Sun,Jul26,2026
ಕನ್ನಡ / English

ಜೈನ ಮುನಿ ಪ್ರಕರಣ: ಕಠಿಣ ಶಿಕ್ಷೆ ಎಂದರೆ ಏನು? ಆರೋಪಿಗಳಿಗೆ ಯೋಗಿ ಮಾದರಿಯಲ್ಲಿ ಅವರ ಮೇಲೆ ಕ್ರಮ ಆಗಬೇಕು | JANATA NEWS

11 Jul 2023

ಹುಬ್ಬಳ್ಳಿ : ಕರ್ನಾಟಕ ಪೊಲೀಸರು ಕೇವಲ ನಾಲ್ಕು ಗಂಟೆಯಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ. ಕಠಿಣ ಶಿಕ್ಷೆ ಎಂದರೆ ಏನು? ನಮ್ಮ ಸಿಸ್ಟಮ್ ಸರಿ ಇಲ್ಲ. ಒಂದು ವರ್ಷದಲ್ಲಿ ಅವರು ಹೊರಗೆ ಬರುತ್ತಾರೆ. ಉತ್ತರಪ್ರದೇಶ ಮಾದರಿಯಲ್ಲಿ ಮೂವರು ಆರೋಪಿಗಳ ಮನೆಗೆ ಬುಲ್ಡೋಜರ್ ಹತ್ತಿಸಬೇಕು. ಕ್ರೌರ್ಯ ಕ್ರೌರ್ಯವೇ. ಅವರು ಯಾರೇ ಆಗಲಿ ಅವರ ಮನೆ ಮೇಲೆ ಬುಲ್ಡೋಜರ್ ಹತ್ತಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾಮಕುಮಾರ ನಂದಿ ಸ್ವಾಮೀಜಿ ಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಬಿಜೆಪಿ ನಾಯಕರು ಆಗ್ರಹಿಸುತ್ತಿದ್ದಾರೆ. ಆದರೆ, ಸಿಬಿಐ ಕೇವಲ ಬುರುಡೆ. ಬಿಜೆಪಿ ಅಧಿಕಾರದಲ್ಲಿದ್ದಾಗ ಹಿಂದೂಗಳ ಹತ್ಯೆ ಪ್ರಕರಣಗಳನ್ನು ಸಿಬಿಐಗೆ ಕೊಟ್ಟರು, ನಂತರ ಏನಾಯ್ತು? 22 ಪ್ರಕರಣಗಳಿಗೆ ನ್ಯಾಯ ಸಿಕ್ಕಿದೆಯೇ ಎಂದು ಶ್ರೀರಾಮಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ ಮುತಾಲಿಕ್ ಪ್ರಶ್ನಿಸಿದ್ದಾರೆ.

ಕಾಂಗ್ರೆಸ್​ ಸರ್ಕಾರ ಬಂದ ಮೇಲೆ ಹಿಂದೂ ವಿರೋಧಿ ವಾತಾವರಣ ಸೃಷ್ಠಿಯಾಗಿದೆ. ಬಿಜೆಪಿ ಅಧಿಕಾರದಲ್ಲಿದ್ದಾಗಲೂ ಆತಂಕ ಇತ್ತು. ಬಿಜೆಪಿ ಸರ್ಕಾರವಿದ್ದಾಗಲೂ ಹಿಂದೂ ಕಾರ್ಯಕರ್ತರ ಹತ್ಯೆ ಆಗಿದೆ. ಅದಕ್ಕಾಗಿ ಬಿಜೆಪಿಯವರನ್ನು ಕರ್ನಾಟಕದಲ್ಲಿ ನೆಲಸಮ ಮಾಡಿದ್ದಾರೆ ಎಂದು ಶ್ರೀರಾಮ ಸೇನೆ ಸ್ಥಾಪಕ ಪ್ರಮೋದ್​ ಮುತಾಲಿಕ್​ ಹೇಳಿದ್ದಾರೆ.

ಹೀರೆಕುಡಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ ತಾಲೂಕಿನ ವರೂರ್ ಜೈನ್ ಮಂದಿರಕ್ಕೆ ಭೇಟಿ ನೀಡಿದ ಮುತಾಲಿಕ್ ಜೈನಮುನಿ ಗುಣಧರನಂದಿ ಮಹಾರಾಜ್ ಅವರಿಗೆ ಸಾಂತ್ವನ ಹೇಳಿದರು. ಈ ವೇಳೆ ಮೃತ ಕಾಮಕುಮಾರ ನಂದಿ ಶ್ರೀಗಳ ಹಿನ್ನೆಲೆ ಬಗ್ಗೆ ಚರ್ಚೆ ಮಾಡಿದ ಅವರು, ಜೈನ ಧರ್ಮದ ಜೊತೆಗೆ ಹಿಂದೂಪರ ಸಂಘಟನೆಗಳು ಇವೆ ಎಂಬ ಭರವಸೆಯನ್ನು ನೀಡಿದರು.

ಪರೇಶ್ ಮೇಸ್ತಾ ಪ್ರಕರಣ ಯಾವ ಹಂತದಲ್ಲಿದೆ?22 ಕೇಸ್‌ಗಳಿಗೆ ನ್ಯಾಯ ಸಿಕ್ಕಿದೆಯಾ? ಬಿಜೆಪಿಯವರು ಇದೀಗ ಸಿಬಿಐಗೆ ವಹಿಸಿ ಎಂದು ಹೇಳುತ್ತಿದ್ದಾರೆ. ಇವರೇನು ಸಾಚಾಗಳಾ? ರಾಜಕಾರಣಿಗಳು ನಿರ್ಲಜ್ಜರು. ನಾನು ಹಿಂದೂತ್ವ ಉಳಿಸಲು ರಾಜಕಾರಣಕ್ಕೆ ಬಂದಿದ್ದೇನೆ. ರಾಜಕಾರಣ ಮಾಡಲಿಲ್ಲ ಎಂದು ಬಿಜೆಪಿ ನಾಯಕರ ವಿರುದ್ಧ ಹರಿಹಾಯ್ದರು.

ಜೈನ ಸ್ವಾಮೀಜಿಯ ಹತ್ಯೆ ನಾವು ಖಂಡಿಸುತ್ತೇವೆ. ನಾನು ಅಲ್ಲಿಗೆ ಭೇಟಿ ಕೊಟ್ಟು ಬಂದಿದ್ದೇನೆ. ಮಠದಲ್ಲಿ ಸ್ವಾಮೀಜಿ ಒಬ್ಬರೇ ಇರುತ್ತಿದ್ದರು. ಹೀರೆಕುಡಿಯಿಂದ ಮಠ ಸುಮಾರು 2 ಕಿಲೋ ಮೀಟರ್ ದೂರ ಇದೆ. ಒಂಟಿತನ ನೋಡಿ ವ್ಯವಸ್ಥಿತವಾಗಿ ಕೊಲೆ ಮಾಡಿದ್ದಾರೆ. ಈ ಕೊಲೆ ಸಾಮಾನ್ಯ ಕೊಲೆ ಅಲ್ಲ. ಕುರಿ, ಕೋಳಿ ಕತ್ತರಿಸುವ ರೀತಿಯಲ್ಲಿ ಹತ್ಯೆ ಮಾಡಿದ್ದಾರೆ.

ಘಟನೆಯ ಸಂಪೂರ್ಣ ಮಾಹಿತಿಯನ್ನು ಸರ್ಕಾರ ಹೊರ ಹಾಕಬೇಕು. ಇದರ ಹಿಂದೆ ಹಣದ ಕಾರಣ ಇಲ್ಲ, ಬೇರೆ ಏನೋ ಷಡ್ಯಂತ್ರ ಇದೆ. ಕರ್ನಾಟಕ ಪೊಲೀಸರು ಕೇವಲ ನಾಲ್ಕು ಗಂಟೆಯಲ್ಲಿ ಬಂಧಿಸಿದ್ದಾರೆ. ಉತ್ತರ ಪ್ರದೇಶ ಮಾದರಿಯಲ್ಲಿ ಮೂರು ಆರೋಪಿಗಳ ಮನೆಗೆ ಬುಲ್ಡೋಜರ್ ಹತ್ತಿಸಬೇಕು.

ಕೊಲೆಗಾರರದ್ದು ತಾಲಿಬಾನ್ ಮನಸ್ಥಿತಿ. ಇದರಲ್ಲಿ ಮುಚ್ಚು ಮರೆ ಮಾಡಿದರೆ ದೇಶಕ್ಕೆ ಅಪಾಯಕಾರಿ. ಕಾಂಗ್ರೆಸ್ ಬಿಜೆಪಿ ಜೆಡಿಎಸ್ ಎಲ್ಲರೂ ಬಾಯಿ ಮುಚ್ಚಿ. ತನಿಖೆಗೆ ಮುಕ್ತ ಅವಕಾಶ ಕೊಡಬೇಕು. ಯಾರೂ ಯಾವುದೇ ಒತ್ತಾಯಕ್ಕೆ ಮಣಿಯಬಾರದು. ಯೋಗಿ ಮಾದರಿಯಲ್ಲಿ ಅವರ ಮೇಲೆ ಕ್ರಮ ಆಗಬೇಕು. ಯಾರೂ ಅವರ ಪರ ವಕಾಲತ್ತು ಮಾಡಬಾರದು ಎಂದು ನಾನು ವಕೀಲರ ಸಂಘಕ್ಕೆ ಮನವಿ ಮಾಡುತ್ತೇನೆ. ಎಂದು ಪ್ರಮೋದ್ ಮುತಾಲಿಕ್ ಹೇಳಿದರು.

RELATED TOPICS:
English summary :The CBI is only concerned with the killing of Hindu activists in both the Burude, Congress and BJP governments

ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ  ರಿಜಿಜು ಮನವಿ
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ ರಿಜಿಜು ಮನವಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ
ಇದು ನನ್ನ ಬಯಕೆ,. ನನ್ನ ಬೇಡಿಕೆಗಳು ಬದಲಾಗಿವೆ ಎಂದ ರಾಹುಲ್ ಗಾಂಧಿ ಮಾತುಗಳು ಸರಿಯಲ್ಲ - ಕೇಂದ್ರ ಸಚಿವ ಸಿಂಗ್
ಇದು ನನ್ನ ಬಯಕೆ,. ನನ್ನ ಬೇಡಿಕೆಗಳು ಬದಲಾಗಿವೆ ಎಂದ ರಾಹುಲ್ ಗಾಂಧಿ ಮಾತುಗಳು ಸರಿಯಲ್ಲ - ಕೇಂದ್ರ ಸಚಿವ ಸಿಂಗ್

ನ್ಯೂಸ್ MORE NEWS...