Sun,Jul26,2026
ಕನ್ನಡ / English

ಆಪಾಧಿತರನ್ನು ಬೆನ್ನು ಹತ್ತುವ ಬದಲು, ಟ್ವೀಟ್ ಮಾಡಿದವರನ್ನು ವಿಚಾರಣೆಗೆ ಒಳಪಡಿಸಿರುವುದು ಸರ್ಕಾರ ಹೇಗೆ ನಡೆದುಕೊಳ್ಳುತ್ತಿದೆ ಎನ್ನುವುದಕ್ಕೆ ಸಾಕ್ಷಿ | JANATA NEWS

26 Jul 2023

ಚಿಕ್ಕಮಗಳೂರು : ಉಡುಪಿ ಕಾಲೇಜ್ ನಲ್ಲಿ ವಿಡಿಯೋ ಪ್ರಕರಣದಲ್ಲಿ ಪೊಲೀಸರು ತಡವಾಗಿ ಎಫ್ ಐ ಆರ್ ದಾಖಲಿಸಿದ್ದಾರೆ. ದೂರು ನೀಡಿದ ತಕ್ಷಣವೇ ಎಫ್ ಐ ಆರ್ ದಾಖಲಿಸಬೇಕಾಗಿತ್ತು. ವಿಳಂಬ ನೀತಿ ಸರಿಯಲ್ಲ.

ಆಪಾಧಿತರನ್ನು ಬೆನ್ನು ಹತ್ತುವ ಬದಲು ಆಪಾಧಿತರ ಬಗ್ಗೆ ಟ್ವೀಟ್ ಮಾಡಿದವರನ್ನು ಬೆನ್ನು ಹತ್ತಿರುವುದು ಸರ್ಕಾರ ಹೇಗೆ ನಡೆದುಕೊಳ್ಳುತ್ತಿದೆ ಎನ್ನುವುದಕ್ಕೆ ನಿದರ್ಶನವಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ. ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಅವರು ಈ ಬಗ್ಗೆ ಸಮಗ್ರ ತನಿಖೆ ಆಗಲಿ, ಆರೋಪ ಸತ್ಯವಾಗಿದ್ದಲ್ಲಿ ಅಪಾಯಕಾರಿಯಾದದ್ದು, ಅವರ ಜಾಲ ಎಲ್ಲೆಲ್ಲಿ ಕೆಲಸ ಮಾಡುತ್ತಿದೆ ಎನ್ನುವ ಬಗ್ಗೆ ಪಾರದರ್ಶಕ ತನಿಖೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಉಗ್ರ, ಸಮಾಜ ಘಾತುಕ, ಕಾನೂನು ಬಾಹಿರ ಘಟನೆಗಳಲ್ಲಿ ಭಾಗಿ ಆದವರನ್ನ ಅಮಾಯಕರು ಎಂದು ಪರಿಗಣಿಸಿ ಅವರನ್ನು ಕೇಸ್ನಿಂದ ಕೈಬಿಡಲು ಹೊರಟಿರುವುದು ರಾಜ್ಯದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವುದಷ್ಟೇ ಅಲ್ಲ, ದೇಶದ ಸಮಗ್ರತೆಗೂ ಅಪಾಯಕಾರಿ ಎಂದು ಸಿ.ಟಿ.ರವಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಕೆಜೆಹಳ್ಳಿ, ಡಿಜೆಹಳ್ಳಿ ಪ್ರಕರಣದ ಆರೋಪಿಗಳ ವಿರುದ್ಧದ ಪ್ರಕರಣ ಕೈಬಿಡುವಂತೆ ಶಾಸಕ ತನ್ವೀರ್ ಶೇಠ್ ಸರ್ಕಾರಕ್ಕೆ ಪತ್ರ ಬರೆದಿರುವ ಕುರಿತು ಪ್ರತಿಕ್ರಿಯಿಸಿರುವ ಅವರು, ಡಿಜೆಹಳ್ಳಿ, ಕೆಜಿಹಳ್ಳಿ ಪ್ರಕರಣದಲ್ಲಿ ಇಡೀ ಊರಿಗೆ ಬೆಂಕಿ ಹಾಕಿ 250 ಕ್ಕೂ ಹೆಚ್ಚು ವಾಹನಗಳನ್ನು ಸುಟ್ಟು ಹಾಕಿ, ಪೊಲೀಸ್ ಠಾಣೆಯನ್ನು ಧ್ವಂಸ ಮಾಡಿ ರಾಜ್ಯ ಇತಿಹಾದಲ್ಲೇ ಭೀಕರ ಘಟನೆ ನಡೆಸಿದ್ದಾರೆ. ಒಳ್ಳೆಯರು ಯಾರು, ಕೆಟ್ಟವರು ಯಾರು ಎಂಬುದು ತಿಳಿದುಕೊಳ್ಳದಿದ್ದರೆ ರಾಜ್ಯದ ಪರಿಸ್ಥಿತಿ ಏನಾಗಬಹುದು ಎಂದು ಪ್ರಶ್ನಿಸಿದರು.

RELATED TOPICS:
English summary :The fact that the person who posted this tweet was prosecuted instead of going after the accused is a testimony to how the government is acting.

ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ  ರಿಜಿಜು ಮನವಿ
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ ರಿಜಿಜು ಮನವಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ

ನ್ಯೂಸ್ MORE NEWS...