Wed,Apr15,2026
ಕನ್ನಡ / English

ಕಾಲೇಜು ಶೌಚಾಲಯದಲ್ಲಿ ಚಿತ್ರೀಕರಣ ಕೇಸ್‌ಗೆ ಟ್ವಿಸ್ಟ್, ಸಸ್ಪೆಂಡ್ ಮಾಡಿದ್ದೇವೆಂದ ಕಾಲೇಜು | JANATA NEWS

25 Jul 2023

ಮಂಗಳೂರು : ಉಡುಪಿಯ ಕಾಲೇಜಿನ ಶೌಚಗೃಹದಲ್ಲಿ ಹಿಂದೂ ಯುವತಿಯರ ಅರೆನಗ್ನ ವೀಡಿಯೋ ಸೆರೆ ಹಿಡಿದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದು ವಾರದ ನಂತರ ಕಾಲೇಜು ಆಡಳಿತ ಮಂಡಳಿಯು ಸ್ಪಷ್ಟೀಕರಣವನ್ನು ನೀಡಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾಲೇಜು ನಿರ್ದೇಶಕಿ, ಮೂರು ವಿದ್ಯಾರ್ಥಿನಿಯರು ತಪ್ಪು ಒಪ್ಪಿಕೊಂಡಿದ್ದಾರೆ. ಮೂವರನ್ನು ಕೂಡಲೇ ಸಸ್ಪೆಂಡ್ ಮಾಡಿದ್ದೇವೆ. ಸಂತ್ರಸ್ತೆ ಯುವತಿ ಭವಿಷ್ಯದ ದೃಷ್ಟಿಯಿಂದ ದೂರು ಕೊಡಲು ಒಪ್ಪಿಲ್ಲ‌ ಎಂದಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಮೊಬೈಲ್ ಫೋನ್ ಗಳನ್ನು ಪೊಲೀಸ್ ತನಿಖೆಗೆ ನೀಡಲಾಗಿದೆ. ಕಾಲೇಜಿನಲ್ಲಿರುವ ಎಲ್ಲ ವಿದ್ಯಾರ್ಥಿಗಳು ನಮ್ಮವರೇ ಆಗಿದ್ದಾರೆ. ಇದರಲ್ಲಿ ಜಾತಿ, ಧರ್ಮದ ಪ್ರಶ್ನೆಯೇ ಇಲ್ಲ ಎಂದರು.

ಕಾಲೇಜಿಗೆ ಮೊಬೈಲ್ ತರಲು ಅವಕಾಶ ಇಲ್ಲ. ಈ ಕಾರಣಕ್ಕೆ ವಿದ್ಯಾರ್ಥಿಗಳನ್ನು ವಿಚಾರಿಸಲಾಗಿದೆ. ಅಮಾನತುಗೊಂಡ ವಿದ್ಯಾರ್ಥಿಗಳನ್ನು ಕಾನೂನು ಸಲಹೆ ಪಡೆದು ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

ಮಕ್ಕಳು ತಪ್ಪೊಪ್ಪಿಗೆ ಕೊಟ್ಟ ನಂತರವೂ ಪೊಲೀಸರಿಗೆ ಮಾಹಿತಿ ನೀಡಿದ್ದೇವೆ. ಕಾಲೇಜ್ ಗೆ ಮೊಬೈಲ್ ತರುವಂತಿಲ್ಲ, ಕಾನೂನು ಮೀರಿದ ಕಾರಣ ಮೊಬೈಲನ್ನು ಪೊಲೀಸರಿಗೆ ಒಪ್ಪಿಸಿದ್ದೇವೆ. ತಮಾಷೆಯ ವೀಡಿಯೋ ಮಾಡಿರುವುದಾಗಿ ಮೂವರು ಹೇಳಿದ್ದಾರೆ. ಮೊಬೈಲ್ ಕೊಡುವಾಗಲೇ ಅದರಲ್ಲಿ ವೀಡಿಯೋ ಇರಲಿಲ್ಲ. ವಾಶ್ ರೂಮ್ ಗೆ ಹೋದಾಗ ಮೊಬೈಲ್ ನೋಡಿದೆ, ತಕ್ಷಣ ಹೊರಗೆ ಬಂದೆ. ಸ್ಥಳದಲ್ಲೇ ವಿಡಿಯೋ ಡಿಲೀಟ್ ಮಾಡಿಸಿರುವುದಾಗಿ ಯುವತಿ ಹೇಳಿದ್ದಾಳೆ ಎಂದರು.

ನೂರಾರು ವಿದ್ಯಾರ್ಥಿನೀಯರ ಚಿತ್ರೀಕರಣ ಮಾಡಲಾಗಿದೆ ಎನ್ನುವುದು ಸರಿಯಲ್ಲ. ವಿಚಾರ ತಿಳಿಯದೆ ತಪ್ಪು ಮಾಹಿತಿ ಯಾರೂ ಹಾಕಬೇಡಿ. ಸುಳ್ಳು ವಿಚಾರಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹರಿಯಬಿಡಬೇಡಿ ಇದು ನನ್ನ ಮನವಿ.

ಇನ್ನು ಯಾರೊಬ್ಬರೂ ಸುಳ್ಳು ವಿಚಾರಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹರಿಯಬಿಡಬೇಡಿ. ಕಾಲೇಜಿನ ಮಕ್ಕಳಲ್ಲಿ ನಾವು ಧರ್ಮವನ್ನು ನೋಡಲ್ಲ. ಚಿತ್ರೀಕರಿಸಿದ ಧರ್ಮದವರೇ ಕಾಲೇಜಿನಲ್ಲಿ ಘಟನೆ ವಿರುದ್ಧ ಪ್ರತಿಭಟನೆ ಮಾಡಿದ್ದಾರೆ. ತಮಾಷೆಗೆ ಮಾಡಿರುವುದರಿಂದ ನನ್ನ ಭವಿಷ್ಯ, ಆ ಮೂವರ ಭವಿಷ್ಯ ಮುಖ್ಯ ಅಂತ ಸಂತ್ರಸ್ಥೆ ಬರೆದು ನೀಡಿದ್ದಾಳೆ ಎಂದು ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕಿ ರಶ್ಮೀ ಕೃಷ್ಣಪ್ರಸಾದ್ ಮಾಹಿತಿಯನ್ನು ನೀಡಿದ್ದಾರೆ.

ಘಟನೆ -

ಉಡುಪಿಯ ಪ್ರತಿಷ್ಠಿತ ಖಾಸಗಿ ಕಾಲೇಜೊಂದರಲ್ಲಿ ಮೂವರು ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯರು ಶೌಚಾಲಯದಲ್ಲಿ ಕ್ಯಾಮರಾ ಇಟ್ಟು ಹಿಂದೂ ವಿದ್ಯಾರ್ಥಿನಿಯರ ಅರೆ ನಗ್ನ ಚಿತ್ರಗಳನ್ನು ರೆಕಾರ್ಡ್‌ ಮಾಡಿದ್ದಾರೆ. ನಂತರ, ಅವುಗಳನ್ನು ಅವರದ್ದೇ ಸಮುದಾಯದ ಯವಕರಿಗೆ ಕಳುಹಿಸಲಾಗುತ್ತದೆ. ನಂತರ, ಆ ವೀಡಿಯೋಗಳನ್ನು ಕೆಲವೊಂದು ವಾಟ್ಸಾಪ್‌ ಗುಂಪುಗಳಿಗೆ ಹಂಚಿಕೊಳ್ಳಲಾಗತ್ತಿತ್ತು. ಈ ಬಗ್ಗೆ ಹಿಂದೂ ವಿದ್ಯಾರ್ಥಿನಿಯರಿಗೆ ಮಾಹಿತಿ ತಿಳಿದು ಕಾಲೇಜು ಆಡಳಿತ ಮಂಡಳಿ ಗಮನಕ್ಕೆ ತಂದಿದ್ದರು. ಇದನ್ನು ಪರಿಶೀಲನೆ ಮಾಡಿದ ಕಾಲೇಜು ಆಡಳಿತ ಮಂಡಳಿಯವರು, ಕ್ಯಾಮರಾ ಇಟ್ಟಿದ್ದ ವಿದ್ಯಾರ್ಥಿನಿಯರ ಮೊಬೈಲ್‌ನಲ್ಲಿದ್ದ ವೀಡಿಯೋಗಳನ್ನು ಡಿಲೀಟ್‌ ಮಾಡಿಸಿದ್ದಾರೆ.

RELATED TOPICS:
English summary :Twist in the case of filming in the college toilet, the college has been suspended

ಪ್ರಧಾನಿ ಮೋದಿ ಗೆ ದೂರವಾಣಿ ಕರೆ ಮಾಡಿ 40 ನಿಮಿಷ ಮಾತನಾಡಿದ ಅಧ್ಯಕ್ಷ ಟ್ರಂಪ್
ಪ್ರಧಾನಿ ಮೋದಿ ಗೆ ದೂರವಾಣಿ ಕರೆ ಮಾಡಿ 40 ನಿಮಿಷ ಮಾತನಾಡಿದ ಅಧ್ಯಕ್ಷ ಟ್ರಂಪ್
ಹೆಬ್ಬಾಳದಲ್ಲಿ 55 ಎಕರೆ ಭೂಮಿ ಖಾಸಗಿ ಸಂಸ್ಥೆಗೆ ವರ್ಗಾವಣೆ ರದ್ದುಗೊಳಿಸಿದ ಹೈಕೋರ್ಟ್ : ಸಿಬಿಐ ತನಿಖೆಗೆ ಆದೇಶ
ಹೆಬ್ಬಾಳದಲ್ಲಿ 55 ಎಕರೆ ಭೂಮಿ ಖಾಸಗಿ ಸಂಸ್ಥೆಗೆ ವರ್ಗಾವಣೆ ರದ್ದುಗೊಳಿಸಿದ ಹೈಕೋರ್ಟ್ : ಸಿಬಿಐ ತನಿಖೆಗೆ ಆದೇಶ
ಟಿಸಿಎಸ್ ನಲ್ಲಿ ಪಿಓಎಸ್ಎಚ್(ಪೊಶ್) ಆಡಿಟ್ ಕೋರಿದ ಎನ್ಐಟಿಇಎಸ್ : ಐಟಿ ವಲಯದಾದ್ಯಂತ ವ್ಯಾಪಕ ತನಿಖೆಗೆ ಒತ್ತಾಯ
ಟಿಸಿಎಸ್ ನಲ್ಲಿ ಪಿಓಎಸ್ಎಚ್(ಪೊಶ್) ಆಡಿಟ್ ಕೋರಿದ ಎನ್ಐಟಿಇಎಸ್ : ಐಟಿ ವಲಯದಾದ್ಯಂತ ವ್ಯಾಪಕ ತನಿಖೆಗೆ ಒತ್ತಾಯ
 ಟಿಸಿಎಸ್ ನಾಸಿಕ್ ಪ್ರಕರಣ: ಕಾರ್ಯಾಚರಣೆ ಮುಖ್ಯಸ್ಥ ಕಸ್ಟಡಿಗೆ ; ಟಾಟಾ ಇಂದ ಆಂತರಿಕ ತನಿಖೆ ವಿಸ್ತರಣೆ
ಟಿಸಿಎಸ್ ನಾಸಿಕ್ ಪ್ರಕರಣ: ಕಾರ್ಯಾಚರಣೆ ಮುಖ್ಯಸ್ಥ ಕಸ್ಟಡಿಗೆ ; ಟಾಟಾ ಇಂದ ಆಂತರಿಕ ತನಿಖೆ ವಿಸ್ತರಣೆ
ಜನರ ಹೆಸರುಗಳನ್ನು ಅಂತಿಮ ತೀರ್ಪಿನ ನಂತರ ಸೇರಿಸಿದರೆ... ಮತ ಚಲಾಯಿಸಲು ಅವಕಾಶ - ಸುಪ್ರೀಂ
ಜನರ ಹೆಸರುಗಳನ್ನು ಅಂತಿಮ ತೀರ್ಪಿನ ನಂತರ ಸೇರಿಸಿದರೆ... ಮತ ಚಲಾಯಿಸಲು ಅವಕಾಶ - ಸುಪ್ರೀಂ
ಹಿರಿಯ ಗಾಯಕಿ ಆಶಾ ಬೋಸ್ಲೆ ನಿಧನ : ಪ್ರಧಾನಿ ಮೋದಿ ಸಂತಾಪ
ಹಿರಿಯ ಗಾಯಕಿ ಆಶಾ ಬೋಸ್ಲೆ ನಿಧನ : ಪ್ರಧಾನಿ ಮೋದಿ ಸಂತಾಪ
 ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ವಂದೇ ಭಾರತ್ ಸ್ಲೀಪರ್ ರೈಲು ಸೇವೆಗೆ ಅನುಮೋದನೆ
ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ವಂದೇ ಭಾರತ್ ಸ್ಲೀಪರ್ ರೈಲು ಸೇವೆಗೆ ಅನುಮೋದನೆ
ನಾಸಿಕ್ ಟಿಸಿಎಸ್ ಪ್ರಕರಣ: ಮತಾಂತರ, ಮೂಲಭೂತೀಕರಣ ಆರೋಪಗಳ ಮೇಲೆ ತನಿಖೆ ಆರಂಭ
ನಾಸಿಕ್ ಟಿಸಿಎಸ್ ಪ್ರಕರಣ: ಮತಾಂತರ, ಮೂಲಭೂತೀಕರಣ ಆರೋಪಗಳ ಮೇಲೆ ತನಿಖೆ ಆರಂಭ
ದೋಷಾರೋಪಣೆ ಪ್ರಕ್ರಿಯೆ ಆರಂಭವಾದ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ
ದೋಷಾರೋಪಣೆ ಪ್ರಕ್ರಿಯೆ ಆರಂಭವಾದ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ
2008ರ ಮಾಲೆಗಾಂವ್ ಸ್ಫೋಟ ಪ್ರಕರಣ: ಕರ್ನಲ್ ಪುರೋಹಿತ್‌ಗೆ ಬ್ರಿಗೇಡಿಯರ್ ಬಡ್ತಿಗೆ ಅನುಮತಿ
2008ರ ಮಾಲೆಗಾಂವ್ ಸ್ಫೋಟ ಪ್ರಕರಣ: ಕರ್ನಲ್ ಪುರೋಹಿತ್‌ಗೆ ಬ್ರಿಗೇಡಿಯರ್ ಬಡ್ತಿಗೆ ಅನುಮತಿ
ಪ್ರತಿಯೊಬ್ಬ ಸೈನಿಕ ಡ್ರೋನ್ ಹಾರಿಸಲು ಸಿದ್ದವಾಗಬೇಕು - ಪ್ರತಿ ಸೈನಿಕನಿಗೆ ಡ್ರೋನ್ ಒದಗಿಸಲು ಸೇನಾ ಮುಖ್ಯಸ್ಥರು
ಪ್ರತಿಯೊಬ್ಬ ಸೈನಿಕ ಡ್ರೋನ್ ಹಾರಿಸಲು ಸಿದ್ದವಾಗಬೇಕು - ಪ್ರತಿ ಸೈನಿಕನಿಗೆ ಡ್ರೋನ್ ಒದಗಿಸಲು ಸೇನಾ ಮುಖ್ಯಸ್ಥರು
ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳಿಗೆ ಶಿಕ್ಷೆ ವಿಧಿಸಿದ ಬೆಂಗಳೂರು ನ್ಯಾಯಾಲಯ
ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳಿಗೆ ಶಿಕ್ಷೆ ವಿಧಿಸಿದ ಬೆಂಗಳೂರು ನ್ಯಾಯಾಲಯ

ನ್ಯೂಸ್ MORE NEWS...