Sun,Jul26,2026
ಕನ್ನಡ / English

ಕಾಲೇಜು ಶೌಚಾಲಯದಲ್ಲಿ ಚಿತ್ರೀಕರಣ ಕೇಸ್‌ಗೆ ಟ್ವಿಸ್ಟ್, ಸಸ್ಪೆಂಡ್ ಮಾಡಿದ್ದೇವೆಂದ ಕಾಲೇಜು | JANATA NEWS

25 Jul 2023

ಮಂಗಳೂರು : ಉಡುಪಿಯ ಕಾಲೇಜಿನ ಶೌಚಗೃಹದಲ್ಲಿ ಹಿಂದೂ ಯುವತಿಯರ ಅರೆನಗ್ನ ವೀಡಿಯೋ ಸೆರೆ ಹಿಡಿದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದು ವಾರದ ನಂತರ ಕಾಲೇಜು ಆಡಳಿತ ಮಂಡಳಿಯು ಸ್ಪಷ್ಟೀಕರಣವನ್ನು ನೀಡಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾಲೇಜು ನಿರ್ದೇಶಕಿ, ಮೂರು ವಿದ್ಯಾರ್ಥಿನಿಯರು ತಪ್ಪು ಒಪ್ಪಿಕೊಂಡಿದ್ದಾರೆ. ಮೂವರನ್ನು ಕೂಡಲೇ ಸಸ್ಪೆಂಡ್ ಮಾಡಿದ್ದೇವೆ. ಸಂತ್ರಸ್ತೆ ಯುವತಿ ಭವಿಷ್ಯದ ದೃಷ್ಟಿಯಿಂದ ದೂರು ಕೊಡಲು ಒಪ್ಪಿಲ್ಲ‌ ಎಂದಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಮೊಬೈಲ್ ಫೋನ್ ಗಳನ್ನು ಪೊಲೀಸ್ ತನಿಖೆಗೆ ನೀಡಲಾಗಿದೆ. ಕಾಲೇಜಿನಲ್ಲಿರುವ ಎಲ್ಲ ವಿದ್ಯಾರ್ಥಿಗಳು ನಮ್ಮವರೇ ಆಗಿದ್ದಾರೆ. ಇದರಲ್ಲಿ ಜಾತಿ, ಧರ್ಮದ ಪ್ರಶ್ನೆಯೇ ಇಲ್ಲ ಎಂದರು.

ಕಾಲೇಜಿಗೆ ಮೊಬೈಲ್ ತರಲು ಅವಕಾಶ ಇಲ್ಲ. ಈ ಕಾರಣಕ್ಕೆ ವಿದ್ಯಾರ್ಥಿಗಳನ್ನು ವಿಚಾರಿಸಲಾಗಿದೆ. ಅಮಾನತುಗೊಂಡ ವಿದ್ಯಾರ್ಥಿಗಳನ್ನು ಕಾನೂನು ಸಲಹೆ ಪಡೆದು ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

ಮಕ್ಕಳು ತಪ್ಪೊಪ್ಪಿಗೆ ಕೊಟ್ಟ ನಂತರವೂ ಪೊಲೀಸರಿಗೆ ಮಾಹಿತಿ ನೀಡಿದ್ದೇವೆ. ಕಾಲೇಜ್ ಗೆ ಮೊಬೈಲ್ ತರುವಂತಿಲ್ಲ, ಕಾನೂನು ಮೀರಿದ ಕಾರಣ ಮೊಬೈಲನ್ನು ಪೊಲೀಸರಿಗೆ ಒಪ್ಪಿಸಿದ್ದೇವೆ. ತಮಾಷೆಯ ವೀಡಿಯೋ ಮಾಡಿರುವುದಾಗಿ ಮೂವರು ಹೇಳಿದ್ದಾರೆ. ಮೊಬೈಲ್ ಕೊಡುವಾಗಲೇ ಅದರಲ್ಲಿ ವೀಡಿಯೋ ಇರಲಿಲ್ಲ. ವಾಶ್ ರೂಮ್ ಗೆ ಹೋದಾಗ ಮೊಬೈಲ್ ನೋಡಿದೆ, ತಕ್ಷಣ ಹೊರಗೆ ಬಂದೆ. ಸ್ಥಳದಲ್ಲೇ ವಿಡಿಯೋ ಡಿಲೀಟ್ ಮಾಡಿಸಿರುವುದಾಗಿ ಯುವತಿ ಹೇಳಿದ್ದಾಳೆ ಎಂದರು.

ನೂರಾರು ವಿದ್ಯಾರ್ಥಿನೀಯರ ಚಿತ್ರೀಕರಣ ಮಾಡಲಾಗಿದೆ ಎನ್ನುವುದು ಸರಿಯಲ್ಲ. ವಿಚಾರ ತಿಳಿಯದೆ ತಪ್ಪು ಮಾಹಿತಿ ಯಾರೂ ಹಾಕಬೇಡಿ. ಸುಳ್ಳು ವಿಚಾರಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹರಿಯಬಿಡಬೇಡಿ ಇದು ನನ್ನ ಮನವಿ.

ಇನ್ನು ಯಾರೊಬ್ಬರೂ ಸುಳ್ಳು ವಿಚಾರಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹರಿಯಬಿಡಬೇಡಿ. ಕಾಲೇಜಿನ ಮಕ್ಕಳಲ್ಲಿ ನಾವು ಧರ್ಮವನ್ನು ನೋಡಲ್ಲ. ಚಿತ್ರೀಕರಿಸಿದ ಧರ್ಮದವರೇ ಕಾಲೇಜಿನಲ್ಲಿ ಘಟನೆ ವಿರುದ್ಧ ಪ್ರತಿಭಟನೆ ಮಾಡಿದ್ದಾರೆ. ತಮಾಷೆಗೆ ಮಾಡಿರುವುದರಿಂದ ನನ್ನ ಭವಿಷ್ಯ, ಆ ಮೂವರ ಭವಿಷ್ಯ ಮುಖ್ಯ ಅಂತ ಸಂತ್ರಸ್ಥೆ ಬರೆದು ನೀಡಿದ್ದಾಳೆ ಎಂದು ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕಿ ರಶ್ಮೀ ಕೃಷ್ಣಪ್ರಸಾದ್ ಮಾಹಿತಿಯನ್ನು ನೀಡಿದ್ದಾರೆ.

ಘಟನೆ -

ಉಡುಪಿಯ ಪ್ರತಿಷ್ಠಿತ ಖಾಸಗಿ ಕಾಲೇಜೊಂದರಲ್ಲಿ ಮೂವರು ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯರು ಶೌಚಾಲಯದಲ್ಲಿ ಕ್ಯಾಮರಾ ಇಟ್ಟು ಹಿಂದೂ ವಿದ್ಯಾರ್ಥಿನಿಯರ ಅರೆ ನಗ್ನ ಚಿತ್ರಗಳನ್ನು ರೆಕಾರ್ಡ್‌ ಮಾಡಿದ್ದಾರೆ. ನಂತರ, ಅವುಗಳನ್ನು ಅವರದ್ದೇ ಸಮುದಾಯದ ಯವಕರಿಗೆ ಕಳುಹಿಸಲಾಗುತ್ತದೆ. ನಂತರ, ಆ ವೀಡಿಯೋಗಳನ್ನು ಕೆಲವೊಂದು ವಾಟ್ಸಾಪ್‌ ಗುಂಪುಗಳಿಗೆ ಹಂಚಿಕೊಳ್ಳಲಾಗತ್ತಿತ್ತು. ಈ ಬಗ್ಗೆ ಹಿಂದೂ ವಿದ್ಯಾರ್ಥಿನಿಯರಿಗೆ ಮಾಹಿತಿ ತಿಳಿದು ಕಾಲೇಜು ಆಡಳಿತ ಮಂಡಳಿ ಗಮನಕ್ಕೆ ತಂದಿದ್ದರು. ಇದನ್ನು ಪರಿಶೀಲನೆ ಮಾಡಿದ ಕಾಲೇಜು ಆಡಳಿತ ಮಂಡಳಿಯವರು, ಕ್ಯಾಮರಾ ಇಟ್ಟಿದ್ದ ವಿದ್ಯಾರ್ಥಿನಿಯರ ಮೊಬೈಲ್‌ನಲ್ಲಿದ್ದ ವೀಡಿಯೋಗಳನ್ನು ಡಿಲೀಟ್‌ ಮಾಡಿಸಿದ್ದಾರೆ.

RELATED TOPICS:
English summary :Twist in the case of filming in the college toilet, the college has been suspended

ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ  ರಿಜಿಜು ಮನವಿ
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ ರಿಜಿಜು ಮನವಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ

ನ್ಯೂಸ್ MORE NEWS...