Wed,Apr15,2026
ಕನ್ನಡ / English

ಪ್ರಿಯಕರ ಮತ್ತೊಬ್ಬಳ ಜೊತೆ ಸುತ್ತಾಡಿದ, ಇಲಿ ಪಾಷಾಣ ತಿಂದು ಆತ್ಮಹತ್ಯೆ ಮಾಡಿಕೊಂಡ ಯುವತಿ | JANATA NEWS

23 Jul 2023

ಮೈಸೂರು : ಪ್ರಿಯಕರ ಮತ್ತೊಬ್ಬಳ ಜೊತೆ ಸುತ್ತಾಡಿದ ಹಿನ್ನೆಲೆಯಲ್ಲಿ ಯುವತಿ ಡೆತ್‍ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರು ಜಿಲ್ಲೆ ಕೆ.ಆರ್ ನಗರ ತಾಲೂಕಿನ ಗೌಡನಹಳ್ಳಿ ಗ್ರಾಮದಲ್ಲಿ ನಡೆದಿದೆ.

ನಿಸರ್ಗ(20) ಮೃತ ಯುವತಿ. ಪ್ರಿಯಕರನಿಂದ ಮೋಸ ಹೋಗಿ, ಅದೇ ದುಃಖದಲ್ಲಿ ಜು.9ರಂದು ಇಲಿ ಪಾಷಾಣ ಸೇವಿಸಿ ನಿಸರ್ಗ, ಪಾಲಕರಿಗೂ ತಿಳಿಸದೇ ಒಂದು ವಾರ ನೋವಿನಿಂದಲೇ ನರಳಿ ಕೊನೆಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.

ನಿಸರ್ಗ ಅಂತಿಮ ವರ್ಷದ ಬಿ.ಕಾಂ ವ್ಯಾಸಂಗ ಮಾಡುತ್ತಿದ್ದಳು. ಈಕೆ ಅದೇ ಕಾಲೇಜಿನಲ್ಲಿ ಓದುತ್ತಿರುವ ಸುಹಾಸ್ ರೆಡ್ಡಿ ಎಂಬ ಯುವಕನನ್ನು ಪ್ರೀತಿಸುತ್ತಿದ್ದಳು. ನಾಲ್ಕು ವರ್ಷಗಳ ಕಾಲ ಈ ಜೋಡಿ ಊರೂರು ಸುತ್ತಾಡಿದೆ. ನಂತರ ಸುಹಾಸ್ ಗೆ ಅನನ್ಯಾ ಎಂಬ ಮತ್ತೊಬ್ಬಳ ಜೊತೆ ಲವ್ ಆಗಿದೆ. ಈ ವಿಚಾರ ತಿಳಿದಾಗಿನಿಂದ ನಿಸರ್ಗ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದಳು.

ಸುಹಾಸ್ ಅನನ್ಯ ಎಂಬ ಮತ್ತೊಂದು ಹುಡುಗಿಯನ್ನು ಪ್ರೀತಿಸಿ ನನಗೆ ಮೋಸ ಮಾಡಿದ. ಅಲ್ಲದೆ, ನನ್ನ ಮುಂದೆಯೇ ಸುತ್ತಾಡಿ ನನಗೆ ಮಾನಸಿಕವಾಗಿ ಹಿಂಸೆ ನೀಡಿ ನೀನು ಇನ್ನೂ ಏಕೆ ಬದುಕಿದಿಯಾ ಸಾಯಿ ಎಂದು ಪದೇ ಪದೇ ಹೇಳುತ್ತಿದ್ದರು.

ಅವರಿಬ್ಬರ ವರ್ತನೆಯಿಂದ ಮನನೊಂದು ಪ್ರೀತಿಯ ವಿಚಾರವನ್ನು ಅನನ್ಯಳ ತಂದೆ ಗೋಪಾಲಕೃಷ್ಣ ಅವರಿಗೂ ತಿಳಿಸಿದೆ. ಆದರೆ, ಅವರು ನನಗೆ ಬಾಯಿಗೆ ಬಂದಂತೆ ನಿಂದಿಸಿ, ಸಾಯಿ ಎಂದರು.

ಬಳಿಕ ಸುಹಾಸ್‌ ರೆಡ್ಡಿ ತಂದೆ ಬಾಬುರೆಡ್ಡಿ, ತಾಯಿ ರೂಪ ಅವರಿಗೂ ನಮ್ಮ ಪ್ರೀತಿಯ ವಿಚಾರವನ್ನು ತಿಳಿಸಿದೆ. ಅವರು ಸಹ ನನಗೆ ಬಾಯಿಗೆ ಬಂದಂತೆ ಬೈಯ್ದು ಅವಮಾನ ಮಾಡಿದರು.

ಯಾರೂ ಕೂಡ ಸಹ ನನ್ನ ಸಹಾಯಕ್ಕೆ ಬರಲಿಲ್ಲ, ಎಲ್ಲರೂ ನನ್ನನ್ನು ನಿಂದಿಸಿ ಪದೇಪದೆ ಸಾಯಿ ಎಂದು ಪ್ರೇರಣೆ ನೀಡಿದ್ದರಿಂದ ನಾನು ಮನೆಯಲ್ಲಿದ್ದ ಇಲಿಪಾಷಾಣವನ್ನು ಸೇವಿಸಿದೆ ಮತ್ತು ಭಯದಿಂದ ಮನೆಯಲ್ಲಿ ಈ ವಿಚಾರವನ್ನು ಯಾರಿಗೂ ತಿಳಸಲಿಲ್ಲ ಎಂದು ಸಾಯುವ ಮುನ್ನ ನಿಸರ್ಗ ಹೇಳಿದ್ದಾಳೆ ಎನ್ನಲಾಗಿದೆ. ಡೆತ್‍ನೋಟ್ ಬರೆದಿಟ್ಟು ಬ್ಯಾಗ್‍ನಲಿಟ್ಟುಕೊಂಡು ನಿಸರ್ಗ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

RELATED TOPICS:
English summary :A young woman who hanged out with another lover, committed suicide by eating rat stone

ಪ್ರಧಾನಿ ಮೋದಿ ಗೆ ದೂರವಾಣಿ ಕರೆ ಮಾಡಿ 40 ನಿಮಿಷ ಮಾತನಾಡಿದ ಅಧ್ಯಕ್ಷ ಟ್ರಂಪ್
ಪ್ರಧಾನಿ ಮೋದಿ ಗೆ ದೂರವಾಣಿ ಕರೆ ಮಾಡಿ 40 ನಿಮಿಷ ಮಾತನಾಡಿದ ಅಧ್ಯಕ್ಷ ಟ್ರಂಪ್
ಹೆಬ್ಬಾಳದಲ್ಲಿ 55 ಎಕರೆ ಭೂಮಿ ಖಾಸಗಿ ಸಂಸ್ಥೆಗೆ ವರ್ಗಾವಣೆ ರದ್ದುಗೊಳಿಸಿದ ಹೈಕೋರ್ಟ್ : ಸಿಬಿಐ ತನಿಖೆಗೆ ಆದೇಶ
ಹೆಬ್ಬಾಳದಲ್ಲಿ 55 ಎಕರೆ ಭೂಮಿ ಖಾಸಗಿ ಸಂಸ್ಥೆಗೆ ವರ್ಗಾವಣೆ ರದ್ದುಗೊಳಿಸಿದ ಹೈಕೋರ್ಟ್ : ಸಿಬಿಐ ತನಿಖೆಗೆ ಆದೇಶ
ಟಿಸಿಎಸ್ ನಲ್ಲಿ ಪಿಓಎಸ್ಎಚ್(ಪೊಶ್) ಆಡಿಟ್ ಕೋರಿದ ಎನ್ಐಟಿಇಎಸ್ : ಐಟಿ ವಲಯದಾದ್ಯಂತ ವ್ಯಾಪಕ ತನಿಖೆಗೆ ಒತ್ತಾಯ
ಟಿಸಿಎಸ್ ನಲ್ಲಿ ಪಿಓಎಸ್ಎಚ್(ಪೊಶ್) ಆಡಿಟ್ ಕೋರಿದ ಎನ್ಐಟಿಇಎಸ್ : ಐಟಿ ವಲಯದಾದ್ಯಂತ ವ್ಯಾಪಕ ತನಿಖೆಗೆ ಒತ್ತಾಯ
 ಟಿಸಿಎಸ್ ನಾಸಿಕ್ ಪ್ರಕರಣ: ಕಾರ್ಯಾಚರಣೆ ಮುಖ್ಯಸ್ಥ ಕಸ್ಟಡಿಗೆ ; ಟಾಟಾ ಇಂದ ಆಂತರಿಕ ತನಿಖೆ ವಿಸ್ತರಣೆ
ಟಿಸಿಎಸ್ ನಾಸಿಕ್ ಪ್ರಕರಣ: ಕಾರ್ಯಾಚರಣೆ ಮುಖ್ಯಸ್ಥ ಕಸ್ಟಡಿಗೆ ; ಟಾಟಾ ಇಂದ ಆಂತರಿಕ ತನಿಖೆ ವಿಸ್ತರಣೆ
ಜನರ ಹೆಸರುಗಳನ್ನು ಅಂತಿಮ ತೀರ್ಪಿನ ನಂತರ ಸೇರಿಸಿದರೆ... ಮತ ಚಲಾಯಿಸಲು ಅವಕಾಶ - ಸುಪ್ರೀಂ
ಜನರ ಹೆಸರುಗಳನ್ನು ಅಂತಿಮ ತೀರ್ಪಿನ ನಂತರ ಸೇರಿಸಿದರೆ... ಮತ ಚಲಾಯಿಸಲು ಅವಕಾಶ - ಸುಪ್ರೀಂ
ಹಿರಿಯ ಗಾಯಕಿ ಆಶಾ ಬೋಸ್ಲೆ ನಿಧನ : ಪ್ರಧಾನಿ ಮೋದಿ ಸಂತಾಪ
ಹಿರಿಯ ಗಾಯಕಿ ಆಶಾ ಬೋಸ್ಲೆ ನಿಧನ : ಪ್ರಧಾನಿ ಮೋದಿ ಸಂತಾಪ
 ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ವಂದೇ ಭಾರತ್ ಸ್ಲೀಪರ್ ರೈಲು ಸೇವೆಗೆ ಅನುಮೋದನೆ
ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ವಂದೇ ಭಾರತ್ ಸ್ಲೀಪರ್ ರೈಲು ಸೇವೆಗೆ ಅನುಮೋದನೆ
ನಾಸಿಕ್ ಟಿಸಿಎಸ್ ಪ್ರಕರಣ: ಮತಾಂತರ, ಮೂಲಭೂತೀಕರಣ ಆರೋಪಗಳ ಮೇಲೆ ತನಿಖೆ ಆರಂಭ
ನಾಸಿಕ್ ಟಿಸಿಎಸ್ ಪ್ರಕರಣ: ಮತಾಂತರ, ಮೂಲಭೂತೀಕರಣ ಆರೋಪಗಳ ಮೇಲೆ ತನಿಖೆ ಆರಂಭ
ದೋಷಾರೋಪಣೆ ಪ್ರಕ್ರಿಯೆ ಆರಂಭವಾದ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ
ದೋಷಾರೋಪಣೆ ಪ್ರಕ್ರಿಯೆ ಆರಂಭವಾದ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ
2008ರ ಮಾಲೆಗಾಂವ್ ಸ್ಫೋಟ ಪ್ರಕರಣ: ಕರ್ನಲ್ ಪುರೋಹಿತ್‌ಗೆ ಬ್ರಿಗೇಡಿಯರ್ ಬಡ್ತಿಗೆ ಅನುಮತಿ
2008ರ ಮಾಲೆಗಾಂವ್ ಸ್ಫೋಟ ಪ್ರಕರಣ: ಕರ್ನಲ್ ಪುರೋಹಿತ್‌ಗೆ ಬ್ರಿಗೇಡಿಯರ್ ಬಡ್ತಿಗೆ ಅನುಮತಿ
ಪ್ರತಿಯೊಬ್ಬ ಸೈನಿಕ ಡ್ರೋನ್ ಹಾರಿಸಲು ಸಿದ್ದವಾಗಬೇಕು - ಪ್ರತಿ ಸೈನಿಕನಿಗೆ ಡ್ರೋನ್ ಒದಗಿಸಲು ಸೇನಾ ಮುಖ್ಯಸ್ಥರು
ಪ್ರತಿಯೊಬ್ಬ ಸೈನಿಕ ಡ್ರೋನ್ ಹಾರಿಸಲು ಸಿದ್ದವಾಗಬೇಕು - ಪ್ರತಿ ಸೈನಿಕನಿಗೆ ಡ್ರೋನ್ ಒದಗಿಸಲು ಸೇನಾ ಮುಖ್ಯಸ್ಥರು
ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳಿಗೆ ಶಿಕ್ಷೆ ವಿಧಿಸಿದ ಬೆಂಗಳೂರು ನ್ಯಾಯಾಲಯ
ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳಿಗೆ ಶಿಕ್ಷೆ ವಿಧಿಸಿದ ಬೆಂಗಳೂರು ನ್ಯಾಯಾಲಯ

ನ್ಯೂಸ್ MORE NEWS...