹೆಂಡತಿ ಹಾಗು ಎರಡುವರೆ ವರ್ಷದ ಪುಟ್ಟ ಮಗ ನನ್ನ ಅಗಲಿದ್ದಾರೆ. ಯೋಗೇಶ್ ನಾಯ್ಕ ಅವರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ನಿನ್ನೆ ಸಂಜೆಯೆ ಮೃತಪಟ್ಟಿದ್ದ ಯೋಗೇಶ್ ನಾಯ್ಕ ಅವರ ಮೃತದೇಹವನ್ನು ಇಂದು ಶನಿವಾರ ಹುಬ್ಬಳ್ಳಿಯಿಂದ ಬೆಳಿಗ್ಗೆ 7 ಗಂಟೆಗೆ ಹಳಿಯಾಳದಲ್ಲಿರುವ ಉಪ ಅರಣ್ಯ ಸಂರಕ್ಷಣಾಧಿಕಾರಿಯವರ ಕಾರ್ಯಾಲಯದ ಆವರಣಕ್ಕೆ ತರಲಾಯಿತು.

ದಾಂಡೇಲಿ ತಾಲ್ಲೂಕಿನ ಕುಳಗಿ ಅರಣ್ಯ ಶಾಖೆಯ ಉಪ ವಲಯಾರಣ್ಯಾಧಿಕಾರಿ ಯೋಗೇಶ್ ನಾಯ್ಕ ಅವರಿಗೆ ಹಳಿಯಾಳ ಪಟ್ಟಣದಲ್ಲಿರುವ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಾರ್ಯಾಲಯದ ಆವರಣದಲ್ಲಿ ಅಂತಿಮ ಗೌರವ ಸಲ್ಲಿಸಲಾಯಿತು.

RELATED TOPICS:
English summary :Sub-Divisional forest officer suspiciously died after getting inside his body while spraying herbicide

ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ  ರಿಜಿಜು ಮನವಿ
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ ರಿಜಿಜು ಮನವಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ

ನ್ಯೂಸ್ MORE NEWS...