Sat,May30,2026
ಕನ್ನಡ / English

ಭೀಮನ ಅಮಾವಾಸ್ಯೆ ದಿನ ಪಾದ ಪೂಜೆ ಮಾಡಿ ಪತಿಯನ್ನು ಬಲಿ ಕೊಟ್ಟ ಪತ್ನಿ | JANATA NEWS

18 Jul 2023

ಬೆಳಗಾವಿ : ಭೀಮನ‌ ಅಮಾವಾಸ್ಯೆ ದಿನದಂದು ಗಂಡನ ಪಾದಪೂಜೆ ಮಾಡಿ ಬಳಿಕ ದೇವಸ್ಥಾನಕ್ಕೆ ಕರೆದೊಯ್ದು ಬಲಿಕೊಟ್ಟಿದ್ದಾಳೆ. ಜಿಲ್ಲೆಯ ಮೂಡಲಗಿ ತಾಲೂಕಿನ ವಡೇರಹಟ್ಟಿ ಗ್ರಾಮದ ಬನಸಿದ್ದೇಶ್ವರ ದೇವಸ್ಥಾನದಲ್ಲಿ ನಡೆದಿದ್ದ ಭೀಕರ ಕೊಲೆಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ.

ಕೊಲೆಯಾದ ಶಂಕರ ಜಗಮುತ್ತಿ ಪತ್ನಿ ಪ್ರಿಯಾಂಕಾ ಜಗಮುತ್ತಿಯನ್ನು ಮೂಡಲಗಿ ಪೊಲೀಸರು ಬಂಧಿಸಿದ್ದಾರೆ. ಮೂಡಲಗಿ ತಾಲೂಕಿನ ವಡೇರಹಟ್ಟಿ ಗ್ರಾಮದಲ್ಲಿ ನಿನ್ನೆ (ಜು.17) ಹತ್ಯೆ ನಡೆದಿದೆ.

ಕೇವಲ ಐದು ತಿಂಗಳ ಹಿಂದೆ ಅಷ್ಟೇ ಸಪ್ತಪದಿ ತುಳಿದಿದ್ದ ಶಂಕರ್ ಜಗಮುತ್ತಿ(25) ಎನ್ನುವಾತನನ್ನು ಪತ್ನಿ ಕಣ್ಣೆದುರಲ್ಲೇ ವಡೇರಹಟ್ಟಿ ಬಳಿ ದೇವಸ್ಥಾನದ ಆವರಣದಲ್ಲಿ ನಿನ್ನೆ ಭೀಕರ ಹತ್ಯೆ ಮಾಡಲಾಗಿತ್ತು.

ಭೀಮನ‌ ಅಮಾವಾಸ್ಯೆ ಹಿನ್ನೆಲೆ ಗಂಡನ ಪಾದ ಪೂಜೆ ಮಾಡಿ, ಊರ ಹೊರ ವಲಯದ ಬನಸಿದ್ದೇಶ್ವರ ದೇವಸ್ಥಾನಕ್ಕೆ ಗಂಡನನ್ನು ಪ್ರಿಯಾಂಕಾ‌ ಕರೆದುಕೊಂಡು ಬಂದಿದ್ದಳು. ಇದಕ್ಕೂ ಮುನ್ನ ಮನೆ ಬಿಡುವ ವೇಳೆ ಪ್ರಿಯಕರ ಶ್ರೀಧರ್​ಗೆ ಕರೆ ಮಾಡಿ ದೇವಸ್ಥಾನಕ್ಕೆ ಬಂದಿದ್ದಳು.

ಅದರಂತೆ ಶಂಕರ್​ನನ್ನು ಹತ್ಯೆ ಮಾಡಲು ಹೊಂಚು ಹಾಕಿಕೊಂಡಿದ್ದ ಪ್ರಿಯಾಂಕಾ‌ಳ ಪ್ರಿಯಕರ ಶ್ರೀಧರ್, ಶಂಕರ್ ದೇವಸ್ಥಾನದ ಆವರಣದಲ್ಲಿ ಕಾಲಿಡುತ್ತಿದ್ದಂತೆಯೇ ಹಿಂದಿನಿಂದ ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದ. ಕೊಲೆ ಬಳಿಕ ಪ್ರಿಯಾಂಕಾ‌ ತನಗೆ ಏನೂ ಗೊತ್ತಿಲ್ಲದಂತೆ ಡ್ರಾಮಾ ಮಾಡಿದ್ದಳು.

ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದಾಗ ಆರೋಪಿ ಶ್ರೀಧರ್ ಮತ್ತು ಪ್ರಿಯಾಂಕಾ ನಡುವೆ ಸಂಬಂಧ ಇರುವುದು ಬೆಳಕಿಗೆ ಬಂದಿತು. ಕಾಲ್ ರೆಕಾರ್ಡ್, ಕಾಲ್ ಡಿಟೈಲ್ಸ್ ಹೀಗೆ ಟೆಕ್ನಿಕಲ್ ಎವಿಡೆನ್ಸ್ ಆಧಾರದ ಮೇಲೆ ಪ್ರಿಯಾಂಕಾಳನ್ನು ಬಂಧಿಸಲಾಗಿದೆ.

RELATED TOPICS:
English summary :A wife who sacrificed her husband on Bhimana amavase day by performing foot puja

ಕೇರಳ ವಿಧಾನಸಭೆಯಲ್ಲಿ ವಂದೇ ಮಾತರಂ ಗೀತೆಯನ್ನು ಸಂಪೂರ್ಣವಾಗಿ ಹಾಡದ ಕಾರಣ ಗದ್ದಲ
ಕೇರಳ ವಿಧಾನಸಭೆಯಲ್ಲಿ ವಂದೇ ಮಾತರಂ ಗೀತೆಯನ್ನು ಸಂಪೂರ್ಣವಾಗಿ ಹಾಡದ ಕಾರಣ ಗದ್ದಲ
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿ, ಮಂತ್ರಿಮಂಡಲ ವಜಾ ಮಾಡಿದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿ, ಮಂತ್ರಿಮಂಡಲ ವಜಾ ಮಾಡಿದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್
ಅರ್ಮೇನಿಯಾ ಮಿಲಿಟರಿ ಮೆರವಣಿಗೆಯಲ್ಲಿ ಭಾರತೀಯ ಮೂಲದ ಫಿರಂಗಿ, ವಾಯು ರಕ್ಷಣಾ ವ್ಯವಸ್ಥೆಗಳು, ರಾಡಾರ್ ಪ್ರದರ್ಶನ
ಅರ್ಮೇನಿಯಾ ಮಿಲಿಟರಿ ಮೆರವಣಿಗೆಯಲ್ಲಿ ಭಾರತೀಯ ಮೂಲದ ಫಿರಂಗಿ, ವಾಯು ರಕ್ಷಣಾ ವ್ಯವಸ್ಥೆಗಳು, ರಾಡಾರ್ ಪ್ರದರ್ಶನ
ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆಯನ್ನು ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆಯನ್ನು ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
3 ಗಂಟೆಗೆ ರಾಜೀನಾಮೆ ನೀಡಲಿದ್ದಾರೆ ಮುಖ್ಯಮಂತ್ರಿ ಸಿದ್ದರಾಮಯ್ಯ : ಡಿಕೆ ಶಿವಕುಮಾರ್ ಹೊಸ ಸಿಎಂ
3 ಗಂಟೆಗೆ ರಾಜೀನಾಮೆ ನೀಡಲಿದ್ದಾರೆ ಮುಖ್ಯಮಂತ್ರಿ ಸಿದ್ದರಾಮಯ್ಯ : ಡಿಕೆ ಶಿವಕುಮಾರ್ ಹೊಸ ಸಿಎಂ
ಅಂತಾರಾಷ್ಟ್ರೀಯ ಗಡಿಗಳ ಬಳಿಯ ಅಕ್ರಮ ರಚನೆಗಳ ವಿರುದ್ಧ ಕ್ರಮ ಕೈಗೊಳ್ಳಲು ಅಮಿತ್ ಶಾ ಆದೇಶ
ಅಂತಾರಾಷ್ಟ್ರೀಯ ಗಡಿಗಳ ಬಳಿಯ ಅಕ್ರಮ ರಚನೆಗಳ ವಿರುದ್ಧ ಕ್ರಮ ಕೈಗೊಳ್ಳಲು ಅಮಿತ್ ಶಾ ಆದೇಶ
ಅಸ್ಸಾಂ ವಿಧಾನಸಭೆಯು ಏಕರೂಪ ನಾಗರಿಕ ಸಂಹಿತೆ ಮಸೂದೆ, 2026 ಅನ್ನು ಅಂಗೀಕರಿಸಿದೆ
ಅಸ್ಸಾಂ ವಿಧಾನಸಭೆಯು ಏಕರೂಪ ನಾಗರಿಕ ಸಂಹಿತೆ ಮಸೂದೆ, 2026 ಅನ್ನು ಅಂಗೀಕರಿಸಿದೆ
ಕರ್ನಾಟಕದಲ್ಲಿ ಶೀಘ್ರದಲ್ಲೇ ಹೊಸ ಸಿಎಂ ಮತ್ತು ನಾಲ್ವರು ಡಿಸಿಎಂಗಳ ನೇಮಕ ಸಾಧ್ಯತೆ?
ಕರ್ನಾಟಕದಲ್ಲಿ ಶೀಘ್ರದಲ್ಲೇ ಹೊಸ ಸಿಎಂ ಮತ್ತು ನಾಲ್ವರು ಡಿಸಿಎಂಗಳ ನೇಮಕ ಸಾಧ್ಯತೆ?
ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನಟ ರಣವೀರ್ ಸಿಂಗ್ ಪ್ರಾರ್ಥನೆ ಸಲ್ಲಿಸಿದರು.
ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನಟ ರಣವೀರ್ ಸಿಂಗ್ ಪ್ರಾರ್ಥನೆ ಸಲ್ಲಿಸಿದರು.
ಪೋರ್ಟಲ್‌ನಲ್ಲಿ ವಕ್ಫ್ ಮಂಡಳಿ ಅಕ್ರಮವಾಗಿ ಅಪ್‌ಲೋಡ್ ಮಾಡಲಾದ ಆಸ್ತಿಗಳನ್ನು ತೆಗೆದುಹಾಕಲು ಕೇಂದ್ರಕ್ಕೆ ರಾಜೀವ್ ಚಂದ್ರಶೇಖರ್ ಮನವಿ
ಪೋರ್ಟಲ್‌ನಲ್ಲಿ ವಕ್ಫ್ ಮಂಡಳಿ ಅಕ್ರಮವಾಗಿ ಅಪ್‌ಲೋಡ್ ಮಾಡಲಾದ ಆಸ್ತಿಗಳನ್ನು ತೆಗೆದುಹಾಕಲು ಕೇಂದ್ರಕ್ಕೆ ರಾಜೀವ್ ಚಂದ್ರಶೇಖರ್ ಮನವಿ
ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭ: 3ನೇ ಸ್ಥಾನದಲ್ಲಿ ಆಸೀನರಾಗಿದ್ದ ಎಚ್‌ಡಿ ಕುಮಾರಸ್ವಾಮಿ
ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭ: 3ನೇ ಸ್ಥಾನದಲ್ಲಿ ಆಸೀನರಾಗಿದ್ದ ಎಚ್‌ಡಿ ಕುಮಾರಸ್ವಾಮಿ
ತನ್ನ ಸ್ವಂತ ತಂದೆಗೆ ನಿಷ್ಠೆ ತೋರದ ಮಗ ದೇಶಕ್ಕೆ ನಿಷ್ಠನಾಗಿರುತ್ತಾನೆಯೇ? - ರಾಹುಲ್ ಗಾಂಧಿ ಸಮಗ್ರತೆ ಪ್ರಶ್ನಿಸಿದ ಎಸ್.ಜೈಶಂಕರ್
ತನ್ನ ಸ್ವಂತ ತಂದೆಗೆ ನಿಷ್ಠೆ ತೋರದ ಮಗ ದೇಶಕ್ಕೆ ನಿಷ್ಠನಾಗಿರುತ್ತಾನೆಯೇ? - ರಾಹುಲ್ ಗಾಂಧಿ ಸಮಗ್ರತೆ ಪ್ರಶ್ನಿಸಿದ ಎಸ್.ಜೈಶಂಕರ್

ನ್ಯೂಸ್ MORE NEWS...