Sun,Jul26,2026
ಕನ್ನಡ / English

ಹಿಂದೂ ಎಂಬುದು ಧರ್ಮವೇ ಅಲ್ಲ, ಲಿಂಗಾಯತವನ್ನು ಸ್ವತಂತ್ರ ಧರ್ಮವೆಂದು ಪರಿಗಣಿಸಿ: ತೋಂಟದಾರ್ಯ ಸಿದ್ದರಾಮ ಸ್ವಾಮೀಜಿ | JANATA NEWS

09 Jul 2023

ಧಾರವಾಡ : ನಾವು ಹಿಂದೂ ವಿರೋಧಿಗಳಲ್ಲ, ಹಿಂದೂ ಎನ್ನುವುದು ಒಂದು ಧರ್ಮವೇ ಅಲ್ಲ ಎಂದು ಗದಗ ತೋಂಟದಾರ್ಯ ಮಠದ ಡಾ. ಸಿದ್ದರಾಮ ಸ್ವಾಮೀಜಿ ಹೇಳಿದ್ದಾರೆ.

ಧಾರವಾಡದಲ್ಲಿ ಮಾತನಾಡಿದ ಅವರು, ಹಿಂದೂ ಜೀವನ ಪದ್ಧತಿಯಷ್ಟೇ. ಓರ್ವ ಸ್ಥಾಪಕ ಇದ್ದರೆ ಮಾತ್ರ ಅದೊಂದು ಧರ್ಮ ಎನಿಸಿಕೊಳ್ಳುತ್ತದೆ. ಧರ್ಮ ಎಂದರೆ ಅದರದ್ದೆಯಾದ ಸಂವಿಧಾನ ಇರಬೇಕು. ಒಂದೇ ದೇವರನ್ನು ಪೂಜಿಸುತ್ತಿರಬೇಕು. ಈ ಹಿನ್ನೆಲೆಯಲ್ಲಿ ಲಿಂಗಾಯತ ಸ್ವತಂತ್ರ ಧರ್ಮವಾಗಿದೆ. ಬಸವಣ್ಣನವರು ಇದರ ಸ್ಥಾಪಕರು ಎಂದಿದ್ದಾರೆ.

ಲಿಂಗಾಯತ ಅನ್ನೋದು ಒಂದು ಸ್ವತಂತ್ರ ಧರ್ಮ. ಇದಕ್ಕೆ ಬಸವಣ್ಣನವರು ಸಂಸ್ಥಾಪಕರು. ವಚನ ಸಾಹಿತ್ಯ ಇದರ ಸಂವಿಧಾನ. ನಾವೆಲ್ಲರೂ ಇಷ್ಟ ಲಿಂಗವನ್ನು ಪೂಜಿಸುವಂತಹವರು. ಇದು ಬಹಳ ಮುಖ್ಯ. ಹಿಂದೂ ಧರ್ಮ ಅಂತ ನಾವೇನು ಹೇಳುತ್ತೇವೋ ಅಲ್ಲಿ ಯಾವುದೇ ಪ್ರವರ್ತಕ, ಪ್ರವಾದಿ ಇಲ್ಲ. ಅದಕ್ಕೊಂದು ನಿರ್ದಿಷ್ಟ ಗ್ರಂಥ ಆಗಲಿ, ದೇವರಾಗಲಿ ಇಲ್ಲ. 33 ಕೋಟಿ ದೇವತೆಗಳನ್ನು ಪೂಜಿಸುತ್ತಾರೆ. ಅದು ವೈಧಿಕ ಧರ್ಮ. ಅದನ್ನೇ ಇವತ್ತು ಹಿಂದೂ ಧರ್ಮ ಅಂತ ಪರಿವರ್ತನೆ ಮಾಡಿಕೊಂಡಿದ್ದಾರೆ ಎಂದರು.

ಇವತ್ತು ಭಗವದ್ಗೀತೆಯ ಬಗ್ಗೆ ಅವರು ಮಾತನಾಡುತ್ತಾರೆ. ಆದರೆ ಭಗವದ್ಗೀತೆಯ 18 ಅಧ್ಯಾಯದ ಯಾವ ಒಂದು ಶ್ಲೋಕದಲ್ಲೂ ಹಿಂದೂ ಎಂಬ ಶಬ್ಧ ಪ್ರಯೋಗ ಆಗಿಲ್ಲ. ಜೊತೆಗೆ ವೇದಗಳಲ್ಲಿ, ಉಪನಿಷತ್​ಗಳಲ್ಲೂ ಪ್ರಯೋಗ ಆಗಿಲ್ಲ. ಅದೊಂದು ಜೀವನ ಮಾರ್ಗ. ಹಾಗಾಗಿ ನಾವು ಸ್ವತಂತ್ರ ಧರ್ಮದ ಮಾನ್ಯತೆಯನ್ನು ಪಡೆಯುವುದರಿಂದ ಹಿಂದೂ ಧರ್ಮದ ವಿರೋಧಿಗಳು ಆಗುವುದಿಲ್ಲ ಎಂದು ತಿಳಿಸಿದರು.

ಲಿಂಗಾಯತ ಧರ್ಮಕ್ಕೆ ಸ್ವತಂತ್ರ ಧರ್ಮವೆಂದು ಮಾನ್ಯತೆ ಸಿಗಬೇಕು. ಈ ಸಂಬಂಧ ರಾಜ್ಯ ಸರ್ಕಾರ ಕೇಂದ್ರಕ್ಕೆ ಪುನಃ ಪ್ರಸ್ತಾವನೆ ಸಲ್ಲಿಸಬೇಕು ಎಂದು ಆಗ್ರಹಿಸಿದರು.

RELATED TOPICS:
English summary :Hinduism is not a religion, consider Lingayat as an independent religion: Tondarya Siddarama Swamiji

ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ  ರಿಜಿಜು ಮನವಿ
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ ರಿಜಿಜು ಮನವಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ
ಇದು ನನ್ನ ಬಯಕೆ,. ನನ್ನ ಬೇಡಿಕೆಗಳು ಬದಲಾಗಿವೆ ಎಂದ ರಾಹುಲ್ ಗಾಂಧಿ ಮಾತುಗಳು ಸರಿಯಲ್ಲ - ಕೇಂದ್ರ ಸಚಿವ ಸಿಂಗ್
ಇದು ನನ್ನ ಬಯಕೆ,. ನನ್ನ ಬೇಡಿಕೆಗಳು ಬದಲಾಗಿವೆ ಎಂದ ರಾಹುಲ್ ಗಾಂಧಿ ಮಾತುಗಳು ಸರಿಯಲ್ಲ - ಕೇಂದ್ರ ಸಚಿವ ಸಿಂಗ್

ನ್ಯೂಸ್ MORE NEWS...