Sat,May30,2026
ಕನ್ನಡ / English

ಹಿಂದೂ ಎಂಬುದು ಧರ್ಮವೇ ಅಲ್ಲ, ಲಿಂಗಾಯತವನ್ನು ಸ್ವತಂತ್ರ ಧರ್ಮವೆಂದು ಪರಿಗಣಿಸಿ: ತೋಂಟದಾರ್ಯ ಸಿದ್ದರಾಮ ಸ್ವಾಮೀಜಿ | JANATA NEWS

09 Jul 2023

ಧಾರವಾಡ : ನಾವು ಹಿಂದೂ ವಿರೋಧಿಗಳಲ್ಲ, ಹಿಂದೂ ಎನ್ನುವುದು ಒಂದು ಧರ್ಮವೇ ಅಲ್ಲ ಎಂದು ಗದಗ ತೋಂಟದಾರ್ಯ ಮಠದ ಡಾ. ಸಿದ್ದರಾಮ ಸ್ವಾಮೀಜಿ ಹೇಳಿದ್ದಾರೆ.

ಧಾರವಾಡದಲ್ಲಿ ಮಾತನಾಡಿದ ಅವರು, ಹಿಂದೂ ಜೀವನ ಪದ್ಧತಿಯಷ್ಟೇ. ಓರ್ವ ಸ್ಥಾಪಕ ಇದ್ದರೆ ಮಾತ್ರ ಅದೊಂದು ಧರ್ಮ ಎನಿಸಿಕೊಳ್ಳುತ್ತದೆ. ಧರ್ಮ ಎಂದರೆ ಅದರದ್ದೆಯಾದ ಸಂವಿಧಾನ ಇರಬೇಕು. ಒಂದೇ ದೇವರನ್ನು ಪೂಜಿಸುತ್ತಿರಬೇಕು. ಈ ಹಿನ್ನೆಲೆಯಲ್ಲಿ ಲಿಂಗಾಯತ ಸ್ವತಂತ್ರ ಧರ್ಮವಾಗಿದೆ. ಬಸವಣ್ಣನವರು ಇದರ ಸ್ಥಾಪಕರು ಎಂದಿದ್ದಾರೆ.

ಲಿಂಗಾಯತ ಅನ್ನೋದು ಒಂದು ಸ್ವತಂತ್ರ ಧರ್ಮ. ಇದಕ್ಕೆ ಬಸವಣ್ಣನವರು ಸಂಸ್ಥಾಪಕರು. ವಚನ ಸಾಹಿತ್ಯ ಇದರ ಸಂವಿಧಾನ. ನಾವೆಲ್ಲರೂ ಇಷ್ಟ ಲಿಂಗವನ್ನು ಪೂಜಿಸುವಂತಹವರು. ಇದು ಬಹಳ ಮುಖ್ಯ. ಹಿಂದೂ ಧರ್ಮ ಅಂತ ನಾವೇನು ಹೇಳುತ್ತೇವೋ ಅಲ್ಲಿ ಯಾವುದೇ ಪ್ರವರ್ತಕ, ಪ್ರವಾದಿ ಇಲ್ಲ. ಅದಕ್ಕೊಂದು ನಿರ್ದಿಷ್ಟ ಗ್ರಂಥ ಆಗಲಿ, ದೇವರಾಗಲಿ ಇಲ್ಲ. 33 ಕೋಟಿ ದೇವತೆಗಳನ್ನು ಪೂಜಿಸುತ್ತಾರೆ. ಅದು ವೈಧಿಕ ಧರ್ಮ. ಅದನ್ನೇ ಇವತ್ತು ಹಿಂದೂ ಧರ್ಮ ಅಂತ ಪರಿವರ್ತನೆ ಮಾಡಿಕೊಂಡಿದ್ದಾರೆ ಎಂದರು.

ಇವತ್ತು ಭಗವದ್ಗೀತೆಯ ಬಗ್ಗೆ ಅವರು ಮಾತನಾಡುತ್ತಾರೆ. ಆದರೆ ಭಗವದ್ಗೀತೆಯ 18 ಅಧ್ಯಾಯದ ಯಾವ ಒಂದು ಶ್ಲೋಕದಲ್ಲೂ ಹಿಂದೂ ಎಂಬ ಶಬ್ಧ ಪ್ರಯೋಗ ಆಗಿಲ್ಲ. ಜೊತೆಗೆ ವೇದಗಳಲ್ಲಿ, ಉಪನಿಷತ್​ಗಳಲ್ಲೂ ಪ್ರಯೋಗ ಆಗಿಲ್ಲ. ಅದೊಂದು ಜೀವನ ಮಾರ್ಗ. ಹಾಗಾಗಿ ನಾವು ಸ್ವತಂತ್ರ ಧರ್ಮದ ಮಾನ್ಯತೆಯನ್ನು ಪಡೆಯುವುದರಿಂದ ಹಿಂದೂ ಧರ್ಮದ ವಿರೋಧಿಗಳು ಆಗುವುದಿಲ್ಲ ಎಂದು ತಿಳಿಸಿದರು.

ಲಿಂಗಾಯತ ಧರ್ಮಕ್ಕೆ ಸ್ವತಂತ್ರ ಧರ್ಮವೆಂದು ಮಾನ್ಯತೆ ಸಿಗಬೇಕು. ಈ ಸಂಬಂಧ ರಾಜ್ಯ ಸರ್ಕಾರ ಕೇಂದ್ರಕ್ಕೆ ಪುನಃ ಪ್ರಸ್ತಾವನೆ ಸಲ್ಲಿಸಬೇಕು ಎಂದು ಆಗ್ರಹಿಸಿದರು.

RELATED TOPICS:
English summary :Hinduism is not a religion, consider Lingayat as an independent religion: Tondarya Siddarama Swamiji

ಕೇರಳ ವಿಧಾನಸಭೆಯಲ್ಲಿ ವಂದೇ ಮಾತರಂ ಗೀತೆಯನ್ನು ಸಂಪೂರ್ಣವಾಗಿ ಹಾಡದ ಕಾರಣ ಗದ್ದಲ
ಕೇರಳ ವಿಧಾನಸಭೆಯಲ್ಲಿ ವಂದೇ ಮಾತರಂ ಗೀತೆಯನ್ನು ಸಂಪೂರ್ಣವಾಗಿ ಹಾಡದ ಕಾರಣ ಗದ್ದಲ
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿ, ಮಂತ್ರಿಮಂಡಲ ವಜಾ ಮಾಡಿದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿ, ಮಂತ್ರಿಮಂಡಲ ವಜಾ ಮಾಡಿದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್
ಅರ್ಮೇನಿಯಾ ಮಿಲಿಟರಿ ಮೆರವಣಿಗೆಯಲ್ಲಿ ಭಾರತೀಯ ಮೂಲದ ಫಿರಂಗಿ, ವಾಯು ರಕ್ಷಣಾ ವ್ಯವಸ್ಥೆಗಳು, ರಾಡಾರ್ ಪ್ರದರ್ಶನ
ಅರ್ಮೇನಿಯಾ ಮಿಲಿಟರಿ ಮೆರವಣಿಗೆಯಲ್ಲಿ ಭಾರತೀಯ ಮೂಲದ ಫಿರಂಗಿ, ವಾಯು ರಕ್ಷಣಾ ವ್ಯವಸ್ಥೆಗಳು, ರಾಡಾರ್ ಪ್ರದರ್ಶನ
ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆಯನ್ನು ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆಯನ್ನು ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
3 ಗಂಟೆಗೆ ರಾಜೀನಾಮೆ ನೀಡಲಿದ್ದಾರೆ ಮುಖ್ಯಮಂತ್ರಿ ಸಿದ್ದರಾಮಯ್ಯ : ಡಿಕೆ ಶಿವಕುಮಾರ್ ಹೊಸ ಸಿಎಂ
3 ಗಂಟೆಗೆ ರಾಜೀನಾಮೆ ನೀಡಲಿದ್ದಾರೆ ಮುಖ್ಯಮಂತ್ರಿ ಸಿದ್ದರಾಮಯ್ಯ : ಡಿಕೆ ಶಿವಕುಮಾರ್ ಹೊಸ ಸಿಎಂ
ಅಂತಾರಾಷ್ಟ್ರೀಯ ಗಡಿಗಳ ಬಳಿಯ ಅಕ್ರಮ ರಚನೆಗಳ ವಿರುದ್ಧ ಕ್ರಮ ಕೈಗೊಳ್ಳಲು ಅಮಿತ್ ಶಾ ಆದೇಶ
ಅಂತಾರಾಷ್ಟ್ರೀಯ ಗಡಿಗಳ ಬಳಿಯ ಅಕ್ರಮ ರಚನೆಗಳ ವಿರುದ್ಧ ಕ್ರಮ ಕೈಗೊಳ್ಳಲು ಅಮಿತ್ ಶಾ ಆದೇಶ
ಅಸ್ಸಾಂ ವಿಧಾನಸಭೆಯು ಏಕರೂಪ ನಾಗರಿಕ ಸಂಹಿತೆ ಮಸೂದೆ, 2026 ಅನ್ನು ಅಂಗೀಕರಿಸಿದೆ
ಅಸ್ಸಾಂ ವಿಧಾನಸಭೆಯು ಏಕರೂಪ ನಾಗರಿಕ ಸಂಹಿತೆ ಮಸೂದೆ, 2026 ಅನ್ನು ಅಂಗೀಕರಿಸಿದೆ
ಕರ್ನಾಟಕದಲ್ಲಿ ಶೀಘ್ರದಲ್ಲೇ ಹೊಸ ಸಿಎಂ ಮತ್ತು ನಾಲ್ವರು ಡಿಸಿಎಂಗಳ ನೇಮಕ ಸಾಧ್ಯತೆ?
ಕರ್ನಾಟಕದಲ್ಲಿ ಶೀಘ್ರದಲ್ಲೇ ಹೊಸ ಸಿಎಂ ಮತ್ತು ನಾಲ್ವರು ಡಿಸಿಎಂಗಳ ನೇಮಕ ಸಾಧ್ಯತೆ?
ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನಟ ರಣವೀರ್ ಸಿಂಗ್ ಪ್ರಾರ್ಥನೆ ಸಲ್ಲಿಸಿದರು.
ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನಟ ರಣವೀರ್ ಸಿಂಗ್ ಪ್ರಾರ್ಥನೆ ಸಲ್ಲಿಸಿದರು.
ಪೋರ್ಟಲ್‌ನಲ್ಲಿ ವಕ್ಫ್ ಮಂಡಳಿ ಅಕ್ರಮವಾಗಿ ಅಪ್‌ಲೋಡ್ ಮಾಡಲಾದ ಆಸ್ತಿಗಳನ್ನು ತೆಗೆದುಹಾಕಲು ಕೇಂದ್ರಕ್ಕೆ ರಾಜೀವ್ ಚಂದ್ರಶೇಖರ್ ಮನವಿ
ಪೋರ್ಟಲ್‌ನಲ್ಲಿ ವಕ್ಫ್ ಮಂಡಳಿ ಅಕ್ರಮವಾಗಿ ಅಪ್‌ಲೋಡ್ ಮಾಡಲಾದ ಆಸ್ತಿಗಳನ್ನು ತೆಗೆದುಹಾಕಲು ಕೇಂದ್ರಕ್ಕೆ ರಾಜೀವ್ ಚಂದ್ರಶೇಖರ್ ಮನವಿ
ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭ: 3ನೇ ಸ್ಥಾನದಲ್ಲಿ ಆಸೀನರಾಗಿದ್ದ ಎಚ್‌ಡಿ ಕುಮಾರಸ್ವಾಮಿ
ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭ: 3ನೇ ಸ್ಥಾನದಲ್ಲಿ ಆಸೀನರಾಗಿದ್ದ ಎಚ್‌ಡಿ ಕುಮಾರಸ್ವಾಮಿ
ತನ್ನ ಸ್ವಂತ ತಂದೆಗೆ ನಿಷ್ಠೆ ತೋರದ ಮಗ ದೇಶಕ್ಕೆ ನಿಷ್ಠನಾಗಿರುತ್ತಾನೆಯೇ? - ರಾಹುಲ್ ಗಾಂಧಿ ಸಮಗ್ರತೆ ಪ್ರಶ್ನಿಸಿದ ಎಸ್.ಜೈಶಂಕರ್
ತನ್ನ ಸ್ವಂತ ತಂದೆಗೆ ನಿಷ್ಠೆ ತೋರದ ಮಗ ದೇಶಕ್ಕೆ ನಿಷ್ಠನಾಗಿರುತ್ತಾನೆಯೇ? - ರಾಹುಲ್ ಗಾಂಧಿ ಸಮಗ್ರತೆ ಪ್ರಶ್ನಿಸಿದ ಎಸ್.ಜೈಶಂಕರ್

ನ್ಯೂಸ್ MORE NEWS...